ಮಡಿಕೇರಿ, NEWS DESK ಫೆ.12 : ಶಿವರಾತ್ರಿ ಪ್ರಯುಕ್ತ ಶ್ರೀ ರಾಮಾಂಜನೇಯ ಭಜನಾ ಮಂಡಳಿ ವತಿಯಿಂದ ಫೆ.15ರಂದು ವಿವಿಧ ಭಜನಾ ತಂಡಗಳಿಂದ ನಗರದಲ್ಲಿ ಸಂಕೀರ್ತನೆ ಏರ್ಪಡಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ಕೆ.ಕೆ.ಮಹೇಶ್ ಕುಮಾರ್ ತಿಳಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರ ಮತ್ತು ಗ್ರಾಮಾಂತದ ೨೫ ಭಜನಾ ತಂಡಗಳು ಪಾಲ್ಗೊಳ್ಳಲಿವೆ. ನಗರ ಸಂಕೀರ್ತನೆ ಸಂಜೆ 6 ಗಂಟೆಗೆ ಕೋದಂಡರಾಮ ದೇವಸ್ಥಾನದಿಂದ ಆರಂಭಗೊಳ್ಳಲಿದೆ. ಕರ್ಣಂಗೇರಿ ಕ್ಷೇತ್ರದ ಶ್ರೀ ರಾಜರಾಜೇಶ್ವರಿ ದೇವಾಲಯದ ಧರ್ಮದರ್ಶಿ ಗೋವಿಂದಸ್ವಾಮಿ ಹಾಗೂ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ ಅವರು ಉದ್ಘಾಟಿಸಲಿದ್ದಾರೆ. ನಂತರ ಮುತ್ತಪ್ಪ ದೇವಸ್ಥಾನ, ಬನ್ನಿಮಂಟಪ, ಚೌಕಿ, ನಗರದ ಪೊಲೀಸ್ ಠಾಣೆ, ಜಿ.ಟಿ ವೃತ್ತ, ಎಂ.ಎಂ.ವೃತ್ತವಾಗಿ ಆಂಜನೇಯ ದೇವಸ್ಥಾನದ ಮೂಲಕ ಓಂಕಾರೇಶ್ವರ ದೇವಾಲಯದಲ್ಲಿ ಮಂಗಳವಾಗಲಿದೆ ಎಂದರು.ಮೆರವಣಿಗೆಯಲ್ಲಿ ಭಜನಾ ಸಂಕೀರ್ತನೆಗಳು ಮೊಳಗಲಿದೆ. ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲೊಂಡು ಕಾರ್ಯಕ್ರವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.ಸುದ್ದಿಗೋಷ್ಠಿಯಲ್ಲಿ ರಾಮಾಂಜನೇಯ ಭಜನಾ ಮಂಡಳಿಯ ಪ್ರಮುಖರಾದ ದಿನೇಶ್ ಕುಮಾರ್, ಚಂದ್ರಶೇಖರ್, ವಿಶಾಲಾಕ್ಷಿ ಹಾಗೂ ರಂಜನ್ ಉಪಸ್ಥಿತರಿದ್ದರು.
*ಫೆ.15ರಂದು ವಿವಿಧ ಭಜನಾ ತಂಡಗಳಿಂದ ಮಡಿಕೇರಿಯಲ್ಲಿ ಸಂಕೀರ್ತನೆ*
1 Min ReadBy admin








