Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ಎಸ್‌ಡಿಪಿಐ ಜನಾಗೃಹ ಸಮಾವೇಶ : ಎಸ್‌ಐಆರ್ ನಿಂದ 100 ಕೋಟಿ ಭಾರತೀಯರಿಗೆ ಸಂಕಷ್ಟ : ಅಬ್ದುಲ್ ಮಜೀದ್ ಆರೋಪ : ಕೊಡಗಿನ ಸಮಸ್ಯೆಗಳಿಗೆ ಸ್ಪಂದಿಸಲು ಆಗ್ರಹ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ಎಸ್‌ಡಿಪಿಐ ಜನಾಗೃಹ ಸಮಾವೇಶ : ಎಸ್‌ಐಆರ್ ನಿಂದ 100 ಕೋಟಿ ಭಾರತೀಯರಿಗೆ ಸಂಕಷ್ಟ : ಅಬ್ದುಲ್ ಮಜೀದ್ ಆರೋಪ : ಕೊಡಗಿನ ಸಮಸ್ಯೆಗಳಿಗೆ ಸ್ಪಂದಿಸಲು ಆಗ್ರಹ*

ಜನವರಿ 18, 20265 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಜ.18 : ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕ್ರಮದಿಂದ ಕೇವಲ ಮುಸಲ್ಮಾನರಿಗೆ ಮಾತ್ರ ತೊಂದರೆಯಾಗುವುದಿಲ್ಲ, ಬದಲಿಗೆ ಬಡವರು, ಕೂಲಿ ಕಾರ್ಮಿಕರು ಸೇರಿದಂತೆ 100 ಕೋಟಿ ಭಾರತೀಯರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಎಸ್‌ಡಿಪಿಐ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ನಡೆದ ಜನಾಗ್ರಹ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಎನ್‌ಆರ್‌ಸಿ ವಿಚಾರ ಕೋರ್ಟ್ನಲ್ಲಿರುವ ಕಾರಣ ಚುನಾವಣಾ ಆಯೋಗದ ಮೂಲಕ ಹಿಂಬಾಗಲಿನಿಂದ ಎಸ್‌ಐಆರ್ ಪರೀಕ್ಷೆಯನ್ನು ಒಡ್ಡಲಾಗಿದೆ. ಇದರಿಂದ ಬಡವರು, ಕೂಲಿ ಕಾರ್ಮಿಕರು ಮತದಾನದ ಹಕ್ಕನ್ನು ಕಳೆದುಕೊಳ್ಳಲಿದ್ದಾರೆ. ಈ ಹಿಂದೆ ಕಪ್ಪು ಹಣವನ್ನು ಹೊರ ತರಲು ಮತ್ತು ಭಯೋತ್ಪಾದನೆಯನ್ನು ತಡೆಯಲು ನೋಟ್ ಬ್ಯಾನ್ ಮಾಡುವುದಾಗಿ ಹೇಳಿ ನೋಟ್ ಬ್ಯಾನ್ ಮಾಡಲಾಯಿತು. ಆದರೆ ಕಪ್ಪು ಹಣ ಪತ್ತೆಯಾಗಲಿಲ್ಲ, ಭಯೋತ್ಪಾದನೆ ಕಡಿಮೆಯಾಗಲಿಲ್ಲ. ಇದೀಗ ನುಸುಳುಕೋರರನ್ನು ಪತ್ತೆ ಮಾಡಲು ಎಸ್‌ಐಆರ್ ತರಲಾಗಿದೆ ಎಂದು ಹೇಳುತ್ತಿದ್ದಾರೆ, ಇದೊಂದು ಮೂರ್ಖತನದ ನಿರ್ಧಾರವಾಗಿದೆ. ಎಸ್‌ಐಆರ್ ಎನ್ನುವುದು ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲ, ಇದು ಜನರನ್ನು ತೀವ್ರ ನಿಗಾ ಘಟಕಕ್ಕೆ ತಳ್ಳುವ ಮತ್ತು ಪೌರತ್ವದ ಅಗ್ನಿ ಪರೀಕ್ಷೆಗೆ ಒಡ್ಡುವ ಅಪಾಯಕಾರಿ ಕ್ರಮವಾಗಿದೆ ಎಂದು ಆರೋಪಿಸಿದರು.
ತಮಿಳುನಾಡಿನಲ್ಲಿ ಎಸ್‌ಐಆರ್ ಪ್ರಕ್ರಿಯೆಯಿಂದಾಗಿ 90 ಲಕ್ಷ ಮಂದಿ ಮತದಾನದ ಹಕ್ಕಿನಿಂದ ಹೊರ ಬಂದಿದ್ದಾರೆ. ಇವರೆಲ್ಲರು ಮುಸಲ್ಮಾನರಲ್ಲ, ತಮಿಳುನಾಡಿನ ಜನಸಂಖ್ಯೆಯಲ್ಲಿ ಶೇ.6 ರಷ್ಟು ಮಾತ್ರ ಮುಸಲ್ಮಾನರಿದ್ದಾರೆ. 90 ಲಕ್ಷ ಮಂದಿಯಲ್ಲಿ 20ಲಕ್ಷ ಮಂದಿ ಮುಸಲ್ಮಾನರಾದರೆ ಉಳಿದ 70 ಲಕ್ಷ ಮಂದಿ ಇತರ ಜಾತಿ ಜನಾಂಗಕ್ಕೆ ಸೇರಿದವರಾಗಿದ್ದಾರೆ, ಇವರೆಲ್ಲರೂ ಬಡವರು, ಕೂಲಿ ಕಾರ್ಮಿಕರೇ ಆಗಿದ್ದಾರೆ. ಈ ಕ್ರಮದಿಂದ ಮುಸಲ್ಮಾನರಿಗೆ ಮಾತ್ರ ತೊಂದರೆ ಎಂದು ಯಾರೂ ಭಾವಿಸಬಾರದು, ಆದ್ದರಿಂದ ಇದರ ವಿರುದ್ಧ ಸರ್ವ ಜನರು ಜಾಗೃತರಾಗಬೇಕು ಎಂದು ಕರೆ ನೀಡಿದರು.
ಎಸ್‌ಐಆರ್ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರ ಯಾವುದೇ ಹೋರಾಟಗಳನ್ನು ಮಾಡದೆ ಯಾಕೆ ನಿದ್ರಾವಸ್ಥೆಯಲ್ಲಿದೆ ಎಂದು ಪ್ರಶ್ನಿಸಿದರು.
ರಾಜ್ಯದ ಕಾಂಗ್ರೆಸ್ ಸರಕಾರ ಬುಳ್ಡೋಸರ್ ಬಳಸಿ ಬಡವರ ಮನೆಗಳನ್ನು ನೆಲಸಮಗೊಳಿಸುತ್ತಿದೆ. ಮನೆಗಳನ್ನು ತೆರವು ಮಾಡುವ ಸಂದರ್ಭ ನಿವಾಸಿಗಳಿಗೆ ನೋಟಿಸ್ ನೀಡಬೇಕೆಂದು ಸುಪ್ರೀಂಕೋಟ್ ಹೇಳಿದೆ, ಆದರೆ ರಾಜ್ಯ ಸರಕಾರ ಯಾವ ಮುನ್ಸೂಚನೆಯನ್ನೂ ನೀಡದೆ ಕಾನೂನಿಗೆ ವಿರುದ್ಧವಾಗಿ ಮುಂಜಾನೆ 4ಗಂಟೆಗೆ ಬುಳ್ಡೋಸರ್ ಬಳಸಿ ಮನೆ ಕೆಡವಿ ಬಡವರನ್ನು ಬೀದಿ ಪಾಲು ಮಾಡಿದೆ. ಸಿದ್ದರಾಮಯ್ಯ ಹಾಗೂ ಯೋಗಿ ಅವರಿಗೆ ಏನು ವ್ಯತ್ಯಾಸವಿದೆ. ತಪ್ಪುಗಳಿದ್ದರೆ ಕ್ರಮ ಕೈಗೊಳ್ಳುವುದಕ್ಕೆ ನಮ್ಮ ವಿರೋಧವಿಲ್ಲ, ಆದರೆ ಅದು ಕಾನೂನಿನ ಚೌಕಟ್ಟಿನಡಿ ನಡೆಯಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮಡಿಕೇರಿ ಶಾಸಕ ಮಂತರ್ ಗೌಡ ಅವರು ವಿಧಾನಸಭೆಯಲ್ಲಿ ಅಸ್ಸಾಂ ಕಾರ್ಮಿಕರು ಹೆಚ್ಚಾಗಿದ್ದಾರೆ, ಗೃಹ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಚರ್ಚಿಸಿದ್ದಾರೆ. ಆದರೆ ಇದಕ್ಕೂ ಗಂಭೀರವಾದ ಸಮಸ್ಯೆಗಳು ಕೊಡಗನ್ನು ಕಾಡುತ್ತಿದೆ. ನಿವೇಶನ ಮತ್ತು ವಸತಿಗಾಗಿ ಸಾವಿರಾರು ಬಡವರು ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದಿದೆ, ಆದರೆ ಜಿಲ್ಲೆಯ ಶಾಸಕರುಗಳು ಅಕ್ರಮ ಸಕ್ರಮ ಸಮಿತಿಯಲ್ಲಿ ಸಕ್ರಮಗೊಳಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಬ್ದುಲ್ ಮಜೀದ್ ಆರೋಪಿಸಿದರು.
ಮೊದಲು ಜಿಲ್ಲೆಯ ಜನರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಸೂಚಿಸಲು ಶಾಸಕರುಗಳು ಕ್ರಮ ಕೈಗೊಳ್ಳಲಿ ಎಂದು ಒತ್ತಾಯಿಸಿದರು.
ಎಸ್‌ಡಿಪಿಐ ಪಕ್ಷ ಸಂವಿಧಾನಬದ್ಧವಾಗಿ ನ್ಯಾಯ ಮತ್ತು ಸತ್ಯದ ಪರ ಹೋರಾಟ ನಡೆಸುತ್ತಿರುವುದರಿಂದ ಮುಂಬರುವ ಚುನಾವಣೆಗಳಲ್ಲಿ ಎಸ್‌ಡಿಪಿಐಯನ್ನು ಬೆಂಬಲಿಸುವಂತೆ ಕರೆ ನೀಡಿದರು.
ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು ಮಾತನಾಡಿ ಭಯಮುಕ್ತ ಸಮಾಜದ ನಿರ್ಮಾಣಕ್ಕಾಗಿ ಎಸ್‌ಡಿಪಿಐ ಹೋರಾಟ ನಡೆಸುತ್ತಿದೆ. ಇಂದು ದೇಶದಲ್ಲಿ ಬಿಜೆಪಿಯನ್ನು ಬಲವಾಗಿ ಎದುರಿಸಬಲ್ಲ ಶಕ್ತಿ ಇರುವುದು ಎಸ್‌ಡಿಪಿಐಗೆ ಮಾತ್ರ, ದೇಶ ಕಾಂಗ್ರೆಸ್ ಮುಕ್ತವಾಗುತ್ತಿದೆ, ಆ ಪಕ್ಷಕ್ಕೆ ಇನ್ನು ಉಳಿಗಾವಿಲ್ಲ. ರಾಜಕೀಯವಾಗಿ ಕಾಂಗ್ರೆಸ್ ಗೆ ಇನ್ನೂ ಉಳಿದುಕೊಳ್ಳಬೇಕೆನ್ನುವ ಇಚ್ಛೆ ಇದ್ದರೆ ಅದು ಎಸ್‌ಡಿಪಿಐಗೆ ಬೆಂಬಲ ಸೂಚಿಸಲಿ ಎಂದರು.
ದೇಶಕ್ಕೆ ಅಚ್ಚೇ ದಿನ್ ಬರಲಿದೆ ಎಂದು ಎನ್‌ಡಿಎ ಸರಕಾರ ಘೋಷಿಸಿತು, ಆದರೆ ಇಲ್ಲಿಯವರೆಗೆ ಪ್ರಜೆಗಳಿಗೆ ಒಳ್ಳೆಯ ದಿನಗಳು ಬರಲಿಲ್ಲ. ಎಸ್‌ಐಆರ್ ಎನ್ನುವುದು ಎನ್‌ಆರ್‌ಸಿಯ ಹಿಂಬಾಗಿಲಾಗಿದೆ, ಮತಗಳ್ಳತನದ ಷಡ್ಯಂತ್ರವಾಗಿದೆ ಎಂದು ಆರೋಪಿಸಿದರು.
ಮೀಸಲಾತಿಯನ್ನು ಕಡಿತಗೊಳಿಸಿದಾಗ, ಹಿಜಾಬ್ ಗೆ ಆಕ್ಷೇಪ ಎತ್ತಿದಾಗ, ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷರನ್ನು ಬಂಧಿಸಿದಾಗ, ಎನ್‌ಆರ್‌ಸಿಯ ಕುರಿತು ಪ್ರಸ್ತಾಪಿಸಿದಾಗ ಯಾವುದಕ್ಕೂ ನಾವು ಭಯಪಡಲಿಲ್ಲ. ಹೋರಾಟದ ಮೂಲಕವೇ ನಮ್ಮ ಹಕ್ಕನ್ನು ಉಳಿಸಿಕೊಳ್ಳುತ್ತೇವೆ. ಈ ದೇಶದಲ್ಲಿ ಪ್ರತಿಯೊಬ್ಬರಿಗೂ ಸಂವಿಧಾನದ ಆಶಯದಂತೆ ಹಕ್ಕುಗಳನ್ನು ನೀಡುವುದು ನಮ್ಮ ಗುರಿಯಾಗಿದೆ. ಮುಂದೊಂದು ದಿನ ಎಸ್‌ಡಿಪಿಐ ಪಕ್ಷದ ಮುಖ್ಯಮಂತ್ರಿ ಈ ರಾಜ್ಯವನ್ನು, ಎಸ್‌ಡಿಪಿಐ ಪಕ್ಷದ ಪ್ರಧಾನಮಂತ್ರಿ ಈ ದೇಶವನ್ನು ಆಳಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮುಂಬರುವ ಗ್ರಾ.ಪಂ, ತಾ.ಪಂ ಮತ್ತು ಜಿ.ಪಂ ಚುನಾವಣೆಗಳಲ್ಲಿ ಎಸ್‌ಡಿಪಿಐ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವಂತೆ ಕರೆ ನೀಡಿದ ಅಫ್ಸರ್, ದೇಶ ಮತ್ತು ರಾಜ್ಯದಲ್ಲಿ ಜನ ಬದಲಾವಣೆಯನ್ನು ಬಯಸುತ್ತಿದ್ದು, ಇದು ಅಡಿಪಾಯವಾಗಲಿ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಎಸ್‌ಐಅರ್ ಎನ್ನುವುದು ನುಸುಳುಕೋರರನ್ನು ಪತ್ತೆ ಹಚ್ಚುವ ಪ್ರಕ್ರಿಯೆಯಲ್ಲ, ದೇಶದ ಪೌರತ್ವವನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ. ಬೆಟ್ಟ ಕೊರೆದು ಇಲಿ ಹಿಡಿಯುವ ಸಾಹಸ ಇದಾಗಿದೆ, ಇಲ್ಲಿಯವರೆಗೆ ಕೇವಲ ಇಬ್ಬರು ಬಾಂಗ್ಲಾ ದೇಶಿಗರನ್ನು ಮಾತ್ರ ಪತ್ತೆ ಮಾಡಲಾಗಿದೆ ಎಂದು ಆರೋಪಿಸಿದರು.
ಇತ್ತೀಚೆಗೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಸಿದ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ 9 ಕೋಟಿ ಮತದಾರರು ಮತದಾನದ ಹಕ್ಕಿನಿಂದ ಹೊರಗುಳಿದಿದ್ದಾರೆ. ಮತದಾನದ ಹಕ್ಕನ್ನು ಸಾಬೀತು ಪಡಿಸಬೇಕಾದರೆ ಜನನ ಪ್ರಮಾಣ ಪತ್ರ, ಆಸ್ತಿ ಪತ್ರ, ಪಾಸ್ ಪೋರ್ಟ್ ಮೊದಲಾದ ದಾಖಲೆಗಳನ್ನು ಒದಗಿಸಬೇಕೆನ್ನುವ ನಿಯಮ ರೂಪಿಸಲಾಗಿದೆ. ದೇಶದ ಒಟ್ಟು ಜನಸಂಖ್ಯೆಯ ಶೇ.5 ಮಂದಿಯ ಬಳಿ ಶೇ.95ರಷ್ಟು ಆಸ್ತಿ ಇದೆ, ಉಳಿದ ಪ್ರಜೆಗಳ ಬಳಿ ಸ್ವಂತ ಆಸ್ತಿಯೇ ಇಲ್ಲ. ಮತದಾರರ ಪಟ್ಟಿ ಪರಿಷ್ಕರಣೆಯ ಹಿಂದೆ ಷಡ್ಯಂತ್ರ ಅಡಗಿದೆ, ಇದು ಕತ್ತಲೆ ಯುಗದ ಕಾನೂನಾಗಿದೆ, ಹಕ್ಕುಗಳನ್ನು ಮೊಟಕುಗೊಳಿಸುವ ಪ್ರಯತ್ನವಾಗಿದೆ. ರಾಜ್ಯ ಸರಕಾರ ವಿಶೇಷ ಅಧಿವೇಶನ ಕರೆದು ಪರಿಷ್ಕರಣೆಯ ಕ್ರಮಕ್ಕೆ ವಿರೋಧ ವ್ಯಕ್ತಪಡಿಸಬೇಕು. ಕೊಡಗಿನ ಇಬ್ಬರು ಶಾಸಕರು ಈ ಕುರಿತು ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.
ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯನ್ನು ಕೈಬಿಡಬೇಕು, ಕೃಷಿ ಮಾಡಿಕೊಂಡು ಬದುಕು ಸಾಗಿಸುತ್ತಿರುವ ರೈತರ ಜಮೀನನ್ನು ಸಿಎನ್‌ಡಿ ವ್ಯಾಪ್ತಿಗೆ ತಂದು ಸೆಕ್ಷನ್ 4ರ ಅಡಿಯಲ್ಲಿ ನೋಟಿಸ್ ಜಾರಿ ಮಾಡಿರುವ ಕ್ರಮವನ್ನು ಕೈಬಿಟ್ಟು ಜಮೀನನ್ನು 57ರ ಅಡಿಯಲ್ಲಿ ಸಕ್ರಮಗೊಳಿಸಬೇಕು. ಮಾನವ ಹಾಗೂ ವನ್ಯಜೀವಿ ನಡುವಿನ ಸಂಘರ್ಷವನ್ನು ತಡೆಯಲು ಶಾಶ್ವತ ಯೋಜನೆಯನ್ನು ರೂಪಿಸಬೇಕು. ಕೊಡಗಿನಲ್ಲಿರುವ ನಿವೇಶನ ರಹಿತ ಮತ್ತು ವಸತಿ ರಹಿತ ಕುಟುಂಬಗಳಿಗೆ ತಕ್ಷಣ ನಿವೇಶನ, ವಸತಿ ಮಂಜೂರು ಮಾಡಬೇಕು. ಎಲ್ಲಾ ನಮೂನೆ 50, 53, 57 ಹಾಗೂ 94ಸಿ, 94ಸಿಸಿ ಫಾಸ್ಟ್ ಟ್ರಾö್ಯಕ್ ಸಮಿತಿ ರಚಿಸಿ ಸಕ್ರಮಗೊಳಿಸಬೇಕು. ಜೀವನದಿ ಕಾವೇರಿ ಕಲುಷಿತಗೊಳ್ಳುವುದನ್ನು ತಡೆಯಲು ಕ್ರಮ ಕೈಗೊಳ್ಳಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಈಡೇರಿಸುವಂತೆ ಅಮೀನ್ ಮೊಹಿಸಿನ್ ಆಗ್ರಹಿಸಿದರು.
ಎಸ್‌ಡಿಪಿಐ ರಾಷ್ಟಿçÃಯ ಸಮಿತಿ ಸದಸ್ಯ ಅಶ್ರಫ್ ಮೌಲವಿ ಮೂವಾಟ್ಟುಪುಝ ಅವರು ಮಾತನಾಡಿ ನಿರಂತರವಾಗಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದ ಮುಸಲ್ಮಾನರಿಗೆ ಆ ಪಕ್ಷದಿಂದ ನ್ಯಾಯ ಸಿಗಲಿಲ್ಲ, ಇನ್ನು ಮುಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಆಟ ನಡೆಯುವುದಿಲ್ಲ. ಭಯಮುಕ್ತ ಸಮಾಜ ನಿರ್ಮಾಣ, ಮನುಷ್ಯತ್ವ, ಸಮಗ್ರ ಅಭಿವೃದ್ಧಿ, ಎಲ್ಲಾ ಮಕ್ಕಳಿಗೆ ಶಿಕ್ಷಣ, ಬಡವರಿಗೆ ಮನೆಗಳನ್ನು ನೀಡುವುದು ಎಸ್‌ಡಿಪಿಐ ಗುರಿಯಾಗಿದೆ. ಎಸ್‌ಡಿಪಿಐಗೆ ಕೇವಲ ಮತ ನೀಡಿದರೆ ಸಾಲದು ಪಕ್ಷವನ್ನು ಬಲಪಡಿಸಲು ಕೈಜೋಡಿಸಬೇಕು ಎಂದು ಕರೆ ನೀಡಿದರು. ಎಸ್‌ಐಆರ್ ಪ್ರಕ್ರಿಯೆಯ ಹಿಂದೆ ದುರುದ್ದೇಶವಿದ್ದು, ಜನರು ಜಾಗೃತರಾಗಿ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದರು.
ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟ ನಂಜಯ್ಯ ಅವರು ಮಾತನಾಡಿ ದೇಶ ಸೇವೆ, ಜನ ಸೇವೆ, ಅಂಬೇಡ್ಕರ್ ಸಿದ್ಧಾಂತ, ಸಂವಿಧಾನದ ಆಶಯಗಳನ್ನು ತಿಳಿಯದವರು ಇಂದು ಆಡಳಿತ ನಡೆಸುತ್ತಿದ್ದಾರೆ. ಮುಂದೊAದು ದಿನ ಎಸ್‌ಡಿಪಿಐಯನ್ನು ಎದುರಿಸಲು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಒಗ್ಗೂಡುವ ಕಾಲ ಬರಲಿದೆ ಎಂದು ತಿಳಿಸಿದರು.
ಅಸಮಾನತೆ, ಅಸ್ಪೃಶ್ಯತೆ, ಅರಾಜಕತೆ, ಡ್ರಗ್ಸ್ ಜಾಲ ತಾಂಡವವಾಡುತ್ತಿದೆ, ಬಡವರು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಒಬ್ಬ ವ್ಯಕ್ತಿ, ಒಂದು ಕುಟುಂಬದ ಸುತ್ತ ರಾಜಕಾರಣ ಸುತ್ತುತ್ತಿದೆ. ಬಡವರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಟೀಕಿಸಿದರು.
ಪತ್ರಕರ್ತ ರಾ.ಚಿಂತನ್ ಅವರು ಮಾತನಾಡಿ ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯಲು ಎಸ್‌ಐಆರ್ ಪ್ರಕ್ರಿಯೆ ಆರಂಭಿಸಲಾಗಿದೆ. ಇದರಿಂದ ಕೋಟ್ಯಾಂತರ ಜನರಿಗೆ ತೊಂದರೆಯಾಗಲಿದೆ, ಇದೊಂದು ಸಂವಿಧಾನಬಾಹಿರ ಕ್ರಮವಾಗಿದ್ದು, ಅಧಿಕಾರದ ದುರುಪಯೋಗವಾಗಿದೆ ಎಂದು ಆರೋಪಿಸಿದರು.
ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷೆ ಶಾಹಿದಾ ತಸ್ನೀಮ್ ಅವರು ಮಾತನಾಡಿ ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳಿದ್ದರೂ ಮಹಿಳಾ ವಿರೋಧಿ, ಶಿಕ್ಷಣ ವಿರೋಧಿ ಸರಕಾರವಿದೆ. ಬುಳ್ಡೋಸರ್ ಬಳಸಿ ಮನೆಗಳನ್ನು ನೆಲಸಮಗೊಳಿಸುವಾಗ ವಿದ್ಯಾರ್ಥಿಗಳ ಸರ್ಟಿಫಿಕೇಟ್ ಗಳು ಬೆಲೆ ನೀಡಿಲ್ಲ, ಹಿಜಾಬ್ ಕುರಿತು ಸರಕಾರ ಮಾತು ಉಳಿಸಿಕೊಂಡಿಲ್ಲ ಎಂದು ಟೀಕಿಸಿದರು.
ನುಸುಳುಕೋರರು ದೇಶದ ಗಡಿಯಲ್ಲಿ ನುಸುಳುತ್ತಿದ್ದಾರೆ ಎಂದರೆ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಎಸ್‌ಐಆರ್ ನಿಂದ ಕೂಲಿ ಕಾರ್ಮಿಕರಿಗೆ ಹಾಗೂ ಮಹಿಳೆಯರಿಗೆ ಹೆಚ್ಚು ತೊಂದರೆಯಾಗಲಿದೆ. ಆದ್ದರಿಂದ ಎಸ್‌ಡಿಪಿಐ ವತಿಯಿಂದ ಪ್ರತಿ ಮನೆ ಮನೆಗೆ ತೆರಳಿ ಜಾಗೃತಿ ಮೂಡಿಸಲಾಗುವುದು ಎಂದರು.
ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯ ಅಬ್ದುಲ್ ಅಡ್ಕಾರ್ ಅವರು ಮತದಾರರ ಪಟ್ಟಿ ತೀವ್ರ ಪರಿಷ್ಕರಣೆಯನ್ನು ಕೈಬಿಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮಂಡಿಸಿದರು, ಉಸ್ಮಾನ್ ಸುಂಟಿಕೊಪ್ಪ ಸ್ವಾಗತಿಸಿದರು. ವಿವಿಧ ಪಕ್ಷಗಳ ಕಾರ್ಯಕರ್ತರು ಎಸ್‌ಡಿಪಿಐಗೆ ಸೇರ್ಪಡೆಗೊಂಡರು. ಪಕ್ಷದ ಪ್ರಮುಖರು ಧ್ವಜ ನೀಡಿ ಬರ ಮಾಡಿಕೊಂಡರು. ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ, ಕಾರ್ಯದರ್ಶಿ ಮೇರಿ ವೇಗಸ್, ಸದಸ್ಯ ಅಬ್ದುಲ್ ಅಡ್ಕಾರ್, ನಗರಾಧ್ಯಕ್ಷ ಮೊಹಮ್ಮದ್ ಅಲಿ, ನಗರಸಭಾ ಸದಸ್ಯೆ ನೀಮಾ ಅರ್ಷದ್, ಕಾರ್ಯದರ್ಶಿ ಬಶೀರ್ ಅಹಮ್ಮದ್, ಕೆ.ಸಿ.ಬಷೀರ್, ಅಬ್ದುಲ್ ಜಮೀರ್, ಫಾರುಕ್ ಖಾನ್, ಷರೀಫ್, ಭಾಷಾ, ಹನೀಫ್ ವಿರಾಜಪೇಟೆ, ಜಕ್ರಿಯ ಕುಶಾಲನಗರ, ಹಫೀಜ್ ಮತ್ತಿತರರು ಉಪಸ್ಥಿತರಿದ್ದರು.
ಸಮಾವೇಶಕ್ಕೂ ಮೊದಲು ಎಸ್‌ಡಿಪಿಐ ಮುಖಂಡರು ಹಾಗೂ ಕಾರ್ಯಕರ್ತರು ಎವಿ ಶಾಲೆ ಬಳಿಯಿಂದ ಗಾಂಧಿ ಮೈದಾನದವರೆಗೆ ಘೋಷಣೆಗಳೊಂದಿಗೆ ಬೃಹತ್ ರ‍್ಯಾಲಿ ನಡೆಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.