Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಜನಸ್ನೇಹಿ ಶಾಸಕರ ಕುರಿತು ಅಪಸ್ವರ ಸರಿಯಲ್ಲ : ಎಂ.ಎ.ಉಸ್ಮಾನ್ ಅಸಮಾಧಾನ*
ಇತ್ತೀಚಿನ ಸುದ್ದಿಗಳು

*ಜನಸ್ನೇಹಿ ಶಾಸಕರ ಕುರಿತು ಅಪಸ್ವರ ಸರಿಯಲ್ಲ : ಎಂ.ಎ.ಉಸ್ಮಾನ್ ಅಸಮಾಧಾನ*

February 5, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.5 : ಮಡಿಕೇರಿ ಕ್ಷೇತ್ರದ ಜನಸ್ನೇಹಿ ಶಾಸಕ ಡಾ.ಮಂತರ್ ಗೌಡ ಅವರು ಇತ್ತೀಚೆಗೆ ಹಿಂದೂ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ವಿಚಾರವನ್ನು ಕೆಲವರು ದೊಡ್ಡದು ಮಾಡಿ ಕ್ಷುಲ್ಲಕ ರಾಜಕಾರಣ ಮಾಡುತ್ತಿರುವುದು ಸರಿಯಲ್ಲವೆಂದು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿವಿಧತೆಯಲ್ಲಿ ಏಕತೆ ಮತ್ತು ಸಮಾನತೆಯ ಆಶಯಕ್ಕೆ ಬದ್ಧರಾಗಿ ಕಾರ್ಯನಿರ್ವಹಿಸುತ್ತಿರುವ ಶಾಸಕ ಡಾ.ಮಂತರ್ ಗೌಡ ಅವರು ಸರ್ವಧರ್ಮೀಯರ ನೆಚ್ಚಿನ ಜನಪ್ರತಿನಿಧಿಯಾಗಿದ್ದಾರೆ. ಶಾಸಕರಾದವರು ಒಂದು ಧರ್ಮ ಅಥವಾ ಒಂದು ಸಮುದಾಯಕ್ಕೆ ಸೀಮಿತವಾಗಿರುವುದಿಲ್ಲ. ಅವರು ಪ್ರತಿಯೊಬ್ಬರನ್ನೂ ಪ್ರತಿನಿಧಿಸಬೇಕಾಗುತ್ತದೆ, ಆ ಕೆಲಸವನ್ನು ಮಡಿಕೇರಿ ಶಾಸಕರು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಓಲೈಕೆ ರಾಜಕಾರಣಕ್ಕಾಗಿ ತಮ್ಮತನವನ್ನು ಬಿಟ್ಟು ಮುಖವಾಡದ ರಾಜಕಾರಣವನ್ನು ಡಾ.ಮಂತರ್ ಗೌಡ ಅವರು ಎಂದಿಗೂ ಮಾಡಿಲ್ಲ. ಅಭಿವೃದ್ಧಿ ಕಾರ್ಯಗಳಲ್ಲಿ ಕೂಡ ತಾರತಮ್ಯ ಮಾಡದೆ ಪ್ರತಿಯೊಂದು ಜನಾಂಗಕ್ಕೂ ಮತ್ತು ಪ್ರತಿಯೊಂದು ಕ್ಷೇತ್ರಕ್ಕೂ ಸಮಾನ ಆದ್ಯತೆ ನೀಡುತ್ತಿದ್ದಾರೆ. ಮಡಿಕೇರಿ ಶಾಸಕರ ಸರಳತೆ ಮತ್ತು ಘನತೆಯ ಕುರಿತು ಮಕ್ಕಳಿಂದ ಹಿಡಿದು ವಯೋವೃದ್ಧರವರೆಗೆ ಅಪಾರ ಅಭಿಮಾನ ಹೊಂದಿದ್ದಾರೆ. ಇದನ್ನು ಸಹಿಸದ ಕೆಲವು ಪಟ್ಟಭದ್ರಹಿತಾಸಕ್ತಿಗಳು ಮೊಸರನ್ನದಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಇಬ್ಬರು ಕಾಂಗ್ರೆಸ್ ಶಾಸಕರ ಗೆಲುವಿನ ನಂತರ ಕೊಡಗು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಎಲ್ಲರೂ ನೆಮ್ಮದಿಯಿಂದ ಬದುಕುತ್ತಿದ್ದಾರೆ, ಎಲ್ಲಾ ಧರ್ಮದವರೂ ಒಗ್ಗೂಡಿ ಮುನ್ನಡೆಯುತ್ತಿದ್ದಾರೆ. ಇದಕ್ಕೆ ಶಾಸಕರುಗಳ ಇಚ್ಛಾಶಕ್ತಿ ಮತ್ತು ಸರ್ವಧರ್ಮೀಯರೊಂದಿಗೆ ಸಮಾನ ಮನೋಭಾವದಲ್ಲಿ ಬೆರೆಯುತ್ತಿರುವುದೇ ಕಾರಣವಾಗಿದೆ. ಕುಶಾಲನಗರದ ಮುಖ್ಯ ಬೀದಿಯಲ್ಲಿ ಹಿಂದೂ ಶೋಭಾಯಾತ್ರೆ ಸಾಗುತ್ತಿದ್ದಾಗ ಅದೇ ಮಾರ್ಗದಲ್ಲಿ ಪ್ರಯಾಣ ಬೆಳೆಸುತ್ತಿದ್ದ ಶಾಸಕ ಡಾ.ಮಂತರ್ ಗೌಡ ಅವರು ಕಾರಿನಿಂದಿಳಿದು ಶುಭ ಹಾರೈಸಿ, ಹಿರಿಯರಿಂದ ಆಶೀರ್ವಾದ ಪಡೆದಿರುವುದು ಕೊಡಗಿನ ಸಂಸ್ಕೃತಿಯ ಒಂದು ಭಾಗವಾಗಿದೆ.
ಶೋಭಾಯಾತ್ರೆಯಲ್ಲಿ ಹೆಜ್ಜೆ ಹಾಕಿದ ತಕ್ಷಣ ಶಾಸಕರು ದೊಡ್ಡ ತಪ್ಪು ಮಾಡಿದ್ದಾರೆ ಎಂದು ಪ್ರತಿಬಿಂಬಿಸುವ ಮೂಲಕ ಸಣ್ಣತನವನ್ನು ಕೆಲವರು ಪ್ರದರ್ಶಿಸುತ್ತಿರುವುದು ಸರಿಯಲ್ಲ ಮತ್ತು ರಾಜಕೀಯ ಲಾಭ, ನಷ್ಟದ ಕುರಿತು ಲೆಕ್ಕಾಚಾರವೂ ಅರ್ಥಹೀನವೆಂದು ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಪಾರ ಅಭಿವೃದ್ಧಿ ಕಾರ್ಯ ಮತ್ತು ಜನಸ್ನೇಹಿ ಗುಣದ ಮೂಲಕ ಸಮಾಜದಲ್ಲಿ ಸಾಮರಸ್ಯವನ್ನು ಮೂಡಿಸುತ್ತಾ ಮುನ್ನಡೆಯುತ್ತಿರುವ ಡಾ.ಮಂತರ್ ಗೌಡ ಅವರ ಕೈಬಲ ಪಡಿಸುವ ಕಾರ್ಯವನ್ನು ಪ್ರತಿಯೊಬ್ಬರು ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಅರಪಟ್ಟು-ಪಾಲಂಗಾಲ : ಫೆ.7 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
Next Article *ಫೆ.7 ರಂದು ಮಾಯಮುಡಿ ಗಾಂಧಿ ಗ್ರಾಮ ಪುರಸ್ಕಾರ ಸಭಾಂಗಣ ಉದ್ಘಾಟನೆ*

Website design development company services in Mangalore

Forex Trading Teacher in India

Related Posts

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

ಮಡಿಕೇರಿ NEWS DESK ಫೆ.13 : ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಅಧ್ಯಕ್ಷರಾಗಿ ವಿಂಗ್ ಕಮಾಂಡರ್ (ನಿವೃತ್ತ)…

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.