Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
  • *ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*
  • *ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *
  • *ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕುಶಾಲನಗರದಲ್ಲಿ ಹಿಂದೂ ಸಂಗಮ : ಹಿಂದೂ ಸಂಸ್ಕೃತಿಯ ಉಳಿವಿಗೆ ಹಿಂದೂ ಕೌಟುಂಬಿಕ ಮೌಲ್ಯಗಳ ಸಂರಕ್ಷಣೆ ಅಗತ್ಯ : ರವೀಂದ್ರ ಪುತ್ತೂರು ಅಭಿಮತ*
ಇತ್ತೀಚಿನ ಸುದ್ದಿಗಳು

*ಕುಶಾಲನಗರದಲ್ಲಿ ಹಿಂದೂ ಸಂಗಮ : ಹಿಂದೂ ಸಂಸ್ಕೃತಿಯ ಉಳಿವಿಗೆ ಹಿಂದೂ ಕೌಟುಂಬಿಕ ಮೌಲ್ಯಗಳ ಸಂರಕ್ಷಣೆ ಅಗತ್ಯ : ರವೀಂದ್ರ ಪುತ್ತೂರು ಅಭಿಮತ*

January 25, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ NEWS DESK ಜ.25 : ಹಿಂದೂಗಳು ಒಗ್ಗೂಡಿ ಸಂಘಟಿತರಾಗಿ ಹಿಂದೂ ಸಂಸ್ಕೃತಿ, ಪರಂಪರೆಗಳನ್ನು, ಕೌಟುಂಬಿಕ ಮೌಲ್ಯಗಳನ್ನು ಸಂರಕ್ಷಿಸುವ ಮೂಲಕ ಹಿಂದೂ ಸಮಾಜದ ಬಲವರ್ಧನೆಗೆ ಶ್ರಮಿಸಬೇಕೆಂದು ಹಿಂದೂ ಮುಖಂಡರೂ ಆದ ಪುತ್ತೂರಿನ ಶ್ರೀ ವಿವೇಕಾನಂದ ಕಾಲೇಜು ಅಧ್ಯಕ್ಷ ರವೀಂದ್ರ ಪತ್ತೂರು ಕರೆ ನೀಡಿದ್ದಾರೆ. ಹಿಂದೂ ಸಂಗಮ ಆಯೋಜನಾ ಸಮಿತಿ ವತಿಯಿಂದ ಭಾನುವಾರ ಕುಶಾಲನಗರದಲ್ಲಿ ಆಯೋಜಿಸಿದ್ದ ಹಿಂದೂ ಸಂಗಮ ಸಭಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಯಾವುದೇ ವ್ಯಕ್ತಿಯ, ಧರ್ಮದ, ರಾಜಕೀಯ ಪಕ್ಷದ ವಿರುದ್ಧ ಹಿಂದೂ ಸಂಗಮವಲ್ಲ. ನಮ್ಮ ಹಿಂದೂ ಸಮಾಜದ ಸಂಘಟನೆಗೆ ಗ್ರಾಮಗಳಲ್ಲಿ ಸಮಿತಿ ರಚನೆ ಮಾಡುವ ಮೂಲಕ ಜಾಗೃತಿ ಮೂಡುತ್ತಿರುವುದು ಹೆಮ್ಮೆಯ ಸಂಗತಿ. ಆದರೆ, ಹಿಂದೂಗಳೆಲ್ಲಾ ಒಂದೇ ಎಂಬ ಭಾವನೆಗಳೊಂದಿಗೆ ಜಾತಿ ಪದ್ಧತಿ ನಿರ್ಮೂಲನೆ ಮಾಡಬೇಕು. ಸ್ವದೇಶಿ ವಸ್ತುಗಳಿಗೆ ಆದ್ಯತೆ ಕೊಡಬೇಕು. ಹಿಂದುತ್ವದ ಅರ್ಥ ಮಾಡಿಕೊಂಡವರು ಜಗತ್ತಿನಾದ್ಯಂತ ಬೇರೆ ಬೇರೆ ರಂಗಗಳಲ್ಲಿ ಬೆಳೆಯುತ್ತಿದ್ದಾರೆ. ಕೆಲವರು ವಿನಾಶಕ್ಕೆ ಕೆಲಸ ಸಂಚು ರೂಪಿಸುತ್ತಿದ್ದಾರೆ. ಹಿಂದೂ ಪದ ಕೇಳಿದರೆ ಮೈ ಪರಚಿಕೊಳ್ಳುವ ಕಾಲವೊಂದಿತ್ತು. ಸ್ವಾಮಿ ವಿವೇಕಾನಂದರ ಆದರ್ಶಗಳ ಪಾಲನೆ ಹಿಂದೂಗಳ ಹೆಮ್ಮೆ. ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ನವಚೈತನ್ಯ ತಂದು ಕೊಟ್ಟ ಮಹಾ ಚೇತನ ಎಂದು ರವೀಂದ್ರ ಬಣ್ಣಿಸಿದರು. ಹಿಂದುತ್ವದ ನವ ಜಾಗರಣೆ ಹಳ್ಳಿ ಹಳ್ಳಿಗಳಲ್ಲಿ ಆರಂಭವಾಗಿದೆ. ಹಿಂದೂಗಳು ಇರುವ ಜಗತ್ತಿನ ಏಕೈಕ ರಾಷ್ಟ್ರ ಭಾರತ. ಹಿಂದೂ ಸಮಾಜ ಯಾವತ್ತೂ ಯಾರ ಜೊತೆಯೂ ಯುದ್ಧಕ್ಕಿಳಿಯಲಿಲ್ಲ. ಜಗತ್ತಿನ ಕೆಲವು ರಾಷ್ಟ್ರ ಗಳಿಗೆ ಜನರನ್ನು ಕೊಲ್ಲುವುದೇ ಕೆಲಸವಾಗ್ತಿದೆ. ಭಾರತೀಯ ಸಹೋದರಿಯರ ಸಿಂಧೂರ ಅಳಿಸಿದ ಉಗ್ರರನ್ನು ನಮ್ಮ ಸೈನಿಕರು ಸದೆ ಬಡಿದದ್ದು ಇತಿಹಾಸ. ಸ್ವಾತಂತ್ರ್ಯಾ ನಂತರದ ನಮ್ಮ ದೇಶದ ನಾಯಕರ ಕನಸು ಸಾಮಾಜಿಕ ಸಂಪನ್ನತೆ, ಸಾಮಾಜಿಕ ಸುರಕ್ಷತೆ ನಿರ್ಮಾಣ, ಸಾಮಾಜಿಕ ಸಮರಸ ನಿರ್ಮಾಣವಾಗಿತ್ತು. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಕಸಿತ ಭಾರತದ ಪರಿಕಲ್ಪನೆಗಳಾದ ವಿಶ್ವಶಕ್ತಿಯಾಗುವ ಮೂಲಕ ವಿಶ್ವಗುರು ಆಗುವುದಾಗಿದೆ ಎಂದು ರವೀಂದ್ರ ಪುತ್ತೂರು ಹೇಳಿದರು. ಇತ್ತೀಚಿನ ದಶಕಗಳಲ್ಲಿ ಭಾರತೀಯ ಕೌಟುಂಬಿಕ ಮೌಲ್ಯಗಳು ಉಳಿಸಲು ನಿತ್ಯವೂ ಪ್ರತೀ ಮನೆಗಳಲ್ಲಿ ಭಜನೆ, ಸಾಮೂಹಿಕ ಭೋಜನ, ಮನೆತನದ ಭಾಷೆಗಳಿರಬೇಕು. ಶ್ರೇಷ್ಠ ಮೌಲ್ಯಗಳನ್ನು ಮಕ್ಕಳಿಗೆ ಕಲಿಸುವ ಮೂಲಕ ಸಮಾಜಬಾಹಿರ ಕೃತ್ಯಗಳು ಘಟಿಸದಂತೆ ಜಾಗೃತಿ ವಹಿಸಬೇಕು. 18 ರಿಂದ 28 ರ ವಯಸ್ಸಿನ ತರುಣ ತರುಣಿಯರಿಗೆ ಹಿಂದೂ ಪದ್ದತಿ ಸಂಸ್ಕಾರಗಳ ಅರಿವು ಮೂಡಿಸಬೇಕು. ನಾಗರಿಕ ಪ್ರಜ್ಞೆ ಹಾಗೂ ಶಿಸ್ತು ಅತಿ ಮುಖ್ಯ ಎಂದು ರವೀಂದ್ರ ಪುತ್ತೂರು ಹೇಳಿದರು. ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಕುಶಾಲನಗರದ ಕೃಷಿ ಪತ್ತಿನ ಮತ್ತು ಕೈಗಾರಿಕೋದ್ಯಮಿ ಗಳ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್.ಶರವಣಕುಮಾರ್ ಮಾತನಾಡಿ, ಪುರಾತನವಾದ 4 ಸಾವಿರ ವರ್ಷಗಳ ಹಳೆಯ ಧರ್ಮ ನಮ್ಮ ಹಿಂದೂ ಧರ್ಮ. ಮಹಾನ್ ತ್ಯಾಗಿಗಳು, ಋಷಿಮುನಿಗಳು, ಮಹರ್ಷಿಗಳು ಇರುವಂತಹ ಶ್ರೇಷ್ಠ ಸನಾತನ ಧರ್ಮದ ಸಂರಕ್ಷಣೆ ಅಗತ್ಯವಿದೆ. ಯೋಗವನ್ನು ಪ್ರಪಂಚಕ್ಕೆ ಪರಿಚಯಿಸಿದ ದೇಶ ನಮ್ಮದು. ಪರಿಸರ ಸಂರಕ್ಷಣೆಗೂ ಹಿಂದೂ ಧರ್ಮದ ಧಾರ್ಮಿಕ ಪದ್ದತಿಗಳಿಗೂ ಅವಿನಾಭಾವ ಸಂಬಂಧವಿದೆ. ಭಾರತೀಯ ಸಂಸ್ಕೃತಿಯನ್ನು ಇಂದಿನ ಯುವಕ ಯುವತಿಯರು ಆರಾಧಿಸುವ ಮೂಲಕ ಹಿರಿಯರ ಆಚರಣೆಗಳನ್ನು ಗೌರವಿಸಿ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಆಗಬೇಕಿದೆ. ಇಂತಹ ಶ್ರೇಷ್ಠ ಧರ್ಮದ ತಳಹದಿ ಗಟ್ಟಿಗೊಳಿಸಬೇಕಿದೆ. ಕೆಲವು ರಾಜಕಾರಣಿಗಳು ಮತಬ್ಯಾಂಕಿಗೋಸ್ಕರ ಹಿಂದೂ ಧರ್ಮದ ವಿರುದ್ದ ಟೀಕೆ ಮಾಡುವುದು ಸಲ್ಲದು. ಹಾಗಾಗಿ ಹಿಂದೂ ಯುವ ಶಕ್ತಿ ಒಗ್ಗೂಡಿ ಎಂದು ಹಿಂದೂ ಬಾಂಧವರಿಗೆ ಶರವಣಕುಮಾರ್ ಕರೆಕೊಟ್ಟರು. ಹಿಂದೂ ಸಂಗಮ ಆಯೋಜನಾ ಸಮಿತಿ ಸಂಯೋಜಕ ಜಿ.ಎಲ್.ನಾಗರಾಜು ಮಾತನಾಡಿ, ಸಹಸ್ರ ವರ್ಷಗಳಿಂದ ಹಿಂದೂ ರಾಷ್ಟ್ರ ಭಾರತ ದೇಶ ಕಳೆದು ಕೊಂಡದ್ದನ್ನು ಮರಳಿ ಗಳಿಸಿ ಕೊಳ್ಳುವುದಕ್ಕೆ ಹಿಂದೂ ಸಂಗಮ ಅವಶ್ಯವಿದೆ. ಹಿಂದೂಗಳು ಇನ್ನಾದರೂ ಒಗ್ಗೂಡಿ ಹಿಂದೂ ಧರ್ಮವನ್ನು ಉಳಿಸಿ ಬೆಳೆಸಬೇಕು ಎಂದು ಕರೆ ಕೊಟ್ಟರು. ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದು ಸಂಗಮ ಆಯೋಜನಾ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್, ವಿಶ್ವಜ್ಞಾನಿ ಡಾ.ಅಂಬೇಡ್ಕರ್ ಸಂಘದ ಅಧ್ಯಕ್ಷ ಲೋಕೇಶ್ ಪುಂಡಾರಿ ಇದ್ದರು. ಮಹಿಳೆಯರಿಂದ ಸಾಮೂಹಿಕವಾಗಿ ವಂದೇ ಮಾತರಂ ಗೀತೆ ಹಾಡಿದರು. ವಿವಿಧ ಮಕ್ಕಳಿಂದ ದೇಶಕ್ಕಾಗಿ ವೀರ ಮರಣಗೈದ ದೇಶ ಭಕ್ತ ಹುತಾತ್ಮರು ಹಾಗೂ ತ್ಯಾಗಿಗಳ ಛದ್ಮವೇಶ ಗಮನ ಸೆಳೆಯಿತು. ಹಾಗೆಯೇ ದೇಶಪ್ರೇಮ ಒಡ ಮೂಡಿಸುವ ಕಿರು ರೂಪಕ ಗಮನ ಸೆಳೆಯಿತು. ರುಚಿ ಚಂದ್ರಶೇಖರ್ ದೇಶಭಕ್ತಿ ಗೀತೆ ಹಾಡಿದರು. ಆಶಾ ಅಶೋಕ್ ನಿರೂಪಿಸಿದರು. ಎಂ.ಡಿ.ರಂಗಸ್ವಾಮಿ ಸ್ವಾಗತಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ಗೋಣಿಕೊಪ್ಪಲು-ಪಾಲಿಬೆಟ್ಟ ರಸ್ತೆ ಕಾಮಗಾರಿ ಪ್ರಗತಿ : ಶೀಘ್ರ ಪೂರ್ಣಗೊಳಿಸಲು ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
Next Article *ಶಾಲೆ ಜಾಗದಲ್ಲಿ ಶಾದಿ ಮಹಲ್ ನಿರ್ಮಾಣ ಆರೋಪ : ಸ್ಪಷ್ಟೀಕರಣ ನೀಡಲು ವಿರಾಜಪೇಟೆ ಬಿಜೆಪಿ ಒತ್ತಾಯ*

Recommended: Website design development company services in Mangalore Forex Trading Teacher in India

Related Posts

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

ಬೆಂಗಳೂರು ಫೆ.12: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಈಗ ಮತ್ತೊಂದು ಆರ್ಥಿಕ ಹೊರೆ ಬೀಳುವ…

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026

*ಅಂತರ್ಜಾಲ ಬಳಕೆ ಮತ್ತು ಸುರಕ್ಷತೆ ಬಗ್ಗೆ ಜಾಗೃತಿ ಅಗತ್ಯ: ಆರ್.ಐಶ್ವರ್ಯ *

February 12, 2026

*ಶ್ರೀವೀರಭದ್ರ ಮುನೇಶ್ವರ ದೇವಾಲಯದಲ್ಲಿ ಫೆ.15ರಂದು ಮಹಾಶಿವರಾತ್ರಿಯ ಸಂಭ್ರಮ*

February 12, 2026

*ಫೆ.15 ರಂದು ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮೂರ್ನಾಡು ಶಾಖೆ ಉದ್ಘಾಟನೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.