Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
  • *ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*
  • *ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*
  • *ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*
  • *ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
  • *ನಿಧನ ಸುದ್ದಿ*
  • *ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*
  • *ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*
  • *ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*
  • *ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮಾ.20 : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವಶದಲ್ಲಿರುವ ಭಾಗಮಂಡಲ ತಲಕಾವೇರಿ ದೇವಸ್ಥಾನ ಮತ್ತು ಅಂಜನಗೇರಿ ಬೆಟ್ಟಗೇರಿ ಗ್ರಾಮದ ಶ್ರೀ ಬೆಳ್ಳಾರಿಕಮ್ಮ ದೇವಾಲಯಕ್ಕೆ ಸೇರಿದ ಒತ್ತುವರಿಯಾಗಿರುವ ಜಾಗವನ್ನು, ಆಯಾ ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕೆಂದು ಕೊಡಗು ಏಕೀಕರಣ ರಂಗ ಮನವಿ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಕೊಡಗು ಏಕೀಕರಣ ರಂಗದ ಪ್ರಮುಖರಾದ ಮಂದಪoಡ ಕೆ.ಅಪ್ಪಚ್ಚು ಅವರು ಮಾತನಾಡಿ, ಈ ಎರಡೂ ದೇವಸ್ಥಾನಗಳ ಜಾಗವನ್ನು ಒತ್ತುವರಿ ಮಾಡಿಕೊಂಡಿರುವ ಸಮುದಾಯಗಳ ಸಮಾಜಕ್ಕೆ ಸಂಘಟನೆಯ ಮೂಲಕ ಪತ್ರವನ್ನು ಬರೆದು, ಒತ್ತುವರಿದಾರರ ಮನವೊಲಿಸಿ ದೇವಸ್ಥಾನದ ಜಾಗವನ್ನು ತೆರವು ಮಾಡುವಂತೆ ಕೇಳಿಕೊಳ್ಳಲಾಗಿದೆಯೆಂದು ತಿಳಿಸಿದರು. ಸಂಘಟನೆಯ ಮನವಿಗೆ ಸ್ಪಂದಿಸಿ ಒತ್ತುವರಿದಾರರು, ಒತ್ತುವರಿಯನ್ನು ತೆರವುಗೊಳಿಸಲಿ. ಇಲ್ಲವಾದಲ್ಲಿ ಸರ್ಕಾರದ ಮೂಲಕ ಒತ್ತುವರಿ ತೆರವಿನ ಪ್ರಕ್ರಿಯೆಗಳು ನಡೆಯಬೇಕೆಂದು ತಿಳಿಸಿದ ಅವರು, ಶ್ರೀ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯದ ಜಮೀನು ಮತ್ತು ಅಂಜನಗೇರಿ ಬೆಟ್ಟಗೇರಿ ಗ್ರಾಮದ ಶ್ರೀ ಬೆಳ್ಳಾರಿಕಮ್ಮ ದೇವಾಲಯದ ದೇವರಕಾಡು ಒತ್ತುವರಿಯಾಗಿ, ಕಾಫಿ ತೊಟಗಳಾಗಿ, ರೆಸಾರ್ಟ್ಗಳಾಗಿ ಬದಲಾಗುತ್ತಿದ್ದರು ಕ್ರಮ ಕೈಗೊಳ್ಳದ ಶ್ರೀ ಭಗಂಡೇಶ್ವರ ತಲಕಾವೇರಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ, ಕುಶಾಲನಗರ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ, ದೇವಾಲಯದ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲು ಅನುಮತಿ ನೀಡಿದ ಭಾಗಮಂಡಲ ಪಂಚಾಯ್ತಿ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದರು. ಮಾಯವಾದ ಕಡತ-ಕೊಡಗು ಏಕೀಕರಣ ರಂಗವು 2012-13ನೇ ಸಾಲಿನಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವಶದಲ್ಲಿರುವ ದೇವಾಲಯಗಳ ಜಮೀನಿನ ಒತ್ತುವರಿ ತೆರವಿಗೆ ಮನವಿ ಮಾಡಿತ್ತು, ಈ ಬಗ್ಗೆ ಭೂ ಮಾಪನ ಇಲಾಖೆ ಸಮಗ್ರವಾದ ವರದಿ ಸಲ್ಲಿಸಿತ್ತು. ಈ ವರದಿಯಂತೆ ಭಾಗಮಂಡಲ ತಲಕಾವೇರಿ ದೇವಸ್ಥಾನದ ಒತ್ತುವರಿ ತೆರವಿಗೆ ಸಂಘಟನೆ ಸರ್ಕಾರಕ್ಕೆ ಆಗ್ರಹಿಸಿತ್ತು. ಆದರೆ, ಪಟ್ಟಭದ್ರರ ಗುಂಪು ಆ ಕಡತವನ್ನೆ ಇಲ್ಲದಂತೆ ಮಾಡಿತ್ತೆಂದು ಮಂದಪoಡ ಕೆ. ಅಪ್ಪಚ್ಚು ತಿಳಿಸಿದರು. ಆ ಬಳಿಕ 2023 ರ ಜ.23 ರಂದು ಸಂಘಟನೆ ಲೋಕಾಯುಕ್ತಕ್ಕೆ ನೀಡಿದ ದೂರಿನ ಹಿನ್ನೆಲೆ, ಲೋಕಾಯುಕ್ತ ನೀಡಿದ ಸೂಚನೆಗಳಂತೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರು ಭಾಗಮಂಡಲ, ತಾವೂರು ಮತ್ತು ತಣ್ಣಿಮಾನಿಯಲ್ಲಿ ಸರ್ವೇ ಮಾಡಿ, ಒತ್ತುವರಿ ಜಾಗವನ್ನು ಗುರುತಿಸಿತ್ತೆಂದು ಮಾಹಿತಿಯನ್ನಿತ್ತರು.
ಒತ್ತುವರಿ ಆದದ್ದೆಷ್ಟು- ಭಾಗಮಂಡಲ ಮತ್ತು ತಲಕಾವೇರಿ ದೇಗುಲಗಳಿಗೆ ಸಂಬoಧಿಸಿದoತೆ ಭಾಗಮಂಡಲ, ತಣ್ಣಿಮಾನಿ, ತಾವೂರು, ಚೇರಂಗಾಲ ಗ್ರಾಮಗಳಲ್ಲಿ ಒಟ್ಟು 158.27 ಏಕರೆ ಪ್ರದೇಶ ಒತ್ತುವರಿಯಾಗಿದ್ದರೆ, ಅಂಜನಗೇರಿ ಬೆಟ್ಟಗೇರಿ ಗ್ರಾಮದ ಶ್ರೀ ಬೆಳ್ಳಾರಿಕಮ್ಮ ದೇವಾಲಯಕ್ಕೆ ಸೇರಿದ ಜಮೀನಿನಲ್ಲಿ 12.51 ಏಕರೆ ಜಾಗ ಒತ್ತುವರಿಯಾಗಿರುವುದಾಗಿ ಮಾಹಿತಿ ನೀಡಿ, ಇದನ್ನು ತೆರವುಗೊಳಿಸುವಂತೆ ಆಗ್ರಹಿಸಿದರು.
15 ಸಾವಿರದಿಂದ 5 ಸಾವಿರಕ್ಕೆ… ಕೊಡಗು ಏಕೀಕರಣ ರಂಗದ ಪ್ರಮುಖರಾದ ತಮ್ಮು ಪೂವಯ್ಯ ಮಾತನಾಡಿ, 1900 ರಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ದೇವಾಲಯಗಳಿಗೆ ಸಂಬoಧಿಸಿದ 15 ಸಾವಿರ ಏಕರೆ ಜಾಗವಿತ್ತು, ಈ ಜಾಗ ನಂತರದ ವÀರ್ಷಗಳಲ್ಲಿ ಕಂದಾಯ ಇಲಾಖೆಯ ವ್ಯಾಪ್ತಿಗೆ ಒಳಪಡುವುದರೊಂದಿಗೆ 5 ಸಾವಿರ ಏಕರೆಗೆ ಕುಸಿಯಿತು. 1994 ರಲ್ಲಿ ದೇವರಕಾಡುಗಳನ್ನು ರಕ್ಷಿತಾರಣ್ಯವೆಂದು ಪರಿಗಣಿಸಲಾಗಿದ್ದು, ಲಭ್ಯವಿರುವ ದೇವರಕಾಡನ್ನು ಸಂರಕ್ಷಿಸುವುದರೊoದಿಗೆ, ಒತ್ತುವರಿಯನ್ನು ತೆರವು ಮಾಡಬೇಕಾಗಿದೆಯೆಂದು ತಿಳಿಸಿದರು. ಗೋಷ್ಠಿಯಲ್ಲಿ ಸಂಗಟನೆಯ ತೇಲಪಂಡ ಪ್ರಮೋದ್ ಸೋಮಯ್ಯ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸುಂಟಿಕೊಪ್ಪ : ಶ್ರೀ ಕುರಂಭ (ಭಗವತಿ) ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಗೌಡಳ್ಳಿಯಲ್ಲಿ ಫುಟ್ಬಾಲ್ ಪಂದ್ಯಾವಳಿ ಉದ್ಘಾಟನೆ*

ಮಾರ್ಚ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.20 NEWS DESK : ಹಿಂದೂ ಗೆಳೆಯರ ಬಳಗ ಗೌಡಳ್ಳಿ-ದೊಡ್ಡಮಳ್ತೆ ವತಿಯಿಂದ ಯುಗಾದಿ ಹಬ್ಬದ ಪ್ರಯುಕ್ತ ಗೌಡಳ್ಳಿ ಬಿಜಿಎಸ್…

*ಕೊಡಗರಹಳ್ಳಿ : ಶ್ರೀ ಬೈತೂರಪ್ಪ ಪೊವ್ವದಿ ಬಸವೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಯುಗಾದಿ*

ಮಾರ್ಚ್ 20, 2026

*ಬಾಳುಗೋಡಿನಲ್ಲಿ ಲೇಔಟ್ ಕಾನೂನುಬದ್ಧವಾಗಿದೆ*

ಮಾರ್ಚ್ 20, 2026

*ಒತ್ತುವರಿಯಾಗಿರುವ ದೇವಾಲಯದ ಜಾಗವನ್ನು ಒತ್ತುವರಿದಾರರು ಸ್ವಯಂ ಇಚ್ಛೆಯಿಂದ ತೆರವುಗೊಳಿಸಬೇಕು*

ಮಾರ್ಚ್ 20, 2026

*ನಿಧನ ಸುದ್ದಿ*

ಮಾರ್ಚ್ 20, 2026

*ಪರೀಕ್ಷೆ ಬರೆಯಲು ಅವಕಾಶ ನೀಡದಿದ್ದರೆ ಧರಣಿ*

ಮಾರ್ಚ್ 20, 2026

*ತೊರೆನೂರು ಗ್ರಾಮದಲ್ಲಿ ಸಂಭ್ರಮದ ಹೊನ್ನಾರು ಉತ್ಸವ*

ಮಾರ್ಚ್ 20, 2026

*ಮಡಿಕೇರಿಯಲ್ಲಿ ಏ.1ರಿಂದ 1 ತಿಂಗಳ ಕಾಲ 32ನೇ ವರ್ಷದ ಉಚಿತ ಕ್ರೀಡಾ ಶಿಬಿರ*

ಮಾರ್ಚ್ 20, 2026

*ಕೊಡಗು ಜಿಲ್ಲೆಯಾದ್ಯಂತ ಸಂಭ್ರಮದ ರಂಜಾನ್ ಆಚರಣೆ*

ಮಾರ್ಚ್ 20, 2026

*ಹಿಲಾಲ್ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ*

ಮಾರ್ಚ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.