Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*
  • *ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*
  • *ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*
  • *‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*
  • *ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*
  • *ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*
  • *ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*
  • *ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*
  • *’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*
  • *ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home»ಇತ್ತೀಚಿನ ಸುದ್ದಿಗಳು»*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*
ಇತ್ತೀಚಿನ ಸುದ್ದಿಗಳು

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 20262 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.1 : ದಲಿತರ ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ಫೆ.22ರಂದು ಮಡಿಕೇರಿ ನಗರದಲ್ಲಿ ಕಾರ್ಯಕ್ರಮ ಆಯೋಜಿಸಿದ ಸಂಘಟನೆ ಸಾರ್ವಜನಿಕವಾಗಿ ಲೆಕ್ಕಪತ್ರಗಳನ್ನು ಮಂಡಿಸಬೇಕೆಂದು ವಿ.ನಾಗರಾಜ್ ಸ್ಥಾಪಿತ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕ ಒತ್ತಾಯಿಸಿದೆ. ಪತ್ರಿಕಾ ಪ್ರಕಟಣೆ ನೀಡಿರುವ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಯೋಜಕ ಹೆಚ್.ಎಸ್.ಕೃಷ್ಣಪ್ಪ, ಜಿಲ್ಲಾ ಸಂಘಟನಾ ಸಂಯೋಜಕರಾದ ರಜನಿಕಾಂತ್ ವಿ.ಆರ್, ಹೆಚ್.ಎನ್.ಯೋಗೇಶ್ ಕುಮಾರ್ ಹಾಗೂ ಜಿಲ್ಲಾ ಮಹಿಳಾ ಸಂಯೋಜಕಿ ಓಮನ ಜೆ.ಎಂ ಸ್ವಾಭಿಮಾನಿ ಸಮಾವೇಶದ ಹೆಸರಿನಲ್ಲಿ ಆಯೋಜಕರು ಹಣ ಸಂಗ್ರಹಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಕೊಡಗು ಜಿಲ್ಲೆಯ ಇಬ್ಬರು ಶಾಸಕರಿಗೆ ಪ್ರಶಸ್ತಿ ನೀಡುವ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಸಮಾವೇಶದಲ್ಲಿ 5 ಸಾವಿರ ಮಂದಿ ಸೇರಲಿದ್ದಾರೆ. ಸುಮಾರು ನೂರು ಬೈಕ್ ಗಳೊಂದಿಗೆ ಪೂರ್ವಿಕರ ಭಾವಚಿತ್ರವಿರುವ ಬೃಹತ್ ಮೆರವಣಿಗೆ ಸಾಗಲಿದೆ ಎಂದು ಪ್ರಚಾರ ಪಡೆದು ಹಣ ಸಂಗ್ರಹಿಸಿದ್ದಾರೆ. ಅಲ್ಲದೆ 37 ದಲಿತ ಸಂಘಟನೆಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿವೆ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ. ಆದರೆ ಸಮಾವೇಶ ಕೇವಲ 250 ಮಂದಿಗೆ ಮಾತ್ರ ಸೀಮಿತವಾಗಿತ್ತು, ಡಾ.ಅಂಬೇಡ್ಕರ್ ಹಾಗೂ ಬುದ್ಧ ಅವರ ಭಾವಚಿತ್ರವಿದ್ದ ರಥ ಹೊರತು ಪಡಿಸಿದರೆ ಬೇರೇನೂ ಇರಲಿಲ್ಲ. ಮೆರವಣಿಗೆ ಮತ್ತು ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ನಿಯಮ ಬಾಹಿರವಾಗಿ ಬಳಸಿಕೊಳ್ಳಲಾಗಿದೆ. ಮಧ್ಯಾಹ್ನ ಸುಡು ಬಿಸಿಲಿನಲ್ಲಿ ಸಾಗಿದ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆಯನ್ನು ಕೂಡ ಮಾಡಿರಲಿಲ್ಲ ಎಂದು ಆರೋಪಿಸಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲು ಅವಕಾಶ ನೀಡಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸ್ವಾಭಿಮಾನಿ ಸಮಾವೇಶ ನಡೆಸಿದ ಸಂಘಟನೆ ಕಳೆದ 30 ವರ್ಷಗಳಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಾ ಬಂದಿರುವುದಾಗಿ ಹೇಳಿಕೊಂಡಿದೆ. ಪ್ರತಿಭಾ ಪುರಸ್ಕಾರಕ್ಕಾಗಿ ಸಾರ್ವಜನಿಕವಾಗಿ ಹಣ ಸಂಗ್ರಹಿಸುತ್ತಿರುವ ಆರೋಪವೂ ಇದೆ. ಆದ್ದರಿಂದ ಈ ಸಂಘಟನೆ ನಡೆಸಿರುವ ಎಲ್ಲಾ ಕಾರ್ಯಕ್ರಮಗಳ ಲೆಕ್ಕಪತ್ರವನ್ನು ಸಾರ್ವಜನಿಕವಾಗಿ ಮಂಡಿಸಬೇಕು ಎಂದು ಹೆಚ್.ಎಸ್.ಕೃಷ್ಣಪ್ಪ, ರಜನಿಕಾಂತ್ ವಿ.ಆರ್, ಹೆಚ್.ಎನ್.ಯೋಗೇಶ್ ಕುಮಾರ್ ಹಾಗೂ ಓಮನ ಜೆ.ಎಂ ಒತ್ತಾಯಿಸಿದ್ದಾರೆ. ಮುಂದಿನ ದಿನಗಳಲ್ಲಿ ನಿಯಮ ಬಾಹಿರ ಕಾರ್ಯಕ್ರಮಗಳಿಗೆ ಅವಕಾಶ ನೀಡುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*
Next Article *ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

Website design development company services in Mangalore

Forex Trading Teacher in India

Related Posts

*ಪೂಜಾ ಸಾವು : ಕಾಡಾನೆ ಸೆರೆಗೆ ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ*

March 1, 2026

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

*‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*

March 1, 2026

*ಟೆಹ್ರಾನ್‌ನಲ್ಲಿ ಅಧಿಕಾರ ಹಸ್ತಾಂತರ: ಯಾರು ಈ ಅಯತೊಲ್ಲಾ ಅಲಿರೆಜಾ ಅರಾಫಿ? ಇರಾನ್‌ನ ಹೊಸ ನಾಯಕನ ಹಿನ್ನೆಲೆ ಇಲ್ಲಿದೆ*

March 1, 2026

ಟೆಹ್ರಾನ್, ಮಾರ್ಚ್ 1, 2026: ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಯಲ್ಲಿ ಪರಮೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ…

*ಸ್ವಾಭಿಮಾನಿ ಸಮಾವೇಶದ ಲೆಕ್ಕಪತ್ರ ನೀಡಲು ದಲಿತ ಸಂಘರ್ಷ ಸಮಿತಿ ಒತ್ತಾಯ*

March 1, 2026

*‘ನನ್ನ ಪುತ್ರ ಹಲ್ಲೆ ಮಾಡಿದ್ದಾನೆ’ ಎಂದು ಪ್ರಮಾಣ ಮಾಡಿದರೆ ನಾನೇ ಶಿಕ್ಷೆ ಕೊಡಿಸುತ್ತೇನೆ : ಇಸ್ಮಾಯಿಲ್ ಸವಾಲು*

March 1, 2026

*ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ*

March 1, 2026

*ಗೌತಮ್ ಆರೋಗ್ಯ ವಿಚಾರಿಸಿದ ಸಂಸದ ಯದುವೀರ್ : ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ*

March 1, 2026

*ಅರಣ್ಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಆಮ್ ಆದ್ಮಿ ಪಾರ್ಟಿ ಒತ್ತಾಯ*

March 1, 2026

*ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ*

March 1, 2026

*’ಟಾಕ್ಸಿಕ್’ ಟೀಸರ್ ಟೀಕೆಗೆ ಚಿತ್ರತಂಡದ ಮದ್ದು: ಕಿಯಾರಾ ಅಡ್ವಾಣಿ ಫೇಸ್ ರಿವೀಲ್; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೈರಲ್!*

March 1, 2026

*ಯುದ್ಧ ಪೀಡಿತ ದೇಶಗಳಲ್ಲಿರುವ ಕನ್ನಡಿಗರ ಸುರಕ್ಷತೆಗೆ ಆದ್ಯತೆ: ವಿದೇಶಾಂಗ ಇಲಾಖೆ ಜೊತೆ ಸಿಎಂ ಸಿದ್ದರಾಮಯ್ಯ ಸತತ ಸಂಪರ್ಕ*

March 1, 2026

*ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬಲಿ : ಬೆಟ್ಟತ್ತೂರಿನಲ್ಲಿ ಘಟನೆ*

March 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.