Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ಸಾಧಕರಿಗೆ ಸನ್ಮಾನ – ಪ್ರತಿಭಾ ಪುರಸ್ಕಾರ ವಿತರಣೆ : ಧಮ೯ ಸಂಸ್ಕಾರ ಕಲಿಸಲು ಬ್ರಾಹ್ಮಣ ಸಮಾಜ ಮುಂದಾಗಬೇಕು : ಅನಿಲ್ ಹೆಚ್.ಟಿ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ಸಾಧಕರಿಗೆ ಸನ್ಮಾನ – ಪ್ರತಿಭಾ ಪುರಸ್ಕಾರ ವಿತರಣೆ : ಧಮ೯ ಸಂಸ್ಕಾರ ಕಲಿಸಲು ಬ್ರಾಹ್ಮಣ ಸಮಾಜ ಮುಂದಾಗಬೇಕು : ಅನಿಲ್ ಹೆಚ್.ಟಿ ಸಲಹೆ*

ಜನವರಿ 26, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.26 NEWS DESK : ಈಗಿನ ತಲೆಮಾರಿನ ಜೆನ್ ಜಿ ಪೀಳಿಗೆಗೆ ತಕ್ಕಂತೆ ಡಿಜಿಟಲ್ ಮಾಧ್ಯಮದಲ್ಲಿಯೇ ಧಮ೯ ಮತ್ತು ಜೀವನ ಸಂಸ್ಕಾರವನ್ನು ಕಲಿಸುವ ನಿಟ್ಟಿನಲ್ಲಿ ಬ್ರಾಹ್ಮಣ ಸಮಾಜ ಕಾಯ೯ಯೋಜನೆ ರೂಪಿಸಬೇಕೆಂದು ಹಿರಿಯ ಪತ್ರಕತ೯ ಅನಿಲ್ ಹೆಚ್.ಟಿ. ಸಲಹೆ ನೀಡಿದ್ದಾರೆ. ನಗರದ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಆಯೋಜಿತ ಬ್ರಾಹ್ಣಣ ವಿದ್ಯಾಭಿವೃದ್ಧಿ ನಿಧಿಯ ವಾಷಿ೯ಕ ಪ್ರತಿಭಾ ಪುರಸ್ಕಾರ ವಿತರಣೆ, ಸಾಧಕರಿಗೆ ಸನ್ಮಾನ ಕಾಯ೯ಕ್ರಮ ಉದ್ಘಾಟಿಸಿ ಮಾತನಾಡಿದ ಅನಿಲ್, ಡಿಜಿಟಲ್ ಯುಗದಲ್ಲಿ ಜನಿಸಿದ ಜೆನ್ ಜಿ ಮತ್ತು ಆಲ್ಫಾ ಪೀಳಿಗೆಯು ಮೊಬೈಲ್, ಇಂಟರ್ ನೆಟ್ ಹೊರತಾಗಿ ಜೀವನವನ್ನೇ ಯೋಚಿಸುತ್ತಿಲ್ಲ. ಹಳೇ ತಲೆಮಾರಿನ ಸಂಸ್ಕೖತಿ, ಸಂಪ್ರದಾಯ, ಲೇಖಕರು, ಸಾಹಿತ್ಯದ ಪರಿಚಯವೂ ಈ ಪೀಳಿಗೆಗೆ ಇಲ್ಲ. ಈ ನಿಟ್ಟಿನಲ್ಲಿ ಬ್ರಾಹ್ಮಣ ಸಮಾಜವು ವಾರಕ್ಕೊಂದು ದಿನವಾದರೂ ನವಪೀಳಿಗೆಯೂ ಸೇರಿದಂತೆ ವಿದ್ಯಾಥಿ೯ಗಳಿಗೆ ಧಮ೯ ಶಿಕ್ಷಣದಂಥ ಕಾಯ೯ಕ್ರಮ ರೂಪಿಸಬೇಕೆಂದು ಕರೆ ನೀಡಿದರು.  ಆಧುನಿಕ ದಿನಗಳಲ್ಲಿ ಕೌಟುಂಬಿಕ ಸಂಬಂದಗಳು ಮೌಲ್ಯ ಕಳೆದುಕೊಳ್ಳುತ್ತಿದೆ ಎಂದು ವಿಷಾಧಿಸಿದ ಅನಿಲ್, ಬ್ರಿಟನ್ ಲೇಖಕ ಸ್ಟೀಫನ್ ಫ್ರೈ ಹೇಳಿದಂತೆ ಒಂದೇ ಮನೆಯಲ್ಲಿ ಐದಾರು ದೇಶಗಳ ಸಂಸ್ಕೃತಿ ಕಂಡುಬರುತ್ತಿದೆ. ಅಪ್ಪ ಅಮೇರಿಕಾದ ರಾಜಕೀಯ ಗಮನಿಸುತ್ತಿದ್ದರೆ, ಅಮ್ಮ ನ್ಯೂಜಿಲೆಂಡ್ ನಲ್ಲಿರುವ ಮಗಳೊಂದಿಗೆ ಮಾತನಾಡುತ್ತಾಳೆ. ಮಗ ರಾಕ್ ಸಂಗೀತ ಕೇಳುತ್ತಿದ್ದರೆ ಅಜ್ಜಿ ಭಾರತೀಯ ದೇವರ ಧ್ಯಾನದಲ್ಲಿ ನಿರತಳಾಗಿರುತ್ತಾಳೆ. ಮಗಳು ಚೈನೀಸ್ ತಿಂಡಿ ಆಸ್ವಾದಿಸುತ್ತಿರುತ್ತಾಳೆ. ಹೀಗೆ ಮನೆಯೊಂದರಲ್ಲಿ ವಿವಿಧ ದೇಶಗಳ ಸಂಸ್ಕೃತಿ ಹಾಸುಹೊಕ್ಕಾಗುವಂಥ ದಿನಗಳು ಈಗಿನವು ಎಂದರು. ಪ್ರತಿಯೋವ೯ರನ್ನೂ ಬೆಸೆಯುವದಕ್ಕಾಗಿ ನೂರಾರು ಉಪಕರಣಗಳಿದ್ದರೂ ಎಲ್ಲರೂ ಒಂಟಿತನ ಅನುಭವಿಸುತ್ತಿರುವುದು ಆಧುನಿಕಕಾಲದ ಡಿಜಿಟಲ್ ಯುಗದ ವಿಪಯಾ೯ಸ ಎಂದು ವಿಶ್ಲೇಷಿಸಿದ ಅನಿಲ್, ಮನಗೆದ್ದು ಮಾರು ಗೆಲ್ಲು ಎಂಬಂತೆ ಬ್ರಾಹ್ಮಣ ಸಮಾಜದವರು ಇತರೆಲ್ಲಾ ಸಮಾಜದವರಿಗೆ ಮಾದರಿಯಾಗುವಂತೆ ಆದಶ೯ಯುತ ಜೀವನ ನಡೆಸಬೇಕೆಂದು ಕರೆ ನೀಡಿದರು. ಆಧುನಿಕತೆಯ ಭರಾಟೆಯಲ್ಲಿ ಕೂಡುಕುಟುಂಬಗಳು, ಕೌಟುಂಬಿಕ ಸಂಬಂಧಗಳು ದೂರವಾಗದಂತೆ ಗಮನ ಹರಿಸಿ ಎಂದೂ ಅವರು ಕಿವಿಮಾತು ಹೇಳಿದರು. ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಅಧ್ಯಕ್ಷ ರಾಮಚಂದ್ರ ಮೂಗೂರು ಮಾತನಾಡಿ, ನಿಧಿಯ ಸಭಾಂಗಣದ ಮೇಲಂತಸ್ತಿನ ಕಾಮಗಾರಿಯನ್ನು ಸಮುದಾಯಬಾಂಧವರ ಸಹಕಾರದೊಂದಿಗೆ ಈ ವಷ೯ವೇ ಕೈಗೊಳ್ಳಲಾಗುತ್ತದೆ. ಬ್ರಾಹ್ಮಣ ಸಮುದಾಯದವರ ಪ್ರತಿಭೆಯನ್ನು ಪ್ರೋತ್ಸಾಹಿಸಲು ವಷ೯ಂಪ್ರತಿಯಿಂತೆಯೇ ಈ ಬಾರಿಯೂ ಕ್ರೀಡಾ ಸ್ಪಧೆ೯, ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿತ್ತು ಎಂದರು. ಕೊಡಗು ಜಿಲ್ಲೆಯಾದ್ಯಂತ ಬ್ರಾಹ್ಮಣ ಸಮುದಾಯದವರ ಸಂಘಟನೆಗೆ ಮುಂದಿನ ದಿನಗಳಲ್ಲಿ ಕಾಯ೯ಯೋಜನೆ ಹಮ್ಮಿಕೊಳ್ಳಲಾಗುತ್ತದೆ ಎಂದೂ ರಾಮಚಂದ್ರ ಮೂಗೂರು ತಿಳಿಸಿದರು. ಕ್ರೀಡಾ ಸ್ಪಧೆ೯ಗಳನ್ನು ಉದ್ಘಾಟಿಸಿ ಮಾತನಾಡಿದ ಮಡಿಕೇರಿಯ ವೈದ್ಯ ಡಾ.ರಾಜಾರಾಮ್ . ಸಮಾಜ ಒಂದಾಗಿ ಪ್ರತಿಬಿಂಬಿಸಲು ಕ್ರೀಡೆ ಅತ್ಯಂತ ಪ್ರಯೋಜನಕಾರಿಯಾಗಿದೆ. ದಕ್ಷಿಣ ಹಾಗೂ ಉತ್ತರ ಕೊಡಗು ಒಂದುಗೂಡಿ ಈ ಬಾರಿ ಬ್ರಾಹ್ಮಣ ಸಮಾಜದ ಕ್ರೀಡೆಯನ್ನು ಆಯೋಜಿಸಿದ್ದು, ಐಕ್ಯತೆಯ ಸೂಚಕವಾಗಿದೆ. ಸಮಾಜದ ಬಾಂಧವ್ಯ ವೃದ್ಧಿಗೆ ಇದು ಒಂದು ಉತ್ತಮವಾದ ಹಾದಿ. ಮಹಾಭಾರತದ ಕಾಲದಲ್ಲಿ ದ್ರೋಣಾಚಾರ್ಯರು ಐಕ್ಯತೆಗಾಗಿ ಕ್ರೀಡೆಗಳನ್ನು ಬಳಸಿದ್ದರು. ಸಮಾಜದ ಒಳಿತಿಗೆ ಹಾಗೂ ಬ್ರಾಹ್ಮಣರ ಒಗ್ಗೂಡುವಿಕೆಗೆ ಈ ಹೊಸ ಮಾರ್ಗ ಮುಂದಿನ ದಿನಗಳಲ್ಲಿ, ಸಮಾಜದ ಅಭ್ಯುದಯಕ್ಕೆ ಕಾರಣವಾಗಲಿದೆ ಎಂದು ಹೇಳಿದರು.  ಬ್ರಾಹ್ಮಣರಲ್ಲಿ ಸಹಜವಾಗಿ ನೆಲೆಸಿರುವಂತಹ ಗುಣಗಳೊಂದಿಗೆ, ಕ್ರೀಡೆಯಂತಹ ಮನೋಭಾವವನ್ನು ಬೆಳೆಸುವುದರ ಮೂಲಕ, ದೇಶಕ್ಕೆ ತಮ್ಮದೇ ಆದ ಕೊಡುಗೆಗಳನ್ನು ಕೊಡಲು ಇದು ಮುಂದಿನ ಪೀಳಿಗೆಗೆ ಸ್ಪೂರ್ತಿಯಾಗಿ ಪರಿಣಮಿಸಲಿದೆ. ಆಟಗಾರರಿಗೆ ಹೊಸ ಜೀವನದ ಉತ್ಸಾಹ ಕೊಡುವುದರ ಜೊತೆಗೆ ಇನ್ನು ಮುಂದಿನ ವರ್ಷಗಳಲ್ಲಿ ಇನ್ನೂ ಹೆಚ್ಚಿನ ಆಟೋಟಗಳು, ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಲಿ ಎಂದು ಡಾ.ರಾಜಾರಾಮ್ ಕರೆ ನೀಡಿದರು. ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಪ್ರಧಾನ ಕಾಯ೯ದಶಿ೯ ಬಿ.ಕೆ. ಜಗದೀಶ್ ಕ್ರೀಡಾ ಪಂದ್ಯಾವಳಿಯ ವರದಿ ವಾಚಿಸಿದರು. ಉಪಾಧ್ಯಕ್ಷ ಭರತೇಶ್ ಖಂಡಿಗೆ ಸ್ವಾಗತಿಸಿ, ಖಜಾಂಚಿ ಜಿ.ಆರ್. ರವಿಶಂಕರ್ ಅತಿಥಿ ಪರಿಚಯ ಮಾಡಿದರು. ನಿದೇ೯ಶಕರಾದ ಸವಿತಾ ಭಟ್, ಮಂಜುಳಾ ಭಟ್, ಬಿ.ಕೆ. ಅರುಣ್ ಕುಮಾರ್, ಪಿ.ವಿ. ಅಶೋಕ್ ನಿರೂಪಿಸಿದರು. ಜಿಲ್ಲೆಯಾದ್ಯಂತಲಿನಿಂದ ಬ್ರಾಹ್ಮಣ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಇದೇ ಸಂದಭ೯ ಬ್ರಾಹ್ಮಣ ಸಮಾಜದ ಪ್ರತಿಭಾವಂತ ವಿದ್ಯಾಥಿ೯ಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು ವಾಷಿ೯ಕ ಕ್ರೀಡೋತ್ಸವಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. :: ಸಾಧಕರಿಗೆ ಸನ್ಮಾನ ::  ಬ್ರಾಹ್ಮಣ ಸಮಾಜದ ನಾಲ್ವರು ಸಾಧಕರನ್ನು ಸನ್ಮಾನಿಸಲಾಯಿತು. ಕೊಡಗು ಮೂಲದ ಸಕಲೇಶಪುರದಲ್ಲಿ ನೆಲಸಿರುವ ಕಾಫಿ ಬೆಳೆಗಾರ ಕೋಗರವಳ್ಳಿ ಶಾಮರಾವ್, ಚೇರಂಬಾಣೆಯ ವೈದ್ಯ ಡಾ. ಶಂಕರನಾರಾಯಣ ಉರಾಳ, ವಿರಾಜಪೇಟೆಯ ನಿವೖತ್ತ ಶಿಕ್ಷಕಿ ಹೆಚ್ ಜಿ. ಸಾವಿತ್ರಿ, ಗಾಂಧಾರಿ ವಿದ್ಯೆಯಲ್ಲಿ ನಿಪುಣ ಗೋಣಿಕೊಪ್ಪಲುವಿನ ಪ್ರದ್ಯೋತ್ ಕಿರಣ್ ಅವರನ್ನು ಕಾಯ೯ಕ್ರಮದಲ್ಲಿ ಸನ್ಮಾನಿಸಲಾಯಿತು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಪಿಎಸ್‌ಸಿ ಪರೀಕ್ಷೆಯಲ್ಲಿ ವಿರಾಜಪೇಟೆಯ ಕೆ.ಎಲ್.ಸೂರಜ್ ಗೆ 525ನೇ ರ‍್ಯಾಂಕ್*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಗೋಣಿಕೊಪ್ಪ, NEWS DESK ಮಾ.7 : ಈ ಸಾಲಿನ ಬಜೆಟ್ ಅಧಿವೇಶನದ ಮೊದಲ ದಿನವೇ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ…

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.