Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
  • ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು
  • *ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*
  • *ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*
  • *ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬಜೆಟ್ ನಲ್ಲಿ ಕೊಡಗಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ರೂ.2,500 ಕೋಟಿ ಮೀಸಲಿಡಲು ಎಸ್‍ಡಿಪಿಐ ಆಗ್ರಹ : ಬಡವರ ಬಿಪಿಎಲ್ ಕಾರ್ಡ್ ಮರಳಿಸಲು ಒತ್ತಾಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಬಜೆಟ್ ನಲ್ಲಿ ಕೊಡಗಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ರೂ.2,500 ಕೋಟಿ ಮೀಸಲಿಡಲು ಎಸ್‍ಡಿಪಿಐ ಆಗ್ರಹ : ಬಡವರ ಬಿಪಿಎಲ್ ಕಾರ್ಡ್ ಮರಳಿಸಲು ಒತ್ತಾಯ*

ಫೆಬ್ರವರಿ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.19 NEWS DESK  : ಕರ್ನಾಟಕ ರಾಜ್ಯದ 2026-27ರ ಬಜೆಟ್‍ನಲ್ಲಿ ಕೊಡಗು ಜಿಲ್ಲೆಯ ಅಭವೃದ್ಧಿಗೆ 500 ಕೋಟಿ ರೂ.ಗಳ ವಿಶೇಷ ಪ್ಯಾಕೆಜ್ ಘೋಷಣೆ ಮಾಡಬೇಕು ಮತ್ತು ಪ್ರವಾಸೋದ್ಯಮದ ಅಭಿವೃದ್ಧಿಗೆ ರೂ.2,500 ಕೋಟಿ ಬಿಡುಗಡೆಗೊಳಿಸಬೇಕು ಎಂದು ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಅವರು ಬಜೆಟ್ ನ ಬೇಡಿಕೆಗಳ ಕುರಿತು ಕರಪತ್ರದ ಮೂಲಕ ಸರಕಾರದ ಗಮನ ಸೆಳೆಯಲಾಗುವುದು ಎಂದರು. ಕೊಡಗಿಗೆ ಅತೀ ಅಗತ್ಯವಾಗಿರುವ ರೈಲು ಸಂಪರ್ಕವನ್ನು ಕೇಂದ್ರ ಹಾಗೂ ರಾಜ್ಯದ ಪ್ರತಿಷ್ಠೆಯ ಕಿತ್ತಾಟದಿಂದ ಕೈ ಬಿಡಲಾಗಿದೆ. ಈ ಬಜೆಟ್‍ನಲ್ಲಿ ಕೊಡಗಿಗೆ ರೈಲು ಸಂಪರ್ಕಕ್ಕಾಗಿ ಬೇಕಿರುವ ಅನುದಾನವನ್ನು ಕರ್ನಾಟಕ ಸರಕಾರ ಮೀಸಲಿಟ್ಟು ಪ್ರಕ್ರಿಯೆ ಪ್ರಾರಂಭಿಸಬೇಕು. ಕೊಡಗಿನ ಲೋಕಸಭಾ ಸದಸ್ಯರು ಕೇಂದ್ರದೊಂದಿಗೆ ಚರ್ಚಿಸಿ ಸಹಕರಿಸಬೇಕು. ತುರ್ತು ಆರೋಗ್ಯ ಸೇವೆಗಾಗಿ ಜಿಲ್ಲೆಗೆ ಏರ್ ಆಂಬ್ಯುಲೆನ್ಸ್ ನೀಡಬೇಕು. ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಅನುದಾನ ಮೀಸಲಿಡಬೇಕು. ವನ್ಯಜೀವಿ ಹಾಗೂ ಮಾನವ ಸಂಘರ್ಷ ನಿಯಂತ್ರಣಕ್ಕೆ ವಿಶೇಷ ಅನುದಾನ ನೀಡಬೇಕು ಮತ್ತು ಶಾಶ್ವತ ಪರಿಹಾರ ಸೂತ್ರ ಕಂಡುಕೊಳ್ಳಬೇಕು. ಕಾವೇರಿ ನದಿ ಕಲ್ಮಶ ತಡೆಗಟ್ಟಲು ಯೋಜನೆ ರೂಪಿಸಬೇಕು. ರೈತರ ಭೂಮಿಯನ್ನು “ಸಿ ಮತ್ತು ಡಿ” ಗೆ ತಂದು ಸೆಕ್ಷನ್ 4ರ ಅಡಿಯಲ್ಲಿ ಸರ್ವೆಗೆ ಮುಂದಾಗಿರುವ ಪ್ರಕ್ರಿಯೆಯನ್ನು ಕೈ ಬಿಟ್ಟು ಸಮಸ್ಯೆ ನಿವಾರಣೆ ಆಗುವವರೆಗೂ ನೊಂದ ರೈತರಿಗೆ 25 ಸಾವಿರ ರೂ. ಮಾಸಾಶನ ಜಾರಿಗೊಳಿಸಬೇಕು. ಬಾಕಿ ಇರುವ ನಮೂನೆ 50, 53, 57, 94 ಸಿ ಹಾಗೂ 94 ಸಿಸಿ ತುರ್ತಾಗಿ ವಿಲೇವಾರಿಗೊಳಿಸಲು ಫಾಸ್ಟ್ ಟ್ರಾಕ್ ಸಮಿತಿ ರಚಿಸಬೇಕು. ಮಡಿಕೇರಿ ನಗರದ ನಿವೇಶನ ರಹಿತ ನಿವಾಸಿಗಳಿಗೆ ನಿವೇಶನ ಗುರುತಿಸಿ ವಸತಿ ಸೌಲ್ಯಭ್ಯ ಒದಗಿಸಬೇಕು. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ರೂ.15 ಸಾವಿರ ಕೋಟಿ ಮೀಸಲಿಡಬೇಕು. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ 134 ಭರವಸೆಗಳನ್ನು ಈ ಬಾರಿಯ ಬಜೆಟ್‍ನಲ್ಲಿ ಸಮಗ್ರವಾಗಿ ಈಡೇರಿಸುವ ಮೂಲಕ ಸರಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಒತ್ತಾಯಿಸಿದರು. *ಬಿಪಿಎಲ್ ಅಸಮಾಧಾನ* ಉಚಿತ ಗ್ಯಾರಂಟಿ ಯೋಜನೆಗಳು ಮತ್ತು ಆದಾಯ ತೆರಿಗೆ ಸಲ್ಲಿಕೆಯನ್ನು ನೆಪ ಮಾಡಿಕೊಂಡು ಅರ್ಹ ಬಿ.ಪಿ.ಎಲ್ ಕಾರ್ಡ್‍ಗಳನ್ನು ರದ್ದುಗೊಳಿಸಲಾಗುತ್ತಿದೆ. ಇದು ಸರಕಾರ ಬಡವರಿಗೆ ಮಾಡುತ್ತಿರುವ ದೊಡ್ಡ ಅನ್ಯಾಯವಾಗಿದೆ ಎಂದು ಅಮೀನ್ ಮೊಹಿಸಿನ್ ಆರೋಪಿಸಿದರು. ನಾಗರಿಕ ಸೇವೆ, ಬಡತನ ನಿರ್ಮೂಲನೆ, ಆಹಾರ, ಆರೋಗ್ಯ ಭದ್ರತೆ, ಶಿಕ್ಷಣ, ಉದ್ಯೋಗಕ್ಕೆ ಉತ್ತೇಜನೆ ಪ್ರತಿ ಸರ್ಕಾರದ ಜವಾಬ್ದಾರಿಯಾಗಿದೆ. ಕಲ್ಯಾಣ ರಾಜ್ಯದ ಪರಿಕಲ್ಪನೆಗೆ ಒತ್ತುಕೊಟ್ಟು ನಾಗರಿಕ ಸೇವೆಗೆ ಸರ್ಕಾರಗಳು ಮುತುವರ್ಜಿ ವಹಿಸಬೇಕು. ವಿಶೇಷ ಆರ್ಥಿಕ ದುರ್ಬಲ ವರ್ಗದ ಆರ್ಥಿಕ ಮಿತಿ 8 ಲಕ್ಷಕ್ಕೆ ನಿಗದಿಪಡಿಸಿರುವ ಸರಕಾರ ಬಿ.ಪಿ.ಎಲ್ ಪಡಿತರ ಕಾರ್ಡ್ ಪಡೆಯಲು 1.25 ಲಕ್ಷದ ಒಳಗೆ ಆದಾಯ ಹೊಂದಿರುವವರು ಮಾತ್ರ ಬಡವರು ಎಂದು ನಿಯಮ ಜಾರಿ ಮಾಡಿರುವುದು ನಾಗರಿಕ ಸೇವೆಯ ಪರಿಕಲ್ಪನೆಗೆ ವಿರುದ್ಧವಾಗಿದೆ ಎಂದು ಟೀಕಿಸಿದರು. ಈಗಾಗಲೇ ಜಿಲ್ಲೆಯಲ್ಲಿ 4,500 ಬಿ.ಪಿ.ಎಲ್ ಕಾರ್ಡ್‍ಗಳನ್ನು ರದ್ದುಗೊಳಿಸಿದ್ದು ಪ್ರಕ್ರಿಯೆ ಮುಂದುವರಿಸುತ್ತಿರುವುದು ಸರಿಯಲ್ಲ. ರದ್ದುಗೊಳಿಸಿದ ಎಲ್ಲಾ ಬಿಪಿಎಲ್ ಕಾರ್ಡ್‍ಗಳನ್ನು ತಕ್ಷಣ ಬಡವರಿಗೆ ಮರಳಿ ನೀಡಬೇಕು ಎಂದು ಆಗ್ರಹಿಸಿದರು.
ಮಡಿಕೇರಿ ಶಾಸಕರು ವಸತಿ ಸೇರಿದಂತೆ ಬಡವರ ಮೂಲಭೂತ ಹಕ್ಕುಗಳ ಕುರಿತು ಅಧಿವೇಶನದಲ್ಲಿ ಚರ್ಚಿಸದೆ ಕಾಫಿ ತೋಟಗಳಲ್ಲಿ ಬಾಂಗ್ಲಾ ಕಾರ್ಮಿಕರಿದ್ದಾರೆ ಎಂದು ಜವಾಬ್ದಾರಿ ಮರೆತು ಮಾತನಾಡುತ್ತಿದ್ದಾರೆಂದು ಟೀಕಿಸಿದರು. ಉಪಾಧ್ಯಕ್ಷ ಎಂ.ಕೆ.ಮನ್ಸೂರ್ ಆಲಿ ಮಾತನಾಡಿ ಜಿಲ್ಲೆಯಲ್ಲಿ ಪಾಸ್ ಪೋರ್ಟ್ ಕಚೇರಿ ಆರಂಭಿಸಬೇಕು, ಮಳೆಹಾನಿ ಸಂತ್ರಸ್ತರಿಗಾಗಿ ನಿರ್ಮಿಸಿದ ಮನೆಗಳು ಪಾಳು ಬಿದ್ದಿದ್ದು, ಇವುಗಳನ್ನು ಬಡವರಿಗೆ ಹಂಚಿಕೆ ಮಾಡಬೇಕು. ಮಡಿಕೇರಿ ನಗರದಲ್ಲಿ ಮತ್ತೊಂದು ಕುಡಿಯುವ ನೀರಿನ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು. ನಗರದ ಜಿಲ್ಲಾಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗಳು ನಡೆಯದೆ ಹಲವು ದಿನಗಳೇ ಕಳೆದಿದ್ದು, ಶಾಸಕರು ಹಾಗೂ ಜಿಲ್ಲಾಡಳಿತ ಮಧ್ಯ ಪ್ರವೇಶಿಸಿ ಪರಿಹಾರ ಸೂಚಿಸಬೇಕು. ಸಮಸ್ಯೆಗೆ ಕಾರಣಕರ್ತರಾದವರನ್ನು ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು. ಸದಸ್ಯ ಅಬ್ದುಲ್ ಅಡ್ಕಾರ್ ಮಾತನಾಡಿ ಶಾಸಕ ಡಾ.ಮಂತರ್ ಗೌಡ ಅವರು ಸಂಘ ಪರಿವಾರದ ನೂರು ವರ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಜಾತ್ಯಾತೀತ ಮತಗಳಿಗೆ ಅನ್ಯಾಯ ಮಾಡಿದ್ದಾರೆ, ಇವರು ಜನರ ಕ್ಷಮೆಯಾಚಿಸಬೇಕು ಎಂದರು. ಸುದ್ದಿಗೋಷ್ಠಿಯಲ್ಲಿ ಕಾರ್ಯದರ್ಶಿ ಮೇರಿ ವೇಗಸ್, ನಗರಾಧ್ಯಕ್ಷ ಮೊಹಮ್ಮದ್ ಅಲಿ ಹಾಗೂ ಸದಸ್ಯ ಜಲೀಲ್ ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ವಿಶೇಷ

(*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ ) ಮಡಿಕೇರಿ ಏ.18 NEWS DESK : ಮಾನವ ಸಮಾಜದ ಬೆಳವಣಿಗೆ ಕೇವಲ…

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026

*ಮಡಿಕೇರಿ : ರಾಜ್ಯ ಮಟ್ಟದ “ಮೊಗೇರ ಕ್ರೀಡಾಕೂಟ” ಉದ್ಘಾಟನೆ*

ಏಪ್ರಿಲ್ 18, 2026

*ಕಾಂಗ್ರೆಸ್ ಮುಖವಾಡ ಕಳಚಿಬಿದ್ದಿದೆ : ಕೊಡಗು ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026

*ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮವಹಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಏಪ್ರಿಲ್ 18, 2026

*ಮಹಿಳೆಯರಿಗೆ ಅಧಿಕಾರ ನೀಡುವುದನ್ನು ಸಹಿಸದ ಕಾಂಗ್ರೆಸ್ : ಸೋಮವಾರಪೇಟೆ ಬಿಜೆಪಿ ಅಸಮಾಧಾನ*

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.