Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೂರ್ಗ್ ವ್ಯಾಲಿ ಶಾಲೆಯ ರಜತ ಮಹೋತ್ಸವ : ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ* 
ಇತ್ತೀಚಿನ ಸುದ್ದಿಗಳು

*ಕೂರ್ಗ್ ವ್ಯಾಲಿ ಶಾಲೆಯ ರಜತ ಮಹೋತ್ಸವ : ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ* 

January 20, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಜ.20 NEWS DESK : ಮಕ್ಕಳಿಗೆ ಉತ್ತಮವಾದ ಶಿಕ್ಷಣವನ್ನು ನೀಡಬೇಕು. ಜೊತೆಗೆ ಪೋಷಕರು ಮಕ್ಕಳಿಗೆ ಸಂಸ್ಕಾರವನ್ನು ಕಲಿಸುವುದರ ಮೂಲಕ ಅವರನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಿ ಎಂದು ಅರಮೇರಿ ಕಳಂಚೇರಿ ಮಠದ ಮಠಾಧಿಪತಿಗಳಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು  ಹೇಳಿದರು. ವಿರಾಜಪೇಟೆಯ ತಾಲ್ಲೂಕು ಮೈದಾನದಲ್ಲಿ ಜರುಗಿದ ಪಟ್ಟಣದ ಕೂರ್ಗ್ ವ್ಯಾಲಿ ಶಾಲೆಯ 25ನೇ ವರ್ಷದ ರಜತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕೂರ್ಗ್ ವ್ಯಾಲಿ ವಿದ್ಯಾಸಂಸ್ಥೆಯು 25 ವರ್ಷಗಳನ್ನು ಪೂರೈಸಿದ್ದು, ಉತ್ತಮ ಪ್ರಜೆಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದೆ. ಈ ಸಂಸ್ಥೆಯು ಕೇವಲ ವಿದ್ಯಾರ್ಜನೆಗೆ ಮಾತ್ರವಲ್ಲದೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ಹಲವಾರು ಸಾಧನೆಗಳನ್ನು ಮಾಡಿ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದರು. ಪೋಷಕರು ವಿದ್ಯಾರ್ಥಿಗಳ ಶಿಕ್ಷಣದ ಕಡೆ ಹೆಚ್ಚು ಗಮನವನ್ನು ಹರಿಸಬೇಕು. ಹಾಗೆಯೇ ಅವರಿಗೆ ಸಂಸ್ಕಾರವನ್ನು ಕಲಿಸಿ ಎಂದು ಕರೆ ನೀಡಿದರು. ಸಂಸ್ಥೆಯು 25 ವರ್ಷ ಪೂರೈಸಲು ಆಡಳಿತ ಮಂಡಳಿಯ ಚಿತ್ರ ಭಾನು ಹಾಗೂ ಸುಮಚಿತ್ರ ಭಾನು ಅವರ ಪಾತ್ರ ಪ್ರಮುಖವಾಗಿದ್ದು, ಹಲವಾರು ಸವಾಲುಗಳನ್ನು ಎದುರಿಸಿ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಶಾಲೆಯು ಉತ್ತಮ ಫಲಿತಾಂಶ ನೀಡುವುದರ ಮೂಲಕ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಹೇಳಿದರು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿರಾಜಪೇಟೆ ಸಂತ ಅನ್ನಮ್ಮ ಪಿ.ಯು. ಕಾಲೇಜಿನ ಪ್ರಾಂಶುಪಾಲ ಹಾಗೂ ಅಮ್ಮತ್ತಿ ಸಂತ ಅಂತೋಣಿ ಚರ್ಚ್ ನ ಗುರುಗಳಾದ ರೆ.ಫಾ. ಮದಲೈ ಮುತ್ತು ಮಾತನಾಡಿ, ಒಂದು ವಿದ್ಯಾಸಂಸ್ಥೆಯು ದೊಡ್ಡದಿರಲಿ ಅಥವಾ ಸಣ್ಣದಿರಲಿ, ವಿದ್ಯಾಸಂಸ್ಥೆ ನಡೆಸುವವರ ಮನೋಭಾವನೆ ಮುಖ್ಯ. ಅನೇಕ ಸವಾಲುಗಳ ಮಧ್ಯೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆ ಮಾಡಿರುವ ಆಡಳಿತ ಮಂಡಳಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು. ರಜತ ಮಹೋತ್ಸವವನ್ನು ಆಚರಿಸುತ್ತಿರುವ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರಿಗೆ, ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕರಿಗೆ ದೇವರು ಆಶೀರ್ವಾದಿಸಲಿ ಎಂದು ಹೇಳಿದರು. ಹಾಗೆಯೇ ಈ ವಿದ್ಯಾಸಂಸ್ಥೆಯು 50 ವರ್ಷಗಳನ್ನು ಪೂರೈಸಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ವ್ಯವಸ್ಥಾಪಕರು ಹಾಗೂ ಪ್ರಾಂಶುಪಾಲರಾದ ಸುಮಾ ಚಿತ್ರಭಾನು ಮಾತನಾಡಿ, ಸಂಸ್ಥೆಯು ನಡೆದು ಬಂದ ಹಾದಿಯನ್ನು ಸ್ಮರಿಸುತ್ತಾ ಸರ್ವರಿಗೂ ಧನ್ಯವಾದಗಳನ್ನು ಸಲ್ಲಿಸಿದರು. ಗಣ್ಯರು ರಜತ ಮಹೋತ್ಸವದ ಸಂದರ್ಭದಲ್ಲಿ ಹೊರ ತಂದ ವಿದ್ಯಾ ಸಂಪದ ಕಿರು ಹೊತ್ತಿಗೆಯನ್ನು ಈ ಸಂದರ್ಭದಲ್ಲಿ ಬಿಡುಗಡೆಗೊಳಿಸಿದರು. ಸಮಾರಂಭದಲ್ಲಿ ವಿದ್ಯಾಸಂಸ್ಥೆಯಲ್ಲಿ ಇಲ್ಲಿಯವರೆಗೆ ಸೇವೆಯನ್ನು ಸಲ್ಲಿಸಿದ ಶಿಕ್ಷಕರುಗಳು ಹಾಗೂ ಸಿಬ್ಬಂದಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಕಳೆದ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ತರಗತಿವಾರು ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮಗಳು ಮೂಡಿ ಬಂದವು. ವೇದಿಕೆಯಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಚಿತ್ರ ಭಾನು, ಕಾರ್ಯದರ್ಶಿಗಳಾದ ಪ್ರಣವ್ ಚಿತ್ರ ಭಾನು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Articleಶ್ರೀ ಮಕ್ಕಿ ಶಾಸ್ತಾವು ದೇವಾಲಯದ ಕೆರೆ ದುರಸ್ತಿಗೆ ಅಗತ್ಯ ಕ್ರಮ : ಶಾಸಕ ಎ.ಎಸ್.ಪೊನ್ನಣ್ಣ
Next Article *ಶೆಟ್ಟಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ : ಸಮಸ್ಯೆಗಳ ಬಗ್ಗೆ ಗಮನ ಸೆಳೆದ ವಿದ್ಯಾರ್ಥಿಗಳು*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.