Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
  • *ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*
  • *ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*
  • *ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*
  • *ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆಯಲ್ಲಿ ವರ್ತಕರ ಸಭೆ : ರಸ್ತೆ ಅಭಿವೃದ್ಧಿ ಕುರಿತು ಶಾಸಕ ಎ.ಎಸ್.ಪೊನ್ನಣ್ಣಗೆ ಮನವಿ ಸಲ್ಲಿಸಲು ತೀರ್ಮಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆಯಲ್ಲಿ ವರ್ತಕರ ಸಭೆ : ರಸ್ತೆ ಅಭಿವೃದ್ಧಿ ಕುರಿತು ಶಾಸಕ ಎ.ಎಸ್.ಪೊನ್ನಣ್ಣಗೆ ಮನವಿ ಸಲ್ಲಿಸಲು ತೀರ್ಮಾನ*

ಜನವರಿ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ಜ.23 NEWS DESK : ವಿರಾಜಪೇಟೆ ಗಡಿಯಾರ ಕಂಬದಿಂದ ಖಾಸಗಿ ಬಸ್ಸು ನಿಲ್ದಾಣದವರೆಗೆ ಏಕಮುಖ ಸಂಚಾರವೇ ಇರಲಿ. ಅಭಿವೃದ್ಧಿ ಹೆಸರಿನಲ್ಲಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಿದರೆ ವರ್ತಕರಿಗೆ ವ್ಯಾಪಾರ ವಹಿವಾಟು ಸಮಸ್ಯೆಯಾಗುತ್ತದೆ ಎಂದು 200ಕ್ಕೂ ಅಧಿಕ ಮಂದಿ ವರ್ತಕರು ಸಾಮೂಹಿಕವಾಗಿ ಸಭೆ ನಡೆಸಿ ವಿರಾಜಪೇಟೆ ಶಾಸಕರು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಿಗೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ವಿರಾಜಪೇಟೆಯ ಹಿಲ್‍ಪ್ಯಾಲೆಸ್ ಹೋಟೆಲ್ ಸಭಾಂಗಣದಲ್ಲಿ ನಡೆದ ವರ್ತಕರ ಸಭೆಯಲ್ಲಿ ರಸ್ತೆ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ. ಅಭಿವೃದ್ಧಿಯ ಜೊತೆಗೆ ಏಕಮುಖ ಸಂಚಾರ ವ್ಯವಸ್ಥೆ ಇದ್ದು ವಾಹನ ನಿಲುಗಡೆಗೆ ಪರ್ಯಾಯ ವ್ಯವಸ್ಥೆ ಮಾಡಬೇಕು, ವರ್ತಕರು ಹಾಗೂ ಮಾಲೀಕರು ತಮ್ಮ ವಾಹನಗಳನ್ನು ರಸ್ತೆ ಬದಿ ನಿಲುಗಡೆ ಮಾಡದೆ ಸಹಕರಿಸುವಂತೆ ತೀರ್ಮಾನಿಸಲಾಯಿತು. ವಿರಾಜಪೇಟೆ ವರ್ತಕ, ವಿರಾಜಪೇಟೆ ವರ್ತಕರ ಸಂಘದ ಅಧ್ಯಕ್ಷ ಪಿ.ಎ.ಮಂಜುನಾಥ್ ಮಾತನಾಡಿ, ದ್ವಿಮುಖ ಸಂಚಾರ ಮಾಡುವುದು, ರಸ್ತೆ ಬದಿಯಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲ ಎಂಬ ವಿಚಾರಕ್ಕೆ ಸಭೆ ಸೇರಿ ಒಮ್ಮತದ ತೀರ್ಮಾನ ತೆಗೆದುಕೊಂಡು ಗಡಿಯಾರ ಕಂಬದಿಂದ ಖಾಸಗಿ ಬಸ್ ನಿಲ್ದಾಣದ ರಸ್ತೆಯಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೆ ಅಂಗಡಿ ಮಾಲೀಕರು ತಮ್ಮ ವಾಹನವನ್ನು ನಿಲುಗಡೆ ಮಾಡದಂತೆ ತೀರ್ಮಾನ ತೆಗೆದುಕೊಂಡಿದ್ದೇವೆ, ವ್ಯಾಪಾರ ವಹಿವಾಟು ಹೆಚ್ಚಾಗುವ ಸಂದರ್ಭದಲ್ಲಿ ವಾಹನ ನಿಲುಗಡೆಗೆ ಅವಕಾಶವಿಲ್ಲದಿದ್ದರೆ ವರ್ತಕರಿಗೆ ಸಮಸ್ಯೆಯಾಗಲಿದೆ ಎಂಬುವುದನ್ನು ಮತ್ತೊಮ್ಮೆ ಶಾಸಕರ ಗಮನಕ್ಕೆ ತರುವ ಪ್ರಯತ್ನ ಮಾಡುತ್ತೇವೆ. ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಪಾರ್ಕಿಂಗ್ ಸಮಸ್ಯೆ ರಸ್ತೆಗಳು ರಸ್ತೆಗಳು ಕಿರಿದಾಗಿರುವುದು ನಿಜ. ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿಗೆ ನಮ್ಮ ಅಡ್ಡಿ ಇಲ್ಲ. ರಸ್ತೆ ಅಗಲೀಕರಣ ಮಾಡುವಾಗ ಕಟ್ಟಡದ ಮಾಲೀಕರನ್ನು ಗಣನೆಗೆ ತೆಗೆದುಕೊಂಡು ಪರಿಹಾರ ನೀಡಿ ರಸ್ತೆ ಅಗಲೀಕರಣ ಮಾಡುವುದರಲ್ಲಿ ನಮ್ಮ ಅಭ್ಯಂತರ ಇಲ್ಲ. ಪಾರ್ಕಿಂಗ್ ಸಮಸ್ಯೆ ಇದ್ದರೆ ಅದಕ್ಕೆ ಪರ್ಯಾಯ ವ್ಯವಸ್ಥೆ ಅಂದರೆ ವಿರಾಜಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಅಧಿಕಾರಿಗಳು ಅಥವಾ ಜಾಗದ ಮಾಲೀಕರು ಖಾಲಿ ಜಾಗಗಳಲ್ಲಿ ಪೆ ಅಂಡ್ ಪಾರ್ಕ್ ವ್ಯವಸ್ಥೆ ಮಾಡಬೇಕು. ಮುಖ್ಯರಸ್ತೆ ಬಿಟ್ಟು ಹಣ ನೀಡಿ ಪಾರ್ಕಿಂಗ್ ಮಾಡುವ ವ್ಯವಸ್ಥೆ ಜಾರಿಗೊಳಿಸಬೇಕು ಎಂದರು. ಅದೇ ರೀತಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೆÇನ್ನಣ್ಣ ಏನೇ ತೀರ್ಮಾನ ತೆಗೆದುಕೊಂಡರು ವರ್ತಕರನ್ನು ಗಣನೆಗೆ ತೆಗೆದುಕೊಂಡು ತೀರ್ಮಾನಿಸಲಾಗುವುದು ಎಂದು ಈಗಾಗಲೇ ವರ್ತಕರಿಗೆ ಭರವಸೆ ನೀಡಿದ್ದಾರೆ. ಆದರೂ ಸರ್ವ ವರ್ತಕರು ಒಗ್ಗೂಡಿ ಶಾಸಕರನ್ನು ಮತ್ತೊಮ್ಮೆ ಭೇಟಿ ಮಾಡಿ ಶಾಸಕರಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಾಗುವುದು ಎಂದರು. ವರ್ತಕರ ಸಂಘದ ನಿರ್ದೇಶಕ ಸಕ್ಸೆಸ್ ಮೆನ್ಸ್ ಹಬ್‍ನ ಮಾಲೀಕ ಆರ್.ಸುರೇಶ್ ಮಾತನಾಡಿ, ಜನವರಿಯಿಂದ ಮೇ ವರೆಗೆ ವ್ಯಾಪಾರದ ಸೀಸನ್ ಆಗಿರುವುದರಿಂದ ಈ ಸಂದರ್ಭದಲ್ಲಿ ಪಾರ್ಕಿಂಗ್ ನಿರಾಕರಿಸಿ ದ್ವಿಮುಖ ಸಂಚಾರ ಮಾಡಿದರೆ ವ್ಯಾಪಾರಸ್ಥರು ತೀವ್ರ ನಷ್ಟ ಅನುಭವಿಸುವ ಪರಿಸ್ಥಿತಿ ಎದುರಾಗಲಿದೆ. ವಿರಾಜಪೇಟೆಯಲ್ಲಿ ನಡೆಯುವಂತಹ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ನಮ್ಮ ಅಭ್ಯಂತರವಿಲ್ಲ, ಅಂಗಡಿ ಮಾಲೀಕರಿಗೂ ತೊಂದರೆಯಾಗದಂತೆ ಕೆಲಸ ಮಾಡಬೇಕು. ಅಧಿಕಾರಿಗಳು, ಸಂಬಂಧಪಟ್ಟವರು ಮರು ಪರಿಶೀಲನೆ ಮಾಡಬೇಕು ಎಂದರು. ಈ ಸಂದರ್ಭದಲ್ಲಿ ವಿರಾಜಪೇಟೆಯ ಹ್ಯಾಪಿ ಶಾಪಿಂಗ್ ಹಬ್, ಅಭಿಲಾಷ್ ಸ್ಟೋರ್, ಲೋರ ಲೇಡೀಸ್ ಶಾಪ್, ಚಿಲ್ದ್ರನ್ಸ್ ಪಾರ್ಕ್, ಫ್ಯಾಮಿಲಿ ಫ್ಯಾಷನ್, ಕೂರ್ಗ್ ಟ್ರೇಡಿಷನಲ್ ಶಾಪ್, ಅಭಿಷೇಕ್ ಸೆಲೆಕ್ಷನ್, ವಿಶಾಲ್ ಗಾರ್ಮೆಂಟ್ಸ್, ವಿಷ್ಣು ಗಾರ್ಮೆಂಟ್ಸ್, ಕಾವೇರಿ ಫರ್ನಿಚರ್, ಮೂನ್ ವಾಕ್ ಶಾಪ್, ಫೇಬ್ರಿಕ್ ಹೌಸ್ ಶಾಪ್, ಇನ್ನಿತರ ಸುಮಾರು 80ಕ್ಕೂ ಹೆಚ್ಚು ಅಂಗಡಿ ಮಾಲೀಕರು ಸಭೆಯಲ್ಲಿ ಭಾಗವಹಿಸಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಾ.7 NEWS DESK : ಶಾಲಾ ಕಾಲೇಜು ಹಂತದಲ್ಲೇ ಸಾಹಿತ್ಯ ಕುರಿತು ಆಸಕ್ತಿ ಮತ್ತು ಅಭಿವೃದ್ಧಿಗಳನ್ನು ಹೆಚ್ಚಿಸುವ ಮೂಲಕ…

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026

*ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.