Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

ಫೆಬ್ರವರಿ 10, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ,  NEWS DESK ಫೆ.10:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರ ನೇತೃತ್ವದಲ್ಲಿ ಅನುಭವ ಮಂಟಪದಲ್ಲಿ ಹಲವು ಕಾಯಕ ಶರಣರು ವರ್ಣ ವ್ಯವಸ್ಥೆ, ಜಾತಿ ಪದ್ಧತಿ, ಮೌಢ್ಯ ವಿರುದ್ಧ, ಅಜ್ಞಾನ ಹಾಗೂ ಕಂದಾಚಾರಗಳನ್ನು ಹೋಗಲಾಡಿಸಿ ಸರ್ವರಿಗೂ ಸಮಾನತೆ ತರಲು ಶ್ರಮಿಸಿದ್ದಾರೆ ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಶಿಕ್ಷಕಿ ಹೇಮಲತಾ ಬಿ.ಬಿ. ಅವರು ಹೇಳಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ‘ಕಾಯಕ ಶರಣರ ಜಯಂತಿ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಡೊಹಾರ್ ಕಕ್ಕಯ್ಯ, ಮಾದರ ಚೆನ್ನಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರು ವೃತ್ತಿಯ ಮೂಲಕ ಸಮಾಜದಲ್ಲಿ ಕಾಯಕವೇ ಕೈಲಾಸ ಎಂಬುದನ್ನು ಸಾರಿದ್ದಾರೆ ಎಂದು ಹೇಳಿದರು.
ಡೋಹಾರ ಕಕ್ಕಯ್ಯ ಅವರು ಹನ್ನೆರಡನೇ ಶತಮಾನದಲ್ಲಿ ಕಾಯಕ ಯೋಗಿಯಾಗಿ ವೃತ್ತಿ ಧರ್ಮವನ್ನು ಗೌರವಿಸಬೇಕು ಎಂಬುದನ್ನು ಸಾರಿದ್ದಾರೆ. ಡೋರ ಎಂದರೆ ಚರ್ಮಕಾರ ಎಂದರ್ಥ, ಚರ್ಮ ಹದ ಮಾಡುವ ಕಾಯಕ ಮಾಡುತ್ತಿದ್ದರು ಎಂದು ಹೇಳಿದರು.

ಕಲ್ಯಾಣ ಕ್ರಾಂತಿಯಲ್ಲಿ ಭಾಗವಹಿಸಿದ್ದರು. ಡೊಹರ ಕಕ್ಕಯ್ಯನವರನ್ನು ಬಸವಣ್ಣವರು ತಮ್ಮ ಬೊಪ್ಪ ಎಂದರೆ ಹಿರಿಯ ತಂದೆ ಎಂದು ಗೌರವಿಸಿದ್ದರು ಎಂದು ತಿಳಿಸಿದರು. ನೆನೆಯಲಿಯೆ, ನಿರ್ಧರಿಸಲರಿಯೆ, ಮನವಿಲ್ಲವಾಗಿ, ಭಾವಿಸಲರಿಯ, ಬೆರೆಸಲರಿಯ ಭಾವ ನಿರ್ಭಾವವಾಯಿತ್ತಾಗಿ ಧ್ಯಾನ-ಮೌನವರಿಯೆ… ಅಭಿನವ ಮಲ್ಲಿಕಾರ್ಜುನನಲ್ಲಿ ಪರಮ ಸುಖಿಯಾಗಿರ್ದೆ… ಅಭಿನವ ಮಲ್ಲಿಕಾರ್ಜುನ ಎಂಬ ಅಂಕಿತದ ಮೂಲಕ ಶರಣ ಮಾರ್ಗದ ದಿವ್ಯ ಸಾಧನೆಯ ಪರಿಪಕ್ವದ ಆಧ್ಯಾತ್ಮಿಕ ಔನತ್ಯವನ್ನು ಸಾಕ್ಷೀಕರಿಸಿದ್ದಾರೆ ಎಂದು ಹೇಮಲತಾ ಅವರು ವಿವರಿಸಿದರು.
ಡೋಹರಾ ಕಕ್ಕಯ್ಯ ಅವರು ಬೆಳಗಾವಿ ಜಿಲ್ಲೆಯ ಖಾನಪುರ ತಾಲ್ಲೂಕಿನ ಕಕ್ಕೇರಿಯಲ್ಲಿ ಐಕ್ಯರಾಗಿದ್ದು, ಇಂದಿಗೂ ಕುರುಹುಗಳು ಇದೆ ಎಂದರು.
ಮಾದರ ಚೆನ್ನಯ್ಯ ಅವರು ಅಪ್ಪನು ನಮ್ಮ ಮಾದರ ಚೆನ್ನಯ್ಯ ಎಂದು ಬಸವಣ್ಣನವರಿಂದ ಗೌರವಿಸಲ್ಪಟ್ಟ ಮಾದರ ಚೆನ್ನಯ್ಯ ಅವರು ಜಾತಿ ರಹಿತ ಸಮಾಜ, ಆತ್ಮ ಶುದ್ಧಿ ಭಕ್ತಿಯ ಮಹತ್ವವನ್ನು ಸಾರುತ್ತಾರೆ ಎಂದು ತಿಳಿಸಿದರು.  ಹರಿಹರ ಕವಿ ದೇವನೊಲಿದನ ಕುಲವೇ ಸದ್ಗುಣಂ, ಸೂರ್ಯ ಕುಲದ ರಾಜ ಕರಿಕಾರ ಚೋಳ, ಮಾದರ ಕುಲದ ಚೆನ್ನಯ್ಯನ ಪಾದ ಹಿಡಿದು ಪಾದದ ಧೂಳನ್ನು ಕಣ್ಣಿಗೊತ್ತಿಕೊಳ್ಳುತ್ತೇನೆ ಎಂದಿದ್ದಾರೆ ಎಂದು ಹೇಮಲತಾ ಅವರು ನುಡಿದರು.
ಮಾದರ ಧೂಳಯ್ಯ ಅವರು ಬಸವ ಕಲ್ಯಾಣದ ಕಾಯಕ ಯೋಗಿಯಾಗಿದ್ದರು. ಕಾಯಕ ನಿಷ್ಠೆ ಮತ್ತು ಆತ್ಮಜ್ಞಾನದಿಂದ ಮಹಾಜ್ಞಾನಿಯಾಗಿ ಬೆಳೆದವರು. ಬೀದರ್ ಜಿಲ್ಲೆಯ ಬಸವಕಲ್ಯಾಣ ಇವರ ಜನ್ಮ ಸ್ಥಳ ಮತ್ತು ಕರ್ಮ ಭೂಮಿಯಾಗಿತ್ತು. ಧೂಳೇಶ್ವರ ನಿಮ್ಮ ಶರಣರ ಪಾದಕ್ಕೆ ನಮೋ ನಮೋ ಎಂದು ಜ್ಞಾನ ಮೋಕ್ಷ, ಭಕ್ತಿಯ ಶ್ರೇಷ್ಠತೆ ಎಂದು ಸಾರಿದ್ದಾರೆ ಎಂದರು.

ಮತ್ತೊಬ್ಬ ಶರಣರು ಉರಿಲಿಂಗ ಪೆದ್ದಿ ಅವರು ವಚನಕಾರ ಮತ್ತು ಕ್ರಾಂತಿಕಾರಿ ಶರಣರಾಗಿದ್ದರು. ಮಂಗಳ ಲಿಂಗ ಅಂಗದ ಮೇಲೆ ಇದ್ದು, ಅನ್ಯ ಲಿಂಗಿಗಳ ನೆರವನ ನಿಮ್ಮ ಭಕ್ತನು ಉರಿಲಿಂಗ ಪೆದ್ದಿ ವಿಶ್ವೇಶ್ವರ ಎಂದು ತಿಳಿಸಿದ್ದಾರೆ ಎಂದು ಅವರು ನುಡಿದರು.
ಮತ್ತೊಬ್ಬ ಶರಣರಾದ ಸಮಗಾರ ಹರಳಯ್ಯ ಅವರು ಹನ್ನೇರಡನೇ ಶತಮಾನದ ಬಸವಣ್ಣನವರ ಸಮಕಾಲೀನ ವಚನಕಾರರಾಗಿದ್ದು, ಪಾದರಕ್ಷೆ ಚಮ್ಮವಗೆ ತಯಾರಿಸುವ ಕಾಯಕದ ಮೂಲಕ ಗುರುಲಿಂಗ ಜಂಗಮ ಸೇವೆ ಮಾಡಿದ ಇವರು ಸಾಮಾಜಿಕ ಸಮಾನತೆಗೆ ಹೋರಾಡಿದ್ದ ಹರಳಯ್ಯ ಅವರು ಅನುಭವ ಮಂಟಪದಲ್ಲಿ ಒಬ್ಬರಾಗಿದ್ದರು ಎಂದು ತಿಳಿಸಿದರು.
ಕಲ್ಯಾಣ ಕ್ರಾಂತಿಗೆ ಕಾರಣರಾದ ಹರಳಯ್ಯನವರ ಮಗ ಶೀಲವಂತ ಮತ್ತು ಉನ್ನತ ಸಮಾಜದ ಮಧುವರಸ ಮಗಳ ಮದುವೆಯು ಬಸವಣ್ಣನವರ ಸಮಾನತೆಯ ತತ್ವದಂತೆ ನಡೆಯಿತು. ಇದು ಕಲ್ಯಾಣದಲ್ಲಿ ನಡೆದ ಜಾತಿ, ವರ್ಣ ರಹಿತ ಸಮಾಜದ ಪ್ರಯತ್ನವಾಗಿತ್ತು ಎಂದು ಹೇಮಲತಾ ಅವರು ವಿವರಿಸಿದರು.

ಶರಣರ ಮಗಳನ್ನು ಶರಣರ ಮಗನಿಗೆ ಕೊಡುವುದು ತಪ್ಪಿಲ್ಲ ಎಂದು ಬಸವಣ್ಣನವರು ನುಡಿದಿದ್ದರು. ಅಂತರ ಜಾತಿ ವಿವಾಹವನ್ನು ಬಸವಣ್ಣ ಅವರು ಪ್ರೋತ್ಸಾಹಿಸಿದ್ದರು, ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ಮನವ ಸಂತೈಸಿಕೊಳ್ಳಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನೆರೆಮನೆಯ ದುಃಖಕ್ಕೆ ಅಳುವವರಾ ಮೆಚ್ಚ ಕೂಡಲಸಂಗಮ ದೇವಾ… ಪರಿವರ್ತನೆ, ಬದಲಾವಣೆ ನಮ್ಮಿಂದ ಪ್ರಾರಂಭ ಆಗಬೇಕು ಎಂದು ವಚನಕಾರರು ಸಾರಿದ್ದಾರೆ ಎಂದರು.
ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಡಾ.ಅಬ್ದುಲ್ ನಜೀಜ್ ಅವರು ಮಾತನಾಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರಾದ ಕುಮಾರ, ಮಣಜೂರು ಮಂಜುನಾಥ್, ವನಿತಾ, ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.