Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅಮ್ಮತ್ತಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಹಿಂದೂಗಳ ಮಧ್ಯೆ ಹೃದಯಗಳ ಬಂಧನ : ಪಿ.ಎಸ್.ಪ್ರಕಾಶ್*
ಇತ್ತೀಚಿನ ಸುದ್ದಿಗಳು

*ಅಮ್ಮತ್ತಿಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಹಿಂದೂಗಳ ಮಧ್ಯೆ ಹೃದಯಗಳ ಬಂಧನ : ಪಿ.ಎಸ್.ಪ್ರಕಾಶ್*

January 28, 20264 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ ಜ.28 NEWS DESK : ದೇಶದ ಐಕ್ಯತೆಗೆ ಕುಟುಂಬ ಜೀವನ ಕಾರಣ. ಮೂರು ಅಕ್ಷರಗಳಲ್ಲಿಯೇ ಸಮರ್ಥ ಸತ್ವ ಹೊಂದಿರುವ ಸದೃಢ ದೇಶ ಭಾರತ. ಎಲ್ಲಾ ಜನರನ್ನು, ಮನಸ್ಸನ್ನು ಬೆಸೆಯುವ ಮೂಲಕ ಹಿಂದೂ ಧರ್ಮದ ಅಭಿಮಾನವನ್ನು ಜನರಿಗೆ ತಲುಪಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕದ ದಕ್ಷಿಣ ಕರ್ನಾಟಕ ಪ್ರಾಂತ ಸಹ ಕಾರ್ಯವಾಹಕ ಪಿ.ಎಸ್.ಪ್ರಕಾಶ್ ಕರೆ ನೀಡಿದರು. ಅಮ್ಮತ್ತಿಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಆಶ್ರಯದಲ್ಲಿ ಕೊಡವ ಸಮಾಜದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದ ಅವರು, ಶತಮಾನೋತ್ಸವ ಆಚರಿಸುತ್ತಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ತನ್ನ ಕಾರ್ಯ ಯೋಜನೆಯಲ್ಲಿ ಹಿಂದೂ ಸಮಾಜೋತ್ಸವ ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ. ಅಖಂಡ ಹಿಂದೂ ಸಮಾಜ ದೇಶದಲ್ಲಿ ಹರಿದು ಹಂಚಿ ಹೋಗಿರುವುದನ್ನು ಒಗ್ಗೂಡಿಸುವ ಸಲುವಾಗಿ ಶೋಭಾಯಾತ್ರೆ ನಡೆಸಲಾಗುತ್ತಿದೆ. ಹಿಂದೂ ಸಮಾಜದವರು ಜಾತಿ ಬೇಧ ಮರೆತು ಸಂಘಟಿತರಾಗಿ ನಾವೆಲ್ಲ ಒಂದು, ನಾವೆಲ್ಲ ಮುಂದು ಎನ್ನುವ ಮೂಲಕ, ಯುವಕರ ಪ್ರಜ್ಞೆ ಧರ್ಮದೆಡೆಗೆ ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದರು. ಪ್ರಸ್ತುತ ಹಿಂದೂ ಸಮಾಜ ಹೊರಗಿನ ಮತ್ತು ಒಳಗಿನ ಆತಂಕವನ್ನು ಎದುರಿಸುತ್ತಿದೆ. ನಾವು ಬಯಸದೇ ಇರುವ ಬದಲಾವಣೆ ಹಿಂದೂ ಸಮಾಜವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಇದಕ್ಕೆ ನಾವೇ ಪರಿಹಾರ ಕಂಡುಕೊಳ್ಳಬೇಕು. ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಸಣ್ಣ ಮಾರ್ಗವೇ ಹಿಂದೂ ಸಂಗಮ ಎಂದರು. ಇದರಲ್ಲಿ ಉತ್ಸಾಹ ಇದೆ, ಆವೇಶ ಇಲ್ಲ. ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಮಸ್ಯೆಗಳಿಂದ ಹೊರಗೆ ಬರಬೇಕಾದರೆ ನಾವು ಇನ್ನಷ್ಟು ದೃಢ ನಿರ್ಧಾರ ಕೈಗೊಳ್ಳಬೇಕಿದೆ. ನಮ್ಮ ಧರ್ಮ, ಸಂಸ್ಕೃತಿಯನ್ನು ಕಾಪಾಡಿಕೊಳ್ಳುವುದು ಇಂದಿನ ತುರ್ತು. ಜಗತ್ತಿನ ಎಲ್ಲ ಕ್ಷೇತ್ರಕ್ಕೂ ಕೊಡುಗೆ ನೀಡಿರುವುದು ಹಿಂದೂ ಸಮಾಜ ಎಂದು ಪಿ.ಎಸ್.ಪ್ರಕಾಶ್ ಅಭಿಪ್ರಾಯಪಟ್ಟರು. ಹಿಂದೂ ಅಂದರೆ ಯಾರು ಎನ್ನುವ ಪ್ರಶ್ನೆ ಇದೆ. ದೇಶದ ಹೆಸರಿನಿಂದ ಹಿಂದೂ ಅಂತ ಬಂದಿದೆ. ಹಿಂದೂಸ್ತಾನ್ ಇದ್ದದ್ದು ಭಾರತ, ಇಂಡಿಯಾ ಆಗಿದೆ. ಹಿಂದೂಸ್ತಾನದಲ್ಲಿ ಹುಟ್ಟಿದವರೆಲ್ಲ ಹಿಂದೂಗಳೇ. ಹಿಂದೂ ಎನ್ನುವುದು ನಾಗರೀಕತೆ, ಸಂಸ್ಕೃತಿ, ನಮ್ಮ ತಾಯಿ ಹಿಂದೂಸ್ತಾನ. ಈ ಕಾರಣದಿಂದ ನಾವೆಲ್ಲ ಹಿಂದೂಗಳಾಗಿದ್ದೇವೆ. ಅಂತಹ ಅದ್ಭುತ ದೇಶದಲ್ಲಿ ನಾವಿದ್ದೇವೆ. ಭಾರತ ಅಂದರೆ ನೆನಪಿಗೆ ಬರುವುದು ಧಾರ್ಮಿಕತೆಯೇ ಹೊರತು, ಯುದ್ದ ಅರಾಜಕತೆ ಅಲ್ಲ. ಜಗತ್ತು ಉಳಿಬೇಕಾದರೆ ಹಿಂದೂ ಸಮಾಜ ಉಳಿಬೇಕು. ಇಡೀ ವಿಶ್ವಕ್ಕೆ ಧಾರ್ಮಿಕತೆ ಕಲಿಸಿರುವುದು ನಮ್ಮ ದೇಶ. ನಮ್ಮ ಕುಟುಂಬ, ಮಕ್ಕಳಿಗೆ ಒಳ್ಳೆಯದಾಗಲಿ ಎಂದು ಪ್ರಾರ್ಥಿಸುವ ಜತೆಗೆ ಅನ್ನ ಕೊಡುವ ರೈತನಿಗೆ, ಗಡಿ ಕಾಯುವ ಸೈನಿಕನ ಪರವಾಗಿಯೂ ಪ್ರಾರ್ಥನೆ ಮಾಡಬೇಕು. ಯುವ ಸಮೂಹವನ್ನು ಸನ್ಮಾರ್ಗದತ್ತ ಕರೆದೊಯ್ಯುವ ಕೆಲಸವಾಗಬೇಕು. ಹಿಂದೂ ಸಮಾಜ ಮಲಗಿದರೆ ಎದ್ದೇಳುವುದು ಕಷ್ಟ. ದೇಶದ ಬುನಾದಿ ಕುಟುಂಬ. ಕುಟುಂಬ ಉಳಿಬೇಕಾದರೆ ಸಂಸ್ಕೃತಿ ಉಳಿಬೇಕು ಎಂದು ಹೇಳಿದರು. ಭಾರತೀಯ ಸಂಸ್ಕೃತಿ ಮೇಲೆ ಹೇಗೆ ಪಾಶ್ಚಾತ್ಯ ಸಂಸ್ಕೃತಿ ಪ್ರಭಾವ ಬೀರುತ್ತಿದೆ ಅದರಿಂದ ಭಾರತೀಯ ಸಂಸ್ಕೃತಿಯನ್ನು ಉಳಿಸಲು ಹಿಂದೂ ಸಂಗಮ ಅತೀ ಅಗತ್ಯ. ಮೇಲು-ಕೀಳು ಎನ್ನುವ ಅಹಂಕಾರ ಬಿಟ್ಟು ಎಲ್ಲರನ್ನೂ ನಮ್ಮವರು ಎಂದು ನೋಡಬೇಕು. ಆರ್‍ಎಸ್‍ಎಸ್ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಮಾಡಿದೆ. ವ್ಯಕ್ತಿ ನಿರ್ಮಾಣದಿಂದ ಸಂಘಟನೆ ಜೊತೆಗೆ ಸಮಾಜ ಬೆಳೆಯಿತು. ಹಾಗೂ ಇದರಿಂದ ರಾಷ್ಟ್ರ ಕಟ್ಟುವ ಕೆಲಸವಾಗಿದೆ. ಹಿಂದು ಸಂಗಮದಿಂದ ಹಿಂದೂ ಸಮಾಜಕ್ಕೆ ವಿಶ್ವಾಸ ಮೂಡಿದೆ. ಕಲಿಯುಗದಲ್ಲಿ ನಾವು ಸಂಘಟಿತರಾಗಿ ಇಂದು ಸಮಾಜವನ್ನು ರಕ್ಷಿಸಬೇಕಿದೆ ಎಂದರು. ಸಂಘವು ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಮಾಜದಲ್ಲಿ ಪಂಚ ಪರಿವರ್ತನೆಗಳ ಅಗತ್ಯತೆ ಇದ್ದು, ಸಾಮಾಜಿಕ ಮೌಲ್ಯಗಳ ಸಂರಕ್ಷಣೆ, ಸಾಮಾಜಿಕ ಸಾಮರಸ್ಯ, ಪರಿಸರದ ಸಂರಕ್ಷಣೆ ಸ್ವದೇಶಿ ಭಾವಗಳ ಜಾಗೃತಿ ಹಾಗೂ ನಾಗರಿಕ ಶಿಸ್ತು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕಾಗಿದೆ. ಹಿಂದೂ ಸಂಗಮದಿಂದಾಗಿ ಹಿಂದೂಗಳ ಮಧ್ಯೆ ಹೃದಯಗಳ ಬಂಧನವಾಗಬೇಕು. ಕಳೆದುಹೋದ ಸಂಸ್ಕೃತಿಯನ್ನು ಮತ್ತೆ ಮುಂದಿನ ಪೀಳಿಗೆಗೆ ಹೇಳಿಕೊಡುವಂತಾಗಬೇಕು ಎಂದರು. ಕೊಡವ ಸಮಾಜದ ಅಧ್ಯಕ್ಷ ಐನಂಡ ಪ್ರಕಾಶ್ ಮಾತನಾಡಿ, ಜನಸಾಮಾನ್ಯರು ಹಿಂದುತ್ವದ ಜಾಗೃತಿ ಹಾಗೂ ದೇಶ ಭಕ್ತಿ ಹೊಂದುವಂತಾಗಬೇಕು. ಭಾರತ ಈಗಾಗಲೇ ಸಾಮಾಜಿಕವಾಗಿ ಸಂಪನ್ನತೆ ಹೊಂದಿದ್ದು, ಸಂರಕ್ಷಿತ ರಾಷ್ಟ್ರವಾಗಿದೆ. ಜೊತೆಗೆ ಸಾಮರಸ್ಯದ ಭಾವ ಹೊಂದಿದೆ. ಹಿಂದೂ ಸಮಾಜದ ಸಂಘಟನೆ, ಸ್ವಾವಲಂಭಿ, ಸಂಸ್ಕಾರಯುಕ್ತ ಮತ್ತು ಸಾಮರಸ್ಯಯುಕ್ತ ಸಮಾಜವನ್ನು ನಿರ್ಮಾಣ ಮಾಡುವ ಕಾರ್ಯದಲ್ಲಿ ನಿರತರಾಗಬೇಕು. ಆಧ್ಯಾತ್ಮಿಕ ಜಾಗೃತಿಯನ್ನು ಮೂಡಿಸುವುದಲ್ಲದೇ ನಮ್ಮ ಧರ್ಮ, ಸಂಸ್ಕೃತಿ, ಮೌಲ್ಯಗಳನ್ನು ಆಚರಣೆಗೆ ತರುವಲ್ಲಿ ಜಾಗೃತಿಯ, ಶಕ್ತಿಯ ಕೇಂದ್ರವಾಗಬೇಕು. ವ್ಯಕ್ತಿಯು ತನ್ನ, ಕುಟುಂಬದ ಮತ್ತು ಸಮಾಜದ ನಡವಳಿಕೆಯಲ್ಲಿ ಪರಿವರ್ತನೆಯನ್ನು ತರುವಲ್ಲಿ ಜವಾಬ್ದಾರಿಯ ಪಾತ್ರವನ್ನು ನಿರ್ವಹಿಸಬೇಕು. ಕುಟುಂಬದಲ್ಲಿ ಸಂಸ್ಕೃತಿ, ಸಂಸ್ಕಾರಗಳ ಸಂವರ್ಧನೆ, ಸಮಾಜದ ಎಲ್ಲರೊಂದಿಗೆ ಸಾಮರಸ್ಯದ ಭಾವ, ನಾಗರಿಕ ಕರ್ತವ್ಯಗಳನ್ನು ನಿತ್ಯ ಪಾಲಿಸಬೇಕು. ಹಿಂದೂಧರ್ಮ, ಸಂಸ್ಕೃತಿಗಳ ಸಂರಕ್ಷಣೆ, ಸ್ವಾವಲಂಬನೆ ಮತ್ತು ಸಮಗ್ರ ವಿಕಾಸದ ದೃಷ್ಟಿಯಿಂದ ಜಾಗೃತ ಹಿಂದೂ ಸಮಾಜ ಕಟಿಬದ್ಧವಾಗಬೇಕು ಎಂಬ ಆಶಯದೊಂದಿಗೆ ಹಿಂದೂ ಸಮಾಜದ ಉತ್ಸವಗಳನ್ನು ಆಯೋಜಿಸಲಾಗುತ್ತಿದೆ ಎಂದರು. ಕೊಡಗಿನಲ್ಲಿ ಅಸ್ಸಾಂನವರು ಎನ್ನುತ್ತಾ ಬಾಂಗ್ಲಾದವರು ಸೇರಿಕೊಂಡಿದ್ದಾರೆ. ತೋಟದ ಲೈನ್‍ಮನೆಗಳಲ್ಲಿ ಸೇರಿದಂತೆ ಎಲ್ಲ ಕಡೆ ಅವರು ಕೆಲಸ ನಿರ್ವಹಿಸುತ್ತಿದ್ದಾರೆ. ಅವರಿಗೆ ಇಲ್ಲಿ ಆಧಾರ್ ಕಾರ್ಡ್, ಮತದಾರರ ಚೀಟಿ ಎಲ್ಲ ದಾಖಲಾತಿಗಳನ್ನು ನಮ್ಮವರೇ ಮಾಡಿಕೊಡುತ್ತಿರುವುದು ಕಳವಳಕಾರಿಯಾಗಿದೆ. ಹಿಂದೆ ಬ್ರಿಟಿಷರು ಹೀಗೆ ಸೇರಿಕೊಂಡು ನಮ್ಮ ದೇಶವನ್ನು ಅಧೋಗತಿಗೆ ತಂದ ಹಾಗೆ ನಮ್ಮ ಕೊಡಗು ಬಾಂಗ್ಲಾದವರಿಂದ ನಲುಗಿ ಹೋಗುವ ಕಾಲ ದೂರವಿಲ್ಲ. ಹಾಗಾಗಿ ನಾವು ಎಚ್ಚೇತ್ತುಕೊಳ್ಳಬೇಕಿದೆ ಎಂದು ಆತಂಕ ವ್ಯಕ್ತಪಡಿಸಿದರು. ಚೌಡೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಹೆಚ್.ಕೆ.ಶ್ರೀನಿವಾಸ್ ಮಾತನಾಡಿ, ನಾವೆಲ್ಲ ಹಿಂದೂ, ನಾವೆಲ್ಲ ಒಂದು. ಕೆಲವರು ಹಿಂದೂ ಅಂತ ಹೇಳೋಕೆ ಹಿಂದೆ ಸರಿಯುತ್ತಾರೆ. ಹಿಂದೂ ಸಮುದಾಯದಲ್ಲಿರುವವರಿಗೆ ಹಿಂದೂ ಅಂತ ಹೇಳೋಕೆ ಭಯ ಯಾಕೆ. ಕಾವೇರಮ್ಮನ ಮಣ್ಣಿನಲ್ಲಿ ಹುಟ್ಟಿದ ನಾವು ಕಾವೇರಿ ಹರಿದ ಹಾಗೆ ದೇಶವ್ಯಾಪಿ ನಮ್ಮ ಹಿಂದೂತ್ವವನ್ನು ಹರಿಯಬಿಡಬೇಕು. ಎಲ್ಲಾ ಹಿಂದೂ ಬಾಂಧವರು ಈ ಸಮಾಜೋತ್ಸವದಲ್ಲಿ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಬೇಕು. ತನ್ಮೂಲಕ ಸಮಾಜದ ಜಾಗೃತಿಯ ಈ ಕಾರ್ಯಕ್ರಮದಲ್ಲಿ ತಮ್ಮ ಪಾತ್ರವನ್ನು ಅರಿತುಕೊಳ್ಳಬೇಕು. ಪ್ರತಿಯೊಬ್ಬರೂ ನಮ್ಮ ಧರ್ಮಗ್ರಂಥ ಭಗವದ್ಗೀತೆ ಬಗ್ಗೆ ಮಕ್ಕಳಿಗೆ ಕಲಿಸಿಕೊಡಬೇಕು ಎಂದು ಕೋರಿದರು. ಹಿಂದೂ ಸಂಗಮದ ಅಂಗವಾಗಿ ಅಮ್ಮತ್ತಿ ಪಟ್ಟಣದಲ್ಲಿ ಬೃಹತ್‍ಮಟ್ಟದಲ್ಲಿ ವೈಭವದ ಶೋಭಾಯಾತ್ರೆ ನಡೆಯಿತು. ಸಹಸ್ರ ಸಂಖ್ಯೆಯಲ್ಲಿ ಹಿಂದೂ ಭಾಂದವರು ಮೆರವಣಿಗೆಗೆ ಸಾಕ್ಷಿಗಳಾದರು. ಮೆರವಣಿಗೆ ಅಮ್ಮತ್ತಿ ಪಟ್ಟಣದ ಪ್ರಮುಖ ರಸ್ತೆಯುದ್ದಕ್ಕೂ ಸಂಚರಿಸಿ ಕೊಡವ ಸಮಾಜದವರೆಗೂ ಸಾಗಿ ಬಂತು. ವಿವಿಧ ಭಜನಾ ನೃತ್ಯ, ದುಡಿಕೊಟ್ಟ್ ಪಾಟ್, ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಪ್ರಜ್ವಲನೆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭ ಸ್ವಾಗತ ನೃತ್ಯ, ಚಂಡೆ ವಾದ್ಯ, ದುಡಿಕೊಟ್ಟ್ ಪಾಟ್, ಕೊಡವ ವಾಲಗ, ಚೀನಿ ದುಡಿ, ಬೊಳಕಾಟ್, ಭಜನಾ ನೃತ್ಯ ಪ್ರದರ್ಶನ ಮಾಡಲಾಯಿತು. ನೆಲ್ಲಮಕ್ಕಡ ಸಾಗರ್ ಸಾಮರಸ್ಯ ಗೀತೆ ಹಾಡಿದರು. ವೇದಿಕೆಯಲ್ಲಿ ಶ್ರೀ ಅಯ್ಯಪ್ಪ ದೇವಸ್ಥಾನ ಸಮಿತಿ ಅಧ್ಯಕ್ಷ ಕುಟ್ಟಂಡ ಸಂಜು, ಕಾವಾಡಿ ಶ್ರೀ ಭಗವತಿ ದೇವಸ್ಥಾನದ ಅಧ್ಯಕ್ಷ ಮುಕ್ಕಾಟಿರ ನಾಚಪ್ಪ, ಮುತ್ತಪ್ಪ ದೇವಸ್ಥಾನ ಸಮಿತಿ ಅಧ್ಯಕ್ಷ ಸಿ.ಕೆ. ರವಿ, ಪ್ರಮುಖರಾದ ಸುವಿನ್ ಗಣಪತಿ, ಕುಟ್ಟಂಡ ಪ್ರಿನ್ಸ್ ಗಣಪತಿ, ಚಂದ್ರನ್, ವಿಶಾಲಾಕ್ಷಿ, ಎಂ.ಡಿ ಚಿಣ್ಣಪ್ಪ ಸೇರಿದಂತೆ ಗ್ರಾಮದ ಹಿಂದೂ ಬಾಂಧವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

Share. Facebook Twitter Pinterest LinkedIn Tumblr Email WhatsApp
Previous Article*ವಿಮಾನ ದುರಂತ : ಉಪ ಮುಖ್ಯಮಂತ್ರಿ ಸೇರಿ ಐವರ ಸಾವು*
Next Article *ಮಡಿಕೇರಿಯಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಜನ್ಮ ದಿನಾಚರಣೆ : ಗಣ್ಯರಿಂದ ಗೌರವ ನಮನ ಸಲ್ಲಿಕೆ*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.