ಮಡಿಕೇರಿ, NEWS DESK ಫೆ.24:-ಕೇಂದ್ರ ಸರ್ಕಾರದ ಸವಲತ್ತುಗಳನ್ನು ಪಡೆಯಲು ಈಗಾಗಲೇ ರೈತರು ಇ-ಕೆವೈಸಿ ಯನ್ನು ಮಾಡಿಸಿ ಫ್ರೂಟ್ಸ್ ಐಡಿ ಮುಖಾಂತರ ಸವಲತ್ತುಗಳನ್ನು ಪಡೆಯುತ್ತಿರುತ್ತಾರೆ, ಆದರೆ ಈ ರೈತ ಬಾಂಧವರಿಗೆ ಕೇಂದ್ರ ಸರ್ಕಾರವು ಏಕೀಕೃತ ಫ್ರೂಟ್ಸ್ ಐಡಿ ಗಳನ್ನು ಸೃಜನೆ ಮಾಡುತ್ತಿದ್ದು ಸದರಿ ಫ್ರೂಟ್ಸ್ ಐಡಿ ಗಳನ್ನು ಕೇಂದ್ರ ಸರ್ಕಾರದ ಆ್ಯಪ್ನೊಂದಿಗೆ ಹೊಂದಾಣಿಕೆ ಮಾಡಲಾಗುವುದು.
ಆದ್ದರಿಂದ ರೈತರು ತಮ್ಮ ಹೆಸರಿಗಿರುವ ಎಲ್ಲಾ ಸರ್ವೆ ನಂಬರ್ವಾರು ವಿಸ್ತೀರ್ಣದ ಮಾಹಿತಿಯನ್ನು ಫ್ರೂಟ್ಸ್ ಐಡಿ ಯಲ್ಲಿ ಸೇರಿಸುವುದು. ಫ್ರೂಟ್ಸ್ ಐಡಿ ಸೃಜಿಸುವ ಸಂಬಂದ ರೈತರು ಡಿಜಿಟಲ್ ಕನ್ಸೆಂಟ್ ನೀಡಬೇಕಾಗಿದ್ದು ತಮ್ಮ ಮೊಬೈಲ್ಗೆ ಬರುವ ಒಟಿಪಿ ಯನ್ನು ರೈತ ಸಂಪರ್ಕ ಕೇಂದ್ರ, ತೋಟಕಾರಿಕೆ, ಪಶು ಸಂಗೋಪನ ಇಲಾಖೆ ಹಾಗೂ ಗ್ರಾಮ ಒನ್ ಕೇಂದ್ರದ ಕಚೇರಿಗಳಿಗೆ ಭೇಟಿ ನೀಡಿ ನೊಂದಾಯಿಸಿಕೊಳ್ಳಬಹುದಾಗಿದೆ. ಫ್ರೂಟ್ಸ್ ಐಡಿ ಇಲ್ಲದ ರೈತರು ನಿಮ್ಮ ಹೆಸರಿಗೆ ಇರುವ ಎಲ್ಲಾ ಜಮೀನಿನ ಪಹಣೀಯೋಂದಿಗೆ ಬ್ಯಾಂಕ್ ಖಾತೆ ಸಂಖ್ಯೆ, ಐಎಫ್ಎಸ್ಸಿ ಸಂಖ್ಯೆ ಮತ್ತು ಆಧಾರ್ ಲಿಂಕ್ ಇರುವ ಮೊಬೈಲ್ ನೊಂದಿಗೆ ಈ ಕಚೇರಿಗಳಿಗೆ ಭೇಟಿ ಕೊಟ್ಟು ನೋಂದಾಯಿಸಿಕೊಳ್ಳಬೇಕಾಗಿ ಈ ಮೂಲಕ ತಿಳಿಸಿದೆ. ಈಗಾಗಲೇ ಫ್ರೂಟ್ಸ್ ಐಡಿ ಇರುವ ರೈತರು ನಿಮ್ಮ ಹೆಸರಿಗಿರುವ ಬಾಕಿ ಯಾವುದಾದರು ಜಮೀನಿನ ಸರ್ವೆನಂಬರ್ ಮಾಹಿತಿಯನ್ನು ಫ್ರೂಟ್ಸ್ ಐಡಿ ಯಲ್ಲಿ ಸೇರಿಸಿಕೊಳ್ಳಲು ಅವಕಾಶವಿರುತ್ತದೆ.
ಕೇಂದ್ರ ಸರ್ಕಾರದ ಯಾವುದೇ ಸವಲತ್ತುಗಳನ್ನು ಪಡೆಯಲು ಡಿಜಿಟಲ್ ಕನ್ಸೆಂಟ್ ಕಡ್ಡಾಯವಾಗಿರುತ್ತದೆ, ಆದ್ದರಿಂದ ಜಿಲ್ಲೆಯ ರೈತರು ಫೆಬ್ರವರಿ, 25 ರ ಒಳಗೆ ಸಂಬಂದಿಸಿದ ಕಚೇರಿಗಳಿಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಶಿರಂಗಾಲದಲ್ಲಿ ವಿಶ್ವ ಹಾಲು ದಿನಾಚರಣೆ : ಒಂದು ದಿನಕ್ಕೆ 16 ಲಕ್ಷ ಲೀ. ಹಾಲು ಸಂಗ್ರಹ : ಜಿಲ್ಲಾ ನಿರ್ದೇಶಕ ಹೇಮಂತ್ ಕುಮಾರ್*
- *ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಪೊನ್ನಮ್ಮ ಸಾಧನೆ*
- *ಕೊಡಗು ಜಿಲ್ಲಾ ವೀರಶೈವ ಜಂಗಮ ಅರ್ಚಕರು ಪುರೋಹಿತರ ವಾರ್ಷಿಕ ಮಹಾಸಭೆ*
- *ಕೊಡಗು : ಶಾಲಾ ಪ್ರಾರಂಭೋತ್ಸವ : ವಿದ್ಯಾರ್ಥಿಗಳ ಆಸಕ್ತಿಯಿಂದ ಸರ್ಕಾರಿ ಶಾಲೆಯ ಗುಣಮಟ್ಟ ಹೆಚ್ಚುತ್ತದೆ : ಬಸವರಾಜು*
- *ಪೊನ್ನಂಪೇಟೆ ತಾಲ್ಲೂಕು ಕನ್ನಡ ಪ್ರಥಮ ಸಾಹಿತ್ಯ ಸಮ್ಮೇಳನ : ಮಕ್ಕಳಲ್ಲಿ ಕನ್ನಡ ಪ್ರೇಮ ಬೆಳೆಸಲು ಟಿ.ಎಸ್.ಗೋಪಾಲ್ ಕರೆ*
- *ಶಾಲಾ ಪ್ರಾರಂಭೋತ್ಸವ : ಸಿಹಿ ಹಂಚಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡ ಶಿಕ್ಷಕರು*
- *ನಿವೃತ್ತಿ ನಂತರವೂ ಶಿಕ್ಷಣಕ್ಕೆ ಸಮರ್ಪಣೆ : ಒಂದು ವರ್ಷ ಸೇವೆ ಮುಂದುವರೆಸುವ ಮಹತ್ವದ ನಿರ್ಧಾರ ಕೈಗೊಂಡ ಶಿಕ್ಷಕಿ*
- *ಕುಶಾಲನಗರದಲ್ಲಿ 186ನೇ ಕಾವೇರಿ ನದಿಗೆ ಮಹಾ ಆರತಿ : ನದಿ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಕಿರಣ್ ಜಿ.ಗೌರಯ್ಯ*
- *ಬಲಂಬೇರಿಯಲ್ಲಿ ಕೊಡವ ಪುಸ್ತಕ ಪತ್ತಾಯ ಕಾರ್ಯಕ್ರಮ*
- *ಅರಣ್ಯ ಪ್ರದೇಶಗಳಲ್ಲಿ ವನ್ಯಜೀವಿಗಳ ಆಹಾರಕ್ಕೆ ಪೂರಕವಾದ ಮರಗಳನ್ನು ಬೆಳೆಸಿ : ಹ್ಯೂಮನ್ ರೈಟ್ಸ್ ಇಂಟರ್ ನ್ಯಾಷನಲ್ ಫೆಡರೇಷನ್ ಸಂಘಟನೆ ಆಗ್ರಹ*







