Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
  • *ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*
  • *ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*
  • *ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*
  • *ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*
  • *ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*
  • *ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*
  • *ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*‘ಪೌತಿ ಖಾತೆ ಆಂದೋಲನ’ ಮುಂದುವರಿಸಲು ಮಾಜಿ ಶಾಸಕರ ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*‘ಪೌತಿ ಖಾತೆ ಆಂದೋಲನ’ ಮುಂದುವರಿಸಲು ಮಾಜಿ ಶಾಸಕರ ಒತ್ತಾಯ*

ಜನವರಿ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.23 NEWS DESK : ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಅವಧಿಯಲ್ಲಿ ಆರಂಭಿಸಿದ್ದ, ‘ಜಮ್ಮಾಬಾಣೆ’ ಸಮಸ್ಯೆ ಬಗೆಹರಿಕೆಗೆ ಪೂರಕವಾಗಿರುವ ‘ಪೌತಿ ಖಾತೆ ಆಂದೋಲನ’ವನ್ನು ಈಗಿನ ಸರಕಾರ ಮುಂದುವರಿಸಬೇಕು ಎಂದು ವಿಧಾನಸಭೆಯ ಮಾಜಿ ಅಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಮ್ಮಾಬಾಣೆ’ ಸಮಸ್ಯೆಗೆ ಸಂಬಂಧಿಸಿದಂತೆ ಬಿಜೆಪಿಯ ವಿರುದ್ಧ ಅಸಂಬದ್ಧ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪ್ರಮುಖರು ಜನರ ಹಾದಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜಮ್ಮಾಬಾಣೆ ಸಮಸ್ಯೆಯ ಶೇ.90ರಷ್ಟನ್ನು ಬಿಜೆಪಿ ಅಧಿಕಾರದ ಅವಧಿಯಲ್ಲಿ ಬಗೆಹರಿಸಲಾಗಿದೆ. ಅದರ ಲಾಭ ಬಿಜೆಪಿಗೆ ಹೋಗುತ್ತದೆ ಎನ್ನುವ ಆತಂಕದಲ್ಲಿರುವ ಕಾಂಗ್ರೆಸ್ ರಾಜಕೀಯ ಕಾರಣಗಳಿಗೋಸ್ಕರ ಬಿಜೆಪಿ ಸರಕಾರದ ಕ್ರಮಗಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದೆ ಎಂದು ಆರೋಪಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೆ.ಜಿ.ಬೋಪಯ್ಯ, 2012ರಲ್ಲಿ ರಾಷ್ಟ್ರಪತಿಗಳ ಅಂಕಿತವಾಗಿ ಬಂದ ಜಮ್ಮಾಬಾಣೆ ವಿಧೇಯಕವನ್ನು ಜಾರಿಗೊಳಿಸಕೂಡದೆಂದು ಸಲ್ಲಿಕೆಯಾಗಿದ್ದ ನಾಲ್ಕು ರಿಟ್ ಪಿಟೀಷನ್‍ಗಳನ್ನು 2024ರಲ್ಲಿ ವಜಾಗೊಳಿಸಿರುವ ರಾಜ್ಯ ಉಚ್ಚ ನ್ಯಾಯಾಲಯ, ಸಮಸ್ಯೆಯ ಬಗೆಹರಿಕೆಗೆ ಅಗತ್ಯ ಆದೇಶವನ್ನು ನೀಡಿ, 30 ದಿನಗಳಲ್ಲಿ ಜಾರಿಗೊಳಿಸುವಂತೆ ತಿಳಿಸಿದ್ದನ್ನು ಉಲ್ಲೇಖಿಸಿದರು. ನ್ಯಾಯಾಲಯದ ಆದೇಶವನ್ನು ಪಾಲಿಸದ ಕಾಂಗ್ರೆಸ್ ಸರಕಾರ, ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಜಮ್ಮಾಬಾಣೆ ಸಮಸ್ಯೆ ಇತ್ಯರ್ಥಕ್ಕೆ ತಂದ ಕಂದಾಯ ಕಾಯ್ದೆ ತಿದ್ದುಪಡಿಗಳನ್ನು ಜಾರಿಗೆ ತರಲು ಸಾಧ್ಯವಾಗುವುದಿಲ್ಲ. ಆ ಕಾರಣದಿಂದ ಕಂದಾಯ ಕಾಯ್ದೆ ಸೆಕ್ಷನ್ 127 ಕ್ಕೆ ತಿದ್ದುಪಡಿ ತಂದಿರುವುದಾಗಿ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದರು. ಆದರೆ, ಇವರು ತಂದ ತಿದ್ದುಪಡಿಯ ಟಿಪ್ಪಣಿಯಲ್ಲಿ, ರಿಟ್ ಅರ್ಜಿಯ ನಿರ್ದೇಶನದ ಬಗ್ಗೆ ಪ್ರಸ್ತಾಪವಿಲ್ಲ ಮತ್ತು ‘ನ್ಯಾಯಿಕ ಘೋಷಣೆಗಳ ನಿಟ್ಟಿನಲ್ಲಿ’ ಎಂದು ಮಾತ್ರ ಉಲ್ಲೇಖಿಸಲಾಗಿದೆ ಎಂದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ 2024ರ ಅ.31 ರಂದು ಸುತ್ತೋಲೆ ಹೊರಡಿಸಿ, ನೋಂದಾಯಿತ ಅಲ್ಲದ ಒಪ್ಪಂದ ಪತ್ರಗಳ ಆಧಾರದ ಮೇಲೆ ಮ್ಯುಟೇಷನ್‍ಗೆ ಅವಕಾಶ ಕೂಡದೆನ್ನುವ ಸೂಚನೆಯನ್ನು ಜಿಲ್ಲಾಧಿಕಾರಿಗಳಿಗೆ ನೀಡಿದೆ. ಆದರೆ, ಕೊಡಗಿನಲ್ಲಿರುವ ಕೊಡವರು ಹಿಂದೂ ಮಿತಾಕ್ಷರ ಕಾಯ್ದೆ ಮತ್ತು ಹಿಂದೂ ಸಕ್ಸಶನ್ ನಿಯಮಕ್ಕೆ ಒಳಪಡುತ್ತಾರೆ. ಈ ನಿಯಮಗಳಲ್ಲಿ ಹಿಂದೂಗಳು ಬಾಯಿ ಮಾತಿನ ಮೂಲಕ, ಒಪ್ಪಂದ ಪತ್ರಗಳ ಅಥವಾ ನೋಂದಾಯಿತ ಕರಾರಿನ ಮೂಲಕ ಮಾಡಿಕೊಳ್ಳಲು ಅವಕಾಶವಿದೆ. ನೋಂದಾವಣೆ ಎನ್ನುವುದು ಹಿಂದೂಗಳಿಗೆ ಐಚ್ಛಿಕವಾಗಿದೆ. ಈ ವಿಚಾರ ಮಹಾನ್ ಕಾನೂನು ಪಂಡಿತರಿಗೆ ಗೊತ್ತಿದ್ದರು ಅದನ್ನು ಜಾರಿಗೊಳಿಸಲು ಯಾಕೆ ಸಲಹೆ ನೀಡಲಿಲ್ಲ ಎಂದು ಕೆ.ಜಿ.ಬೋಪಯ್ಯ ಪ್ರಶ್ನಿಸಿದರು. ವಿಬಿ ರಾಮ್ ಜಿ ಕಾಯ್ದೆಯಡಿ ಗ್ರಾಮ ಪಂಚಾಯ್ತಿಗಳಿಗೆ, ಗ್ರಾಮಸಭೆಗಳಿಗೆ ಕಾಮಗಾರಿಗಳನ್ನು ನಿರ್ಧರಿಸುವ, ಕ್ರಿಯಾಯೋಜನೆ ತಯಾರಿಸುವ ಹಕ್ಕನ್ನು ನೀಡಲಾಗಿದೆ. ಯೋಜನೆಯಡಿ ಶೇ.40 ರ ಹಣ ನೀಡಲು ಸಾಧ್ಯವಾಗದ್ದರಿಂದ ವಿರೋಧಿಸುತ್ತಿದೆ ಎಂದು ಟೀಕಿಸಿದರು. *‘ಏಜೆಂಟ್’ ಪದ ತೆಗೆಯಿರಿ* ಜಮ್ಮಾಬಾಣೆ ಸಮಸ್ಯೆ ಬಗೆಹರಿಕೆ ಕುರಿತ ವಿಧೇಯಕವನ್ನು ತರುವ ಹಂತದಲ್ಲಿ ವಿಧಾನಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ‘ಪಟ್ಟೆದಾರ’ ಎನ್ನುವವರು ಬ್ರಿಟಿಷರ ಏಜೆಂಟ್ ಎಂದು ಹೇಳಿದ್ದಾರೆ. ತಿಳುವಳಿಕೆ ಇಲ್ಲದೆ ಅಂತಹ ಮಾತನ್ನು ಅವರು ಆಡಿರಬಹುದು. ಆದರೆ, ಈ ವಿಚಾರ ಕಡತಕ್ಕೆ ಸೇರಿದೆ. ಆ ಹಂತದಲ್ಲಿ ಈ ಬಗ್ಗೆ ಸ್ಪಷ್ಟ ಮಾಹಿತಿ ಇರುವವರು ಅದನ್ನು ಕಡತದಿಂದ ತೆಗೆಸುವ ಕಾರ್ಯವನ್ನು ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದರು. ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಅವರು ಮಾತನಾಡಿ, ಬಿಜೆಪಿ ಅವಧಿಯಲ್ಲಿ ಜಮ್ಮಾಬಾಣೆ ಸಮಸ್ಯೆಯ ಶೇ.90ರಷ್ಟನ್ನು ಬಗೆಹರಿಸಲಾಗಿತ್ತು. ಉಳಿದ ಶೇ.10 ರಷ್ಟು ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ನಡೆಸುವ ಹಂತದಲ್ಲೆ, ಎಲ್ಲಾ ಸಮಸ್ಯೆ ಬಗೆಹರಿಸಿರುವುದಾಗಿ ಕಾಂಗ್ರೆಸ್ ಮಂದಿ ಡಂಗೂರ ಸಾರಿ ಕುಣಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರು ಮಾತನಾಡಿ, ಮಹಾತ್ಮಾ ಗಾಂಧಿ ನರೇಗಾ ಯೋಜನೆಯ ಹೆಸರನ್ನು ವಿಬಿ ರಾಮ್ ಜಿ ಎಂದು ಬದಲಿಸಲಾಗಿದೆ. ಮತ್ತೆ ಯೋಜನೆಯಲ್ಲಿ ಮಹಾತ್ಮಾ ಗಂಧಿ ಹೆಸರನ್ನು ಸೇರಿಸಬೇಕೆನ್ನುವ ಕಾಂಗ್ರೆಸ್, ತಾನು ಅಧಿಕಾರದಲ್ಲಿದ್ದ ಸಂದರ್ಭ ತಂದ ಬಹುತೇಕ ಯೋಜನೆಗಳಿಗೆ ನೆಹರು, ಇಂದಿರಾ, ರಾಜೀವ್ ಹೆಸರುಗಳನ್ನು ಇಟ್ಟಿದೆ. ಆ ಸಂದರ್ಭ ಮಹಾತ್ಮಾ ಗಾಂಧೀಜಿ ಅವರ ಹೆಸರು ಅವರ ಗಮನಕ್ಕೆ ಬರಲಿಲ್ಲವೆ ಎಂದು ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಎಂಎಲ್‍ಸಿ ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ ಹಾಗೂ ವಕ್ತಾರ ಬಿ.ಕೆ.ಅರುಣ್ ಕುಮಾರ್ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಮಾ.07: ಸ್ವಚ್ಛತೆಯ ಕುರಿತು ಪ್ರತಿಯೊಬ್ಬರಲ್ಲಿಯೂ ಜಾಗೃತಿ ಮೂಡಿದಾಗ ಮಾತ್ರ ಪರಿಸರ ಸಂರಕ್ಷಣೆ ಸಾಧ್ಯವಾಗುತ್ತದೆ ಎಂದು ಬಿಟ್ಟಂಗಾಲ…

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026

*ಆದಿವಾಸಿಗಳ ವಿವಿಧ ಬೇಡಿಕೆ ಆಲಿಸಿದ ಜಿಲ್ಲಾಧಿಕಾರಿ*

ಮಾರ್ಚ್ 7, 2026

*ಬೆಂಗಳೂರಿನ ವಾಯುಪಡೆ ತಾಂತ್ರಿಕ ಕಾಲೇಜಿನಲ್ಲಿ ನಡೆದ ತಾಂತ್ರಿಕ ಅಧಿಕಾರಿಗಳ ಪದವಿ ಪರೇಡ್*

ಮಾರ್ಚ್ 7, 2026

*ಮೂರ್ನಾಡು ಗ್ರಾಮದಲ್ಲಿ ಜ್ಞಾನದ ಭಂಡಾರ ಪುಸ್ತಕ ಪತ್ತಾಯ ಕಾರ್ಯಕ್ರಮ*

ಮಾರ್ಚ್ 7, 2026

*ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿ ಸಭೆ : ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಗೆ ಅನುಮೋದನೆ*

ಮಾರ್ಚ್ 7, 2026

*ಪವರ್ ಮ್ಯಾನ್‌ಗಳ ದಿನಾಚರಣೆ : ವಿದ್ಯುತ್ ಸೇವೆ ಹಾಗೂ ಸುರಕ್ಷತೆಗೆ ಒತ್ತು ನೀಡಿ : ಜಿಲ್ಲಾಧಿಕಾರಿ ಸೋಮಶೇಖರ್*

ಮಾರ್ಚ್ 7, 2026

*ಪುಣ್ಯಕೋಟಿ ಗೋಶಾಲೆಗೆ ಮೇವು ವಿತರಿಸಿದ ವಿಶ್ವ ಹಿಂದೂ ಪರಿಷತ್*

ಮಾರ್ಚ್ 7, 2026

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.