Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » ಮಡಿಕೇರಿಯಲ್ಲಿ ಎಸ್‌ಆರ್‌ವಿ ಫುಟ್ಬಾಲ್ ಲೀಗ್ : ಟೀಮ್ ಒನ್ ಟಚ್ ಚಾಂಪಿಯನ್
ಇತ್ತೀಚಿನ ಸುದ್ದಿಗಳು

ಮಡಿಕೇರಿಯಲ್ಲಿ ಎಸ್‌ಆರ್‌ವಿ ಫುಟ್ಬಾಲ್ ಲೀಗ್ : ಟೀಮ್ ಒನ್ ಟಚ್ ಚಾಂಪಿಯನ್

January 15, 20263 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜ.15 NEWS DESK : ಮಂಜಿನ ನಗರಿ ಮಡಿಕೇರಿಯ ಗಾಂಧಿ ಮೈದಾನವು ಕಳೆದ ಎರಡು ದಿನಗಳ ಕಾಲ ಕ್ರೀಡೆ, ತಂತ್ರಜ್ಞಾನ ಹಾಗೂ ಸ್ನೇಹಸಂಬಂಧಗಳ ಸಂಗಮಕ್ಕೆ ಸಾಕ್ಷಿಯಾಯಿತು. ಶ್ರೀ ರಾಜೇಶ್ವರಿ ವಿದ್ಯಾಲಯದ ಆಶ್ರಯದಲ್ಲಿ ಆಯೋಜಿಸಲಾದ ಎಸ್‌ಆರ್‌ವಿ ಫುಟ್ಬಾಲ್ ಚಾಂಪಿಯನ್ ಲೀಗ್ ಸೀಸನ್–3, ಮೋಟೋ ಎಕ್ಸ್ಪೋ ಹಾಗೂ ಹಳೆ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮಗಳು ಅಪಾರ ಜನಸಂದಣಿ, ಉತ್ಸಾಹ ಹಾಗೂ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನಡೆಯಿತು. :: ಫುಟ್ಬಾಲ್ ಲೀಗ್‌ಗೆ ತೆರೆ ::  ಹೊನಲು ಬೆಳಕಿನ ವ್ಯವಸ್ಥೆಯೊಂದಿಗೆ ನಡೆದ ಎಸ್‌ಆರ್‌ವಿ ಫುಟ್ಬಾಲ್ ಚಾಂಪಿಯನ್ ಲೀಗ್ ಸೀಸನ್–3ರ ಫೈನಲ್ ಪಂದ್ಯದಲ್ಲಿ ಟೀಮ್ ಒನ್ ಟಚ್ ತಂಡವು ಟೀಮ್ ಅಶ್ ರನ್ನರ್ಸ್ ವಿರುದ್ಧ 1–0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿತು. ಟೀಮ್ ಅಶ್ ರನ್ನರ್ಸ್ ರನ್ನರ್ಸ್-ಅಪ್ ಸ್ಥಾನ ಪಡೆದುಕೊಂಡಿತು.  ಮೂರನೇ ಸ್ಥಾನವನ್ನು ಸ್ಟ್ರೈಕರ್ಸ್ ಸ್ಕ್ವಾಡ್, ನಾಲ್ಕನೇ ಸ್ಥಾನವನ್ನು ಆರ್‌ಆರ್‌ಎಫ್‌ಸಿ ತಂಡ ಪಡೆದುಕೊಂಡವು. ಒಟ್ಟು 12 ತಂಡಗಳು ಟ್ರೋಫಿಗಾಗಿ ಸೆಣಸಾಡಿದ ಈ ಲೀಗ್‌ನಲ್ಲಿ ನೇರ ಪ್ರಸಾರ, ಶಿಸ್ತಿನ ಸಂಘಟನೆ ಹಾಗೂ ಕ್ರೀಡಾಸ್ಫೂರ್ತಿ ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಯಿತು. :: ಕ್ವಾಲಿಫೈಯರ್ ಪಂದ್ಯಗಳ ರೋಚಕತೆ ::  ಮೊದಲ ಕ್ವಾಲಿಫೈಯರ್‌ನಲ್ಲಿ ಟೀಮ್ ಅಶ್ ರನ್ನರ್ಸ್ 1–0 ಗೋಲುಗಳ ಜಯದೊಂದಿಗೆ ನೇರವಾಗಿ ಫೈನಲ್ ಪ್ರವೇಶಿಸಿತು. ಎಲಿಮಿನೇಟರ್ ಪಂದ್ಯದಲ್ಲಿ ಸ್ಟ್ರೈಕರ್ಸ್ ಸ್ಕ್ವಾಡ್ ಪೆನಾಲ್ಟಿ ಶೂಟ್‌ಔಟ್‌ನಲ್ಲಿ ಆರ್‌ಆರ್‌ಎಫ್‌ಸಿ ತಂಡವನ್ನು 3–2 ಅಂತರದಲ್ಲಿ ಮಣಿಸಿ ಕ್ವಾಲಿಫೈಯರ್‌ಗೆ ಲಗ್ಗೆ ಇಟ್ಟಿತು. ದ್ವಿತೀಯ ಕ್ವಾಲಿಫೈಯರ್‌ನಲ್ಲಿ ಟೀಮ್ ಒನ್ ಟಚ್ ಹಾಗೂ ಸ್ಟ್ರೈಕರ್ಸ್ ಸ್ಕ್ವಾಡ್ ನಡುವಿನ ಪಂದ್ಯ 1–1 ಸಮಬಲದಲ್ಲಿ ಅಂತ್ಯಗೊಂಡು, ಪೆನಾಲ್ಟಿ ಶೂಟ್‌ಔಟ್‌ನಲ್ಲಿ ಟೀಮ್ ಒನ್ ಟಚ್ 5–4 ಅಂತರದಲ್ಲಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿತು. :: ವೈಯಕ್ತಿಕ ಪ್ರಶಸ್ತಿಗಳು :: ಹೈ ಸ್ಕೋರರ್ – ರೌಫ್ (ಟೀಮ್ ಅಶ್), ಬೆಸ್ಟ್ ಡಿಫೆಂಡರ್ – ಅಭಯ್ (ಟೀಮ್ ಅಶ್),  ಉತ್ತಮ ಗೋಲ್ ಕೀಪರ್ – ಅಶ್ರಫ್ (ಟೀಮ್ ಒನ್ ಟಚ್), ಉದಯೋನ್ಮುಖ ಆಟಗಾರ – ಸೂಫಿಯನ್ (ಆರ್‌ಆರ್‌ಎಫ್‌ಸಿ),  ಸರಣಿ ಪುರುಷೋತ್ತಮ – ಶಮನ್ (ಟೀಮ್ ಒನ್ ಟಚ್), ಮೋಟೋ ಎಕ್ಸ್ಪೋಗೆ ಜನಾಕರ್ಷಣೆ. ಫುಟ್ಬಾಲ್ ಪಂದ್ಯಾವಳಿಯೊಂದಿಗೆ ಆಯೋಜಿಸಲಾದ ಮೋಟೋ ಎಕ್ಸ್ಪೋ ಕಾರ್ಯಕ್ರಮವು ಯುವಜನತೆಯಲ್ಲಿ ವಿಶೇಷ ಆಸಕ್ತಿ ಮೂಡಿಸಿತು. ವಿವಿಧ ಹೊಸ ಮಾದರಿಯ ಬೈಕ್‌ಗಳು, ತಂತ್ರಜ್ಞಾನಾಧಾರಿತ ವಾಹನಗಳು ಹಾಗೂ ಆಧುನಿಕ ಸುರಕ್ಷತಾ ವೈಶಿಷ್ಟ್ಯಗಳ ಪ್ರದರ್ಶನಕ್ಕೆ ಸಾರ್ವಜನಿಕರಿಂದ ಭಾರೀ ಸ್ಪಂದನೆ ವ್ಯಕ್ತವಾಯಿತು. ಆಟೋಮೊಬೈಲ್ ಕ್ಷೇತ್ರದ ಬೆಳವಣಿಗೆ, ಇಂಧನ ದಕ್ಷತೆ ಹಾಗೂ ಭವಿಷ್ಯದ ವಾಹನ ತಂತ್ರಜ್ಞಾನ ಕುರಿತು ಮಾಹಿತಿ ನೀಡಲಾಯಿತು. :: ಹಳೆ ವಿದ್ಯಾರ್ಥಿಗಳ ಸಮಾಗಮ – ಸ್ಮರಣೆಯ ಕ್ಷಣಗಳು ::
ಇದೇ ಸಂದರ್ಭದಲ್ಲಿ ಶ್ರೀ ರಾಜೇಶ್ವರಿ ವಿದ್ಯಾಲಯದ ಹಳೆ ವಿದ್ಯಾರ್ಥಿಗಳ ಸಮಾಗಮ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ಬ್ಯಾಚ್‌ಗಳ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಹಳೆಯ ದಿನಗಳ ನೆನಪುಗಳನ್ನು ಹಂಚಿಕೊಂಡರು. ಶಾಲೆಯು ನೀಡಿದ ಶಿಕ್ಷಣ, ಶಿಸ್ತು ಹಾಗೂ ಮೌಲ್ಯಗಳ ಕುರಿತು ಮಾತನಾಡಿ, ಪ್ರಸ್ತುತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಈ ಸಮಾಗಮ ಭಾವನಾತ್ಮಕ ಹಾಗೂ ಸ್ನೇಹಪೂರ್ಣ ವಾತಾವರಣವನ್ನು ಸೃಷ್ಟಿಸಿತು.
:: ಸಮಾರೋಪ ಸಮಾರಂಭ :: ಶ್ರೀ ರಾಜೇಶ್ವರಿ ವಿದ್ಯಾಲಯದ ಕಾರ್ಯದರ್ಶಿ ಸಚಿನ್ ವಾಸುದೇವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ ಮಾತನಾಡಿ, ಕ್ರೀಡೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಅತ್ಯಂತ ಅಗತ್ಯವಾಗಿದ್ದು, ಶಿಸ್ತು, ನಾಯಕತ್ವ ಹಾಗೂ ಹೊಂದಾಣಿಕೆಯ ಗುಣಗಳನ್ನು ಬೆಳೆಸುತ್ತದೆ ಎಂದು ಹೇಳಿದರು. ಯುವಜನತೆ ಕ್ರೀಡೆ ಹಾಗೂ ಸಕಾರಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಶಾಲೆಯ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ನೇರ ಪ್ರಸಾರದೊಂದಿಗೆ ಕ್ರೀಡಾಕೂಟ, ಮೋಟೋ ಎಕ್ಸ್ಪೋ ಹಾಗೂ ಹಳೆ ವಿದ್ಯಾರ್ಥಿಗಳ ಸಮಾಗಮವನ್ನು ಒಂದೇ ವೇದಿಕೆಯಲ್ಲಿ ಆಯೋಜಿಸುವುದು ಸವಾಲಿನ ಕಾರ್ಯವಾಗಿದ್ದು, ಸಂಘಟಕರ ಶ್ರಮ ಶ್ಲಾಘನೀಯ ಎಂದರು. ಕಾರ್ಯದರ್ಶಿ ಸಚಿನ್ ವಾಸುದೇವ್ ಮಾತನಾಡಿ, ಯುವಜನತೆ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಕ್ರೀಡೆ ಮತ್ತು ಸೃಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ::ಶಾಲಾ ಮಕ್ಕಳ ವಿಶೇಷ ಪಂದ್ಯಾವಳಿ ::
ಎಸ್‌ಆರ್‌ವಿ ಫುಟ್ಬಾಲ್ ವತಿಯಿಂದ ಆಯೋಜಿಸಲಾದ ಶಾಲಾ ಮಕ್ಕಳ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅತಿಥೇಯ ಎಸ್‌ಆರ್‌ವಿ ವಿದ್ಯಾಲಯ ಚಾಂಪಿಯನ್ ಪಟ್ಟ ಅಲಂಕರಿಸಿದರೆ, ಸಂತ ಜೋಸೆಫರ ಶಾಲೆ ರನ್ನರ್ಸ್-ಅಪ್ ಸ್ಥಾನ ಪಡೆದುಕೊಂಡಿತು. ಪಂದ್ಯಗಳಿಗೆ ತೀರ್ಪುಗಾರಿಕೆಯನ್ನು ಉನ್ನೈಸ್ ಎಂ.ಎಂ. ಹಾಗೂ ನರಸಿಂಹ (ನಾಣಿ) ನಿಶಾದ್,ನಿರ್ವಹಿಸಿದರು. ವೀಕ್ಷಕ ವಿವರಣೆಯನ್ನು ರಾಹುಲ್ ಹಾಗೂ ಮಂದಣ್ಣ ನೀಡಿದರು. ಲೈವ್ ಸ್ಕೋರಿಂಗ್ ಅನ್ನು ಅಶೋಕ್ (ಮಡಿಕೇರಿ) ಹಾಗೂ ಅಜಿತ್ ನಡೆಸಿಕೊಟ್ಟರು. ಬಹುಮಾನ ವಿತರಣಾ ಸಮಾರಂಭದಲ್ಲಿ ಗಣ್ಯರು ಸೇರಿದಂತೆ ಎಸ್ ಆರ್ ವಿ ನ ಎಲ್ಲಾ ಆಯೋಜಕರಾದ ಸಚಿನ್ ವಾಸುದೇವ್, ಲೋಹಿತ್, ದಿನೇಶ್, ಅಶೋಕ್, ಲಿಖಿತ್, ಶಾಹಿದ್, ಶಮನ್, ಮನೋಜ್,ಅಶ್ರಫ್, ಮನು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸುಂಟಿಕೊಪ್ಪ : ವಿವಿಧ ಸ್ವಸಹಾಯ ಸಂಘಗಳಿಂದ ಸ್ವಚ್ಛತಾ ಶ್ರಮದಾನ*
Next Article *ಜಿಮ್ ಟ್ರೈನರ್ ಬೇಕಾಗಿದ್ದಾರೆ : SM  ಫಿಟ್ನೆಸ್, ಜಿಮ್, ಟೋಲ್  ಗೇಟ್, ಮಡಿಕೇರಿ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.