Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
  • *ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*
  • *ಜ್ಞಾನಗಂಗಾ ಶಾಲೆಯಲ್ಲಿ ಮಹಿಳಾ ದಿನದ ಸಂಭ್ರಮ*
  • *ಮಾ.16 ರಂದು ಅಂಚೆ ಅದಾಲತ್ ಸಭೆ*
  • *ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*
  • *ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*
  • *ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*
  • *ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*
  • *ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*

ಮಾರ್ಚ್ 9, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಮಾ.09:-ಸಮಾಜ ಸ್ವಸ್ಥವಾಗಿಡಲು ಮಹಿಳೆಯರ ಪಾತ್ರ ಅತೀ ಮುಖ್ಯವಾಗಿದೆ. ಆ ನಿಟ್ಟಿನಲ್ಲಿ ಮಹಿಳೆಯರು ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಲಹೆ ಮಾಡಿದ್ದಾರೆ.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಕೊಡಗು ಘಟಕ ವತಿಯಿಂದ ನಗರದ ರೆಡ್‍ಬ್ರಿಕ್ಸ್ ಇನ್ ಸತ್ಕಾರ ಸಭಾಂಗಣದಲ್ಲಿ ಸೋಮವಾರ ನಡೆದ ಕ್ಯಾನ್ಸರ್ ತಪಾಸಣಾ ಶಿಬಿರ ಮತ್ತು ಅರಿವು ಕಾರ್ಯಕ್ರಮ ಮತ್ತು ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಹಿಳೆಯರು ಕುಟುಂಬ ನಿರ್ವಹಣೆಯಲ್ಲಿ ಹೆಚ್ಚಿನ ಪಾತ್ರ ವಹಿಸುತ್ತಾರೆ. ಆದ್ದರಿಂದ ಒಂದು ಕುಟುಂಬ ಸಮರ್ಪಕವಾಗಿ ನಡೆಯಬೇಕಿದ್ದಲ್ಲಿ ತಾಯಿ ಆರೋಗ್ಯ ಪೂರ್ಣವಾಗಿರಬೇಕು. ಇದರಿಂದ ಮಕ್ಕಳು ಹಾಗೂ ಕುಟುಂಬದ ನಿರ್ವಹಣೆ ಸುಗಮವಾಗಿ ಸಾಗಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಆಧುನಿಕ ಶರವೇಗದ ಜಗತ್ತಿನಲ್ಲಿ ಆಹಾರ ಸೇರಿದಂತೆ ಮತ್ತಿತರ ಕ್ಷೇತ್ರಗಳಲ್ಲಿ ಕಲುಷಿತತೆಯನ್ನು ಕಾಣಬಹುದಾಗಿದೆ. ಆದ್ದರಿಂದ ಶುದ್ದ ಕುಡಿಯುವ ನೀರು, ಮನೆಯಲ್ಲಿಯೇ ಬೇಯಿಸಿದ ಆಹಾರ ಉಪಯೋಗಿಸುವುದರಿಂದ ಆರೋಗ್ಯದತ್ತ ಗಮನಹರಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಮಹಿಳೆ ಆರೋಗ್ಯವಾಗಿದ್ದಲ್ಲಿ ಇಡೀ ಕುಟುಂಬ ಉತ್ತಮವಾಗಿ ಸಾಗಲಿದೆ. ಇದರಿಂದ ಸಮಾಜಕ್ಕೂ ಸಹ ಒಳ್ಳೆಯದಾಗಲಿದೆ. ಆ ನಿಟ್ಟಿನಲ್ಲಿ ಆರೋಗ್ಯದ ಕಡೆ ನಿಗಾವಹಿಸಬೇಕು ಎಂದರು.
‘ಸೃಷ್ಟಿಯ ಅದ್ಭುತಗಳಲ್ಲಿ ಮಹಿಳೆಯರು ವಿಶಿಷ್ಟ ವ್ಯಕ್ತಿತ್ವ ಹೊಂದಿದ್ದಾರೆ. ಸಂಸಾರದ ನೊಗ ಮುಂದೆ ಸಾಗಲು ಮಹಿಳೆಯರು ಹೆಚ್ಚಿನ ಆಸಕ್ತಿ ವಹಿಸುತ್ತಾರೆ. ಇದರಿಂದ ಕುಟುಂಬ ನಿರ್ವಹಣೆ ಉತ್ತಮವಾಗಿರುತ್ತದೆ. ಮಹಿಳೆಯರಿಗೆ ತಾಳ್ಮೆ, ಸಹನೆ, ಸಹನಾಭೂತಿ ಹೆಚ್ಚು ಇರುವುದನ್ನು ಕಾಣಬಹುದು. ಮಹಿಳೆಯರು ಒಂದು ರೀತಿ ಆದಿಶಕ್ತಿ ಇದ್ದಂತೆ ಎಂದು ವರ್ಣಿಸಿದರು.’
ಇಡೀ ಪ್ರಪಂಚಕ್ಕೆ ಜೀವಶಕ್ತಿ, ಆತ್ಮಶಕ್ತಿ ಹೆಣ್ಣು ಎಂದರೆ ತಪ್ಪಾಗಲಾರದು. ಸೃಷ್ಟಿಗೆ ಮೂಲ ಕಾರಣಕರ್ತಳು ಹೆಣ್ಣು ಮೂಲವಾಗಿದ್ದು, ಹೆಣ್ಣು ಮಕ್ಕಳನ್ನು ರಕ್ಷಿಸಬೇಕು ಮತ್ತು ಗೌರವಿಸಬೇಕು ಎಂದು ಆರ್.ಐಶ್ವರ್ಯ ಅವರು ಪ್ರತಿಪಾದಿಸಿದರು.
ಸಾಮಾಜಿಕವಾಗಿ, ಶೈಕ್ಷಣಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲೂ ಸಹ ಮಹಿಳೆಯರು ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅಹಲ್ಯಾ ಬಾಯಿ. ಝಾನ್ಸಿರಾಣಿ ಲಕ್ಷ್ಮಿಬಾಯಿ, ರಾಣಿ ಅಬ್ಬಕ್ಕ, ಕಿತ್ತೂರು ರಾಣಿಚೆನ್ನಮ್ಮ, ಕೆಳದಿ ಚೆನ್ನಮ್ಮ, ಬೆಳವಾಡಿ ಮಲ್ಲಮ್ಮ, ಸಂಚಿಹೊನಮ್ಮ ಹೀಗೆ ಹಲವರನ್ನು ಉದಾಹರಣೆಯಾಗಿ ಕಾಣಬಹುದಾಗಿದೆ ಎಂದರು.
ಆತ್ಮಸಾಕ್ಷಿ ಕುಸಿಯುತ್ತಿರುವ ಇಂದಿನ ಸಂದರ್ಭದಲ್ಲಿ ಕುಟುಂಬದಲ್ಲಿ ಧೈರ್ಯ ತುಂಬುವವರು ಮಹಿಳೆಯರು ಎಂದರೆ ಅತಿಶಯೋಕ್ತಿಯಲ್ಲ ಎಂದು ಆರ್.ಐಶ್ವರ್ಯ ಅವರು ನುಡಿದರು.
ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ಅವರು ಮಾತನಾಡಿ ಹೆಣ್ಣು ಸಮಾಜದ ಕಣ್ಣು ಆಗಿದ್ದು, ಪುರಾತನ ಕಾಲದಿಂದಲೂ ಹೆಣ್ಣಿಗೆ ತನ್ನದೇ ಆದ ಮಹತ್ತರ ಸ್ಥಾನವಿದೆ ಎಂದರು.
ಮಹಿಳೆಯರು ರಾಜಕೀಯ, ಸಾಮಾಜಿಕ, ಕ್ರೀಡೆ, ಸಿನಿಮಾ, ಗಗನಯಾನ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಅಗಾಧ ಸಾಧನೆ ಮಾಡಿದ್ದಾರೆ. ಇದಕ್ಕೆ ಕುಟುಂಬ ಹಾಗೂ ಎಲ್ಲರ ಸಹಕಾರ ಹೆಚ್ಚಿನ ಪ್ರೋತ್ಸಾಹ ನೀಡಿದೆ ಎಂದರು.
ಸರ್ಕಾರ ಮಹಿಳೆಯರಿಗೆ ಹಲವು ಕಾರ್ಯಕ್ರಮ ಜಾರಿಗೊಳಿಸಿದೆ. ಆ ನಿಟ್ಟಿನಲ್ಲಿ ಸಮಾಜವನ್ನು ಶಕ್ತಿಯಾಗಿ ನಿರ್ಮಿಸುವಲ್ಲಿ ಮಹಿಳೆಯರು ಮುಂದೆ ಸಾಗಿದ್ದಾರೆ ಎಂದು ವಿವರಿಸಿದರು.


ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್ ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಲಿಂಗಾನುಪಾತ ಉತ್ತಮವಾಗಿದೆ ಎಂದು ಹೇಳಿದರು.
ಸಮ ಸಮಾಜ ನಿರ್ಮಿಸುವಲ್ಲಿ ಮಹಿಳೆಯರ ಪಾತ್ರ ಹೆಚ್ಚಿನದ್ದಾಗಿದೆ. ಪ್ರತೀ ಕ್ಷೇತ್ರದಲ್ಲೂ ಸಹ ಮಹಿಳೆಯರು ಇದ್ದು, ಇದರಿಂದ ಸಮಾನತೆ ಕಾಣಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ಮಾಪಕಿ ಕೊಟ್ಟುಕೊತ್ತೀರ ಯಶೋಧ ಪ್ರಕಾಶ್ ಅವರು ಮಾತನಾಡಿ ಮಹಿಳೆಯರು ಕುಟುಂಬದ ನಿರ್ವಹಣೆಯ ಜೊತೆಗೆ ಕಚೇರಿಯಲ್ಲೂ ಕೆಲಸ ಮಾಡಿಕೊಂಡು ಜೀವನ ನಿಭಾಯಿಸುವುದು ದೊಡ್ಡ ಸಾಧನೆ. ಮಹಿಳೆಯರು ಸಂಬಳ ಇರದೆ ಇಡೀ ಕುಟುಂಬವನ್ನು ಉತ್ತಮವಾಗಿ ಸಾಗಿಸುವಲ್ಲಿ ಪ್ರಯತ್ನಿಸುತ್ತಾರೆ. ಹಾಗಾಗಿ ಹೆಣ್ಣನ್ನು ಗೌರವಿಸಬೇಕು ಎಂದರು.
ಮಹಿಳೆಯರು ಕೆಲಸದ ಒತ್ತಡ ಜೊತೆಗೆ ಆರೋಗ್ಯ ಕಡೆಯು ಗಮನಹರಿಸಬೇಕು. ಉತ್ತಮ ಆರೋಗ್ಯ ಇದ್ದಲ್ಲಿ ಇಡೀ ಕುಟುಂಬ ಸಂತಸದಿಂದ ಜೀವನ ಸಾಗಿಸಲು ಸಾಧ್ಯ ಎಂದರು.
ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಾತನಾಡಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ ಏರ್ಪಡಿಸಿರುವುದು ವಿಶೇಷವಾಗಿದೆ ಎಂದರು.
ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಬಿ.ಕೆ.ರವೀಂದ್ರ ರೈ ಮಾತನಾಡಿ ಕೊಡಗು ಜಿಲ್ಲೆಯಲ್ಲಿ 74 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ರೆಡ್‍ಕ್ರಾಸ್ ಸಂಸ್ಥೆಯು ಪ್ರಾಕೃತಿಕ ವಿಕೋಪ, ಲಾಕ್‍ಡೌನ್ ಸೇರಿದಂತೆ ಅಗತ್ಯ ಇದ್ದಂತಹ ಸಂದರ್ಭದಲ್ಲಿ ತುರ್ತು ಕಾರ್ಯ ಪ್ರವೃತ್ತವಾಗಿ ಜನರ ಸೇವೆ ಮಾಡುತ್ತಾ ಬಂದಿದೆ ಎಂದರು.


ರಾಜ್ಯಪಾಲರಿಂದಲೂ ಸಹ ಅತ್ಯುತ್ತಮ ರೆಡ್‍ಕ್ರಾಸ್ ಸಂಸ್ಥೆ ಎಂಬ ಸೇವಾ ಪ್ರಶಸ್ತಿಯನ್ನು ಪಡೆದಿದ್ದು, ಮಹಿಳಾ ದಿನಾಚರಣೆಯೊಂದಿಗೆ ಕ್ಯಾನ್ಸರ್ ಮಾಹಿತಿ ಹಾಗೂ ಜಾಗೃತಿ ಶಿಬಿರ ಆಯೋಜಿಸುವ ಮೂಲಕ ಮಹಿಳೆಯರಲ್ಲಿ ಆರೋಗ್ಯ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ರೆಡ್‍ಕ್ರಾಸ್ ಜಿಲ್ಲಾ ಉಪಾಧ್ಯಕ್ಷರಾದ ಅನಿಲ್ ಎಚ್.ಟಿ. ಅವರು ಮಾತನಾಡಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು ಜಿಲ್ಲೆಯಾದ್ಯಂತ ಮಕ್ಕಳ ಪಾಲನೆ ಪೋಷಣೆಯೊಂದಿಗೆ ಸರ್ಕಾರದ ವಿವಿಧ ಕರ್ತವ್ಯಗಳನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಇಂತಹ ಸಿಬ್ಬಂದಿಯನ್ನು ಆದ್ಯತೆಯಾಗಿರಿಸಿ, ಆರೋಗ್ಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಮಹಿಳಾ ದಿನಾಚರಣೆ ಹಿನ್ನೆಲೆ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ 460 ಮಹಿಳೆಯರು ಪಾಲ್ಗೊಂಡಿರುವುದು ರೆಡ್‍ಕ್ರಾಸ್ ಪ್ರಯತ್ನಕ್ಕೆ ಸಂದ ಫಲವಾಗಿದೆ ಎಂದು ತಿಳಿಸಿದರು.
ರಾಷ್ಟ್ರ ಪ್ರಶಸ್ತಿ ಪಡೆದ ಕೊಟ್ಟುಕೊತ್ತೀರ ಯಶೋಧ ಪ್ರಕಾಶ್ ಅವರನ್ನು ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ಗಣ್ಯರು ಸನ್ಮಾನಿಸಿ ಗೌರವಿಸಿದರು.
ಮಡಿಕೇರಿ ತಾಲ್ಲೂಕಿನ 15 ಮಂದಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರನ್ನು ಸನ್ಮಾನಿಸಲಾಯಿತು. ವಿವಿಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಂಡದವರು ವೈವಿಧ್ಯಮಯ ಕಾರ್ಯಕ್ರಮ ನೀಡಿ ಮನ ಸೆಳೆದರು.
ಇದೇ ಸಂದರ್ಭದಲ್ಲಿ ತಜ್ಞ ವೈದ್ಯರಿಂದ ಆಯೋಜಿತ ಕ್ಯಾನ್ಸರ್ ತಪಾಸಣಾ ಶಿಬಿರದ ಪ್ರಯೋಜನವನ್ನು ಮಹಿಳೆಯರು ಪಡೆದರು.
ಮಹಿಳಾ ಸಂಬಂಧಿಸಿದ ವಿಚಾರಗೋಷ್ಠಿಯಲ್ಲಿ ಮಿಲನ ಭರತ್, ಡಾ.ಬಿ.ಕೆ.ರಾಜೇಶ್ವರಿ, ವೈದ್ಯಾಧಿಕಾರಿ ಡಾ.ಸುಮುಖ್, ವಕೀಲರಾದ ಸಿಂಧೂರ ಎನ್.ಸ್ವಾಮಿ, ಯೋಗ ಶಿಕ್ಷಕರಾದ ಶಿಲ್ಪ ರೈ ಅವರು ಮಾತನಾಡಿದರು.
ಶೀಲ ಅಶೋಕ್ ಪ್ರಾರ್ಥಿಸಿದರು. ರೆಡ್‍ಕ್ರಾಸ್ ಸಂಸ್ಥೆಯ ಕೊಡಗು ಘಟಕ ಉಪ ಸಭಾಪತಿ ಅನಿಲ್ ಎಚ್.ಟಿ. ನಿರೂಪಿಸಿದರು, ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಧನಂಜಯ ಸ್ಥಾಗತಿಸಿದರು, ಖಜಾಂಜಿ ಪ್ರಸಾದ್ ಗೌಡ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಮಾ.೯ : ಜಿಲ್ಲೆಯ ಮತ್ತಿಗೋಡು ಸಾಕಾನೆ ಶಿಬಿರದ ಆನೆ “ಅಭಿ” (೨೧) ಅನಾರೋಗ್ಯದಿಂದ ಮೃತಪಟ್ಟಿದೆ. ಕಾಡಾನೆ…

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026

*ಜ್ಞಾನಗಂಗಾ ಶಾಲೆಯಲ್ಲಿ ಮಹಿಳಾ ದಿನದ ಸಂಭ್ರಮ*

ಮಾರ್ಚ್ 9, 2026

*ಮಾ.16 ರಂದು ಅಂಚೆ ಅದಾಲತ್ ಸಭೆ*

ಮಾರ್ಚ್ 9, 2026

*ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾಗಿ ಡಿ.ವಿನೋದ್ ಖನ್ನಾ ಅಧಿಕಾರ ಸ್ವೀಕಾರ*

ಮಾರ್ಚ್ 9, 2026

*ಮಹಿಳಾ ದಿನಕ್ಕೇ ಸಿಲಿಂಡರ್ ಬೆಲೆ ಏರಿಕೆ ಶಾಕ್: ಕೇಂದ್ರದ ವಿರುದ್ಧ ಡಿಕೆಶಿ ಕಿಡಿ*

ಮಾರ್ಚ್ 9, 2026

*ಜಿಲ್ಲಾ ಕದಳಿ ಘಟಕದ ಅಧ್ಯಕ್ಷರಾಗಿ ಸರೋಜಾ ಆರಾಧ್ಯ ನೇಮಕ*

ಮಾರ್ಚ್ 9, 2026

*ರೆಡ್‍ಕ್ರಾಸ್ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಶಿಬಿರ ಹಾಗೂ ಅರಿವು ಕಾರ್ಯಕ್ರಮ; ಮಹಿಳೆಯರು ಆರೋಗ್ಯ ಕಡೆ ಗಮನಹರಿಸಿ: ಆರ್.ಐಶ್ವರ್ಯ*

ಮಾರ್ಚ್ 9, 2026

*ರೋಟರಿ ಮಡಿಕೇರಿಯಿಂದ ಮಕ್ಕಳ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ*

ಮಾರ್ಚ್ 9, 2026

*ವನ್ಯಜೀವಿಗಳ ಮಾಹಿತಿ ಪಡೆದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.