Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*
  • *ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್
  • *ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*
  • *ಕೊಡಗಿನಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿದೆ : ಅಬ್ದುಲ್ ರಶೀದ್*
  • *ಸೋಮವಾರಪೇಟೆ ಗ್ಯಾರಂಟಿ ಯೋಜನೆಯ ಪ್ರಾಧಿಕಾರ ಸಮಿತಿ ಸಭೆ*
  • *ನಿವೇಶನ ರಹಿತ 22ನೇ ದಿನಕ್ಕೆ*
  • *ಹೊನ್ನಮ್ಮನ ಕನಸಿಗೆ ಮತ್ತೊಂದು ಗರಿ*
  • *ಸೆಸ್ಕ್‌ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಅತ್ತೆ-ಮಾವಂದಿರನ್ನು ಚೆನ್ನಾಗಿ ನೋಡಿಕೊಂಡಲ್ಲಿ ಸಂಸಾರಕ್ಕೆ ಅರ್ಥ : ಶರಣಮ್ಮ ಎಸ್.ಜಂಗಿನ*
  • *ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಅಭಿವೃದ್ಧಿ ಶೂನ್ಯ : ಬಹುಮತ ನೀಡಿದ ಜನರಿಗೆ ಬಿಜೆಪಿಯಿಂದ ಮೋಸ*
  • *ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು : ಗ್ಯಾರಂಟಿ ಯೋಜನೆಯಿಂದ ಬಡವರು, ಮಹಿಳೆಯರು ಮತ್ತು ಯುವಜನರಿಗೆ ಆರ್ಥಿಕ ಶಕ್ತಿ : ಎಸ್.ಆರ್.ಮೆಹರೋಜ್ ಖಾನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು : ಗ್ಯಾರಂಟಿ ಯೋಜನೆಯಿಂದ ಬಡವರು, ಮಹಿಳೆಯರು ಮತ್ತು ಯುವಜನರಿಗೆ ಆರ್ಥಿಕ ಶಕ್ತಿ : ಎಸ್.ಆರ್.ಮೆಹರೋಜ್ ಖಾನ್*

ಜನವರಿ 17, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.17 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯು ರಾಜ್ಯದ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಇದುವರೆಗೆ 1.12 ಲಕ್ಷ ಕೋಟಿ ರೂ. ಭರಿಸಲಾಗಿದೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಇದುವರೆಗೆ 647.59 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಮಾಹಿತಿ ನೀಡಿದ್ದಾರೆ. ನಗರದ ಹೊರವಲಯದಲ್ಲಿರುವ ಆಕ್ಸಿರಿಚ್ ರೆಸಾರ್ಟ್‍ನಲ್ಲಿ ಶನಿವಾರ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತವಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರ ಜಿಎಸ್‍ಟಿ ಸಂಗ್ರಹಣೆಯಲ್ಲಿ ಸರಾಸರಿ ಹೆಚ್ಚಳವಾಗಿದೆ. ಐದು ಗ್ಯಾರಂಟಿ ಯೋಜನೆ ಜಾರಿಯಿಂದ ಶೇ.24 ರಷ್ಟು ಜಿಡಿಪಿ ದರ ಹೆಚ್ಚಳವಾಗಿದೆ. ನಿರುದ್ಯೋಗ ಪ್ರಮಾಣ ಶೇ.4.3 ರಷ್ಟು ಇದ್ದದ್ದು ಈಗ ಶೇ.2.5ಕ್ಕೆ ಇಳಿಕೆಯಾಗಿದೆ. ಮಹಿಳೆಯರು ಉದ್ಯೋಗ ಮತ್ತು ಉದ್ಯಮಶೀಲತೆಯಲ್ಲಿ ಶೇ.25 ರಿಂದ 30 ಕ್ಕೆ ಏರಿಕೆಯಾಗಿರುವುದು ವಿಶೇಷವಾಗಿದೆ. ಜೊತೆಗೆ ರಾಷ್ಟ್ರದ ತಲಾ ಆದಾಯದಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿರುವುದು ವಿಶೇಷವೇ ಸರಿ ಎಂದು ಮೆಹರೋಜ್ ಖಾನ್ ಅವರು ನುಡಿದರು. ಇಡೀ ದೇಶದಲ್ಲಿ ಕರ್ನಾಟಕ ಮಾದರಿ ರಾಜ್ಯವಾಗಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸಿನ ಮೂಲಕ ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಪ್ರಯತ್ನಿಸಿದೆ. ಜನರ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಬೆಳವಣಿಗೆಗೆ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ಅವರು ವಿವರಿಸಿದರು. ಜನಪರವಾದ ಕೆಲಸ ಮಾಡಬೇಕು ಎಂಬ ಉದ್ದೇಶದಿಂದ ಪ್ರಣಾಳಿಕೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿತ್ತು. ಅದರಂತೆ ಐದು ಗ್ಯಾರಂಟಿ ಯೋಜನೆಯನ್ನು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ಜಾರಿಗೊಳಿಸಲಾಗಿದೆ. ಆ ದಿಸೆಯಲ್ಲಿ ಕಾಲಮಿತಿಯಲ್ಲಿ ಸರ್ಕಾರ ಅನುμÁ್ಠನಗೊಳಿಸಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್ ಅವರು ತಿಳಿಸಿದರು. ರಾಜ್ಯದಲ್ಲಿ ವರ್ಷಕ್ಕೆ ಸರ್ಕಾರ 52 ಸಾವಿರ ಕೋಟಿ ರೂ.ವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗ ಮಾಡುತ್ತದೆ ಎಂದು ವಿವರಿಸಿದ ಮೆಹರೋಜ್ ಖಾನ್ ಅವರು ರಾಜ್ಯದಲ್ಲಿ ಬಡತನ ಪ್ರಮಾಣ ಕಡಿಮೆ ಮಾಡಬೇಕು. ಮಹಿಳೆಯರು ಮತ್ತು ಯುವಜನರಿಗೆ ಶಕ್ತಿ ನೀಡಬೇಕು ಎಂಬ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದರು. ಶೇಕಡಾವಾರು ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳು ತಲುಪುತ್ತಿದ್ದು, ಇದೊಂದು ಸರ್ಕಾರದ ಮಹತ್ವದ ಕಾರ್ಯವಾಗಿದೆ ಎಂದು ಅವರು ಹೆಮ್ಮೆಯಿಂದ ನುಡಿದರು. ಗ್ಯಾರಂಟಿ ಯೋಜನೆಗಳಿಂದಾಗಿ ಅಭಿವೃದ್ಧಿಗೆ ಹಣ ಬಳಸಲು ಸಾಧ್ಯವಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದವು. ಆದರೆ ಗ್ಯಾರಂಟಿ ಯೋಜನೆಗಳ ಅನುμÁ್ಠನ ಜೊತೆಗೆ ಅಭಿವೃದ್ಧಿ ಕಾರ್ಯಗಳು ಎಂದಿನಂತೆ ನಡೆಯುತ್ತಿವೆ ಎಂದು ಅವರು ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಇಂದಿಗೂ ಸಹ ಬಡತನವಿದ್ದು, ಗ್ಯಾರಂಟಿ ಯೋಜನೆಗಳು ಎಷ್ಟು ಉಪಯುಕ್ತವಾಗಿವೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಆದ್ದರಿಂದ ಕರ್ನಾಟಕದ ಎಲ್ಲಾ ಭಾಗದಲ್ಲಿಯೂ ಅಭಿವೃದ್ಧಿ ಆಗಬೇಕು. ಆ ನಿಟ್ಟಿನಲ್ಲಿ ಸರ್ಕಾರ ಬಡವರಿಗೆ, ಮಹಿಳೆಯರಿಗೆ ಮತ್ತು ಯುವ ಜನರಿಗೆ ಶಕ್ತಿ ನೀಡಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರು ಹೇಳಿದರು. ಗ್ಯಾರಂಟಿ ಯೋಜನೆಯಿಂದ ಬಡತನ ಪ್ರಮಾಣ ಶೇ.12 ರಷ್ಟು ಇಳಿಕೆಯಾಗಿದೆ. ಜೊತೆಗೆ ಗ್ರಾಮೀಣ ಪ್ರದೇಶದಿಂದ ನಗರಪ್ರದೇಶಗಳಿಗೆ ವಲಸೆ ಹೋಗುವವರ ಪ್ರಮಾಣ ಶೇ.15 ರಷ್ಟು ಇಳಿಕೆಯಾಗಿದೆ. ಹಾಗೆಯೇ ಅಪೌಷ್ಠಿಕತೆಯು ಶೇ.50 ರಷ್ಟು ಕಡಿಮೆಯಾಗಿದೆ ಎಂದು ಅವರು ವಿವರಿಸಿದರು. ಶಕ್ತಿ ಯೋಜನೆಯಿಂದ ದೇವಸ್ಥಾನಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆ ವಿನಿಮಯ ಆಗುತ್ತಿದೆ ಎಂದು ನುಡಿದರು. ಕೊಡಗು ಜಿಲ್ಲಾ ಗ್ಯಾರಂಟಿ ಯೋಜನೆ ಅನುμÁ್ಠನ ಸಮಿತಿ ಜಿಲ್ಲಾ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಮಾತನಾಡಿ ಜಿಲ್ಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ ಪೂರ್ಣಗೊಂಡಿದ್ದು, ಜಿಲ್ಲೆಯ ರಸ್ತೆ ಅಭಿವೃದ್ಧಿ ಕಾರ್ಯವು ಮೇ ಅಂತ್ಯದೊಳಗೆ ಶೇ.75 ರಷ್ಟು ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು ಮಡಿಕೇರಿ-ವಿರಾಜಪೇಟೆ, ವಿರಾಜಪೇಟೆ-ಮಾಕುಟ್ಟ, ವಿರಾಜಪೇಟೆ-ತಿತಿಮತಿ ಸೇರಿದಂತೆ ಎಲ್ಲಾ ರಸ್ತೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಇದಕ್ಕಾಗಿ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆಯಾಗಿದೆ ಎಂದರು. ಬಳಿಕ ಸಂವಾದ ಸಂದರ್ಭದಲ್ಲಿ ಪತ್ರಕರ್ತರು ಕೊಡಗು ಜಿಲ್ಲೆಯಲ್ಲಿ ರಸ್ತೆಗಳ ಅಭಿವೃದ್ಧಿಯಾಗಬೇಕು. ಗೃಹಲಕ್ಷ್ಮಿ ಯೋಜನೆ ಹಣ ಪ್ರತೀ ತಿಂಗಳು ಬಿಡುಗಡೆಯಾಗಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನಾ ಕಾರ್ಯಕ್ರಮಗಳ ಅನುದಾನ ಪರಿಶಿಷ್ಟರಿಗೆ ಬಳಸಬೇಕು. ಮತ್ತಿತರ ಬಗ್ಗೆ ಗಮನಸೆಳೆದರು. ಈ ಕುರಿತು ಪ್ರತಿಕ್ರಿಯಿಸಿದ ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್ ಅವರು ಕೊಡಗಿನಲ್ಲಿ ಶಾಸಕದ್ವಯರ ಪ್ರಯತ್ನದಿಂದ ಸರ್ಕಾರ ಹೆಚ್ಚಿನ ಅನುದಾನ ಬಿಡುಗಡೆ ಮಾಡಿದ್ದು, ರಸ್ತೆ ಸೇರಿದಂತೆ ಆಸ್ಪತ್ರೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು. ಕೊಡಗು ಜಿಲ್ಲೆಗೆ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವುದರಿಂದ ಪರಿಸರ ಸಂರಕ್ಷಣೆ ಜೊತೆಗೆ ಕುಡಿಯುವ ನೀರು ಪೂರೈಕೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಹೇಳಿದರು. ಎಸ್‍ಸಿ/ಎಸ್‍ಪಿ ಕಾರ್ಯಕ್ರಮಗಳ ಹಣ ಬಳಕೆ ಸಂಬಂಧ ಸಮಾಜ ಕಲ್ಯಾಣ ಸಚಿವರ ಗಮನ ಸೆಳೆಯಲಾಗುವುದು ಎಂದು ಹೇಳಿದರು. ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಚ್.ಟಿ.ಅನಿಲ್ ಸ್ವಾಗತಿಸಿ, ನಿರೂಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ, ಪತ್ರಕರ್ತರ ಸಂಘದ ಕ್ಷೇಮಾಭಿವೃದ್ದಿ ಸಮಿತಿಯ ಅಧ್ಯಕ್ಷ ಜಿ.ವಿ.ರವಿಕುಮಾರ್, ವೇದಿಕೆಯಲ್ಲಿದ್ದರು. ಮಡಿಕೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ವೈ.ರಾಜೇಶ್, ಪ್ರಮುಖರಾದ ಮುನೀರ್ ಅಹ್ಮದ್, ಅಂಬೆಕಲ್ಲು ನವೀನ್. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಹನೀಫ್, ಕೊಲ್ಯದ ಗಿರೀಶ್ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ತೊರೆನೂರು ಗ್ರಾಮದಲ್ಲಿ ಶ್ರೀ ದೊಡ್ಡಮ್ಮ ಹಾಗೂ ಚಿಕ್ಕಮ್ಮ ದೇವಿಯ ಜಾತ್ರೋತ್ಸವ : ಗಮನ ಸೆಳೆದ ಉತ್ಸವ ಮಂಟಪಗಳು*

ಮೇ 23, 2026

*ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್

ಮೇ 23, 2026

*ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*

ಮೇ 23, 2026

*ಕುಶಾಲನಗರದಲ್ಲಿ ಬ್ಯೂಟೀಶಿಯನ್ ತರಬೇತಿ ಶಿಬಿರದ ಸಮಾರೋಪ : ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ವಿಠಲ ಸಾಲಿಯಾನ್

ಮೇ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಮೇ 23 NEWS DESK : ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಂಡು ಸಮಾಜದ ಮುಖ್ಯ ವಾಹಿನಿಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು…

*ಕೊಡವ ಪುಸ್ತಕ ಪತ್ತಾಯ : ಪುಸ್ತಕ ಓದುವುದರಿಂದ ಮನಸ್ಸಿಗೆ ಸುಖ, ಶಾಂತಿ ಪ್ರಾಪ್ತಿ : ಅಜ್ಜಿನಿಕಂಡ ಮಹೇಶ್ ನಾಚಯ್ಯ*

ಮೇ 23, 2026

*ಕೊಡಗಿನಲ್ಲಿ ಸಾಹಿತ್ಯ ಪ್ರಕಾರಗಳು ಶ್ರೀಮಂತವಾಗಿದೆ : ಅಬ್ದುಲ್ ರಶೀದ್*

ಮೇ 23, 2026

*ಸೋಮವಾರಪೇಟೆ ಗ್ಯಾರಂಟಿ ಯೋಜನೆಯ ಪ್ರಾಧಿಕಾರ ಸಮಿತಿ ಸಭೆ*

ಮೇ 23, 2026

*ನಿವೇಶನ ರಹಿತ 22ನೇ ದಿನಕ್ಕೆ*

ಮೇ 23, 2026

*ಹೊನ್ನಮ್ಮನ ಕನಸಿಗೆ ಮತ್ತೊಂದು ಗರಿ*

ಮೇ 23, 2026

*ಸೆಸ್ಕ್‌ನಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ : ಅತ್ತೆ-ಮಾವಂದಿರನ್ನು ಚೆನ್ನಾಗಿ ನೋಡಿಕೊಂಡಲ್ಲಿ ಸಂಸಾರಕ್ಕೆ ಅರ್ಥ : ಶರಣಮ್ಮ ಎಸ್.ಜಂಗಿನ*

ಮೇ 23, 2026

*ಹೊಂದಾಣಿಕೆಯ ಕೊರತೆಯಿಂದ ಮಡಿಕೇರಿ ನಗರಸಭೆಯಲ್ಲಿ ಅಭಿವೃದ್ಧಿ ಶೂನ್ಯ : ಬಹುಮತ ನೀಡಿದ ಜನರಿಗೆ ಬಿಜೆಪಿಯಿಂದ ಮೋಸ*

ಮೇ 23, 2026

*ಕೊಡಗಿನಲ್ಲಿ ಮೊದಲ ಅಂಗಾಂಗ ದಾನ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಅಂಗಾಂಗ ಸಂಗ್ರಹಣೆ*

ಮೇ 23, 2026

*ಸಮಾಜ ಕಲ್ಯಾಣ ಇಲಾಖೆ ವಶಕ್ಕೆ ಪಡೆದ ಕಟ್ಟಡದಲ್ಲಿ ಆಸ್ಪತ್ರೆ ಆರಂಭಿಸಲು ಹೇರೂರು ಗ್ರಾಮಸ್ಥರ ಒತ್ತಾಯ*

ಮೇ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.