Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*
  • *ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
  • *ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*
  • *ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*
  • *ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*
  • * ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*
  • *ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*
  • *ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*
  • *ಕಸಾಪ ಸಂತಾಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು, ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸ್ವಚ್ಛತಾ ಅಭಿಯಾನವು ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ, ಪ್ರವಾಸೋದ್ಯಮ ಹಾಗೂ ಪ್ರವಾಸೋದ್ಯಮ ಇಲಾಖೆಯ ಪಾಲುದಾರರು ಹಾಗೂ ಇತರರ ಸಹಕಾರದಲ್ಲಿ ಸ್ವಚ್ಛ ಹಾಗೂ ಸುಂದರ ಕೊಡಗು ಅಭಿಯಾನ ನಡೆಯಿತು. ನಗರದ ರಾಜಾಸೀಟು ಉದ್ಯಾನವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ, ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್, ಪ್ರವಾಸೋದ್ಯಮ ಪಾಲುದಾರರಾದ ಬಿ.ಜಿ.ಅನಂತಶಯನ, ಜಿ.ಚಿದ್ವಿಲಾಸ್, ಎಫ್‍ಎಂಸಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ರಾಘವ, ಓಂಕಾರೇಶ್ವರ ದೇವಸ್ಥಾನದ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಟೂರ್ ಅಂಡ್ ಟ್ರಾವೆಲ್ ಅಸೋಷಿಯೇಷನ್ ಅಧ್ಯಕ್ಷರಾದ ವಸಂತ, ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಕಾರ್ಯದರ್ಶಿ ನಾಸೀರ್, ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ಜತಿನ್, ಇತರರು ಇದ್ದರು. ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷರಾದ ನಾಗೇಂದ್ರ ಪ್ರಸಾದ್(ಕುಶಾಲನಗರ), ರಿವರ್ ರ್ಯಾಪ್ಟಿಂಗ್ ಅಸೋಷಿಯೇಷನ್(ದುಬಾರೆ),ಸೋಮವಾರಪೇಟೆ ಹೋಂ ಸ್ಟೇ ಅಸೋಷಿಯನ್ ಅಧ್ಯಕ್ಷರಾದ ರೋಹಿತ್(ಸೋಮವಾರಪೇಟೆ) ಇತರರು ಆಯಾಯ ತಾಲ್ಲೂಕಿನಲ್ಲಿ ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರು ಮಡಿಕೇರಿ ನಗರದಲ್ಲಿ ಅರ್ಧ ಲೀಟರ್ ಮತ್ತು ಒಂದು ಲೀಟರ್ ಬಾಟಲಿ ನೀರನ್ನು ನಿಷೇಧಿಸಲಾಗಿದೆ. ಇದರಿಂದ ಪ್ಲಾಸ್ಟಿಕ್ ಬಳಕೆ ಸಾಧ್ಯವಾದಷ್ಟು ನಿಯಂತ್ರಣಕ್ಕೆ ಬಂದಿದೆ. ಅದೇ ರೀತಿ ಮುಂದುವರೆಯಬೇಕು. ಪ್ಲಾಸ್ಟಿಕ್ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡಬೇಕು ಎಂದರು. ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕರಾದ ನಿತಿನ್ ಚಕ್ಕಿ ಅವರು ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಪ್ಲಾಸ್ಟಿಕ್‍ನ್ನು ಬಳಸಬಾರದು. ಶುಚಿತ್ವಕ್ಕೆ ಒತ್ತು ಕೊಟ್ಟಲ್ಲಿ ಉತ್ತಮ ಪರಿಸರ ಮತ್ತು ಆರೋಗ್ಯವನ್ನು ಕಾಣಬಹುದು ಎಂದು ತಿಳಿಸಿದರು. ಹೋಟೆಲ್ ಮತ್ತು ರೆಸಾರ್ಟ್ ಅಸೋಷಿಯೇಷನ್ ಅಧ್ಯಕ್ಷರಾದ ದಿನೇಶ್ ಕಾರ್ಯಪ್ಪ ಅವರು ಕೊಡಗು ಜಿಲ್ಲಾ, ತಾಲ್ಲೂಕು ಹಾಗೂ ಪ್ರವಾಸಿ ಸ್ಥಳಗಳು ಸೇರಿದಂತೆ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳ ಜೊತೆಗೂಡಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹಚ್ಚಹಸಿರಿನ ಕೊಡಗು ಮತ್ತಷ್ಟು ಸುಂದರವಾಗಿರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದ್ದಾರೆ ಎಂದು ಹೇಳಿದರು. ಹೋಂ ಸ್ಟೇ ಅಸೋಷಿಯೇಷನ್ ಅಧ್ಯಕ್ಷರಾದ ಮೋಂತಿ ಗಣೇಶ್ ಅವರು ಮಾತನಾಡಿ ಉತ್ತಮ ಪರಿಸರಕ್ಕೆ ಒತ್ತು ಕೊಟ್ಟಿದ್ದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಸೆಳೆಯಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದರು. ಪ್ರವಾಸೋದ್ಯಮ ಪಾಲುದಾರರಾದ ಬಿ.ಜಿ.ಅನಂತಶಯನ ಅವರು ಮಾತನಾಡಿ ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ತಲಕಾವೇರಿ, ಓಂಕಾರೇಶ್ವರ ದೇವಸ್ಥಾನ, ಭಾಗಮಂಡಲ, ಪ್ರವಾಸಿ ಸ್ಥಳಗಳಾದ ಮಡಿಕೇರಿ ತಾಲ್ಲೂಕಿನ ಅಬ್ಬಿ ಜಲಪಾತ, ನಾಲ್ಕುನಾಡು ಅರಮನೆ, ರಾಜರ ಗದ್ದುಗೆ, ರಾಜಾಸೀಟು, ಕೋಟೆ, ಅಬ್ಬಿ ಜಲಪಾತ, ಚೇಲಾವರ ಜಲಪಾತ. ಕುಶಾಲನಗರ ತಾಲ್ಲೂಕಿನ ದುಬಾರೆ ರಿವರ್ ರ್ಯಾಫ್ಟಿಂಗ್, ಕಾವೇರಿ ನಿಸರ್ಗಧಾಮ, ಹಾರಂಗಿ ಜಲಾಶಯ, ಹಾರಂಗಿ ಉದ್ಯಾನವನ ಆನೆ ಶಿಬಿರ ಮತ್ತು ಹಿನ್ನೀರಿನ ಸಾಹಸ ಕ್ರೀಡೆ ಸ್ಥಳಗಳು, ಚಿಕ್ಲಿ ಹೊಳೆ. ಸೋಮವಾರಪೇಟೆ ತಾಲ್ಲೂಕಿನ ಹೊನ್ನಮ್ಮ ಕೆರೆ, ಮಕ್ಕಳ ಗುಡಿ ಬೆಟ್ಟ, ಕೋಟೆ ಬೆಟ್ಟ, ಸೂರ್ಲಬ್ಬಿ ಜಲಪಾತ ಮತ್ತು ಮಲ್ಲಳ್ಳಿ ಜಲಪಾತ. ಹಾಗೆಯೇ ಪೊನ್ನಂಪೇಟೆ ತಾಲ್ಲೂಕಿನ ಬರ್ಪುಹೊಳೆ ರಿವರ್ ರ್ಯಾಫ್ಟಿಂಗ್ ಮತ್ತು ಇರ್ಪು ಜಲಪಾತ ಇಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಹಾಗೆಯೇ ಮಡಿಕೇರಿ ನಗರದಲ್ಲಿ ವಿರಾಜಪೇಟೆ ರಸ್ತೆ, ಭಾಗಮಂಡಲ-ತಲಕಾವೇರಿ ರಸ್ತೆ(ಮಂಗಳೂರು ರಸ್ತೆ), ಮಡಿಕೇರಿ-ಸಿದ್ದಾಪುರ ರಸ್ತೆ ಮತ್ತು ಮಡಿಕೇರಿ-ಮೈಸೂರು ರಸ್ತೆ ಈ ವ್ಯಾಪ್ತಿಯ 2 ಕಿ,.ಮೀ ವರೆಗೆ ಸ್ವಚ್ಛತಾ ಅಭಿಯಾನ ನಡೆಯಿತು. ಕುಶಾಲನಗರದಲ್ಲಿ ಕೊಪ್ಪ ಗೇಟಿನಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ, ಸೋಮೇಶ್ವರ ದೇವಸ್ಥಾನದಿಂದ ಕೋಣಮಾರಮ್ಮ ದೇವಸ್ಥಾನ ವೃತ್ತದ ಮುಖಾಂತರ ಐಬಿ ರಸ್ತೆಗಾಗಿ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ, ತಾವರೆಕೆರೆಯಿಂದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದವರೆಗೆ ಮತ್ತು ಅಯ್ಯಪ್ಪ ಸ್ವಾಮಿ ದೇವಸ್ಥಾನದಿಂದ ಕೆಎಸ್‍ಆರ್‍ಸಿ ಬಸ್ ನಿಲ್ದಾಣದವರೆಗೆ ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಮತ್ತಷ್ಟು ಮಾಹಿತಿ: ಕೊಡಗು ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಕಾವೇರಿ ನಿಸರ್ಗಧಾಮ ಎನ್.ಟಿ.ಸಿ ಹಾಗೂ ಕೂರ್ಗ್ ರಿವೇರ್ ರೆಸಾರ್ಟ್ ಇದರ ಸಹಯೋಗದಿಂದ ಹಾಗೂ ಅರಣ್ಯ ಅಧಿಕಾರಿಗಳು ಇವರೆಲ್ಲರ ಸಹಯೋಗದಿಂದ ಸುಮಾರು 50 ಜನರು ಕಾವೇರಿ ನಿಸರ್ಗಧಾಮ ಮುಂಭಾಗದಿಂದ ಗುಡ್ಡೆಹೊಸೂರು ರೋಡು ಮಾರ್ಗವಾಗಿ ಎಡಕ್ಕೂ ಹಾಗೂ ಬಲಕ್ಕೂ ಸ್ವಚ್ಛತಾ ಕಾರ್ಯವನ್ನು ಕೈಗೊಂಡಿರುತ್ತಾರೆ. ರೋಡಿನ ಮಧ್ಯೆ ಕಸದ ರಾಶಿಯೇ ಇತ್ತು ಅದನ್ನು ಆಯಾಯ ಗ್ರಾಮ ಪಂಚಾಯಿತಿಗಳು ಒಂದು ನಿರ್ದಿಷ್ಟ ಜಾಗದಲ್ಲಿ ಕಸದ ತೊಟ್ಟಿ ಇಟ್ಟರೆ ಈ ಕಸವನ್ನು ಸ್ವಲ್ಪಮಟ್ಟಿಗೆ ಆದರೂ ಸುಧಾರಿಸಬಹುದು. ಹಾಗೆಯೇ ಸರ್ಕಾರ ಇದರ ಬಗ್ಗೆ ಹೆಚ್ಚು ಆಸಕ್ತಿ ತೋರಿಸಿ ಪ್ರವಾಸೋದ್ಯಮಗಳು ಮುಂಬರುವ ದಿನಗಳಲ್ಲಿ ಹೆಚ್ಚು ಜನರನ್ನು ಕೊಡಗಿನಲ್ಲಿ ಆಕರ್ಷಿಸುತ್ತದೆ. ಆದ್ದರಿಂದ ಕಸದ ರಾಶಿಯು ಅದೇ ತರ ಹೆಚ್ಚಾಗುತ್ತದೆ. ಇದಕ್ಕೆ ಪರಿಹಾರವಾಗಿ ಆಯಾಯ ನಿರ್ದಿಷ್ಟ ಸ್ಥಳಗಳಲ್ಲಿ ಕಸದ ಬುಟ್ಟಿಯನ್ನು ಅಳವಡಿಸಲು ಕ್ರಮವನ್ನು ಕೈಗೊಳ್ಳಬೇಕು ಎಂಬುದು ಕೇಳಿಬಂದೀತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಿಶೇಷಚೇತನರಿಗೆ ಕ್ರೀಡಾಕೂಟ : ಕ್ರೀಡೆಯಿಂದ ದೈಹಿಕ, ಮಾನಸಿಕ ದೃಢತೆ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ*

ಮಾರ್ಚ್ 16, 2026

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಕೊಡಗಿನ ವಿವಿಧೆಡೆ ಸ್ವಚ್ಛತಾ ಅಭಿಯಾನ*

ಮಾರ್ಚ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.16 NEWS DESK : ಸ್ವಚ್ಛ ಕೊಡಗು-ಸುಂದರ ಕೊಡಗು ಹೆಸರಿನಲ್ಲಿ ಪ್ರಸಿದ್ಧ ಪುಣ್ಯ ಕ್ಷೇತ್ರಗಳು ಸೇರಿದಂತೆ ಪ್ರವಾಸಿ ಸ್ಥಳಗಳು,…

*ಹೋಂ ನರ್ಸಿಂಗ್ ಕೇರ್ ಟೇಕರ್ ನಿಂದ ಕಳ್ಳತನ : ಆರೋಪಿಯ ಬಂಧನ*

ಮಾರ್ಚ್ 16, 2026

*ವಾಹನ, ದನ ಕಳವು ಪ್ರಕರಣದ ಆರೋಪಿಗಳ ಬಂಧನ*

ಮಾರ್ಚ್ 16, 2026

*ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 16, 2026

*ಸೋಮವಾರಪೇಟೆ : ವಿದ್ಯಾರ್ಥಿಗಳು ಸಮಯದ ಮೌಲ್ಯ ಅರಿತುಕೊಳ್ಳಿ : ಶ್ರೀ ನಿಶ್ಚಲ ನಿರಂಜನ ದೇಶಿಕೇಂದ್ರ ಸ್ವಾಮೀಜಿ ಸಲಹೆ*

ಮಾರ್ಚ್ 16, 2026

* ಸೋಮವಾರಪೇಟೆ : ಮಾ.27 ರಂದು ಶ್ರೀ ರಾಮನವಮಿ ಉತ್ಸವ*

ಮಾರ್ಚ್ 16, 2026

*ಗೃಹಬಳಕೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಗ್ರಾಹಕರ ಗಮನಕ್ಕೆ : ಜಿಲ್ಲಾಡಳಿತದಿಂದ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ*

ಮಾರ್ಚ್ 16, 2026

*ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮ : “ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ನಡೆಸಲು” ಅನುಭವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಮಾರ್ಚ್ 16, 2026

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.