
ಮಡಿಕೇರಿ ಫೆ.19 NEWS DESK : ಮಡಿಕೇರಿ ನಗರದಲ್ಲಿ ತಲೆದೋರಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ನಗರಸಭೆಯ ಆಡಳಿತ ವಿಫಲವಾಗಿದೆ. ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸದಿದ್ದಲ್ಲಿ ಎಸ್ಡಿಪಿಐ ವತಿಯಿಂದ ನಗರಸಭೆಗೆ ಮುತ್ತಿಗೆ ಹಾಕಲಾಗುವುದು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ನಗರಸಭೆಯ ವಿರೋಧ ಪಕ್ಷದ ನಾಯಕ ಅಮೀನ್ ಮೊಹಿಸಿನ್ ಎಚ್ಚರಿಕೆ ನೀಡಿದ್ದಾರೆ.
ಮಡಿಕೇರಿ ನಗರದ ಬಹುತೇಕ ರಸ್ತೆಯ ಎರಡು ಬದಿಗಳಲ್ಲಿ ಅಮೃತ್ 2.0 ನೀರಿನ ಪೈಪ್ ಅಳವಡಿಸಲು ಅಗೆದಿದ್ದು, ನಗರ ಪೂರ್ತಿ ದೂಳು ಆವರಿಸಿಕೊಂಡಿದೆ. ಇದರಿಂದ ಜನರು ಅನಾರೋಗ್ಯಕ್ಕೆ ಒಳಗಾಗುವ ಆತಂಕವಿದೆ. ಹೆಚ್ಚಿನ ರಸ್ತೆಗಳು ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಪೈಪ್ ಅಳವಡಿಸಿದ ನಂತರ ಡಾಂಬರೀಕರಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಿಲ್ಲ. ಆಡಳಿತ ಪಕ್ಷ ಕಳೆದ ಹತ್ತು ತಿಂಗಳಿನಲ್ಲಿ ಕೇವಲ 4 ಸಾಮಾನ್ಯ ಸಭೆಯನ್ನು ನಡೆಸಿದೆ. 4 ಸ್ಥಾಯಿ ಸಮಿತಿ ರಚನೆಯಾಗಿ 2 ತಿಂಗಳಾದರೂ ಒಂದೇ ಒಂದು ಸಭೆ ಕರೆಯಲಿಲ್ಲ. ಕಳೆದ 5 ತಿಂಗಳು ಆಡಳಿತ ನಡೆಸಿದ ಬಿ.ಜೆ.ಪಿ ಪಕ್ಷ ನಗರವನ್ನು ಅಭಿವೃದ್ಧಿ ಪಡಿಸುವ ಸುವರ್ಣ ಅವಕಾಶವನ್ನು ಕಳೆದುಕೊಂಡಿದೆ ಎಂದು ಟೀಕಿಸಿದರು. ಸದಸ್ಯರ ಭಿನ್ನಾಭಿಪ್ರಾಯ, ಬಣ ರಾಜಕೀಯ ಮತ್ತು ಸ್ವಪ್ರತಿಷ್ಠೆಯಿಂದ ನಗರದ ಜನತೆ ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. ಬಿ.ಜೆ.ಪಿಯ ಆಡಳಿತ ಅವಧಿಗಿಂತ ಹೆಚ್ಚಾಗಿ ಜಿಲ್ಲಾಧಿಕಾರಿಯ ಆಡಳಿತ ಅವಧಿ ಹೆಚ್ಚು ಅಭಿವೃದ್ಧಿ ಕಂಡಿದೆ ಎಂದು ಅಭಿಪ್ರಾಯಪಟ್ಟರು.
ಮಡಿಕೇರಿ ನಗರದ ಬಹುತೇಕ ರಸ್ತೆಯ ಎರಡು ಬದಿಗಳಲ್ಲಿ ಅಮೃತ್ 2.0 ನೀರಿನ ಪೈಪ್ ಅಳವಡಿಸಲು ಅಗೆದಿದ್ದು, ನಗರ ಪೂರ್ತಿ ದೂಳು ಆವರಿಸಿಕೊಂಡಿದೆ. ಇದರಿಂದ ಜನರು ಅನಾರೋಗ್ಯಕ್ಕೆ ಒಳಗಾಗುವ ಆತಂಕವಿದೆ. ಹೆಚ್ಚಿನ ರಸ್ತೆಗಳು ಸಂಚರಿಸಲು ಸಾಧ್ಯವಾಗದ ಸ್ಥಿತಿಯಲ್ಲಿವೆ. ಪೈಪ್ ಅಳವಡಿಸಿದ ನಂತರ ಡಾಂಬರೀಕರಣ ಮಾಡಿ ಜನರಿಗೆ ಅನುಕೂಲ ಕಲ್ಪಿಸಿಲ್ಲ. ಆಡಳಿತ ಪಕ್ಷ ಕಳೆದ ಹತ್ತು ತಿಂಗಳಿನಲ್ಲಿ ಕೇವಲ 4 ಸಾಮಾನ್ಯ ಸಭೆಯನ್ನು ನಡೆಸಿದೆ. 4 ಸ್ಥಾಯಿ ಸಮಿತಿ ರಚನೆಯಾಗಿ 2 ತಿಂಗಳಾದರೂ ಒಂದೇ ಒಂದು ಸಭೆ ಕರೆಯಲಿಲ್ಲ. ಕಳೆದ 5 ತಿಂಗಳು ಆಡಳಿತ ನಡೆಸಿದ ಬಿ.ಜೆ.ಪಿ ಪಕ್ಷ ನಗರವನ್ನು ಅಭಿವೃದ್ಧಿ ಪಡಿಸುವ ಸುವರ್ಣ ಅವಕಾಶವನ್ನು ಕಳೆದುಕೊಂಡಿದೆ ಎಂದು ಟೀಕಿಸಿದರು. ಸದಸ್ಯರ ಭಿನ್ನಾಭಿಪ್ರಾಯ, ಬಣ ರಾಜಕೀಯ ಮತ್ತು ಸ್ವಪ್ರತಿಷ್ಠೆಯಿಂದ ನಗರದ ಜನತೆ ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. ಬಿ.ಜೆ.ಪಿಯ ಆಡಳಿತ ಅವಧಿಗಿಂತ ಹೆಚ್ಚಾಗಿ ಜಿಲ್ಲಾಧಿಕಾರಿಯ ಆಡಳಿತ ಅವಧಿ ಹೆಚ್ಚು ಅಭಿವೃದ್ಧಿ ಕಂಡಿದೆ ಎಂದು ಅಭಿಪ್ರಾಯಪಟ್ಟರು.








