Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
  • *ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*
  • *ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*
  • *ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.11 : ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿಯ ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನದ ಉದ್ಘಾಟನಾ ಸಮಾರಂಭ ಮಾ.15 ರಂದು ನಡೆಯಲಿದೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚೇರಳ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ರಾಘವಯ್ಯ ಅವರು ಭಾನುವಾರ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ದಾನಿಗಳು, ಸಮಾಜದ ಬಾಂಧವರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ನೂತನ ಸಮುದಾಯ ಭವನವನ್ನು ಎಲ್ಲಾ ಮೂಲಭೂತ ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ. ನೂತನ ಸಮುದಾಯ ಭವನವನ್ನು ಬೆಳಿಗ್ಗೆ 10 ಗಂಟೆಗೆ ವಿಧಾನಸಭೆಯ ಮಾಜಿ ಅಧ್ಯಕ್ಷ ಕೊಂಬಾರನ ಜಿ.ಬೋಪಯ್ಯ ಅವರು ಉದ್ಘಾಟಿಸಲಿದ್ದಾರೆ. ಚೇರಳ ಗೌಡ ಸಮಾಜದ ಅಧ್ಯಕ್ಷ ಅಯ್ಯಂಡ್ರ ಸಿ.ರಾಘವಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮಾಜಿ ಸಚಿವ ಮಂಡೇಪoಡ ಪಿ.ಅಪ್ಪಚ್ಚುರಂಜನ್, ಮಾಜಿ ಸಂಸದ ಪ್ರತಾಪ್ ಸಿಂಹ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಮಂಡೇಪoಡ ಪಿ.ಸುನಿಲ್ ಸುಬ್ರಮಣಿ ಪಾಲ್ಗೊಳ್ಳಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಉಪಾಧ್ಯಕ್ಷ ಡಾ.ತೇನನ ರಾಜೇಶ್, ಕೊಡಗು ಗೌಡ ಸಮಾಜದ ಅಧ್ಯಕ್ಷ ದಂಬೆಕೋಡಿ ಆನಂದ, ಮಾಜಿ ಅಧ್ಯಕ್ಷ ಪೇರಿಯನ ಜಯಾನಂದ, ಜಿ.ಪಂ ಮಾಜಿ ಸದಸ್ಯ ಬಲ್ಲಾರಂಡ ಮಣಿ ಉತ್ತಪ್ಪ, ಸಮಾಜ ಸೇವಕರು ಹಾಗೂ ಬೆಳೆಗಾರ ನಾಪಂಡ ಮುತ್ತಪ್ಪ, ಉದ್ಯಮಿ ಸುಳ್ಯಕೋಡಿ ಪ್ರದೀಪ್ ಕುಮಾರ್ ಹಾಗೂ ಕಾಫಿ ಬೆಳೆಗಾರ ಮರದಾಳು ಬಸಪ್ಪ ಉಪಸ್ಥಿತರಿರುವರು ಎಂದು ತಿಳಿಸಿದರು. *1.75 ಕೋಟಿ ರೂ. ವೆಚ್ಚದ ಕಟ್ಟಡ* ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 5 ಗ್ರಾಮಗಳ ಪೈಕಿ ಚೇರಳ ಗ್ರಾಮದ ಆಗ್ನೇಯ ಭಾಗದಲ್ಲಿ ನೆಲೆಸಿರುವ 22 ಕುಟುಂಬದ ಗೌಡ ಸಮುದಾಯದ ಸಮಾನ ಮನಸ್ಕ ಬಂಧುಗಳು 2008ರಲ್ಲಿ ಮರದಾಳು ದೊಡ್ಡ ಮನೆಯಲ್ಲಿ ಸಭೆ ಸೇರಿ ಒಂದು ಸಂಘವನ್ನು ರಚಿಸಲಾಯಿತು. ಇದಕ್ಕೆ ‘ಚೇರಳ ಗೌಡ ಸಂಘ’ ಎಂದು ಹೆಸರಿಡಲಾಯಿತು.
ಮೂರು ವರ್ಷಗಳ ಸತತ ಪ್ರಯತ್ನದ ನಂತರ ‘ಚೇರಳ ಗೌಡ ಸಂಘ’ ಕ್ಕಾಗಿ 2011ರಲ್ಲಿ ಸೂಕ್ತ ನಿವೇಶನವನ್ನು ಖರೀದಿ ಮಾಡಲಾಯಿತು. ಸರಕಾರದ ಮಟ್ಟದಲ್ಲಿ ‘ಚೇರಳ ಗೌಡ ಸಮಾಜ ಸಮುದಾಯ ಭವನ’ ಎಂದು ನೋಂದಣಿ ಮಾಡಲಾಯಿತು. ನಿವೇಶನಕ್ಕೆ ಬೇಕಾದ ಹಣವನ್ನು ಸಮಾಜದ ಪ್ರತಿಯೊಂದು ಕುಟುಂಬದಿAದ ದಾನದ ರೂಪದಲ್ಲಿ ಸಂಗ್ರಹಿಸಲಾಯಿತು. 2011ರಲ್ಲಿ ಕಟ್ಟಡ ನಿರ್ಮಾಣಕ್ಕೆ ಶಿಲನ್ಯಾಸ ಮಾಡಲಾಯಿತು. ಸದಸ್ಯರು ನೀಡಿದ ದಾನದ ಹಣದಿಂದ ಕಟ್ಟಡ ನಿರ್ಮಾಣ ಪ್ರಾರಂಭವಾಯಿತು. ಸರಕಾರದ ಹಿಂದುಳಿದ ವರ್ಗಗಳ ಇಲಾಖೆಯಿಂದ 2015 ಮತ್ತು 2020ರಲ್ಲಿ ರೂ.70 ಲಕ್ಷ ಬಿಡುಗಡೆಯಾಯಿತು. ಕಟ್ಟಡ ಕಾಮಗಾರಿ ಮುಂದುವರೆದAತೆ ಜಿಲ್ಲೆಯ ಹಾಗೂ ಇತರ ಜಿಲ್ಲೆಗಳಲ್ಲಿ ನೆಲೆಸಿರುವ ಗೌಡ ಸಮುದಾಯದ ಮಂದಿಯಿAದ ದಾನದ ರೂಪದಲ್ಲಿ 30 ಲಕ್ಷ ರೂ. ಹಣ ಸಂಗ್ರಹಿಸಲಾಯಿತು. 2025 ಜೂನ್ ತಿಂಗಳಿನಲ್ಲಿ 1.25 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ತಲೆ ಎತ್ತಿತ್ತು. ಆದರೆ ಕಟ್ಟಡದ ಕಾಮಗಾರಿ ಪೂರ್ಣಗೊಳಿಸಲು ಇನ್ನೂ 50 ಲಕ್ಷ ರೂಪಾಯಿಗಳು ಬೇಕಾಯಿತು. ಈ ಕೊರತೆಯನ್ನು ತುಂಬಲು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸದಸ್ಯರಲ್ಲಿ ಮನವಿ ಮಾಡಲಾಯಿತು. ಸಮುದಾಯ ಭವನದ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ಸಹಕಾರ ನೀಡುವುದಾಗಿ ಗೌಡ ಸಮಾಜಗಳ ಒಕ್ಕೂಟ ಭರವಸೆ ನೀಡಿತು. ಅದರಂತೆ ಸುಮಾರು 20 ಲಕ್ಷ ರೂ. ಗಳನ್ನು ದಾನಿಗಳಿಂದ ಸಂಗ್ರಹಿಸಿ ಒಕ್ಕೂಟ ನೀಡಿತು. ಉಳಿದ ಹಣವನ್ನು ಚೇರಳ ಗೌಡ ಸಮಾಜದ ಸದಸ್ಯರು ಮನೆ ಮನೆಗೆ ತೆರಳಿ ಸಂಗ್ರಹಿಸಿದರು. ‘ಸಮಾಜ ನಿನಗೇನು ನೀಡಿದೆ ಎಂದು ಕೇಳುವ ಬದಲು ಸಮಾಜಕ್ಕಾಗಿ ನೀನೇನು ಮಾಡಿದೆ’ ಎಂಬ ಆದರ್ಶದೊಂದಿಗೆ ಕಾರ್ಯೋನ್ಮುಖವಾದ ಚೇರಳ ಗೌಡ ಸಮಾಜ ಪ್ರಸ್ತುತ ಭವ್ಯ ಕಟ್ಟಡವನ್ನು ನಿರ್ಮಿಸಿ ಪೂರ್ಣಗೊಳಿಸಿದೆ ಎಂದು ಅಯ್ಯಂಡ್ರ ರಾಘವಯ್ಯ ವಿವರಿಸಿದರು. ಸಹ ಖಜಾಂಚಿ ಪೇರಿಯನ ಉದಯ ಕುಮಾರ್ ಮಾತನಾಡಿ ಸುಮಾರು 17 ವರ್ಷಗಳ ಸತತ ಪ್ರಯತ್ನದ ನಂತರ ನೂತನ ಭವ್ಯವಾದ ಸಮುದಾಯ ಭವನ ನಿರ್ಮಾಣಗೊಂಡು ಲೋಕಾರ್ಪಣೆಗೊಳ್ಳುತ್ತಿದೆ. ಉದ್ಘಾಟನಾ ಸಮಾರಂಭಕ್ಕೆ ಕೊಡಗು, ಪಿರಿಯಾಪಟ್ಟಣ, ಹುಣುಸೂರು, ಮೈಸೂರು, ಬೆಂಗಳೂರು ಸೇರಿದಂತೆ ರಾಜ್ಯದಲ್ಲಿರುವ ಎಲ್ಲಾ ಗೌಡ ಸಮಾಜಗಳ ಬಾಂಧವರು ಆಗಮಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಹೊಸಮನೆ ಪೂವಯ್ಯ, ಉಪ ಕಾರ್ಯದರ್ಶಿ ನೂಜಿಬೈಲು ನಾಣಯ್ಯ, ನಿರ್ದೇಶಕರಾದ ಕಲ್ಪಡ ಶೋಭ ಹಾಗೂ ನೂಜಿಬೈಲು ಅರುಣಾಕ್ಷಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಬೆಂಗಳೂರು NEWS DESK ಮಾ.10: ಆನೆ-ಮಾನವ ಸಂಘರ್ಷ ನಿಯಂತ್ರಿಸಲು 2025-26ನೇ ಸಾಲಿನಲ್ಲಿ ಮಡಿಕೇರಿ ವಿಭಾಗಕ್ಕೆ 7 ಕಿ.ಮೀ ಮತ್ತು ನಾಗರಹೊಳೆ…

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026

*ಪರಿಹಾರಕ್ಕಿಂತಲೂ ಅಮೂಲ್ಯವಾದದ್ದು ಮನುಷ್ಯನ ಜೀವ : ಕಾಡಾನೆ ಸೆರೆಗೆ ಶಾಸಕರ ಸೂಚನೆ*

ಮಾರ್ಚ್ 10, 2026

*ಹಮ್ಮಿಯಾಲದಲ್ಲಿ ಸಾರಿಗೆ ಸಮಸ್ಯೆ : ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 10, 2026

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.