

ಮಡಿಕೇರಿ ಫೆ.27 NEWS DESK : ಶ್ರೀ ಯೋಗಿ ನಾರೇಯಣಿ ಬಲಿಜ ಸಂಘ ಹಾಗೂ ಜಿಲ್ಲಾ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಾ.3ರಂದು ನಗರದಲ್ಲಿ ಶ್ರೀ ಯೋಗಿ ನಾರೇಯಣಿ ಯತೀಂದ್ರರ 300ನೇ ಜಯಂತ್ಯುತ್ಸವ ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಯೋಗಿ ನಾರೇಯಣಿ ಬಲಿಜ ಸಂಘದ ಜಿಲ್ಲಾಧ್ಯಕ್ಷ ಟಿ.ಜಿ.ಗಣೇಶ್ ನಾಯ್ಡು ಅವರು, ಅಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಶ್ರೀ ಯೋಗಿ ನಾರೇಯಣಿ ಯತೀಂದ್ರರ ಜಯಂತಿ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ವ್ಯಾಪ್ತಿಯ ಸರ್ವ ಬಲಿಜ ಜನಾಂಗ ಬಾಂಧವರು ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್, ಜಿಲ್ಲೆಯ ಶಾಸಕರುಗಳಾದ ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಪಾಲ್ಗೊಳ್ಳಲಿದ್ದಾರೆ. ಬಲಿಜ ಸಂಘದ ಪ್ರಮುಖರು ಹಾಗೂ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ಅವರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಆರ್.ಸುಬ್ರಮಣಿ, ಸಹ ಕಾರ್ಯದರ್ಶಿ ಯಶ್ವಂತ್ ಕುಮಾರ್ ಹಾಗೂ ನಿರ್ದೇಶಕ ಸುಧೀಂದ್ರ ಉಪಸ್ಥಿತರಿದ್ದರು.









