Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
  • *ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*
  • *ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*
  • *ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಸೈಬರ್ ಅಪರಾಧಗಳ ಕುರಿತು ಜಾಗೃತಿ ಅಗತ್ಯ : ಪೋಲಿಸ್ ಉಪ ಅಧೀಕ್ಷ ಮಹೇಶ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಸೈಬರ್ ಅಪರಾಧಗಳ ಕುರಿತು ಜಾಗೃತಿ ಅಗತ್ಯ : ಪೋಲಿಸ್ ಉಪ ಅಧೀಕ್ಷ ಮಹೇಶ್ ಕುಮಾರ್*

ಜನವರಿ 31, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ವಿರಾಜಪೇಟೆ ಜ.31 NEWS DESK  : ಪ್ರತಿದಿನ ಹಲವಾರು ಹೊಸ ಸೈಬರ್ ಕ್ರೈಂ ಪ್ರಕರಣಗಳು ಮತ್ತು ವಂಚನೆಗಳು ಬೆಳಕಿಗೆ ಬರುತ್ತಿರುವುದು ಆಘಾತಕಾರಿ ಮತ್ತು ಕಳವಳಕಾರಿ ಸಂಗತಿಯಾಗಿದ್ದು, ಸೈಬರ್ ಅಪರಾಧಗಳ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ವಿರಾಜಪೇಟೆ ಪೋಲಿಸ್ ಉಪ ಅಧೀಕ್ಷಕರಾದ ಮಹೇಶ್ ಕುಮಾರ್ ಹೇಳಿದರು. ವಿರಾಜಪೇಟೆ ಮಾಜಿ ಸೈನಿಕರ ಸಂಘದ ಮಾಸಿಕ ಸಭೆಯು ಸಂಘದ ಕಚೇರಿ ಸಭಾಂಗಣದಲ್ಲಿ ಅಧ್ಯಕ್ಷ ಚಪ್ಪಂಡ ಹರೀಶ್ ಉತ್ತಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಮಾಜಿ ಸೈನಿಕರಿಗೆ ಸೈಬರ್ ಕ್ರೈಂ ಬಗ್ಗೆ ಮಾಹಿತಿ ನೀಡಲು ಅವರು ಸಭೆಗೆ ಆಗಮಿಸಿ ಜಾಗೃತಿ ಮೂಡಿಸಿ ಮಾತನಾಡಿದ ಪೋಲಿಸ್ ಉಪ ಅಧೀಕ್ಷಕರಾದ ಮಹೇಶ್ ಕುಮಾರ್ ಅವರು, ಸೈಬರ್ ಕ್ರೈಂ ಬಗ್ಗೆ ಜನರು ಜಾಗೃತರಾಗಿರಬೇಕು ಮತ್ತು ಪ್ರತಿಯೊಂದು ಸಾಫ್ಟ್‍ವೇರ್ ಅನ್ನು ಡೌನ್‍ಲೋಡ್ ಮಾಡಬಾರದು. ಹೆಚ್ಚು ತಾಂತ್ರಿಕ ಜ್ಞಾನ ಬಳಕೆ ಮಾಡುವ ವಿದ್ಯಾರ್ಥಿಗಳಿಗೆ ಹೋಲಿಸಿದರೆ ಹಿರಿಯ ನಾಗರಿಕರು ಸೈಬರ್ ವಂಚನೆಗೆ ಹೆಚ್ಚು ಗುರಿಯಾಗುತ್ತಿದ್ದಾರೆಂದು ತಿಳಿಸಿದರು. ವಂಚನೆಗಳನ್ನು ಪತ್ತೆ ಹಚ್ಚುವುದು ಹಾಗೂ ಅವುಗಳಿಗೆ ಪರಿಹಾರ ಕಂಡುಹಿಡಿಯಲು ಸೇತುವೆಯಾಗುವುದರತ್ತ ನಾವು ಕೆಲಸ ಮಾಡುತ್ತಿದ್ದೇವೆ.  ಆನ್‍ಲೈನ್ ವಂಚನೆ, ಡಿಜಿಟಲ್ ಅರೆಸ್ಟ್, ಸೈಬರ್ ಅಪರಾಧಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸೈಬರ್ ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಸಮಾಜದ ಮನೆ ಮನೆಗೂ ತಲುಪುವಂತಾಗುವ ದಿಸೆಯಲ್ಲಿ ಪೊಲೀಸ್ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದೆ ಎಂದರಲ್ಲದೆ ಮೊಬೈಲ್ ಪ್ರಜ್ಞಾಪೂರ್ವಕವಾಗಿ ಬಳಸಬೇಕು, ಅಪರಿಚಿತರ ಕೈಗೆ ಮೊಬೈಲ್ ನೀಡಬಾರದು, ಅಪರಿಚಿತ ಪೋನ್ ಮತ್ತು ವಿಡಿಯೋ ಕರೆಗಳನ್ನು ಸ್ವೀಕರಿಸಬೇಡಿ, ಓ.ಟಿ.ಪಿ. ಸಂಖ್ಯೆಗಳನ್ನು ಬ್ಯಾಂಕ್ ಖಾತೆಗಳ ಸಂಖ್ಯೆಯನ್ನು ತಿಳಿಸಬೇಡಿ, ಮುಖ್ಯವಾಗಿ ಹೆಣ್ಣು ಮಕ್ಕಳು ಮೊಬೈಲ್ ಕುರಿತು ಬಹಳ ಎಚ್ಚರಿಕೆಯಿಂದ ಬಳಸಬೇಕು. ಇಲ್ಲವಾದಲ್ಲಿ ಅನೇಕ ತೊಂದರೆಗಳಿಗೆ ಸಿಲುಕುವಿರಿ ಎಂದರು. ವಾಟ್ಸ್‍ಆಪ್, ಇನ್ಸಾಟ್ರಗ್ರಾಮ್, ಫೇಸ್ ಬುಕ್, ಟ್ವೇಟರ್ ಮುಂತಾದುವುಗಳ ಮೂಲಕ ಅಪರಿಚಿತರು ಪರಿಚಯ ಮಾಡಿಕೊಂಡು ನಿಮ್ಮನ್ನು ದುರ್ಬಳಿಸಿಕೊಂಡು ಅನಾಹುತಗಳಿಗೆ ಕಾರಣರಾಗುತ್ತಾರೆ ಎಂದು ಕಿವಿಮಾತು ತಿಳಿಸಿದರು. ಅಪರಿಚಿತ ಕರೆಗಳು ಸ್ವೀಕರಿಸಬೇಡಿ, ಸೇವ್ ಮಾಡಬೇಡಿ, ಮೇಸೇಜ್‍ಗಳಿಗೆ ರಿಪ್ಲೇ ಮಾಡಬೇಡಿ, ನಿಮ್ಮ ಪರಿಚಿತರ ಸಂಖ್ಯೆಗಳನ್ನು ಮಾತ್ರ ಸೇವ್ ಮಾಡಿ ಕರೆಗಳನ್ನು ಸ್ವೀಕರಿಸುವ ವ್ಯವಸ್ಥೆ ಮಾಡಿಕೊಳ್ಳಿ, ವಿಡಿಯೋ ಕಾಲ್ಸ್‍ಗಳ ಬಗ್ಗೆ ಹೆಚ್ಚು ಜಾಗೃತಿ ಅಗತ್ಯ, ಏನಾದರೂ ಅನುಚಿತ ಕರೆಗಳು, ವಿಡಿಯೋಗಳು, ಬೆದರಿಕೆ, ಹೂಡಿಕೆಗೆ ಆಮಿಷಗಳನ್ನು ಒಡ್ಡುವುದು ಇತ್ಯಾದಿಗಳ ಕುರಿತು ದೂರು ನೀಡಿ ಎಂದು ತಿಳಿಸಿದರು. ವಂಚಕರು ಅಂತರ್ಜಾಲದ ಸಂಪರ್ಕ ಪಡೆದು ಇತರರಿಗೆ ಕಂಪ್ಯೂಟರ್ ಸಂಪರ್ಕವನ್ನು ನಿರ್ಬಂಧಿಸುವುದು. ವೈರಸ್ ಹರಡಿ ಇಡೀ ಸಂಪರ್ಕವನ್ನು ನಾಶಪಡಿಸುವುದು, ದುರುದ್ದೇಶವುಳ್ಳ ತಂತ್ರಾಂಶವನ್ನು ಬಳಸಿ ಇನ್ನೊಬ್ಬರ ಕ್ರೆಡಿಟ್ ಕಾರ್ಡ್, ಬ್ಯಾಂಕ್ ಕಾರ್ಡ್‍ಗಳನ್ನು ನಕಲಿ ಮಾಡುವುದು, ಇನ್ನೊಬ್ಬರ ಬಗ್ಗೆ ತಪ್ಪು ಭಾವನೆ ಬರುವಂತೆ ಮಾಡುವುದು. ಬೆದರಿಕೆ ಮೂಲಕ ಭಯೋತ್ಪಾದನೆ ಉಂಟು ಮಾಡುವುದು ಆನ್‍ಲೈನ್ ವಂಚಕರ ಕೆಲಸವಾಗಿದೆ. ಕಡಿಮೆ ಬಡ್ಡಿಯಲ್ಲಿ ಸಾಲ ನೀಡುವುದಾಗಿ, ಲಾಟರಿ ಬಂದಿರುವುದಾಗಿ, ಕೆಲಸ ಕೊಡಿಸುವುದಾಗಿ, ಉಡುಗೊರೆ ಕೊಡುವುದಾಗಿ, ಕಡಿಮೆ ಬೆಲೆಯಲ್ಲಿ ದುಬಾರಿ ವಸ್ತುಗಳನ್ನು ಮಾರುತ್ತೇವೆ ಎಂಬುದಾಗಿ ನಿಮಗೆ ಮೊಬೈಲ್ ಕರೆ ಅಥವಾ ಇ-ಮೇಲ್ ಮಾಡಿದರೆ ಅದನ್ನು ನಂಬಬೇಡಿ. ಇದರಿಂದ ನಿಮ್ಮ ಹಣ ಪಾವತಿಮಾಡುವಂತೆ ಹೇಳಿ ನಂಬಿಸಿ ವಂಚಿಸುತ್ತಾರೆ. ಈ ಬಗ್ಗೆ ಎಚ್ಚರವಿರಲಿ ಹೀಗೆ ಸಮಾಜದಲ್ಲಿ ನಡೆಯುವ ಸೈಬರ್ ಕ್ರೈಂನ ಬಗ್ಗೆ ಮಾಹಿತಿ ನೀಡಿ, ಪ್ರತ್ಯೇಕವಾಗಿ ಹಿರಿಯ ನಾಗರಿಕರು ಪಿಂಚಣಿದಾರರನ್ನು ಕಲೆ ಹಾಕಿ ಮೋಸ ಮಾಡುವುದರ ಕುರಿತು ಹಾಗೂ ಡಿಜಿಟಲ್ ಬಂಧನದ ಕುರಿತು ಜಾಗೃತಿ ಮೂಡಿಸಿದರು. ಸಂಘದ ಅಧ್ಯಕ್ಷ ಚಪ್ಪಂಡ ಹರೀಶ್ ಮಾತನಾಡಿ ಭಾರತೀಯ ಸೇನೆಯು ಸದಾ ತಾಯಿನಾಡಿನ ಶಾಂತಿಗಾಗಿ ಸರಕಾರ ಹಾಗೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಸೇವೆ ಮಾಡುವುದರ ಬಗ್ಗೆ ಮನವರಿಕೆ ಮಾಡಿದರು. ಸಂಘದ ಸದಸ್ಯರು ಹಾಗೂ ಮಾಜಿ ಸೈನಿಕರಾದ ದಿವಂಗತ ಮಾಚಿಮಂಡ ಜಿ ಸೋಮಯ್ಯ ಅವರಿಗೆ ಸಂತಾಪ ಸೂಚಿಸಲಾಯಿತು.  ಈ ಸಂದರ್ಭ ವಿರಾಜಪೇಟೆ ಪುರಸಭೆ ಮುಖ್ಯಾಧಿಕಾರಿ ಪಟ್ಟಚೆರುವಂಡ ಕೆ.ನಾಚಪ್ಪ, ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಚಂದ್ರಶೇಖರ್ ಬಿ.ಎಸ್., ಕಾರ್ಯದರ್ಶಿ ಪುಗ್ಗೇರ ಎಸ್.ನಂದಾ, ಖಜಾಂಚಿ ತೋರೇರ ಪೂವಯ್ಯ, ನಿರ್ದೆಶಕರಾದ ಚೇಂದ್ರಿಮಾಡ ಕೆ.ನಂಜಪ್ಪ, ಪಟ್ರಪಂಡ ಎಂ.ಕರುಂಬಯ್ಯ, ಕೊಂಗಂಡ ಎ.ಭೀಮಯ್ಯ, ಅಣ್ಣಾಳಮಾಡ ಡಿ.ಸುಬ್ಬಯ್ಯ, ಬಾಳೆಕುಟ್ಟೀರ ಎ.ಬೋಪಯ್ಯ, ಅಪ್ಪಯ್ಯ ಹೆಚ್.ಕೆ., ಕಬ್ಬಚ್ಚೀರ ಕೆ.ಬೋಪಣ್ಣ, ಎಂ.ಕೆ. ಸಲಾಂ ಕಡಂಗ, ಪಟ್ರಪಂಡ ಎನ್. ಚಂಗಪ್ಪ ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೬ : ಕನ್ನಡ ಸಾಹಿತ್ಯ ಪರಿಷತ್ ನ ಜಿಲ್ಲಾ, ವಿರಾಜಪೇಟೆ ತಾಲ್ಲೂಕು, ಅಮ್ಮತ್ತಿ ಹೋಬಳಿ ಘಟಕ…

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026

*ಸಿದ್ದರಾಮಯ್ಯ ಬಜೆಟ್‌ನಲ್ಲಿ ಯಾರಿಗೆ ಲಾಭ, ಯಾರಿಗೆ ನಷ್ಟ?*

ಮಾರ್ಚ್ 6, 2026

*ಕರ್ನಾಟಕದಲ್ಲಿ 16 ವರ್ಷದೊಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ*

ಮಾರ್ಚ್ 6, 2026

*ಕೊಡಗು ವಿದ್ಯಾ ಇಲಾಖಾ ನೌಕರರ ಸೌಹಾಧ೯  ಸಹಕಾರಿ ಸಂಘದ ಅಧ್ಯಕ್ಷರಾಗಿ ಹೆಚ್.ಎಸ್.ಚೇತನ್, ಉಪಾಧ್ಯಕ್ಷರಾಗಿ ಬಿ.ಬಿ.ಸ್ವಾತಿ ಅವಿರೋಧ ಆಯ್ಕೆ*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.