
ವಿರಾಜಪೇಟೆ ಜ.21 NEWS DESK : ಶಿಕ್ಷಣ, ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಪ್ರಾಧ್ಯಾಪಕ ಪ್ರೊ.ಕೆ.ಬಸವರಾಜು ಅವರಿಗೆ ಕನ್ನಡ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ ಕನ್ನಂಬಾಡಿ ದಿನಪತ್ರಿಕೆ ಮಂಡ್ಯ ಸಂಯುಕ್ತ ಆಶ್ರಯದಲ್ಲಿ ಸಂಕ್ರಾಂತಿ ಅಂಗವಾಗಿ ನಡೆದ ಸುಗ್ಗಿ ಸಂಭ್ರಮದ ಪ್ರಯುಕ್ತ ಮಂಡ್ಯದ ಕೆ.ವಿ.ಶಂಕರಗೌಡ ಶತಮಾನೋತ್ಸವ ಭವನದ ಕರ್ನಾಟಕ ಸಂಘದಲ್ಲಿ ನಡೆದ 15ನೇ ಅಖಿಲ ಕರ್ನಾಟಕ ಕನ್ನಡ ಅಕ್ಷರ ಜಾತ್ರೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು ಪ್ರೊ.ಕೆ.ಬಸವರಾಜು ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿ, ಗೌರವಿಸಿದರು. ಮೂಲತ ಹುಣಸೂರಿನವರಾದ ಪ್ರೊ. ಬಸವರಾಜು ಅವರು ಪ್ರಸ್ತುತ ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.









