Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

ಫೆಬ್ರವರಿ 13, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಫೆ.13:-ತಾಲ್ಲೂಕಿನ ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಶುಕ್ರವಾರ ಚಾಲನೆ ನೀಡಿದರು.
ಕಾಟಕೇರಿ ಬಳಿಯ ಕಾಸ್ಪಾಡಿ ರಸ್ತೆ, ಭಗವತಿ ದೇವಸ್ಥಾನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ, ಅಪ್ಪೇಂದ್ರೀಯಪ್ಪ ದೇವಸ್ಥಾನ ರಸ್ತೆ ಉದ್ಘಾಟನೆ, ಕಾಟಕೇರಿ ಗೋಳಿಕಟ್ಟೆ ಮುಖ್ಯ ರಸ್ತೆ, ಮದೆನಾಡು ಬೈರೆಟ್ಟಿರ ಜಂಕ್ಷನ್ ರಸ್ತೆ ಮತ್ತು ಮದೆನಾಡು ಮಠದ ಮನೆ ರಸ್ತೆಯನ್ನು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಉದ್ಘಾಟಿಸಿದರು.
ಬಳಿಕ ಗೋಳಿಕಟ್ಟೆ ಸರ್ಕಾರಿ ಶಾಲೆ ಪರಿಶೀಲಿಸಿದರು, ಕೋಲ್ಪೆ ದೈವಸ್ಥಾನ ರಸ್ತೆ ಉದ್ಘಾಟಿಸಿದರು. ಹಾಗೆಯೇ ದೇಶ್‍ಕೋಡಿ, ಸಾಲಾಪು ರಸ್ತೆ ಭೂಮಿ ಪೂಜೆ ನೆರವೇರಿಸಿದರು. ನಂತರ ಕೋಲ್ಚಾರು ರಸ್ತೆ ಉದ್ಘಾಟನೆ, ಕೆಮ್ಮಾರನ ಶಿರಾಜ್ ರಸ್ತೆ ಉದ್ಘಾಟಿಸಿದರು. ಬಳಿಕ ನೆರಿಯನ ಐನ್‍ಮನೆಗೆ ಭೇಟಿ ನೀಡಿದರು, ಹಾಗೆಯೇ ಈಶ್ವರಪ್ಪ ಮಾದೂರಪ್ಪ ರಸ್ತೆ ಉದ್ಘಾಟಿಸಿದರು.
ಜೋಡುಪಾಲ ಕಿರಿಕಿಲ್ ರಸ್ತೆ ಭೂಮಿಪೂಜೆ, ಅಬ್ಬಿಕೊಲ್ಲಿ ರಸ್ತೆ ಉದ್ಘಾಟಿಸಿದರು. ಕುಡಿಯರ ಕಾಲೋನಿಯಲ್ಲಿ ಕುಂದುಕೊರತೆ ಸಭೆ ನಡೆಸಿದರು. ಕಾಟಕೇರಿ ಕೂರನ ಬಾಣೆ ರಸ್ತೆ ಉದ್ಘಾಟಿಸಿದರು. ತಾಳತ್ತಮನೆ, ಮಂಗಳೂರು-ಭಾಗಮಂಡಲ ಲಿಂಕ್ ರಸ್ತೆ ಉದ್ಘಾಟಿಸಿದರು. ತಾಳತ್ತಮನೆ ದುರ್ಗಾ ಭಗವತಿ ದೇವಸ್ಥಾನ ರಸ್ತೆ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 100 ಕೋಟಿ ರೂ. ವೆಚ್ಚದ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಉದ್ಘಾಟನೆ ನೆರವೇರಿಸಲಾಗಿದೆ ಎಂದು ತಿಳಿಸಿದರು.


ಕಳೆದ ಎರಡೂವರೆ ವರ್ಷದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ. ಸುಮಾರು 2,500 ಕಿಮೀ. ರಸ್ತೆ ಅಭಿವೃದ್ಧಿಗೆ ಮುಂದಾಗಲಾಗಿದೆ ಎಂದರು.
ಮುಖ್ಯಮಂತ್ರಿಯವರ ರಸ್ತೆ ಅಭಿವೃದ್ಧಿ ಯೋಜನೆಯಡಿ 50 ಕೋಟಿ ರೂ., ಜತೆಗೆ ಹೆಚ್ಚುವರಿಯಾಗಿ 30 ಕೋಟಿ ರೂ. ಹೀಗೆ ರಸ್ತೆ, ಸೇತುವೆ, ತಡೆಗೋಡೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಸರ್ಕಾರ ಅನುದಾನ ಒದಗಿಸಿದೆ ಎಂದು ಎ.ಎಸ್.ಪೊನ್ನಣ್ಣ ಅವರು ತಿಳಿಸಿದರು.
ಕೊಡಗು ಜಿಲ್ಲೆಯಲ್ಲಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಬೇಡಿಕೆ ಇದೆ. ಜೊತೆಗೆ ಕುಡಿಯುವ ನೀರು, ವಿದ್ಯುತ್ ಹಾಗೂ ಸಾರಿಗೆ ಸಂಪರ್ಕಕ್ಕೆ ಸಾಕಷ್ಟು ಬೇಡಿಕೆಗಳಿದ್ದು, ಹಂತ ಹಂತವಾಗಿ ಮೂಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕರು ವಿವರಿಸಿದರು.
ಜಲಜೀವನ್ ಮಿಷನ್ ಯೋಜನೆಯಡಿ ಕೊಡಗು ಜಿಲ್ಲೆಗೆ ಇನ್ನೂ ಅನುದಾನ ಬರಬೇಕಿದೆ. ಕುಡಿಯುವ ನೀರಿನ ಯೋಜನೆಗಾಗಿ 58 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು.


‘ಜಮ್ಮಾ ಬಾಣೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕರು ಪಟ್ಟೆದಾರರ ಭೂಮಿ ಸಂಬಂಧ ಸಮಸ್ಯೆ ಪರಿಹರಿಸಲು ಶ್ರಮಿಸಲಾಗಿದೆ. ಹಿಂದಿನ ಶಾಸಕದ್ವಯರು ಸಹ ಜಮ್ಮಬಾಣೆ ಭೂಮಿ ಸಮಸ್ಯೆ ಪರಿಹರಿಸಲು ತಮ್ಮದೇ ಆದ ಪ್ರಯತ್ನ ಮಾಡಿದ್ದಾರೆ ಎಂದು ನುಡಿದರು.’
ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಶಾಸಕರು ಕಳೆದ ಬಾರಿ ಬಜೆಟಿನಲ್ಲಿ ವಿರಾಜಪೇಟೆ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಮುಂದಾಗಲಾಗಿದೆ. ಗೋಣಿಕೊಪ್ಪ ಸರ್ಕಾರಿ ಆಸ್ಪತ್ರೆಯನ್ನು 50 ಹಾಸಿಗೆ ಆಸ್ಪತ್ರೆಯನ್ನಾಗಿ ಮತ್ತು ಹುದಿಕೇರಿ ಆಸ್ಪತ್ರೆಯನ್ನು ಸಮುದಾಯ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವಲ್ಲಿ ಪ್ರಕಟಿಸಲಾಗಿತ್ತು, ಅದರಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಸ್ಥಳ ಪರಿಶೀಲಿಸಲಿದ್ದು, ಕಾಮಗಾರಿಗೆ ಶೀಘ್ರ ಚಾಲನೆ ನೀಡಲಾಗುತ್ತದೆ ಎಂದು ಎ.ಎಸ್.ಪೊನ್ನಣ್ಣ ಅವರು ವಿವರಿಸಿದರು.
ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಬಲವರ್ಧನೆಗೆ ಕ್ರಮವಹಿಸಲಾಗಿದೆ. ಆನೆ ಮತ್ತು ಮಾನವ ಸಂಘರ್ಷ ತಡೆಯಲು 22 ಕಿ.ಮೀ. ಉದ್ದದ ಕಂದಕ/ ಬೇಲಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ ಎಂದರು.
ಕಳೆದ ಬಾರಿ ಬಜೆಟಿನಲ್ಲಿ ಕೊಡಗು ಜಿಲ್ಲೆಗೆ ಘೋಷಣೆ ಮಾಡಿದ್ದ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ. ಇವು ಪೂರ್ಣಗೊಳ್ಳಬೇಕು. ಮುಂದಿನ ಬಜೆಟಿನಲ್ಲಿ ಕೊಡಗು ಜಿಲ್ಲೆಗೆ ವಿಶೇಷ ಪ್ರಾಧ್ಯಾನತೆ ದೊರೆಯುವ ಸಾಧ್ಯತೆ ಇದೆ ಎಂದು ಎ.ಎಸ್.ಪೊನ್ನಣ್ಣ ಅವರು ನುಡಿದರು.
ಕಾವೇರಿ ನದಿ ಪಾತ್ರದಲ್ಲಿನ ತಗ್ಗು ಪ್ರದೇಶದಲ್ಲಿ ತಡೆಗೋಡೆ ನಿರ್ಮಾಣ ಹಾಗೂ ಸ್ವಚ್ಚತೆಗೆ ಸುಮಾರು 50 ಕೋಟಿ ರೂ ವಿನಿಯೋಗಿಸಲಾಗುತ್ತಿದೆ. ಹಾಗೆಯೇ ಲಕ್ಷ್ಮಣ ತೀರ್ಥ ನದಿ ದಂಡೆಯಲ್ಲಿ ವಾಸಿಸುವ ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಪುನರ್ ವಸತಿ ಕಲ್ಪಿಸಲು 20 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ ಎಂದು ಶಾಸಕರು ಮಾಹಿತಿ ನೀಡಿದರು.
ಗ್ರಾ.ಪಂ ಅಧ್ಯಕ್ಷರಾದ ವಿಮಲಾಕ್ಷಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಪ್ರಮುಖರಾದ ಕೊಲ್ಯದ ಗಿರೀಶ್, ತಹಶೀಲ್ದಾರ್ ಶ್ರೀಧರ, ತಾ.ಪಂ.ಇಒ ಶೇಖರ್, ಗ್ರಾ.ಪಂ.ಸದಸ್ಯರಾದ ಆಗಸ್ಟಿನ್ ಜಯರಾಜ್, ಸೈಯದ್ ಅಲ್ವಿ, ಸೂರಜ್ ಹೊಸೂರು, ಇಸ್ಮಾಯಿಲ್, ಮಜ್ಜಿಗೆಮನೆ ದೀಪಕ್, ಸ್ಥಳೀಯ ಪ್ರಮುಖರು ಹಾಗೂ ಗ್ರಾ.ಪಂ.ಸದಸ್ಯರು, ಅಧಿಕಾರಿಗಳು ಇತರರು ಇದ್ದರು.
ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪಾಠ ಮಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ: ಮದೆನಾಡು ಬಳಿಯ ಗೋಳಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಶುಕ್ರವಾರ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಪ್ರಾಥಮಿಕ ಶಾಲಾ ಶಿಕ್ಷಕರಾದರು.


ಶಾಲೆಯಲ್ಲಿರುವ 6 ಮತ್ತು 7 ನೇ ತರಗತಿಯ ಮೂರು ವಿದ್ಯಾರ್ಥಿಗಳು ಓದುತ್ತಿದ್ದ ಸಮಾಜ ವಿಜ್ಞಾನ ಪಠ್ಯ ಪುಸ್ತಕವನ್ನು ತಿರುವು ಹಾಕಿದ ಶಾಸಕರು, ಭೂಸುಧಾರಣಾ ಕಾಯ್ದೆ ಜಾರಿಗೊಳ್ಳಲು ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಕಾರಣಕರ್ತರು ಯಾರೂ ಎಂದು ಪ್ರಶ್ನಿಸಿದರು.
ವಿದ್ಯಾರ್ಥಿಗಳು ಚೆನ್ನಾಗಿ ಓದಬೇಕು. ಸರ್ಕಾರ ಕಡಿಮೆ ಮಕ್ಕಳಿದ್ದರೂ ಸಹ ಶಾಲೆಯನ್ನು ಮುಚ್ಚದೆ ಮಧ್ಯಾಹ್ನ ಬಿಸಿಯೂಟ ಜೊತೆಗೆ ಸಮವಸ್ತ್ರ ಮತ್ತಿತರ ಸೌಲಭ್ಯಗಳನ್ನು ನೀಡುತ್ತಿದ್ದು, ಇವುಗಳನ್ನು ಬಳಸಿಕೊಂಡು ಓದಬೇಕು ಎಂದು ಸಲಹೆ ಮಾಡಿದರು.
ಅಲ್ಲಿದ್ದ ವಿದ್ಯಾರ್ಥಿಗಳ ಜೊತೆ ಬೆರೆತು ಸಂವಿಧಾನದ ಮಹತ್ವ ಮತ್ತು ಆಶಯಗಳು, ಮೂಲಭೂತ ಹಕ್ಕುಗಳು, ಕರ್ತವ್ಯಗಳ ಬಗ್ಗೆ ಪಾಠ ಮಾಡಿದರು. ವಿದ್ಯಾರ್ಥಿಗಳಾದ ಯಶಸ್ವಿ ಅವರು ಶಾಸಕರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿ ಮೆಚ್ಚುಗೆ ಪಡೆದರು. ಆದಿತ್ಯ, ಕಾವ್ಯ ಸಹ ಶಾಸಕರ ಪ್ರಶ್ನೆಗೆ ಉತ್ತರಿಸಿದರು.
ಬಳಿಕ 1, 2, 4 ನೇ ತರಗತಿಯ ಸುಮಾರು 6 ವಿದ್ಯಾರ್ಥಿಗಳಿಗೆ ಕಾಗುಣಿತ, ಒತ್ತಕ್ಷರಗಳು, ವ್ಯಂಜನಗಳು, ಸ್ವರಗಳು, ಅಲ್ಪಪ್ರಾಣ, ಮಹಾಪ್ರಾಣ ಬಗ್ಗೆ ವಿವರಿಸಿ ಗಮನ ಸೆಳೆದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಗೋಳಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಬೀಳುವ ಹಂತದಲ್ಲಿದ್ದು, ಇದನ್ನು ನೆಲಸಮ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರಿಂದ ಶಾಲಾ ಮೈದಾನ ಬಳಕೆಗೆ ಸಹಕಾರಿಯಾಗಲಿದೆ ಎಂದರು.
ಸುಮಾರು 70 ರ ದಶಕದಲ್ಲಿ ಸುಮಾರು 400 ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಓದುತ್ತಿರುವ ಬಗ್ಗೆ ಮಾಹಿತಿ ಇದೆ. ಸರ್ಕಾರ 1 ನೇ ತರಗತಿಯಿಂದಲೂ ಒಂದು ಭಾಷೆಯಾಗಿ ಇಂಗ್ಲಿಷ್ ಕಲಿಕೆಗೆ ಮುಂದಾಗಿದೆ. ಸರ್ಕಾರಿ ಶಾಲೆಗಳು ಉಳಿಯಬೇಕು. ಆಧುನಿಕತೆಗೆ ತಕ್ಕಂತೆ ಆಲೋಚನೆಗಳು ಸಹ ಬದಲಾಗಿದ್ದು, ಅದರಂತೆ ಸರ್ಕಾರಿ ಶಾಲೆಯನ್ನು ಬದಲಿಸಿಕೊಂಡು ಯಾರೂ ಸಹ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರ ಶಾಲೆಯನ್ನು ಮುಚ್ಚದೆ, ಮಕ್ಕಳಿಗೆ ಶಿಕ್ಷಣ ಕಲಿಸಲು ಪ್ರಯತ್ನಿಸಿದೆ ಎಂದು ಶಾಸಕರು ನುಡಿದರು.
ಈ ಸಂದರ್ಭದಲ್ಲಿ ಸ್ಥಳೀಯರಾದ ಕೊಲ್ಯದ ಗಿರೀಶ್ ಅವರು ಮಾತನಾಡಿ ನನ್ನ ತಂದೆಯವರು ಸಹ ಇದೇ ಶಾಲೆಯಲ್ಲಿ ಓದಿದ್ದರು. ಆ ಸಂದರ್ಭದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಅಧ್ಯಯನ ಮಾಡಿದ್ದಾರೆ ಎಂದರು.
ಶಾಲೆಯ ಶಿಕ್ಷಕಿ ಕೋಮಲ ಅವರು ಮಾತನಾಡಿ ಕೋವಿಡ್ ಸಂದರ್ಭದಲ್ಲಿ ಶಾಲೆಯನ್ನು ಮುಚ್ಚಲಾಗಿತ್ತು. ಕೋವಿಡ್ ನಂತರ ಸಂತ್ರಸ್ತ ಕುಟುಂಬದ ಮಕ್ಕಳು ಹಾಗೂ ಸುತ್ತಮುತ್ತಲಿನ ಕುಟುಂಬಗಳ ಮಕ್ಕಳು ಅಧ್ಯಯನಕ್ಕೆ ಶಾಲೆಯನ್ನು ಪುನರ್ ಆರಂಭಿಸಲಾಗಿದೆ. ಕಳೆದ ವರ್ಷ 12 ಮಕ್ಕಳಿದ್ದರು. ಈ ಬಾರಿ 6 ಕ್ಕಿಂತ ಹೆಚ್ಚು ಮಕ್ಕಳು ಓದುತ್ತಿದ್ದು, ಶಾಲೆಗೆ ಸುತ್ತುಗೋಡೆ ಆಗುವಂತಾಗಬೇಕು ಎಂದು ಕೋರಿದರು.
ಶಿಕ್ಷಕರಾದ ಬಾಲಕೃಷ್ಣ ಅವರು ಮಾತನಾಡಿ ಇಲ್ಲಿನ ವಿದ್ಯಾರ್ಥಿಗಳು ಭಾಗಮಂಡಲ ಮೊರಾರ್ಜಿ ವಸತಿ ಶಾಲೆ ಹಾಗೂ ಹತ್ತಿರದ ಶಾಲೆಗೆ ವಿದ್ಯಾರ್ಜನೆಗೆ ಹೋಗುತ್ತಿದ್ದಾರೆ. ಹಾಗಾಗಿ ಈ ಶಾಲೆಗೆ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದ್ದಾರೆ ಎಂದರು.
ಬಳಿಕ ಮದೆನಾಡಿನ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸ್ಥಳೀಯರ ಸಮಸ್ಯೆಗೆ ಸ್ಪಂದಿಸಿ, ಮಾತನಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.