Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*
  • *ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*
  • *ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*
  • *ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*
  • *ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*
  • *ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*
  • *ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*
  • *ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*
  • *ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*
  • *****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸುಂಟಿಕೊಪ್ಪದಲ್ಲಿ ಪೊಲೀಸ್ ವಸತಿಗೃಹ ಉದ್ಘಾಟಿಸಿದ ಗೃಹ ಸಚಿವ ಜಿ.ಪರಮೇಶ್ವರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

*ಸುಂಟಿಕೊಪ್ಪದಲ್ಲಿ ಪೊಲೀಸ್ ವಸತಿಗೃಹ ಉದ್ಘಾಟಿಸಿದ ಗೃಹ ಸಚಿವ ಜಿ.ಪರಮೇಶ್ವರ್*

ಫೆಬ್ರವರಿ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮ ನಿಯಮಿತದಿಂದ ಸುಂಟಿಕೊಪ್ಪದಲ್ಲಿ 3.64 ಕೋಟಿ ರೂ‌ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ವಸತಿ ಗೃಹವನ್ನು ಗೃಹ ಸಚಿವರಾದ ಜಿ.ಪರಮೇಶ್ವರ ಅವರು ಭಾನುವಾರ ಉದ್ಘಾಟಿಸಿದರು. ಸುಂಟಿಕೊಪ್ಪದಲ್ಲಿ ವಸತಿ ಗೃಹ ಉದ್ಘಾಟಿಸಿ ಮಾತನಾಡಿದ ಸಚಿವರು ಪೊಲೀಸರಿಗಾಗಿ ರಾಜ್ಯದಲ್ಲಿ ಸುಮಾರು 40 ಸಾವಿರ ವಸತಿ ಗೃಹ ನಿರ್ಮಿಸಲಾಗಿದ್ದು, ಇನ್ನೂ 60 ಸಾವಿರ ವಸತಿ ಗೃಹ ನಿರ್ಮಿಸಬೇಕಿದೆ ಎಂದು ತಿಳಿಸಿದರು.


ಪೊಲೀಸ್ ಇಲಾಖೆಯಲ್ಲಿ ಅತ್ಯಂತ ಕೆಳಸ್ತರದಲ್ಲಿ ಕೆಲಸ ನಿರ್ವಹಿಸುವ ಕಾನ್ಸ್ಟೇಬಲ್ ಗಳಿಗೆ ವೇತನ ಹೆಚ್ಚಿಸಲಾಗಿದೆ. ಸಣ್ಣ ಸಣ್ಣ ಮನೆಯಲ್ಲಿ ವಾಸ ಮಾಡುವುದನ್ನು ಮನಗಂಡು ಪೊಲೀಸರಿಗೆ ವಸತಿ ಸೌಕರ್ಯ ‌ಒದಗಿಸಲಾಗುತ್ತಿದೆ. ಅದರಂತೆ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಅಭಿವೃದ್ಧಿ ನಿಗಮದಿಂದ 2030 ರ ವರೆಗೂ ಹಂತ ಹಂತವಾಗಿ ವಸತಿ ಕಲ್ಪಿಸಲಾಗುತ್ತದೆ ಎಂದು‌ ಜಿ.ಪರಮೇಶ್ವರ ಅವರು ವಿವರಿಸಿದರು.
ಹಿಂದೆ 18 ಲಕ್ಷ ರೂ ವೆಚ್ಚದಲ್ಲಿ ಕಟ್ಟಡ ನಿರ್ಮಿಸಲಾಗುತ್ತಿತ್ತು, ಈಗ 33 ಲಕ್ಷ ರೂ ವೆಚ್ಚ ಆಗಲಿದೆ. ಪೊಲೀಸರು ನೆಮ್ಮದಿಯ ಜೀವನ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು‌ ನುಡಿದರು. ಶಾಸಕರಾದ ಡಾ.ಮಂತರ್ ಗೌಡ ಅವರ ಅನೇಕ ಬೇಡಿಕೆ ಈಡೇರಿಸಲಾಗುವುದು. ಪ್ರಥಮ ಆದ್ಯತೆಯಲ್ಲಿ ವಸತಿ ಗೃಹ ನಿರ್ಮಿಸಲಾಗುವುದು. ಪೊಲೀಸ್ ಠಾಣೆ ಆರಂಭಕ್ಕೆ ಕ್ರಮವಹಿಸಲಾಗುವುದು ಎಂದರು. ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕೆಲಸ ನಿರ್ವಹಿಸಬೇಕು ಎಂಬ ಉದ್ದೇಶದಿಂದ ಹಲವು ಕ್ರಮ ಕೈಗೊಳ್ಳಲಾಗಿದೆ. ಜನರ ಜತೆ ಸ್ನೇಹದಿಂದ ಇರಬೇಕು. ಹಾಗೆಯೇ ಅಪರಾಧ ಮಾಡುವವರಿಗೆ ಶಿಕ್ಷೆ ಆಗಬೇಕು ಎಂದರು.
ಇಡೀ ದೇಶದಲ್ಲಿಯೇ ರಕ್ಷಣೆ, ಸುರಕ್ಷತೆಯಲ್ಲಿ ರಾಜ್ಯ ಪೊಲೀಸ್ ಪ್ರಥಮ ಸ್ಥಾನದಲ್ಲಿದೆ. ಹಗಲು, ರಾತ್ರಿ, ಮಳೆ, ಬಿಸಿಲು, ನಿದ್ರೆ ಇಲ್ಲದೆ ಪೊಲೀಸರು ಕರ್ತವ್ಯ ನಿರ್ವಹಿಸುತ್ತಾರೆ. ಆ ನಿಟ್ಟಿನಲ್ಲಿ ಗೌರವಿಸಬೇಕು. ಅದನ್ನು ಬಿಟ್ಟು ಪೊಲೀಸರ ಆತ್ಮಸ್ಥೈರ್ಯ ಕುಗ್ಗಿಸುವ ಕೆಲಸ ಯಾರು ಮಾಡಬಾರದು ಎಂದರು.
ಪ್ರಸ್ತುತ ಸಿದ್ದರಾಮಯ್ಯ ನೇತೃತ್ವದ ಸರ್ಕಾರ 2023 ರಲ್ಲಿ ನೀಡಿದ್ದ 593 ಭರವಸೆಗಳಲ್ಲಿ ಅರ್ಧಕ್ಕೂ ಹೆಚ್ಚು ಭರವಸೆ ಈಡೇರಿಸಿದೆ. ಇನ್ನೂ ಎರಡು ವರ್ಷದಲ್ಲಿ ಎಲ್ಲಾ ಭರವಸೆ ಈಡೇರಿಸಲಾಗುವುದು ಎಂದು ಗೃಹ ಸಚಿವರು ಹೇಳಿದರು.
ಸರ್ಕಾರ 1.36 ಸಾವಿರ ಕೋಟಿ ರೂ ವನ್ನು ಪಂಚ ಗ್ಯಾರಂಟಿಗೆ ಖರ್ಚು ಮಾಡಿದೆ. ಬಡವರು ಇತರರಂತೆ ಮುಖ್ಯವಾಹಿನಿಗೆ ಬರಬೇಕು ಎಂಬ ಉದ್ದೇಶದಿಂದ ಹಲವು ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದರು. ಸರ್ಕಾರ ಜನಪರವಾಗಿದ್ದು, ನುಡಿದಂತೆ ನಡೆಯುತ್ತಿದೆ. ಸರ್ಕಾರ ಸುಭದ್ರವಾಗಿದ್ದು, ಮಾರ್ಚ್ 6 ರಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ್ಳೆಯ ಬಜೆಟ್ ಮಂಡಿಸಲಿದ್ದಾರೆ ಎಂದು ಜಿ.ಪರಮೇಶ್ವರ ಅವರು ತಿಳಿಸಿದರು. ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಖಾಲಿ ಇರುವ ಪೊಲೀಸ್ ಹುದ್ದೆ ಭರ್ತಿ ಮಾಡಬೇಕು. ಪೊಲೀಸ್ ವಸತಿ ಗೃಹ ಮತ್ತಷ್ಟು ಕಟ್ಟಬೇಕು. ಮುಂದಿನ‌ ಬಜೆಟ್ ನಲ್ಲಿ ಇನ್ನೂ ಎರಡು ಪೊಲೀಸ್ ಠಾಣೆ ಆರಂಭಕ್ಕೆ ಅವಕಾಶ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.


‌‌‌‌ಜಿಲ್ಲೆಯಲ್ಲಿ ಪೊಲೀಸ್ ತರಬೇತಿ ಕೇಂದ್ರಕ್ಕೆ ಜಾಗವಿದ್ದು, ಬಳಸಿ ಕೊಳ್ಳುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಡ್ರಗ್ಸ್ ಪ್ರಕರಣ ಪತ್ತೆಹಚ್ಚುವಲ್ಲಿ ಹದ್ದಿನ‌ ಕಣ್ಣಿಟ್ಟಿರುವುದು‌ ಶ್ಲಾಘನೀಯ ಕಾರ್ಯವಾಗಿದೆ ಎಂದು ಡಾ.ಮಂತರ್ ಗೌಡ ಅವರು‌ ಮೆಚ್ಚುಗೆ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಅರುಣ್ ಮಾಚಯ್ಯ, ಗ್ಯಾರಂಟಿ ಯೋಜನೆ ಅನುಷ್ಠಾನ‌ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ‌ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ವಿ.ಪಿ.ಶಶಿಧರ, ಕಾಂತರಾಜು, ಸುಂಟಿಕೊಪ್ಪ ಗ್ರಾ.ಪಂ.ನಿಕಟ ಪೂರ್ವ ಅಧ್ಯಕ್ಷರಾದ ಸುನಿಲ್ ಕುಮಾರ್, ದಕ್ಷಿಣ ವಲಯ ಪೊಲೀಸ್ ಮಹಾ ನಿರೀಕ್ಷಕರಾದ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್, ಪ್ರಮುಖರಾದ ಲಕ್ಷ್ಮಣ, ಇಬ್ರಾಹಿಂ, ವಿನೋದ್ ಶಿವಪ್ಪ, ಕೆ.ಪಿ.ಚಂದ್ರಕಲಾ, ಲೋಕೇಶ್, ಲತೀಫ್, ಸತೀಶ, ಯಕೂಬ್ ಇತರರು ಇದ್ದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ಸ್ವಾಗತಿಸಿದರು, ಕೊಡಗು ಜಿಲ್ಲಾ ಪೊಲೀಸ್ ಸಾಂಸ್ಕೃತಿಕ ತಂಡದವರು ನಾಡಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ದೊಡ್ಡಸ್ಥಿಕೆಯಿಂದ ಪದ್ಧತಿ–ಸಂಸ್ಕೃತಿಯ ಕಡೆಗಣನೆ ಸಲ್ಲದು : ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಟೆಂಪೋ ಟ್ರಾವೆಲರ್ ಮೇಲೆ ಮಗುಚಿದ ಲಾರಿ : ನಾಲ್ವರಿಗೆ ಗಾಯ*

ಆಗಷ್ಟ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.26: ಚಾಲಕನ ನಿಯಂತ್ರಣ ಕಳೆದುಕೊಂಡ ಸರಕು ತುಂಬಿದ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ್ದ ಟೆಂಪೋ ಟ್ರಾವೆಲರ್…

*ಯಾವುದೇ ಕಾರಣಕ್ಕೂ ಕೊಡಗಿನಲ್ಲಿ ಮೋಡ ಬಿತ್ತನೆ ಮಾಡಲ್ಲ*

ಆಗಷ್ಟ್ 26, 2026

*ಘಮ ಘಮಿಸಿದ ಆಟಿ ಹಬ್ಬದೂಟದ ಘಮಲು..! ಮಕ್ಕಂದೂರಿನಲ್ಲಿ ಗೌಡ ಮಹಿಳಾ ಒಕ್ಕೂಟದ ಆಟಿ ಜಂಬರ*

ಆಗಷ್ಟ್ 26, 2026

*ಸುಂಟಿಕೊಪ್ಪದಲ್ಲಿ ಸಂಭ್ರಮದ ಓಣಂ ಆಚರಣೆ*

ಆಗಷ್ಟ್ 26, 2026

*ಹಾಕತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ರೂ.46.86 ಲಕ್ಷ ನಿವ್ವಳ ಲಾಭ*

ಆಗಷ್ಟ್ 26, 2026

*ಕಸ್ತೂರಿ ರಂಗನ್ ವರದಿಯಿಂದ 53 ಗ್ರಾಮಗಳನ್ನು ಕೈಬಿಡಲು ಆಗ್ರಹ : ಸೆ.11ರಂದು ಬೃಹತ್ ಪ್ರತಿಭಟನೆ*

ಆಗಷ್ಟ್ 26, 2026

*ದೈವಜ್ಞ ಬ್ರಾಹ್ಮಣ ಸಮಾಜದಿಂದ ಮಡಿಕೇರಿಯಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ನೂಲು ಹುಣ್ಣಿಮೆ, ಜನಿವಾರ ಹಬ್ಬ ಹಾಗೂ ಋಗ್ ಉಪಕರ್ಮ*

ಆಗಷ್ಟ್ 26, 2026

*ಅರೆಭಾಷೆ ಅಕಾಡೆಮಿ ವತಿಯಿಂದ ವಾಡೆಗಳ ಅಧ್ಯಯನ : ಪ್ರವಾಸ ಚಚಡಿ, ರುದ್ರಾಪುರ, ತಲ್ಲೂರು ವಾಡೆಗಳ ಭೇಟಿ*

ಆಗಷ್ಟ್ 26, 2026

*****ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ಸಾರುವ ಓಣಂ : ವಿಶೇಷ ಲೇಖನ : ಪಿ.ಪಿ.ಸುಕುಮಾರ್*****

ಆಗಷ್ಟ್ 26, 2026

*ಸುಂಟಿಕೊಪ್ಪ: ಮಕ್ಕಳಿಗೆ ನಾಟಿ ಕೃಷಿಯ ಅನುಭವ : 300ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ*

ಆಗಷ್ಟ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.