Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಹೆಣ್ಣು ಮಕ್ಕಳು ಪುಸ್ತಕದ ಕಡೆ ಗಮನಹರಿಸಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ : ಹೆಣ್ಣು ಮಕ್ಕಳು ಪುಸ್ತಕದ ಕಡೆ ಗಮನಹರಿಸಿ : ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ*

ಜನವರಿ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಮಡಿಕೇರಿ ಜ.29 NEWS DESK : ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾನೂನು ಸೇವಾ ಪ್ರಾಧಿಕಾರ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ 2025-26ನೇ ಸಾಲಿನ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪೌಢಶಾಲಾ ವಿಭಾಗದಲ್ಲಿ ನಡೆಯಿತು. ಕೊಡಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜ.24 ರಂದು ಹೆಣ್ಣು ಮಕ್ಕಳ ದಿನಾಚರಣೆಯಾಗಿ ಆಚರಿಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಸಿಗಬೇಕಾದಂತಹ ಗೌರವ, ಪ್ರಾಮುಖ್ಯತೆ ಕೊಡುತ್ತಿರಲಿಲ್ಲ. ಹಾಗಾಗಿ ಇಂತಹ ದಿನಾಚರಣೆ ಮಾಡುವುದರ ಮೂಲಕ ಜನರಿಗೆ ಹೆಣ್ಣು ಮಕ್ಕಳ ಮಹತ್ವ ಮತ್ತು ಪ್ರಾಮುಖ್ಯತೆ ತಿಳಿಯಲಿ ಎಂಬುದಕ್ಕಾಗಿ ಮಹಿಳೆಯರಿಗೆ, ಹೆಣ್ಣು ಮಕ್ಕಳಿಗೆ ಸಂಬಂಧಿಸಿದ ದಿನಾಚರಣೆಗಳು ಆಚರಣೆಗೆ ಬಂದಿತು ಎಂದರು. ಹೆಣ್ಣು ಎಂದರೆ ಜವಾಬ್ದಾರಿ, ಹೊರೆ ಎಂಬ ಮನೋಭಾವ ಹಿಂದಿನ ಕಾಲದಿಂದಲೂ ಕೆಲವರ ಮನಸ್ಸಿನಲ್ಲಿ ಬೇರೂರಿದೆ. ಯಾವುದೇ ದಿನಾಚರಣೆ ಮಾಡಿದರೂ, ಎಷ್ಟೇ ಕಾನೂನುಗಳನ್ನು ತಂದರೂ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿರಂತರವಾಗಿ ನಡೆಯುತ್ತಲೇ ಇದೆ. ಅದಕ್ಕಾಗಿ ಇಂದಿನ ಪ್ರಜೆಗಳೇ ನಾಳಿನ ಭವಿಷ್ಯ ಎನ್ನುವ ಹಾಗೆ, ಪ್ರಪಂಚವನ್ನು ಸಂಪೂರ್ಣವಾಗಿ ಬದಲಾಯಿಸಲು ಸಾಧ್ಯವೇ ಇಲ್ಲ. ಹಾಗಾಗಿ ಮೊದಲು ನಿಮ್ಮನ್ನು ನೀವು ಬದಲಾಯಿಸಿಕೊಳ್ಳಬೇಕು ಎಂದರು. ಪ್ರತಿಯೊಬ್ಬರೂ ತಮ್ಮ ಆಲೋಚನೆ ಬದಲಾಯಿಸಿಕೊಳ್ಳಬೇಕು. ಕೀಳರಿಮೆ ಎಂಬ ಹಿಂಜರಿಕೆಯನ್ನು ಹೋಗಲಾಡಿಸಿ ಎಲ್ಲಾ ಹೆಣ್ಣು ಮಕ್ಕಳು ಧೈರ್ಯದಿಂದ ತಮ್ಮ ಗುರಿ ತಲುಪಲು ಪ್ರಯತ್ನಿಸಬೇಕು ಎಂದು ನುಡಿದರು. ಈಗಿನ ಕಾಲದಲ್ಲಿ ಮಕ್ಕಳು ಕೇವಲ ದೈಹಿಕವಾಗಿಯೂ ಅಲ್ಲದೇ ಮಾನಸಿಕವಾಗಿಯೂ ಅಸುರಕ್ಷಿತರಾಗಿದ್ದಾರೆ. ಮೊಬೈಲ್‍ನಿಂದಾಗಿ ತಮ್ಮ ಸಮಯದ ಜೊತೆಗೆ ಮನಸ್ಸನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಈ ಸಮಯ ಓದಲು ಇರುವಂತಹ ಸಮಯ. ಒಮ್ಮೆ ಅವಕಾಶ ತಪ್ಪಿ ಹೋದರೆ, ನಂತರ ಇಂತಹ ಅವಕಾಶ ದೊರೆಯುವುದಿಲ್ಲ. ಸಿಕ್ಕಿದ ಸಮಯವನ್ನು ಚೆನ್ನಾಗಿ ಉಪಯೋಗಿಸಿಕೊಂಡು, ಮೊಬೈಲ್ ದೂರವಿಟ್ಟು, ಪುಸ್ತಕದ ಕಡೆ ಗಮನಹರಿಸಿ, ಮೊಬೈಲ್ ದುರ್ಬಳಕೆಯಿಂದ ತಲೆ ತಗ್ಗಿ ನಡೆಯಬೇಕಾಗಬಹುದು. ಆದರೆ ಪುಸ್ತಕದ ಅರಿವಿನಿಂದ ತಲೆ ಎತ್ತಿ ನಡೆಯಬಹುದು ಎಂದು ತಿಳಿಸಿದರು. ಕೊಡಗು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನಕುಮಾರ್ ಅವರು ಮಾತನಾಡಿ, ಈಗ ಇರುವಂತಹ ಸಮಯವನ್ನು ಬಳಸಿಕೊಂಡು ತಮ್ಮ ಉಜ್ವಲವಾದ ಭವಿಷ್ಯ ರೂಪಿಸಿಕೊಳ್ಳಿ. ಓದಿನ ಕಡೆ ಗಮನ ಹರಿಸಿದರೆ ಮುಂದೆ ಉತ್ತಮ ಪ್ರಜೆಗಳಾಗಬಹುದು ಎಂದರು. ವೈಯಕ್ತಿಕವಾಗಿ ಅಥವಾ ಸಾರ್ವಜನಿಕವಾಗಿ ಏನಾದರೂ ಸಮಸ್ಯೆ ಎದುರಾದರೆ ಅಥವಾ ತುರ್ತು ಸಂದರ್ಭಗಳಲ್ಲಿ ಮಕ್ಕಳ ಸಹಾಯವಾಣಿ, ತುರ್ತು ಸಹಾಯವಾಣಿಗಳಿಗೆ ಕರೆ ಮಾಡಿದರೆ ತಕ್ಷಣದ ಸಹಾಯ ದೊರಕಿಸಿಕೊಡುತ್ತೇವೆ. ಇಲಾಖೆ ಮೂಲಕ ಮಕ್ಕಳಿಗಾಗಿ ಅನೇಕ ಸೌಲಭ್ಯಗಳಿದ್ದು, ಅವುಗಳೆಲ್ಲದರ ಸದುಪಯೋಗ ಪಡೆದುಕೊಳ್ಳಿ. ಪ್ರತಿಯೊಂದು ಹೆಣ್ಣು ಕಡ್ಡಾಯ ಶಿಕ್ಷಣ ಪಡೆದುಕೊಳ್ಳಬೇಕು, ಯಾರೂ ಕೂಡ ಶಿಕ್ಷಣದಿಂದ ವಂಚಿತರಾಗಬಾರದು ಎಂದು ಹೇಳಿದರು. ಇದರ ಜೊತೆಗೆ ಇಲಾಖೆ ಮೂಲಕ ಇರುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಕೊಡಗು ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಸುಮತಿ ಅವರು ಮಾತನಾಡಿ, ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ ಎಂಬ ಮಾತಿನಂತೆ ಪ್ರತಿಯೊಂದು ಹೆಣ್ಣು ಮಗುವು ಶಿಕ್ಷಣವನ್ನು ಪಡೆದು, ತಮ್ಮ ಗುರಿ ತಲುಪಬೇಕು. ಯಾವುದೇ ತೊಂದರೆಗೊಳದಾಗ ತುರ್ತು ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿಗೆ ಅಥವಾ ತುರ್ತು ಸಹಾಯವಾಣಿಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು. ಹೆಣ್ಣು ಗಂಡು ನಡುವಿನ ಅಸಮಾನತೆ ಈ ಸಮಾಜದಲ್ಲಿ ಈಗಲೂ ಜೀವಂತವಾಗಿದೆ. ಅದನ್ನು ಹೋಗಲಾಡಿಸಬೇಕಾದರೆ ಪ್ರತಿಯೊಬ್ಬರೂ ಶಿಕ್ಷಣ ಪಡೆಯಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ರಸಪ್ರಶ್ನೆ ಏರ್ಪಡಿಸಿ, ಬಹುಮಾನ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಶಿನಿ ಅವರು ಸ್ವಾಗತಿಸಿದರು. ಕಾನೂನು ಸೇವಾ ಪ್ರಾಧಿಕಾರದ ಜೋಯಪ್ಪ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶಶಿಕಲಾ, ಕೊಡಗು ಜಿಲ್ಲಾ ವಿಶೇಷ ಮಕ್ಕಳ ಘಟಕದ ಸಿಬ್ಬಂದಿ ಸತ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಿಬ್ಬಂದಿಗಳು, ಅಕ್ಕಪಡೆ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.