
ಮಡಿಕೇರಿ ಫೆ.25 NEWS DESK : ಚೊಕಂಡಳ್ಳಿ ನಲ್ವತೋಕ್ಲು ಮೊಹಿದ್ದೀನ್ ಜುಮಾ ಮಸೀದಿಗೆ ಅನುದಾನ ನೀಡಲು ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕ ಸಂಸದ ಯದುವೀರ್ ಒಡೆಯರ್ ಅವರಿಗೆ ಮನವಿ ಸಲ್ಲಿಸಿದೆ. ಸಿದ್ದಾಪುರದ ಎಸ್.ಎನ್.ಡಿ.ಪಿ (ಶ್ರೀ ನಾರಾಯಣ ಗುರು ಪರಿಪಾಲನ ಯೋಗ) ಸಭಾಂಗಣದಲ್ಲಿ ನಡೆದ ಎಸ್.ಎನ್.ಡಿ.ಪಿ ವನಿತಾ ಮಹಿಳಾ ಸಮಾವೇಶದಲ್ಲಿ ವಿರಾಜಪೇಟೆ ತಾಲ್ಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಜೀದ್ ಚೊಕಂಡಳ್ಳಿ ಅವರ ನೇತೃತ್ವದಲ್ಲಿ ನಲ್ವತೋಕ್ಲು ಮೋಹಿದೀನ್ ಜುಮಾ ಮಸೀದಿಯ ಕೆಲವು ಕಾಮಗಾರಿಗಳಿಗೆ ಸಂಸದರ ವಿಶೇಷ ನಿಧಿಯಿಂದ ಅನುದಾನವನ್ನು ನೀಡಲು ಮನವಿ ಪತ್ರವನ್ನು ಸಲ್ಲಿಸಲಾಯಿತು. ಈ ಸಂದರ್ಭ ಕೊಡಗು ಜಿಲ್ಲಾ ಜೆಡಿಎಸ್ ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷರಾದ ಜಯಮ್ಮ ಅಮ್ಮತಿ, ಮಡಿಕೇರಿ ತಾಲೂಕು ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು, ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಿಯಾಬುದ್ದೀನ್ ವಿ.ಪಿ.ಎಸ್. ನೆಲ್ಯ ಹುದಿಕೇರಿ, ವಿರಾಜಪೇಟೆ ತಾಲೂಕು ಯುವ ಜನತಾದಳದ ಅಧ್ಯಕ್ಷರಾದ ಸೈಫುದ್ದೀನ್ ಜಾಮಿಯಾಲ, ಹಾಜರಿದ್ದರು.









