Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*
  • *ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*
  • *ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*
  • *ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*
  • *ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ
  • *ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*
  • *ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*
  • *ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*
  • *ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ*
ಇತ್ತೀಚಿನ ಸುದ್ದಿಗಳು

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ*

February 27, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ವಿರಾಜಪೇಟೆ, NEWS DESK ಫೆ.27: ಪಟ್ಟಣದ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರವು ಮಾರ್ಚ್ 4 ರಿಂದ ಮಾರ್ಚ್ 10 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ತೋಡು ನಾಂಗಲದಲ್ಲಿ ಜರುಗಲಿದೆ. ಮಾರ್ಚ್ 4 ರಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದ್ದು ಉದ್ಘಾಟನೆಯನ್ನು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ರವರು ನೆರವೇರಿಸಲಿದ್ದಾರೆ.ಬಿಟ್ಟಂಗಾಲ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಮೂಕಚಂಡ ಪ್ರಸನ್ನ ಸುಬ್ಬಯ್ಯ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ಅಧ್ಯಕ್ಷತೆಯನ್ನು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆಯ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್ ರವರು ಹಾಗೂ ಶಾಲಾ ಸ್ಥಳದಾನಿಗಳಾದ ಕುಪ್ಪಂಡ ಗೋಪಾಲ್ ಬೋಪಯ್ಯ ರವರು ಉಪಸ್ಥಿತರಿರುವರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ. ಫಾ. ಜೇಮ್ಸ್ ಡೊಮಿನಿಕ್ ಸಾನಿಧ್ಯವನ್ನು ವಹಿಸಲಿದ್ದಾರೆ. ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ರವರು, ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಶಾಲಾ ಮುಖ್ಯ ಶಿಕ್ಷಕಿ ಫ್ಯಾನ್ಸಿ ಲೋಬೋ ಮೊದಲಾದವರು ಉಪಸ್ಥಿತರಿರಲಿದ್ದಾರೆ. ಮಾರ್ಚ್ 5 ರಂದು ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಲತಾ ರವರು ಸೈಬರ್ ಅಪರಾಧ ತಡೆಗಟ್ಟುವಿಕೆಯ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ದಿನಾಂಕ 6 ರಂದು ಗೋಣಿಕೊಪ್ಪಲು ಕೆ. ವಿ. ಕೆ. ಯ ವಿಜ್ಞಾನಿಗಳಾದ ಡಾ. ವೀರೇಂದ್ರ ಕುಮಾರ್ ರವರು ಮಣ್ಣು ಹಾಗೂ ಸಸ್ಯ ಸಂರಕ್ಷಣೆ ಕುರಿತು, ದಿನಾಂಕ 7 ರಂದು ನಂಗಲ ಗ್ರಾಮದ ಉದ್ಯಮಿ ಭಜನ್ ಬೋಪಣ್ಣ ಯುವ ಜನತೆ ಮತ್ತು ಪರಿಸರದ ಕುರಿತು, ದಿನಾಂಕ 8 ರಂದು ವಿರಾಜಪೇಟೆ ಕಾವೇರಿ ಪದವಿ ಕಾಲೇಜಿನ ಆಂಗ್ಲ ಭಾಷ ವಿಭಾಗದ ಮುಖ್ಯಸ್ಥೆ ಕುಪ್ಪಂಡ ವೀಣಾ ರವರು ನಾಗರಿಕರು ಹಾಗೂ ಕಾನೂನಿನ ಅರಿವಿನ ಕುರಿತು, ದಿನಾಂಕ 9 ರಂದು ವಿರಾಜಪೇಟೆಯ ಐ ಸಿ ಟಿ ಸಿ ವಿಭಾಗದ ಆಪ್ತ ಸಮಾಲೋಚಕರಾದ ಚಿಟ್ಟಿಯಪ್ಪ ರವರು ಏಡ್ಸ್ ಜಾಗೃತಿಯ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ಈ ಏಳು ದಿವಸಗಳ ಕಾಲ ಶಿಬಿರದಲ್ಲಿ ಶ್ರಮದಾನ, ಗ್ರಾಮ ಸ್ವಚ್ಛತಾ ಅಭಿಯಾನ, ಆರೋಗ್ಯ ಜಾಗೃತಿ ಹಾಗೂ ಶಿಬಿರ, ಸಾಂಸ್ಕೃತಿಕ ಕಾರ್ಯಕ್ರಮಗಳು, ಶೈಕ್ಷಣಿಕ ಕಾರ್ಯಕ್ರಮಗಳು, ಪರಿಸರ ಜಾಗೃತಿ, ಮುಂತಾದ ಹತ್ತು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ದಿನಾಂಕ 9 ರಂದು ಸಂಜೆ ಶಿಬಿರ ಜ್ಯೋತಿ ಕಾರ್ಯಕ್ರಮವು ಜರುಗಲಿದೆ. ದಿನಾಂಕ 10 ರಂದು ಶಿಬಿರದ ಸಮಾರೋಪ ಸಮಾರಂಭ ನಡೆಯಲಿದ್ದು ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ನೆರವೇರಿಸಲಿದ್ದಾರೆ. ಸಮಾರೋಪ ಭಾಷಣವನ್ನು ಮಡಿಕೇರಿ ಆಕಾಶವಾಣಿಯ ಉದ್ಘೋಷಕರಾದ ವಿನೋದ್ ಮೂಡಗದ್ದೆ ರವರು ಮಾಡಲಿದ್ದಾರೆ.ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಆಶಾ ವಹಿಸಲಿದ್ದಾರೆ. ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕ ರೆ. ಫಾ. ಮದಲೈ ಮುತ್ತು ರವರು ಸಾನಿಧ್ಯವನ್ನು ವಹಿಸಲಿದ್ದಾರೆ. ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಶಾಲಾ ಮುಖ್ಯ ಶಿಕ್ಷಕಿ ಫ್ಯಾನ್ಸಿ ಲೋಬೋ ಹಾಗೂ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಚೇಂದ್ರಿಮಾಡ ಕಾವೇರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ವಿಜ್ಞಾನ ಮತ್ತು ವೈಜ್ಞಾನಿಕ ಮನೋಧರ್ಮಕ್ಕಾಗಿ ಯುವಜನತೆ ಎಂಬ ಧ್ಯೇಯ ವಾಕ್ಯದೊಂದಿಗೆ ಶಿಬಿರವು ಜರುಗಲಿದ್ದು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ಅಧಿಕಾರಿ ಬಿ. ಎನ್.ಶಾಂತಿಭೂಷಣ್ ರವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿಯನ್ನು ನೀಡಿರುತ್ತಾರೆ.

Share. Facebook Twitter Pinterest LinkedIn Tumblr Email WhatsApp
Previous Article*ನವವಧು ರಶ್ಮಿಕಾ ಹಾಗೂ ವಿಜಯ್‌ಗೆ ಪ್ರಧಾನಿ ಮೋದಿಯಿಂದ ಭರ್ಜರಿ ಗಿಫ್ಟ್; ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್!*
Next Article *ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*

Website design development company services in Mangalore

Forex Trading Teacher in India

Related Posts

*ಬಿಟ್ಟಂಗಾಲದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮೂರ್ನಾಡು : ಹಿಂದೂ ಸಂಗಮ ಬದುಕಿನ ಮೌಲ್ಯಗಳನ್ನು ಕೇಂದ್ರೀಕರಿಸಿದೆ : ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

February 27, 2026

ವಿರಾಜಪೇಟೆ ಫೆ.27 NEWS DESK : ಮೂರ್ನಾಡುವಿನ ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ಹಿಂದೂ ಸಂಗಮ ಕಾರ್ಯಕ್ರಮ ಬೃಹತ್…

*ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ*

February 27, 2026

*ಮಾ.1 ರಂದು ಶ್ರೀ ರೇಣುಕಾಚಾರ್ಯ ಜಯಂತಿ*

February 27, 2026

*ಅತ್ಯುತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿಗೆ ಗೋಣಿಕೊಪ್ಪಲು ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಆಯ್ಕೆ

February 27, 2026

*ಮಾ.3ರಂದು ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ*

February 27, 2026

*ಏಮ್ಸ್‌ನಲ್ಲಿ ಬೃಹತ್ ನೇಮಕಾತಿ ಆರಂಭ; 2,551 ಪೋಸ್ಟ್‌ಗಳ ಭರ್ತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ*

February 27, 2026

*ಶ್ರೀ ವನಚಾಮುಂಡೇಶ್ವರಿ ಕ್ಷೇತ್ರದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಬಹ್ಮಕಳಶ ಅಷ್ಟಬಂಧ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

February 27, 2026

*ಬೆಂಗಳೂರು ಕರಗಕ್ಕೆ ಕ್ಷಣಗಣನೆ: ಈ ಬಾರಿಯ ಉತ್ಸವದ ಪ್ರಮುಖ ಬದಲಾವಣೆಗಳೇನು? ಇಲ್ಲಿವೆ ಕಂಪ್ಲೀಟ್ ವಿವರಗಳು!*

February 27, 2026

*ಸ್ಕೂಟರ್ ಡಿಕ್ಕಿ : ಕಾರು ಹರಿದು ಓರ್ವ ಸಾವು*

February 27, 2026

*ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಮಾರ್ಚ್ 4 ರಿಂದ ಆರಂಭ*

February 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.