ಮಡಿಕೇರಿ, NEWS DESK ಮಾ.3:-ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ತಾಲ್ಲೂಕು ಗ್ಯಾರಂಟಿ ಸಮಿತಿ ಸಭೆ ನಡೆಯಿತು.
ಗೃಹಲಕ್ಷ್ಮಿ ಯೋಜನೆ:-ಶಿಶುಅಭಿವೃದ್ದಿ ಇಲಾಖೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ನವೆಂಬರ್ ಮಾಹೆಯವರೆಗೆ 1,16,781 ಗೃಹಲಕ್ಷ್ಮಿ ಫಲಾನುಭವಿಗಳಿಗೆ ರೂ.23,35,62,000.00 ಹಣ ಪಾವತಿಯಾಗಿದ್ದು, ಎನ್ಪಿಸಿಐ, ಇ-ಕೆವೈಸಿ ಮಾಡಿಸಲು ಬಾಕಿ ಉಳಿದಿರುವ ಫಲಾನುಭವಿಗಳ ಸಂಖ್ಯೆ 766, ಐ. ಟಿ, ಜಿ ಎಸ್ ಟಿ ಪಾವತಿದಾರರು ಎಂದು ತಿರಸ್ಕøತಗೊಂಡ ಫಲಾನುಭವಿಗಳ ಸಂಖ್ಯೆ 2,383 ಆಗಿರುತ್ತದೆ ಹಾಗೂ 302 ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳು ಮರಣ ಹೊಂದಿದ್ದು, ಅದರಲ್ಲಿ 66 ಫಲಾನುಭವಿಗಳನ್ನು ಗೃಹಲಕ್ಷ್ಮಿ ಯೋಜನೆಯಿಂದ ಡಿಲೀಟ್ ಮಾಡಿದ್ದು 236 ಫಲಾನುಭವಿಗಳನ್ನು ಡಿಲೀಟ್ ಮಾಡಲು ಬಾಕಿ ಇರುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಮಿತಿ ಸದಸ್ಯರಾದ ಪ್ರಭು ರೈ ಅವರು ಮಾತನಾಡಿ ಮುಂದಿನ ಸಭೆಗೆ ಮಡಿಕೇರಿ ತಾಲ್ಲೂಕಿಗೆ ಸಂಬಂಧಿಸಿದಂತೆ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ವರದಿಯನ್ನು ನೀಡಲು ಇಲಾಖಾಧಿಕಾರಿಯವರಿಗೆ ತಿಳಿಸಿದರು.
ಶಕ್ತಿಯೋಜನೆ: ಶಕ್ತಿ ಯೋಜನೆಯಲ್ಲಿ 2026 ಫೆಬ್ರವರಿ ಮಾಹೆಯವರೆಗೆ ಒಟ್ಟು 14468502 ವಯಸ್ಕ ಮಹಿಳಾ ಪ್ರಯಾಣಿಕರು ಮತ್ತು 344671 ಹೆಣ್ಣು ಮಕ್ಕಳು ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಒಟ್ಟಾರೆ 14813173 ಜನ ಮಹಿಳಾ ಪ್ರಯಾಣಿಕರು ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿ ಸದರಿ ಯೋಜನೆಯನ್ನು ಪಡೆದುಕೊಂಡಿರುತ್ತಾರೆ ಎಂದರು.
ಸರಾಸರಿ 14858 ಪ್ರಯಾಣಿಕರು ಒಂದು ದಿನಕ್ಕೆ ಸಂಸ್ಥೆಯ ವಾಹನದಲ್ಲಿ ಪ್ರಯಾಣಿಸಿರುತ್ತಾರೆ, ಎಂದು ಕೆ.ಎಸ್.ಆರ್ ಟಿ.ಸಿ ಸಂಸ್ದೆಯ ಘಟಕ ವ್ಯವಸ್ಥಾಪಕರು ಸಭೆಗೆ ಮಾಹಿತಿ ನೀಡಿದರು.
ಸಮಿತಿ ಸದಸ್ಯರಾದ ಪ್ರಭು ರೈ ರವರು ಮಾತನಾಡಿ ಬೆಂಗಳೂರಿನಿಂದ ಮಂಗಳೂರಿಗೆ ರಾತ್ರಿ ವೇಳೆ ತೆರಳುವ ಕೆ ಎಸ್ ಆರ್ ಟಿ ಸಿ ಬಸ್ ಗಳು ಬಸ್ ನಿಲ್ದಾಣಕ್ಕೆ ತೆರಳದೆ ಟೋಲ್ ಗೇಟ್ ನಲ್ಲಿ ಪ್ರಯಾಣಿಕರನ್ನು ಇಳಿಸಿ ಮಂಗಳೂರಿಗೆ ತೆರಳುತ್ತಿದೆ ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಹಾಗೂ ಮಡಿಕೇರಿ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ರಾತ್ರಿ 10 ಗಂಟೆಯ ನಂತರ ಟಿ ಸಿ ವ್ಯವಸ್ಥೆಯನ್ನು ಮಾಡಲು ಪತ್ರ ವ್ಯವಹಾರ ಮಾಡುವಂತೆ ಕೆ ಎಸ್ ಆರ್ ಟಿ ಸಿ ಸಂಸ್ದೆಯ ಘಟಕ ವ್ಯವಸ್ಥಾಪಕರಿಗೆ ತಿಳಿಸಿದರು.
ಸಮಿತಿ ಸದಸ್ಯರು ಮಾತನಾಡಿ ಮಡಿಕೇರಿಯಿಂದ ಸುಳ್ಯಕ್ಕೆ ತೆರಳುವ ಶಟಲ್ ಬಸ್ ಗಳು ಕಾಟಕೇರಿ, 2ನೆ ಮೊಣ್ಣಂಗೇರಿ, ಜೋಡುಪಾಲದಲ್ಲಿ ಬಸ್ ನಿಲ್ಲಿಸುತ್ತಿಲ್ಲ ಇದರಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿರುವ ಹಾಗೂ ಕರಿಕೆಗೆ ಬಸ್ ಸರಿಯಾಗಿ ಸಂಚರಿಸುತ್ತಿಲ್ಲ ಎಂದು ಸಭೆಯ ಗಮನಕ್ಕೆ ತಂದರು.
ಅಧ್ಯಕ್ಷರಾದ ಮಂದ್ರಿರ ಮೋಹನ್ ದಾಸ್ ಅವರು ಮಾತನಾಡಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಎಲ್ಲಾ ಗ್ರಾಮಗಳಲ್ಲಿ ಬಸ್ ಗಳು ಸರಿಯಾದ ಸಮಯಕ್ಕೆ ಸಂಚರಿಸುವಂತೆ ಕ್ರಮವಹಿಸಲು ಹಾಗೂ ಕೆಎಸ್ಆರ್ಟಿ ಸಿ ಬಸ್ ನಿಲ್ದಾಣದಲ್ಲಿ ಕಡ್ಡಾಯವಾಗಿ ಪೊಲೀಸ್ ಚೆಕ್ ಪೆÇೀಸ್ಟ್ ಸ್ಥಾಪಿಸಲು ಕ್ರಮವಹಿಸುವಂತೆ ಘಟಕ ವ್ಯವಸ್ಥಾಪಕರಿಗೆ ಸೂಚಿಸಿದರು.
ಯುವನಿಧಿ:- ಯುವನಿಧಿ ಯೋಜನೆಗೆ ಸಂಬಂಧಿಸಿದಂತೆ 2023-2024 ಮತ್ತು 2025-2026 ರಲ್ಲಿ ಪದವಿ ಮತ್ತು ಡಿಪೆÇ್ಲೀಮಾ ಉತ್ತೀರ್ಣರಾಗಿ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು, ಸ್ವಯಂ ಉದ್ಯೋಗ ಹೊಂದಿಲ್ಲದವರು, ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎಂದರು.
ಈ ಯೋಜನೆಯ ಪ್ರಯೋಜನ ಮುಂದುವರಿಸಬೇಕಾಗಿದ್ದಲ್ಲಿ ಪ್ರತಿ 3 ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಮಾಡಬೇಕು, ನಿರುದ್ಯೋಗಿಗಳು ಸ್ವಯಂ ದೃಢೀಕರಣ ನೀಡಿದ್ದಲ್ಲಿ ಮಾತ್ರ ಡಿಬಿಟಿ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಇಲಾಖಾ ಸಿಬ್ಬಂದಿಯವರು ಸಭೆಗೆ ಮಾಹಿತಿ ನೀಡಿದರು.
ಜನವರಿ ಮಾಹೆಯವರೆಗೆ 574 ಜನ ನೋಂದಣಿಯಾಗಿದ್ದು, ಒಟ್ಟು 1,34,61000 ರೂ.ಡಿಬಿಟಿ ಯಾಗಿರುತ್ತದೆ ಡಿಸೆಂಬರ್ ಮಾಹೆವರೆಗೆ ಒಟ್ಟು 446 ಫಲಾನುಭವಿಗಳು ಯುವನಿಧಿ ಯೋಜನೆಯ ಪ್ರಯೋಜನ ಪಡೆದುಕೊಂಡಿರುವ ಬಗ್ಗೆ ಸಭೆಗೆ ಮಾಹಿತಿ ನೀಡಿದರು.
ಸಮಿತಿ ಸದಸ್ಯರಾದ ಪ್ರಭು ರೈ ರವರು ಮಾತನಾಡಿ ಮುಂದಿನ ಸಭೆಗೆ 2023-24, 2024-25 ಹಾಗೂ 2025-26ನೇ ಸಾಲಿನ ವರ್ಷವಾರು ಯುವನಿಧಿ ಮಾಹಿತಿಯನ್ನು ನೀಡಲು ಇಲಾಖೆಯ ಸಿಬ್ಬಂದಿಯವರಿಗೆ ತಿಳಿಸಿದರು.
ಗೃಹಜ್ಯೋತಿ ಯೋಜನೆ: ಇಲಾಖೆ ಅಧಿಕಾರಿಗಳು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ 52433 ಅರ್ಹ ವಿದ್ಯುತ್ ಸ್ಥಾವರಗಳಿದ್ದು, ಗೃಹಜ್ಯೋತಿ ಯೋಜನೆಯಡಿ 52027 ನೋಂದಣಿಗೊಂಡ ಅರ್ಜಿಗಳಾಗಿದ್ದು, 406 ಬಾಕಿ ಇರುವ ಸ್ಥಾವರಗಳಿದ್ದು ಶೇ.99.23 ಪ್ರಗತಿಯಾಗಿದ್ದು ಡಿಸೆಂಬರ್-2025 ಹಾಗೂ ಜನವರಿ -2026 ಮಾಹೆಯಲ್ಲಿ 1380 ಸ್ಥಾವರಗಳು ಹೊಸದಾಗಿ ಸಂಪರ್ಕಗೊಂಡಿದ್ದು ಮಾಸಾಂತ್ಯದೊಳಗೆ ಗೃಹಜ್ಯೋತಿ ಯೋಜನೆಯಡಿ ನೋಂದಾಯಿಸಲ್ಪಡುತ್ತದೆ ಎಂದು ಸಭೆಗೆ ಮಾಹಿತಿ ನೀಡಿದರು. ಅಧ್ಯಕ್ಷರು ಮಾತನಾಡಿ ಮರಗೋಡುವಿನಲ್ಲಿ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸುವಂತೆ ಇಲಾಖೆಯ ಅಧಿಕಾರಿಯವರಿಗೆ ಸೂಚಿಸಿದರು.
ಇಲಾಖಾಧಿಕಾರಿಯವರು ಮಾತನಾಡಿ ಮರಗೋಡುವಿನಲ್ಲಿ ವಿದ್ಯುತ್ ಕಂಬಗಳು ತೋಟದ ಮಧ್ಯೆ ಹಾದೂ ಹೋಗುವುದರಿಂದ ಮರಗಳು ಬಿದ್ದು ವಿದ್ಯುತ್ ಕಂಬ ತುಂಡಾಗುತ್ತಿದ್ದು ಸದರಿ ಸಮಸ್ಯೆಯನ್ನು ಪರಿಹರಿಸುವುದಾಗಿ ಸಭೆಯಲ್ಲಿ ತಿಳಿಸಿದರು.
ಸಮಿತಿ ಸದಸ್ಯರಾದ ಪ್ರಭು ರೈ ಅವರು ಮಾತನಾಡಿ ಭಾಗಮಂಡಲದಲ್ಲಿ ಲೈನ್ ಮನ್ ಗಳು ಹಾಗೂ ಜೆಇ ಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಇದರಿಂದಾಗಿ ಜನರಿಗೆ ತೊಂದರೆಯಾಗುತ್ತಿದ್ದು ಜೆ ಇ ಯನ್ನು ಬದಲಾವಣೆ ಮಾಡಿಕೊಡುವಂತೆ ಇಲಾಖಾಧಿಕಾರಿಯವರಿಗೆ ತಿಳಿಸಿದರು.
ಅನ್ನಭಾಗ್ಯ: ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಡಿಕೇರಿ ತಾಲ್ಲೂಕಿನಲ್ಲಿ ಒಟ್ಟು 38271 ಪಡಿತರ ಚೀಟಿ ಇದ್ದು 120970 ಒಟ್ಟು ಫಲಾನುಭವಿಗಳಿರುತ್ತಾರೆ. ಅದರಲ್ಲಿ 1902 ಎಎವೈ ಪಡಿತರ ಚೀಟಿ ಇದ್ದು 7565 ಎಎವೈ ಫಲಾನುಭವಿಗಳು ಇರುತ್ತಾರೆ, 21700 ಪಿ.ಹೆಚ್ ಹೆಚ್ ಪಡಿತರ ಚೀಟಿ ಇದ್ದು 70206 ಫಲಾನುಭವಿಗಳು, 14669 ಎನ್ ಪಿ ಹೆಚ್ ಹೆಚ್ ಪಡಿತರ ಚೀಟಿ ಇದ್ದು 43199 ಫಲಾನುಭವಿಗಳು ಇದ್ದಾರೆ ಎಂದು ಮಾಹಿತಿ ನೀಡಿದರು.
ತಾಲ್ಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್ ರವರು ಮಾತನಾಡಿ ಮಡಿಕೇರಿ ತಾಲ್ಲೂಕಿನಲ್ಲಿ 05 ಗ್ಯಾರಂಟಿ ಯೋಜನೆಗಳನ್ನು ಅನುμÁ್ಠನ ಗೊಳಿಸುವಲ್ಲಿ ಅನುμÁ್ಠನ ಇಲಾಖೆಗಳು ಉತ್ತಮ ಪ್ರಗತಿಯನ್ನು ಸಾಧಿಸಿದ್ದು ಮುಂದಿನ ದಿನಗಳಲ್ಲಿಯೂ ಸಹ ಸಮಿತಿಯ ಎಲ್ಲಾ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಸರ್ಕಾರದ ಮಹಾತ್ವಾಕಾಂಕ್ಷಿ 05 ಗ್ಯಾರಂಟಿ ಯೋಜನೆಯನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ದೊರೆಯುವಂತೆ ಮಾಡಲು ಶ್ರಮಿಸಬೇಕು ಎಂದು ಸಭೆಯಲ್ಲಿ ತಿಳಿಸಿದರು.
ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಸಮಿತಿ ಸದಸ್ಯ ಕಾರ್ಯದರ್ಶಿ ಶೇಖರ್ ಹಲವು ಮಾಹಿತಿ ನೀಡಿದರು.







