Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*
  • *ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*
  • *ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*
  • *ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*
  • *ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*
  • *ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*
  • *ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*
  • *ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*
  • *ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*
  • *ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸೋಮವಾರಪೇಟೆ : ಮಹಿಳೆಯರು ಶಿಕ್ಷಣ ಪಡೆಯಲು ಕೆ.ಹೆಚ್.ಧನಲಕ್ಷ್ಮೀ ಸಲಹೆ*

ಮಾರ್ಚ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸೋಮವಾರಪೇಟೆ ಮಾ.13 NEWS DESK : ಶಿಕ್ಷಣವೇ ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುತ್ತದೆ. ಶಿಕ್ಷಣ ಪಡೆದ ಮಹಿಳೆ ಕುಟುಂಬದ ಅಭಿವೃದ್ಧಿಗೆ ಮಾತ್ರವಲ್ಲದೆ ಸಮಾಜದ ಪ್ರಗತಿಗೂ ಪ್ರಮುಖ ಪಾತ್ರವಹಿಸುತ್ತಾಳೆ ಎಂದು ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆ.ಹೆಚ್.ಧನಲಕ್ಷ್ಮೀ ಅಭಿಪ್ರಾಯಿಸಿದರು. ಕೊಡಗು ಜಿಲ್ಲೆ ಮತ್ತು ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಹಾಗೂ ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಾಲೇಜು ಸಭಾಂಗಣದಲ್ಲಿ ನಡೆದ ದಿ.ಸೀತಾಬಾಯಿ ಮತ್ತು ರಾಮಚಂದ್ರ ಕಾಮತ್ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಪ್ರತಿಯೊಂದು ಕುಟುಂಬವೂ ಹೆಣ್ಣು ಮಕ್ಕಳ ಶಿಕ್ಷಣವನ್ನು ಅತ್ಯಂತ ಮಹತ್ವದ ಕರ್ತವ್ಯವೆಂದು ಪರಿಗಣಿಸಬೇಕು. ಇಂದಿನ ದಿನಗಳಲ್ಲಿ ಪೋಷಕರು ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿರುವುದು ಸಂತಸದ ವಿಚಾರವಾಗಿದೆ. ಆದರೆ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಉನ್ನತ ಶಿಕ್ಷಣ ಪಡೆಯಲು ಕೆಲ ತೊಂದರೆಗಳು ಎದುರಾಗುತ್ತಿವೆ. ಸಾರಿಗೆ, ಆರ್ಥಿಕ ಸಮಸ್ಯೆ ಮತ್ತು ಸಾಮಾಜಿಕ ಮನೋಭಾವನೆಗಳಂತಹ ಅಡೆತಡೆಗಳನ್ನು ನಿವಾರಿಸುವುದು ಅಗತ್ಯ ಎಂದು ಅವರು ಅಭಿಪ್ರಾಯಪಟ್ಟರು. ಪ್ರಾಚೀನ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನಿಷೇದವಾಗಿತ್ತು. ಮೂಢನಂಬಿಕೆ ಸೇರಿದಂತೆ ಮಹಿಳಾ ದ್ವೇಷಿ ಪದ್ದತಿ, ಪಟ್ಟಭದ್ರಹಿತಾಸಕ್ತಿಗಳ ಚಿತಾವಣೆಯಿಂದ ಮಹಿಳೆಯರು ಪ್ರಾಣಿಗಳಂತೆ ನಾಲ್ಕು ಗೋಡೆಯ ಮಧ್ಯದಲ್ಲಿ ಬದುಕಬೇಕಿತ್ತು. ಮಧ್ಯಯುಗದಲ್ಲಿ ವಿದೇಶಿಯರ ಆಡಳಿತದಲ್ಲಿ ಮಹಿಳೆಯರು ಸ್ವಲ್ಪಮಟ್ಟಿಗೆ ಉಸಿರಾಡುವಂತಾಯಿತು. ಮಹಿಳಾ ಸ್ವತಂತ್ರ ಮತ್ತು ಶಿಕ್ಷಣಕ್ಕೆ ಬ್ರಿಟಿಷ್ ಅಧಿಕಾರಿಗಳ ಮತ್ತು ಸಮಾಜ ಸುಧಾರಕರ ಕೊಡುಗೆ ಅಪಾರವಾದುದು ಎಂದು ಹೇಳಿದರು. ಸ್ವಾತಂತ್ರ ನಂತರ ಮಹಿಳಾ ಸುರಕ್ಷತೆಗೆ ಹೊಸ ಕಾನೂನುಗಳನ್ನು ತರಲಾಯಿತು. ಕ್ರಾಂತಿಕಾರಕ ಬದಲಾವಣೆ ಆಯಿತು. ಮಹಿಳಾ ಶಿಕ್ಷಣ ಜಾಗೃತಿ ಮೂಡಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ. ರಮೇಶ್ ಅವರು ಮಾತನಾಡಿ, ಶಿಕ್ಷಣ ಪಡೆದ ಮಹಿಳೆ ತನ್ನ ಹಕ್ಕುಗಳನ್ನು ಅರಿತು ಸಮಾಜದಲ್ಲಿ ಆತ್ಮವಿಶ್ವಾಸದಿಂದ ಬದುಕಲು ಸಾಧ್ಯವಾಗುತ್ತದೆ. ಮಹಿಳೆಯರು ವಿದ್ಯಾಭ್ಯಾಸದ ಮೂಲಕ ಕಲೆ, ವಿಜ್ಞಾನ, ಸಾಹಿತ್ಯ, ಆಡಳಿತ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಇಂತಹ ಸಾಧನೆಗಳು ಸಮಾಜದಲ್ಲಿ ಹೊಸ ದಾರಿಯನ್ನು ತೋರಿಸುತ್ತವೆ. ಹೆಣ್ಣು ಮಕ್ಕಳಿಗೆ ಶಿಕ್ಷಣದ ಅವಕಾಶ ನೀಡುವುದು ಕುಟುಂಬದ ಜವಾಬ್ದಾರಿಯಷ್ಟೇ ಅಲ್ಲ, ಅದು ಸಮಾಜದ ನೈತಿಕ ಕರ್ತವ್ಯವೂ ಆಗಿದೆ ಎಂದು ಅವರು ಹೇಳಿದರು. ಕನ್ನಡ ಮಾಧ್ಯಮದಲ್ಲಿ ಪಿಯುಸಿ ಓದಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಆಲೂರು ಸಿದ್ದಾಪುರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಪ್ರಬಂಧ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಪಿ.ಸಿ.ದೀಕ್ಷಿತಾ(ಪ್ರ), ಲಿತಿನಾ(ದ್ವಿ), ಇಶಾಂತ್ ರೆಹಾನ(ತೃ), ಗೀತಾಗಾಯನ ಸ್ಪರ್ಧೆಯಲ್ಲಿ ಕಿಶೋರ್(ಪ್ರ), ಅಂಜಲಿ(ದ್ವಿ), ಧನ್ಯಾ(ತೃ) ಅವರುಗಳಿಗೆ ಅತಿಥಿಗಳು ಬಹುಮಾನ ವಿತರಿಸಿದರು. ಸನಾ ಹರ್ಷ ಮತ್ತು ಕಿಶೋರ್ ಅವರಿಂದ ಕನ್ನಡ ಗೀತೆಗಳನ್ನು ಹಾಡಿದರು. ಕಾರ್ಯಕ್ರಮದಲ್ಲಿ ದತ್ತಿ ದಾನಿಗಳಾದ ಬೆಂಗಳೂರಿನ ಆರ್.ರಾಜರಾವ್, ಸಂದ್ಯಾಕಾಮತ್, ಕ.ಸಾ.ಪ ಜಿಲ್ಲಾಧ್ಯಕ್ಷ ಕೇಶವ ಕಾಮತ್, ತಾಲ್ಲೂಕು ಅಧ್ಯಕ್ಷ ಎಸ್.ಡಿ.ವಿಜೇತ್, ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್, ಪ್ರಾಂಶುಪಾಲ ಡಾ.ಬಿ.ಡಿ.ಹರ್ಷ, ಕಸಾಪ ಪದಾಧಿಕಾರಿಗಳಾದ ಎ.ಪಿ.ವೀರರಾಜು, ಜ್ಯೋತಿ ಅರುಣ್, ಎಚ್.ಜೆ.ಜವರಪ್ಪ, ವಾಸುರೈ ಇದ್ದರು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೆ.1 ರಂದು ಸಿಎನ್‌ಸಿಯಿಂದ 31ನೇ ವರ್ಷದ ಕೈಲ್ ಪೊವ್ದ್ ಆಚರಣೆ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಆದಾಯ ತೆರಿಗೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಫೀ.ಮಾ. ಕಾರ್ಯಪ್ಪ ಕಾಲೇಜ್ ನಲ್ಲಿ ಕಾರ್ಯಾಗಾರ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ಕೊಡಗು ವಿಶ್ವವಿದ್ಯಾಲಯದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ…

*ಕಂದಾಯ ಮತ್ತು ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಲಿ : ಕೊಡಗು ಬಿಜೆಪಿ ಒತ್ತಾಯ*

ಆಗಷ್ಟ್ 25, 2026

*ಕೊಡಗಿನಲ್ಲಿ ಕಸ್ತೂರಿ ರಂಗನ್ ವರದಿ: ಸಾಧಕ-ಬಾಧಕಗಳ ಕುರಿತು ಮಹತ್ವದ ಸಮಾಲೋಚನಾ ಸಭೆ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ವಿಜೃಂಭಣೆಯ ಓಣಂ ಆಚರಣೆ: ಸೆಪ್ಟೆಂಬರ್ 6ರಂದು ಮಹಾಬಲಿ ಮೆರವಣಿಗೆ, ಸದ್ಯ ಹಾಗೂ ಸಾಂಸ್ಕೃತಿಕ ವೈಭವ*

ಆಗಷ್ಟ್ 25, 2026

*ಮೈಸೂರು ದಸರಾ :  ದುಬಾರೆ ಶಿಬಿರದಿಂದ ಗಜ ಪಯಣ*

ಆಗಷ್ಟ್ 25, 2026

*ವಿರಾಜಪೇಟೆಯಲ್ಲಿ ಮದ್ಯಾವರ್ಜನಾ ಶಿಬಿರದ 2ನೇ ಹಂತದ ಪೂರ್ವಭಾವಿ ಸಭೆ: ಸಿದ್ಧತೆ ಹಾಗೂ ಅತಿಥಿಗಳ ಆಯ್ಕೆ ಕುರಿತು ಸುದೀರ್ಘ ಚರ್ಚೆ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026

*ಪುಸ್ತಕ ಓದಿ ಜ್ಞಾನ ಪಡೆಯಲು ಕರೆ : ಓಂಕಾರ ಲೋಕ ಕೃತಿ ಲೋಕಾರ್ಪಣೆ*

ಆಗಷ್ಟ್ 25, 2026

*ದುಬಾರೆ ಮೀಸಲು ಅರಣ್ಯದಲ್ಲಿ ಅಕ್ರಮ ಪ್ರವೇಶ : ಮೂವರ ಬಂಧನ*

ಆಗಷ್ಟ್ 25, 2026

*ಆ.26ರಿಂದ ಸೆ.6ರವರೆಗೆ ರಾಜ್ಯಾದ್ಯಂತ “ಸೀರತ್ ಅಭಿಯಾನ”*

ಆಗಷ್ಟ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.