Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
  • *ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*
  • *ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*
  • *ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*
  • *ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 20263 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಫೆ.11 : 2026-27ರ ಒಟ್ಟು ಬಜೆಟ್ ನಲ್ಲಿ ದಲಿತರ ಜನಸಂಖ್ಯೆ ಅನುಗುಣವಾಗಿ ಶೇ.24.1ರಷ್ಟು ಅನುದಾನ ಮೀಸಲಿರಿಸಬೇಕು, ಮೀಸಲಿರಿಸಿದ ಅನುದಾನ ದುರ್ಬಳಕೆ ತಡೆಯಲು  SCSP/TSP  ಕಾಯ್ದೆ 2013ರ ಸೆಕ್ಷನ್ 7 (ಡಿ) ರದ್ದುಪಡಿಸಿದಂತೆ ಸೆಕ್ಷನ್ 7 (ಸಿ) ರದ್ದುಪಡಿಸಿ ಆದೇಶ ಹೊರಡಿಸಬೇಕು ಹಾಗೂ  SCSP/TSP ಯ ಅನುದಾನ ನಿಯಮ ಬಾಹಿರವಾಗಿ ಗ್ಯಾರಂಟಿ ಯೋಜನೆಗಳಿಗೆ ವರ್ಗಾಯಿಸಿದ 25 ಸಾವಿರ ಕೋಟಿ ಹಣವನ್ನು ಹಿಂತಿರುಗಿಸಬೇಕು ಎಂದು ಒತ್ತಾಯಿಸಿ ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ರಾಜ್ಯ ಸಂಚಾಲಕÀ ಎಂ.ಗುರುಮೂರ್ತಿ ಶಿವಮೊಗ್ಗ ಅವರ ನೇತೃತ್ವದಲ್ಲಿ, ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರ ಮುಂದಾಳತ್ವದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು. ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಪ್ರತಿಭಟನಾಕಾರರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನ್ಯಾಯವಾಗದಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಶೋಷಿತ ಸಮುದಾಯಗಳನ್ನು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಸಬಲೀಕರಣಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸುವ ಒಟ್ಟು ಬಜೆಟ್ ಗಾತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಯ ಅನುಗುಣವಾಗಿ ಅನುದಾನ ಮೀಸಲಿಡಬೇಕು. ಮೀಸಲಿರಿಸಿದ ಅನುದಾನವನ್ನು ರದ್ದಾಗದಂತೆ ಮತ್ತು ಇತರೆ ಯೋಜನೆಗಳಿಗೆ ವರ್ಗಾಯಿಸದಂತೆ ಕ್ರಮ ಕೈಗೊಳ್ಳಬೇಕು. ಸರಕಾರದ ವಿವಿಧ ವಸತಿ ಯೋಜನೆಗಳಡಿ ವಸತಿ ಸೌಲಭ್ಯ ಪಡೆಯಲು ನಿವೇಶನ ಹೊಂದಿರಬೇಕು. ಸ್ವಂತ ನಿವೇಶನ ಇಲ್ಲದ ಬಡವರಿಗೆ ನಿವೇಶನ ಖರೀದಿಸಲು ರೂ.5 ಲಕ್ಷ ಆರ್ಥಿಕ ನೆರವು ನೀಡಬೇಕು ಹಾಗೂ ವಿವಿಧ ವಸತಿ ಯೋಜನೆಗಳಿಗೆ ನೀಡುವ ಮನೆಗಳ ನಿರ್ಮಾಣ ವೆಚ್ಚ ಕನಿಷ್ಟ ರೂ. 5 ಲಕ್ಷ ವರೆಗೆ ಹೆಚ್ಚಿಸಬೇಕು. ನಿವೇಶನ ರಹಿತರಿಗೆ ನಿವೇಶನ ಒದಗಿಸಲು ವಸತಿಗೆ ಯೋಗ್ಯವಾದ ಸರ್ಕಾರಿ ಭೂಮಿ ಮಂಜೂರು ಮಾಡಬೇಕು. ಸರ್ಕಾರಿ ಭೂಮಿ ಲಭ್ಯವಿರದಿದ್ದರೆ ಖಾಸಗಿ ಭೂಮಿ ಖರೀದಿಸಿ ನಿವೇಶನ ಹಂಚಿಕೆ ಮಾಡಬೇಕು. ಬಗರ್ ಹುಕುಂ ಸಾಗುವಳಿದಾರರು ಸಕ್ರಮಕ್ಕಾಗಿ ಸಲ್ಲಿಸಿರುವ ನಮೂನೆ- 57ರ ಅರ್ಜಿಗಳನ್ನು ಸೂಕ್ತಡಿ ಕಾರಣವನ್ನು ನೀಡದೆ ಏಕಪಕ್ಷೀಯವಾಗಿ ತಿರಸ್ಕಾರ ಮಾಡುತ್ತಿರುವುದರಿಂದ ಬೇರೆ ಭೂಮಿ ಇಲ್ಲದೆ, ಇದೇ ಭೂಮಿಯಲ್ಲಿ ಸಾಗುವಳಿ ಮಾಡಿ ಉಪ ಜೀವನ ಸಾಗಿಸುತ್ತಿರುವ ಬಡವರನ್ನು ಭೂ ಹಕ್ಕಿನಿಂದ ಒಕ್ಕಲೆಬ್ಬಿಸದೆ, ಸಕ್ರಮಗೊಳಿಸಿ ಹಕ್ಕು ಪತ್ರ ನೀಡಬೇಕು. ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕರು ಪ್ರೊ.ಬಿ.ಕೃಷ್ಣಪ್ಪ ಅವರಿಗೆ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಬೇಕು ಹಾಗೂ ಅವರ ಜನ್ಮದಿನ ಜೂ.9 ನ್ನು ರಜಾರಹಿತ ದಿನ ವನ್ನಾಗಿ ಆಚರಣೆ ಮಾಡಬೇಕು. ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗಗಳ ಭೂ ಪರಭಾರೆ ನಿಷೇಧ ಕಾಯ್ದೆ ( (PTCL) ) ಸೆಕ್ಷನ್ 3(1) (B)    ಅಲ್ಲಿರುವ ಉಡಿಚಿಟಿಣeಜ ಐಚಿಟಿಜ ಎಂಬ ಪದವನ್ನು ಬದಲಾಯಿಸಿ  Certain Land  ಎಂದು ತಿದ್ದುಪಡಿ ಮಾಡಬೇಕು.
ಅರಣ್ಯ ಮತ್ತು ಅರಣ್ಯಾಧಾರಿತ ಆದಿವಾಸಿ ಕುಟುಂಬಗಳ ವಸತಿ ರಹಿತರಿಗಾಗಿ ಮಾನ್ಯ ಮುಖ್ಯಮಂತ್ರಿ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸಬೇಕು. ಚುನಾಯಿತ ಪ್ರತಿನಿಧಿಗಳಿಗೆ ಹೆಚ್ಚಿಸಿದಂತೆ ದೇವದಾಸಿ, ವಿಧವಾ ಮಹಿಳೆಯರು, ವೃದ್ಧರು, ಹಾಗೂ ವಿಕಲ ಚೇತನರಿಗೆ ನೀಡುತ್ತಿರುವ ಮಾಸಿಕ ವೇತನ ರೂ.5000 ವರೆಗೆ ಹೆಚ್ಚಿಸಬೇಕು.
ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ, ಭೂ ಒಡೆತನ, ನೇರಸಾಲ, ಉದ್ಯಮ ಶೀಲತಾ, ಸ್ವಾವಲಂಬಿ ಸಾರಥಿ ಯೋಜನೆ ಸಾಲ ಸೌಲಭ್ಯ ಯೋಜನೆಗಳ ಘಟಕ ವೆಚ್ಚ ದ್ವಿಗುಣವಾಗಿಸಿ, ಗುರಿ ಹೆಚ್ಚಳ ಮಾಡಬೇಕು. ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ (ಲಿಡ್‌ಕರ್) ನಿಗಮಕ್ಕೆ ರೂ.500 ಕೋಟಿ ಅನುದಾನ ಬಿಡುಗಡೆ ಮಾಡಬೇಕು. ಪ.ಜಾತಿಯ ಚರ್ಮ ಕುಶಲ ಕರ್ಮಿಗಳ ಉತ್ಪನ್ನಗಳ ಮಾರುಕಟ್ಟೆಯ ಪ್ರಗತಿಗಾಗಿ ಆರ್ಥಿಕ. ಇಲಾಖೆಯಿಂದ ಟೆಂಡರ್ ವಿನಾಯಿತಿಗಾಗಿ ರೂ.100 ಕೋಟಿಗೆ ಮೀಸಲಿರಿಸಿ ಆದೇಶ ಹೊರಡಿಸಬೇಕು ಹಾಗೂ ನಿಗಮದ ಎಲ್ಲಾ ಟೆಂಡರ್ ಗಳನ್ನು ಪ.ಜಾತಿಯ ಚರ್ಮ ಕುಶಲ ಕರ್ಮಿಗಳ ಘಟಕಕ್ಕೆ ವಿನಾಯಿತಿಯೊಂದಿಗೆ ನೀಡಬೇಕು. ಸರ್ಕಾರಿ ಉದ್ಯೋಗ ಅಥವಾ ಸ್ವಂತ ಭೂಮಿ ಹೊಂದಿರದೆ ತೀವ್ರ ಆರ್ಥಿಕ ಸಮಸ್ಯೆ ಎದುರಿಸುತ್ತಿರುವ ಬಡ ಕುಟುಂಬಗಳಿಗೆ ಮಾಸಿಕ ರೂ.5000 ಆರ್ಥಿಕ ನೆರವು ನೀಡಬೇಕು.
ಸಮಾಜ ಕಲ್ಯಾಣ ಇಲಾಖೆ ಅಧೀನ ಬರುವ ವಸತಿ ಶಾಲೆ ಮತ್ತು ವಸತಿ ನಿಲಯಗಳಲ್ಲಿ ಕಳೆದ 5 ವರ್ಷಗಳ ಮೇಲ್ಪಟ್ಟು ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ/ಹೊರಗುತ್ತಿಗೆ ನೌಕರರನ್ನು ಕಾಯಂಗೊಳಿಸಬೇಕು.
ಬೆಲೆ ಏರಿಕೆಗೆ ತಕ್ಕಂತೆ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಮಾಸಿಕ ಭೋಜನ ವೆಚ್ಚ ರೂ.3000 ವರೆಗೆ ಹೆಚ್ಚಳ ಮಾಡಬೇಕು. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳನ್ನು ವಸತಿ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಬೇಕು. ರಾಯಚೂರು ಜಿಲ್ಲೆಯ ದೇವದುರ್ಗ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಜಾಗೀರ್ ಜಾಡಲದಿನ್ನಿ ಗ್ರಾಮದ ಗರ್ಭಿಣಿ ಮಹಿಳೆ ರೇಖಾ ಗಂಡ ರಾಜು (26ವರ್ಷ) ವೈದ್ಯರ ನಿರ್ಲಕ್ಷ ದಿಂದ ಮೃತಳಾಗಿದ್ದು, ಅದಕ್ಕೆ ಕಾರಣರಾದ ಅಂದಿನ ಮುಖ್ಯ ವೈಧ್ಯಾಧಿಕಾರಿ ಡಾ. ಶಿವಾನಂದ, ಡಾ.ಗಂಗಾಧರ, ಸ್ಟಾಫ್ ನರ್ಸಗಳಾದ ಶ್ರೀಮತಿ ಲಕ್ಷ್ಮೀ ಮತ್ತು ಜ್ಯೋತಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಸೇವೆಯಿಂದ ವಜಾ ಮಾಡಬೇಕು. ಹಿಂದಿನ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020″ಅನ್ನು ತಕ್ಷಣವೇ ರದ್ದುಪಡಿಸಬೇಕು ಹಾಗೂ ಭಾರತದಿಂದ ವಿದೇಶಗಳಿಗೆ ಮಾಡುತ್ತಿರುವ ದನದ ಮಾಂಸ ರಫ್ತು ನಿಲ್ಲಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ. ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಅವರು ಮಾತನಾಡಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಪ್ರತಿಭಟನೆ ನಡೆಸಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು. ಮನವಿ ಸಲ್ಲಿಸುವ ಸಂದರ್ಭ ಜಿಲ್ಲಾ ಸಂಘಟನಾ ಸಂಚಾಲಕರುಗಳಾದ ಬೋಜ, ಗೌರಮ್ಮ, ಗಣೇಶ, ಚಿಪ್ಪ, ಕಾಳ, ನಿತಿನ್ ಮತ್ತಿತರರು ಹಾಜರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
Next Article *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

Recommended: Website design development company services in Mangalore Forex Trading Teacher in India

Related Posts

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

ಸಿಯಾಟಲ್ (ಅಮೆರಿಕಾ): ಕಳೆದ ಎರಡು ವರ್ಷಗಳಿಂದ ಇಡೀ ಜಗತ್ತಿನ ಗಮನ ಸೆಳೆದಿದ್ದ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಸಾವಿನ…

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026

*ಕುಶಾಲನಗರದಲ್ಲಿ ಒಣ ಕಸ ಸಂಗ್ರಹ ಘಟಕ ಉದ್ಘಾಟನೆ*

February 12, 2026

*ಭ್ರಷ್ಟಾಚಾರದ ಪ್ರಮಾಣ ಹೆಚ್ಚಾಗಿದೆ : ಗುತ್ತಿಗೆದಾರರ ಸಂಘ ಗಂಭೀರ ಆರೋಪ*

February 12, 2026

*ಕೇಂದ್ರ ಸರಕಾರದ ವಿರುದ್ಧ ಮಡಿಕೇರಿಯಲ್ಲಿ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ*

February 12, 2026

*ಮಾಂದಲ್ ಪಟ್ಟಿ; ಸಾರ್ವಜನಿಕರು ಮತ್ತು ಪ್ರವಾಸಿಗರ ಗಮನಕ್ಕೆ*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.