Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೀಗೆಹೊಸೂರು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಕಲಿಕಾ ಹಬ್ಬ : ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ”: ಹೆಚ್.ಎಸ್.ಚೇತನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೀಗೆಹೊಸೂರು ಸರ್ಕಾರಿ ಶಾಲೆಯಲ್ಲಿ ಸಂಭ್ರಮದ ಕಲಿಕಾ ಹಬ್ಬ : ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ”: ಹೆಚ್.ಎಸ್.ಚೇತನ್*

ಜನವರಿ 16, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಜ.16 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಸೀಗೆಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ
ಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ  ಏರ್ಪಡಿಸಿದ್ದ ಮಕ್ಕಳ ಕಲಿಕಾ ಹಬ್ಬವು ಸಂಭ್ರಮದಿಂದ‌ ನಡೆಯಿತು. 1 ರಿಂದ 5 ನೇ ತರಗತಿಯವರೆಗಿನ
ಮಕ್ಕಳಿಗೆ ಮೂಲಭೂತ – ಸಾಕ್ಷರತೆ- ಸಂಖ್ಯಾಶಾಸ್ತ್ರ (ಎಫ್ ಎಲ್ ಎನ್ ) ಸಂಬಂಧಿಸಿದಂತೆ ಏರ್ಪಡಿಸಿದ್ದ ಕಲಿಕಾ ಹಬ್ಬದಲ್ಲಿ ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳುಳ್ಳ ಚಟುವಟಿಕೆಗಳನ್ನು ಪ್ರದರ್ಶಿಸಿ ಗಮನ ಸೆಳೆದರು. ಕಲಿಕಾ ಹಬ್ಬ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚೇತನ್, ಮಕ್ಕಳು ಕೇಳುವ ಪ್ರಶ್ನೆಯು ಪ್ರಜ್ಞೆಯಾಗಲಿ”. ಕಲಿಕಾ ಹಬ್ಬವು ಮಕ್ಕಳ ಕಲಿಕಾ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು. ಸ್ಥಳೀಯರ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ಸಂಘಟಿಸಿರುವ ಮಕ್ಕಳ ಕಲಿಕಾ ಹಬ್ಬ ವಿಶಿಷ್ಟವಾದ ಕಾರ್ಯಕ್ರಮವಾಗಿದ್ದು, ವಿದ್ಯಾರ್ಥಿಗಳಲ್ಲಿ ಸಂತಸದಾಯಕ ಕಲಿಕೆಯ ಮೂಲಕ ಹೆಚ್ಚು ಜ್ಞಾನಾರ್ಜನೆಗೆ ಸಹಕಾರಿಯಾಗಿದೆ ಎಂದು ಚೇತನ್ ಹೇಳಿದರು.  ಪ್ರಾಸ್ತಾವಿಕವಾಗಿ ಮಾತನಾಡಿದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಎಂ.ವಿ.ಮಂಜೇಶ್ , ಪ್ರಾಥಮಿಕ ಹಂತದಲ್ಲೇ ಮಕ್ಕಳಲ್ಲಿ ಓದು, ಬರವಣಿಗೆ ಮತ್ತು ಗಣಿತದ ಮೂಲಭೂತ ಕೌಶಲಗಳನ್ನು ಬಲಪಡಿಸುವುದೇ ಎಫ್‌ಎಲ್‌ಎನ್ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ’ ಎಂದರು.  ಶೈಕ್ಷಣಿಕ ಪರಿಸರದ ಬೆಂಬಲ ವ್ಯವಸ್ಥೆ ಗಟ್ಟಿಯಾದರೆ ಮಕ್ಕಳಿನ ಕಲಿವಿನ ಫಲ ವೃದ್ಧಿಯಾಗುತ್ತದೆ ಎಂದರು. ಕಲಿಕಾ ಹಬ್ಬದಲ್ಲಿ ಮಕ್ಕಳ ಕಲಿಕಾ ಪ್ರೇರಣೆ ಕುರಿತು ಮಾತನಾಡಿದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್,  ವಿದ್ಯಾರ್ಥಿಗಳ ಕಲಿಕಾ ಮಟ್ಡವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣಯು ಹಮ್ಮಿಕೊಂಡಿರುವ ವಿಶಿಷ್ಡ ಕಾರ್ಯಕ್ರಮವಾಗಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳ ಕ್ರಿಯಾಶೀಲ ಕಲಿಕಾ ಪ್ರೇರಣೆಯೊಂದಿಗೆ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಸಹಕಾರಿಯಾಗಿವೆ ಎಂದರು.  ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಿಭಾಗೀಯ ಉಪಾಧ್ಯಕ್ಷ ಎಸ್.ಎ.ಯೋಗೇಶ್ ಮಾತನಾಡಿ,  ಮಕ್ಕಳ ಕಲಿಕಾ ಹಬ್ಬವು ವಿಶಿಷ್ಟವಾದ ಮತ್ತು ಚಟುವಟಿಕೆಯಾಧಾರಿತ ಕೌಶಲ್ಯಪೂರ್ಣ ಕಾರ್ಯಕ್ರಮವಾಗಿದೆ ಎಂದರು. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕೆ.ಎಸ್.ಪ್ರಸನ್ನಕುಮಾರ್ ಮಾತನಾಡಿ, ಮಕ್ಕಳಲ್ಲಿ ಸೃಜನಶೀಲತೆ ಹಾಗೂ ಕ್ರಿಯಾಶೀಲತೆ ಬೆಳೆಸಲು
ಮಕ್ಕಳ ಕಲಿಕಾ ಹಬ್ಬ ಸಹಕಾರಿಯಾಗಿದೆ ಎಂದರು.  ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ.ಕೆ.ಬಸವರಾಜ್ ಮಾತನಾಡಿ,
ವಿದ್ಯಾರ್ಥಿಗಳಲ್ಲಿ ಸಂತಸದಾಯಕ ಕಲಿಕೆಯ ಜತೆಗೆ ಜ್ಞಾನಾರ್ಜನೆಗೆ ಸಹಕಾರಿಯಾಗಿದೆ ಎಂದರು. ಕಲಿಕಾ ಹಬ್ಬದ ಉದ್ದೇಶ ತಿಳಿಸಿದ ಸಿ ಆರ್ ಪಿ ಕೆ.ಶಾಂತಕುಮಾರ್ , ಕ್ಲಸ್ಟರ್ ಹಂತದ ಶಾಲೆಗಳು ತಮ್ಮೊಳಗಿರುವ ಉತ್ತಮ ಅಭ್ಯಾಸಗಳನ್ನು ಪರಸ್ಪರ ಹಂಚಿಕೊಳ್ಳಲು ಒಂದು ಉತ್ತಮ ವೇದಿಕೆಯಾಗಿದೆ ಎಂದರು. ಸರ್ಕಾರಿ ಪ್ರಾಥಮಿಕ ಶಾಲೆಯ 1 ರಿಂದ 5 ನೇ ತರಗತಿ ಮಕ್ಕಳಿಗೆ “ಮೂಲಭೂತ ಸಾಕ್ಷರತೆ ಮತ್ತು ಸಂಖ್ಯಾಜ್ಞಾನದ( ಎಫ್.ಎಲ್.ಎನ್):( ಈ.ಐ.ಓ.: Foundation literacy and Numeracy) ಚಟುವಟಿಕೆಗಳ ಬಲವರ್ಧನೆಗೆ “ಕಲಿಕಾ ಹಬ್ಬ ” ನಡೆಸಲಾಗುತ್ತಿದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷೆ ಧರಣಿ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ಶಿಕ್ಷಕರೊಂದಿಗೆ ಪಾಲಕರು ಮತ್ತು ಸಮುದಾಯ ಒಟ್ಟಾಗಿ ಬೆಂಬಲಿಸಬೇಕೆಂದು ಮನವಿ ಮಾಡಿದರು. ಕಲಿಕಾ ಹಬ್ಬದ ವ್ಯವಸ್ಥೆ ಕುರಿತು ಶಾಲಾ ಮುಖ್ಯ ಶಿಕ್ಷಕಿ ತಾರಾಮಣಿ ಮಾಹಿತಿ ನೀಡಿದರು. ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಕೆ.ಶಿವಶಂಕರ್, ಶಾಲಾ ಶಿಕ್ಷಕರಾದ ಎಚ್.ವಿ.ಲತಾಮಣಿ, ಎಸ್.ಸಿ.ಶ್ವೇತ, ಮಹದೇವಕುಮಾರ್, ನಿವೃತ್ತ ಶಿಕ್ಷಕಿ ಟಿ.ಎಸ್.ವಿನೋದ, ಗ್ರಾಮ ಪಂಚಾಯ್ತಿ ಸದಸ್ಯ ಚಂದ್ರು, ಎಸ್ ಡಿ ಎಂ ಸಿ ಸದಸ್ಯರಾದ ಧನಂಜಯ,  ಚೇತನ್ , ಮಂಜೇಶ , ಮಣಿ, ಜ್ಯೋತಿ, ಕೃಷಿಕರಾದ ಗುರುಪಾದಸ್ವಾಮಿ, ವಿವಿಧ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು. :: ಮಕ್ಕಳಿಂದ ಪ್ರತಿಭಾ ಪ್ರದರ್ಶನ ::  ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯಿಂದ‌ ಬಂದಿದ್ದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಿಂದ ಶಿಕ್ಷಕರ ಜತೆ ಆಗಮಿಸಿದ್ದ ಮಕ್ಕಳು ತಾವು ಕಲಿತ್ತಿದ್ದ ವಿವಿಧ ಅಭ್ಯಾಸಾತ್ಮಕ ಚಟುವಟಿಕೆಗಳಲ್ಲಿ ಪಾಲ್ಹೊಂಡು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು. ಕಲಿಕಾ ಹಬ್ಬದಲ್ಲಿ ಶಿಕ್ಷಕರು, ಮಕ್ಕಳು ಹಾಗೂ ಪೋಷಕರು ಕಾಗದದ ಟೋಪಿ ಧರಿಸಿ ಗಮನ ಸೆಳೆದರು. “ಪ್ರಶ್ನೆಯು ಪ್ರಜ್ಞೆಯಾಗಲಿ” ಎಂಬ ಆಶಯದೊಂದಿಗೆ  ಹಮ್ಮಿಕೊಳ್ಳಲಾಗಿದ್ದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ 13 ಸರ್ಕಾರಿ ಪ್ರಾಥಮಿಕ ಶಾಲೆಗಳ
1 ರಿಂದ 5 ನೇ ತರಗತಿಯ ಮಕ್ಕಳು ಭಾಗವಹಿಸಿದ್ದರು. ಶಾಲಾ ಅಂಗಳದಲ್ಲಿ ಇಡಲಾಗಿದ್ದ ಸೆಲ್ಪಿ ಕಾರ್ನರ್ ನಲ್ಲಿ ಮಕ್ಕಳು ಮತ್ತು ಪೋಷಕರು‌ ಮುಗಿಬಿದ್ದು ತಮ್ಮ ಛಾಯಚಿತ್ರಗಳನ್ನು ತೆಗೆಸಿಕೊಳ್ಳುತ್ತಿದ್ದುದು ಗೋಚರಿಸಿತು.

16-01-2026  

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.