
ಸುಂಟಿಕೊಪ್ಪ ಜ.27 NEWS DESK : ಆಟೋಚಾಲಕರ ಮತ್ತು ಮಾಲೀಕರ ಸಂಘದ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಕಂಬಿಬಾಣೆಯ ಕಾಫಿ ಬೆಳೆಗಾರ ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಅವರು ನಿರ್ಮಿಸಿಕೊಟ್ಟ ಆಟೋ ನಿಲ್ಧಾಣದ ಸ್ವಾಗತ ಕಮಾನ್ ಅನ್ನು ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಉದ್ಘಾಟಿಸಿ ಮಾತನಾಡಿ, ಗಣರಾಜ್ಯೋತ್ಸವ ಅಂಗವಾಗಿ ಆಟೋಚಾಲಕ ಮತ್ತು ಮಾಲೀಕರ ಸಂಘದವರು ರಕ್ತದಾನ ಶಿಬಿರವನ್ನು ಏರ್ಪಡಿಸಿದ್ದು, ಒಂದು ಮಾದರಿ ಕಾರ್ಯಕ್ರಮ ಆಟೋ ನಿಲ್ಧಾಣದ ಜಾಗವನ್ನು ಎದ್ದು ಕಾಣುವ ರೀತಿಯಲ್ಲಿ ನಾಮಫಲಕ ಅಳವಡಿಸಿದ್ದು, ಶ್ಲಾಘನೀಯ. ಹಗಲು ರಾತ್ರಿ ಎನ್ನದೇ ಸಾರ್ವಜನಿಕ ಸೇವೆಯಲ್ಲಿ ತೊಡಗಿಕೊಂಡಿರುವ ಆಟೋಚಾಲಕರು ಸಮಾಜಮುಖಿಯಾದ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸುನಿಲ್ಕುಮಾರ್ ಅಭಿಮಾನದಿಂದ ನುಡಿದರು. ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ.ಶಶಿಧರ್ ಮಾತನಾಡಿ, ಸಹಸ್ರಹಾರು ಜನರ ತ್ಯಾಗ ಬಲಿದಾನದಿಂದ ನಾವು ಸ್ವಾತಂತ್ರ್ಯವನ್ನು ಗಳಿಸಿದ್ದೇವೆ. ನಮ್ಮದೆಯಾದ ಸಂವಿಧಾನವನ್ನು ಹೊಂದಿ ಬಲಿಷ್ಠ ಮತ್ತು ಸಧೃಡ ಭಾರತವನ್ನು ಕಟ್ಟುವ ನಿಟ್ಟಿನಲ್ಲಿ ನಾವೆಲ್ಲಾರೂ ಕೈಜೋಡಿಸಿಬೇಕು, ಸಂವಿಧಾನವನ್ನು ಸಮಾನತೆ ಸಾಮರಸ್ಯ ಮತ್ತು ಬಾತೃತ್ವ ನೆಲೆಗಟ್ಟಿನಲ್ಲಿ ರಚಿಸಲಾಗಿದೆ. ಪ್ರಸ್ತುತ ಭಾರತ ಹೇಗಿದೆ ಎಂಬುದನ್ನು ನಾವು ಆತ್ಮಾವಲೋಕನಾ ಮಾಡಿಕೊಂಡು ಮುಂದುವರಿಯಬೇಕೆಂದು ಅವರು ಕರೆ ನೀಡಿದರು. ಆಟೋ ಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಂಘದ ಕಚೇರಿಯಲ್ಲಿ ರಕ್ತದಾನ ಮಾಡಿದರು. ಗ್ರಾ.ಪಂ. ಉಪಾಧ್ಯಕ್ಷೆ ಶಿವಮ್ಮ ಮಹೇಶ್, ಸದಸ್ಯರುಗಳಾದ ಪಿ.ಎಫ್.ಸಬಾಸ್ಟೀನ್, ಶಬ್ಬೀರ್, ಆಲಿಕುಟ್ಟಿ, ರಫೀಕ್ಖಾನ್, ಪ್ರಸಾದ್ಕುಟ್ಟಪ್ಪ, ಸೋಮನಾಥ್, ವಸಂತಿ, ಶಾಂತಿ, ನಾಗರತ್ನ, ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಆಟೋಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಶರೀಫ್, ಪ್ರಧಾನ ಕಾರ್ಯದರ್ಶಿ ಸಚಿನ್ ಸಂಘದ ಪದಾಧಿಕಾರಿಗಳು ಇದ್ದರು.









