
ಸುಂಟಿಕೊಪ್ಪ ಮಾ.20 NEWS DESK : 7ನೇ ಹೊಸಕೋಟೆಯ ತೊಂಡೂರು ಗ್ರಾಮದಲ್ಲಿ ನೆಲೆಸಿದ್ದ ಕಾಫಿ ಬೆಳೆಗಾರ ಚೇನಂಡ ಎ.ಉತ್ತಯ್ಯ (92) ನಿಧನರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ಮಡಿಕೇರಿಯ ಕೊಡವ ರುದ್ರಭೂಮಿಯಲ್ಲಿ ನೆರವೇರಿತು. ಮೃತರು ಓರ್ವ ಪುತ್ರ ಮತ್ತು ಪುತ್ರಿಯನ್ನು ಆಗಲಿದ್ದಾರೆ. ಚೇನಂಡ ಉತ್ತಯ್ಯ ಅವರು ಈ ಬಾರಿಯ ಹಾಕಿ ಉತ್ಸವ ನಡೆಸುವ ಕುಟುಂಬದ ಪಟ್ಟೆದಾರರಾಗಿದ್ದರು. ಉತ್ತಯ್ಯ ಅವರು ಲಯನ್ಸ್ ಕ್ಲಬ್ನ ಹಿರಿಯ ಸದಸ್ಯರಾಗಿದ್ದು, ಕೊಡಗರಹಳ್ಳಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಸ್ಥಾನ ಟ್ರಸ್ಟ್ನ ಸ್ಥಾಪಕ ಟ್ರಸ್ಟಿಗಳಲ್ಲಿ ಒಬ್ಬರಾಗಿದ್ದರು. ಸುಂಟಿಕೊಪ್ಪ ಕೊಡವ ಸಮಾಜದ ಅಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.









