Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಶಾಂತಳ್ಳಿಯಲ್ಲಿ ಹಿಂದೂ ಸಂಗಮ : ಕೇವಲ ಹಣ ಗಳಿಸುವ ಶಿಕ್ಷಣ ನೀಡಿದರಷ್ಟೇ ಸಾಲದು, ಸಂಸ್ಕಾರಯುತ ಶಿಕ್ಷಣ ನೀಡಬೇಕು*
ಇತ್ತೀಚಿನ ಸುದ್ದಿಗಳು

*ಶಾಂತಳ್ಳಿಯಲ್ಲಿ ಹಿಂದೂ ಸಂಗಮ : ಕೇವಲ ಹಣ ಗಳಿಸುವ ಶಿಕ್ಷಣ ನೀಡಿದರಷ್ಟೇ ಸಾಲದು, ಸಂಸ್ಕಾರಯುತ ಶಿಕ್ಷಣ ನೀಡಬೇಕು*

February 4, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸೋಮವಾರಪೇಟೆ NEWS DESK ಫೆ.4 : ಸನಾತನ ಹಿಂದೂ ಧರ್ಮ-ಪರಂಪರೆ, ಸಂಸ್ಕೃತಿಯ ರಕ್ಷಣೆಗೆ ಒಗ್ಗಟ್ಟು ಅವಶ್ಯ. ಈ ನಿಟ್ಟಿನಲ್ಲಿ ಹಿಂದೂಗಳು ಸಂಘಟಿತರಾಗಬೇಕು. ಹಾಗಾದಾಗ ಹಲವಷ್ಟು ಸಮಸ್ಯೆಗಳು ತನ್ನಿಂತಾನೇ ಬಗೆಹರಿಯುತ್ತವೆ. ಮನೆ ಹಾಗೂ ಮನಗಳಲ್ಲಿ ಧರ್ಮ ಇರಬೇಕು. ಎಲ್ಲರೂ ಸಂಸ್ಕಾರವಂತರಾಗಿ ಬಾಳಬೇಕು ಎಂದು ಯಸಳೂರು ತೆಂಕಲಗೋಡು ಮಠಾಧೀಶರಾದ ಶ್ರೀ ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಕರೆ ನೀಡಿದರು. ಹಿಂದೂ ಸಂಗಮ ಆಯೋಜನಾ ಸಮಿತಿಯ ವತಿಯಿಂದ ಶಾಂತಳ್ಳಿಯ ಶ್ರೀ ಕುಮಾರಲಿಂಗೇಶ್ವರ ದೇವಾಲಯದ ಮುಂಭಾಗ ಆಯೋಜಿಸಿದ್ದ ಹಿಂದೂ ಸಂಗಮ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ವಿಶ್ವದಲ್ಲಿಯೇ ಭಾರತಕ್ಕೆ ವಿಶೇಷ ಸ್ಥಾನಮಾನವಿದೆ. ಪವಿತ್ರವಾದ ನಾಡಿನಲ್ಲಿ ನಾವೆಲ್ಲರೂ ಬದುಕುತ್ತಿದ್ದೇವೆ. ಕಣಕಣದಲ್ಲೂ ಶಕ್ತಿ, ಭಕ್ತಿ, ಧರ್ಮವನ್ನು ಈ ಮಣ್ಣು ಒಳಗೊಂಡಿದೆ. ಇತರ ಎಲ್ಲಾ ಧರ್ಮದವರಿಗೆ ಜೀವಿಸಲು ಸಾಕಷ್ಟು ರಾಷ್ಟ್ರಗಳಿವೆ. ಆದರೆ ಹಿಂದೂಗಳಿಗೆ ತಮ್ಮ ಧರ್ಮದ ಅನುಸಾರ ಜೀವನ ನಡೆಸಲು ಇರುವುದೊಂದೇ ಹಿಂದೂಸ್ಥಾನ. ಇದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು. ಮನೆ, ಆಸ್ತಿಗಳನ್ನು ಭದ್ರಗೊಳಿಸುವ ನಾವುಗಳು ತಾಯಿ ಭಾರತಾಂಭೆಯನ್ನೂ ರಕ್ಷಿಸಬೇಕು. ದೇಶ, ಧರ್ಮ ರಕ್ಷಣೆಯಾದರೆ ಮಾತ್ರ ನಾವುಗಳು ಬದುಕಲು ಸಾಧ್ಯ ಎಂಬುದನ್ನು ಮನಗಾಣಬೇಕು. ಈ ನಿಟ್ಟಿನಲ್ಲಿ ಆರ್.ಎಸ್.ಎಸ್., ಭಜರಂಗದಳ, ವಿಶ್ವಹಿಂದೂ ಪರಿಷತ್ ನಿರಂತರ ಧರ್ಮ ಜಾಗೃತಿ ಮೂಡಿಸುತ್ತಿದೆ. ವೈಯಕ್ತಿಕ ಬೆಳವಣಿಗೆಗೆ ಎಲ್ಲರೂ ಸಂಘಟನೆ ಕಟ್ಟುತ್ತಾರೆ. ಆದರೆ ರಾಷ್ಟ್ರದ ಹಿತಕ್ಕಾಗಿ  ದುಡಿಯುವ ಏಕೈಕ ಸಂಘಟನೆಯೆಂದರೆ ಅದು ಆರ್.ಎಸ್.ಎಸ್. ಎಂದು ಹೇಳಿದರು. ಆರ್‌ಎಸ್‌ಎಸ್ ಸಂಘಟನೆಯು ಸೇವೆಯ ಮೂಲಕವೇ ಸಮಾಜಕ್ಕೆ ಅರ್ಪಣೆಯಾಗಿದೆ. ಸಮಾಜಕ್ಕೆ ತೊಂದರೆಯಾದಾಗ ತಕ್ಷಣ ಸ್ಪಂದಿಸುವುದು ಸಂಘ ಮಾತ್ರ ಎಂದ ಅವರು, ಎಲ್ಲರೂ ಆಚರಣೆಯಲ್ಲಿ ಧರ್ಮವನ್ನು ಅಳವಡಿಸಿಕೊಂಡರೆ ಮಾತ್ರ ಧರ್ಮ ಉಳಿಯುತ್ತದೆ. ಹಿರಿಯರು ಧರ್ಮ ಸಂರಕ್ಷಣೆ ಮಾಡಿ ನಮಗೆ ನೀಡಿದ್ದಾರೆ. ಸಂಸ್ಕಾರದ ಬೇರು ಆಳವಾಗಿ ನೆಲೆಯೂರಿದರೆ ಮಾತ್ರ ಸದೃಢ ಸಮಾಜ ನಿರ್ಮಾಣಗೊಳ್ಳುತ್ತದೆ ಎಂದರು. ಯುವ ಜನಾಂಗ ದೇಶಪ್ರೇಮ, ದೇಶಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ರಾಷ್ಟçಕ್ಕಾಗಿ ಬದುಕುವ ಸಂಕಲ್ಪ ತೊಡಬೇಕು. ಪೋಷಕರು ತಮ್ಮ ಮಕ್ಕಳಿಗೆ ಕೇವಲ ಹಣ ಗಳಿಸುವ ಶಿಕ್ಷಣ ನೀಡಿದರಷ್ಟೇ ಸಾಲದು, ಸಂಸ್ಕಾರಯುತ ಶಿಕ್ಷಣ ನೀಡಬೇಕು ಎಂದು ಕಿವಿಮಾತು ನುಡಿದರು. ಕಾರ್ಯಕ್ರಮದಲ್ಲಿ ದಿಕ್ಸೂಚಿ ಬಾಷಣ ಮಾಡಿದ ಮಂಗಳೂರು ವಿಭಾಗ ಸಹ ವ್ಯವಸ್ಥಾ ಪ್ರಮುಖ್ ಸ್ವಾಮಿಪ್ರಸಾದ್ ಅವರು, ರಾಷ್ಟ್ರ, ಧರ್ಮ, ಸಂಸ್ಕೃತಿ ರಕ್ಷಣೆಯಲ್ಲಿ ನಮ್ಮ ಪಾತ್ರ ಏನು? ಎಂಬುದರ ಬಗ್ಗೆ ಜಾಗೃತಗೊಳ್ಳಲು ಹಿಂದೂ ಸಂಗಮ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ದೇಶದಲ್ಲಿ 80 ಸಾವಿರ ಕಡೆಗಳಲ್ಲಿ ಹಿಂದೂ ಸಂಗಮ ನಡೆಯುತ್ತಿದೆ ಎಂದರು. ಹಿಂದುತ್ವದ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ತೆಗೆಯಬೇಕು. ಎಲ್ಲರನ್ನೂ ಒಟ್ಟು ಸೇರಿಸಿ ಹಿಂದೂ ರಾಷ್ಟ್ರ ಆಗಬೇಕು. ಯಾರನ್ನೂ ಇಲ್ಲಿಂದ ಓಡಿಸುವ ಅಗತ್ಯವಿಲ್ಲ. ಸಂಸ್ಕೃತಿಯ ಬಗ್ಗೆ ಶ್ರದ್ಧೆ, ಹೆಮ್ಮೆ ಇರಬೇಕು. ದೇಶದಲ್ಲಿ ಹುಟ್ಟಿರುವ ಎಲ್ಲರೂ ಹಿಂದೂಗಳು ಎಂಬುದು ಸಂಘದ ನಿಲುವು. ಈ ಮಣ್ಣಿಗೆ ಗೌರವ, ಶ್ರದ್ಧೆ ಹೊಂದಬೇಕು ಎಂದು ಹೇಳಿದರು. ಹಿಂದೂ  ಕುಟುಂಬಗಳು ಮೌಲ್ಯವನ್ನು ಕಳೆದುಕೊಳ್ಳಬಾರದು. ಪರಿಸರ ಸಂರಕ್ಷಣೆ, ಸಾಮರಸ್ಯ, ನಾಗರಿಕ ಶಿಷ್ಟಾಚಾರ, ಸ್ವದೇಶೀ ಭಾವ ಜಾಗೃತವಿರಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘವು 100ರ ಸಂಭ್ರಮದಲ್ಲಿ ಸಮಾಜದ ಸುಧಾರಣೆಗೆ ಇನ್ನಷ್ಟು ವೇಗ ನೀಡಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯರಾದ ಕಾಳಪ್ಪ ವಹಿಸಿದ್ದರು. ವೇದಿಕೆಯಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಗೌರವಾಧ್ಯಕ್ಷ ಎಸ್.ಜಿ. ಮೇದಪ್ಪ, ಅಧ್ಯಕ್ಷ ಲಿಂಗರಾಜು ಇದ್ದರು. ಇದಕ್ಕೂ ಮುನ್ನ ತಲ್ತರೆ ಜಂಕ್ಷನ್‌ನಿAದ ಭಾರತ ಮಾತೆಯ ಭಾವಚಿತ್ರವನ್ನು ಅಳವಡಿಸಿದ್ದ ಅಲಂಕೃತ ವಾಹನದಲ್ಲಿ ಶೋಭಾಯಾತ್ರೆ ನಡೆಯಿತು. ಮಹಿಳೆಯರು ಪೂರ್ಣ ಕುಂಭದೊಂದಿಗೆ ಮೆರವಣಿಗೆಯಲ್ಲಿ ಸಾಗಿದರು. ಹಿಂದೂ ಸಮಾಜ ಬಾಂಧವರು ಕೇಸರಿ ಶಾಲು ಧರಿಸಿ ಭಾರತ್ ಮಾತಾಕೀ ಜೈ ಎಂಬ ಜಯಘೋಷದೊಂದಿಗೆ ಹೆಜ್ಜೆ ಹಾಕಿದರೆ, ಪುಟಾಣಿ ಮಕ್ಕಳು ಶಿವಾಜಿ, ಸುಭಾಷ್ ಚಂದ್ರಬೋಸ್, ಒನಕೆ ಓಬವ್ವ, ವಿವೇಕಾನಂದ, ಭಗತ್ ಸಿಂಗ್, ಕಿತ್ತೂರು ರಾಣಿ ಚನ್ನಮ್ಮ, ಶ್ರೀರಾಮ, ಕೃಷ್ಣ, ಆಂಜನೇಯನ ಛದ್ಮವೇಷ ಧರಿಸಿ ಸಂಭ್ರಮದಿಂದ ಸಾಗಿದರು.

Share. Facebook Twitter Pinterest LinkedIn Tumblr Email WhatsApp
Previous Article*ವಿವಿಧ ಕ್ಷೇತ್ರಗಳ ಸಾಧಕರಿಗೆ ಸಮ್ಮೇಳನದಲ್ಲಿ ಸನ್ಮಾನದ ಗೌರವ
Next Article *ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಕಂಡು ಬಿಜೆಪಿ ಭ್ರಮನಿರಸನಗೊಂಡಿದೆ : ಸೋಮವಾರಪೇಟೆ ಕಾಂಗ್ರೆಸ್ ಟೀಕೆ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.