
ಮಡಿಕೇರಿ NEWS DESK ಮಾ.21 : ಮಡಿಕೇರಿ ತಾಲ್ಲೂಕಿನ ಬೆಟ್ಟಗೇರಿಯ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯು 10 ನೇ ತರಗತಿ ಪರೀಕ್ಷೆ ಬರೆಯಲು ವಂಚಿತರಾದ ಇಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದೆ. ಅಲ್ಲದೆ ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ ಎಂದು ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ತಳೂರು ಎ.ಕಿಶೋರ್ ಕುಮಾರ್ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಇಬ್ಬರು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ನಿರಾಕರಣೆ ಮಾಡಿರುವುದರ ಬಗ್ಗೆ ಸಂಬAಧಿಸಿದ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರವನ್ನು ಬರೆಯಾಲಾಗಿದೆ. ಅಲ್ಲದೇ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕುರಿತು ಮುಂದೆ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲು ಮಾಡಲಾಗುವುದು. ಆಡಳಿತ ಮಂಡಳಿಯು ಈಗಾಗಲೇ ಇಬ್ಬರು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಪರೀಕ್ಷೆ ಬರೆಯಲು ಪ್ರವೇಶ ಪತ್ರ ಇಲ್ಲದಿರುವುದಕ್ಕೆ ಶಿಕ್ಷಣ ಇಲಾಖೆಯ ಬೇಜವಾಬ್ದಾರಿತನವೇ ಮುಖ್ಯ ಕಾರಣವಾಗಿದೆ. ಶಿಕ್ಷಣ ಇಲಾಖೆಯ ಉಪನಿದೇರ್ಶಕರು ವಿದ್ಯಾರ್ಥಿಗಳ ಪ್ರವೇಶ ಪತ್ರ ನಿರಾಕರಣೆಗೆ ಆಡಳಿತ ಮಂಡಳಿಯವರು ಹೊಣೆ ಹೊರಬೇಕು ಎಂದು ಹೇಳಿಕೆ ನೀಡಿರುವುದು ಖಂಡನಿಯ. ಶಾಲೆಯ ಎಸ್ ಟಿ ಯಸ್ ಮತ್ತು ಎಸ್ ಎಸ್ ಎಲ್ ಸಿ ಪೋರ್ಟಲ್ ನ್ನು ದಾಖಲು ಮಾಡುವುದು ಆಡಳಿತ ಮಂಡಳಿಯ ಕೆಲಸ ಆಗಿರುವುದಿಲ್ಲ. ಇದನ್ನು ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಮಾಡಬೇಕಾಗುತ್ತದೆ.
ನಮ್ಮ ಸಂಸ್ಥೆಯಿoದ ಅನುಮತಿಗಾಗಿ ಹಲವು ಬಾರಿ ದಾಖಲಾತಿಯೊಂದಿಗೆ ಮನವಿ ಸಲ್ಲಿಸಿದ್ದರು ಭೂಪರಿವರ್ತನೆಯಾಗಿರುವುದಿಲ್ಲ ಎಂದು ಸಬೂಬು ಹೇಳಿ ವಿದ್ಯಾರ್ಥಿಗಳಿಗೆ ತೊಂದರೆ ಮಾಡುವುದು ಸರಿಯಲ್ಲ. ವಿದ್ಯಾಸಂಸ್ಥೆಯ ವತಿಯಿಂದ 9 ಮತ್ತು 10ನೇ ತರಗತಿ ಅನುಮತಿಗಾಗಿ ಆಡಳಿತ ಮಂಡಳಿ ವತಿಯಿಂದ 20/11/2025 ರಂದು ಸಂಬಂಧಿಸಿದವರಿಗೆ ಪತ್ರ ಬರೆಯಲಾಗಿತ್ತು. ಆದರೆ ಕ್ರಮ ಕೈಗೊಳ್ಳದೆ ಇರುವಾಗ ಪ್ರೌಢ ಶಿಕ್ಷಣ ಮಂಡಳಿಯ ಆಯುಕ್ತರಿಗೆ ಮತ್ತು ನಿದೇರ್ಶಕರಿಗೆ ದಿನಾಂಕ 06/11/2025, 16/02/2026 ಮತ್ತು 27/02/2026 ರಂದು ಹಾಗೂ ಕಾರ್ಯದರ್ಶಿಗಳಿಗೆ 06/03/2026 ರಂದು ಅನುಮತಿಗಾಗಿ ಮನವಿ ಸಲ್ಲಿಸಲಾಗಿದೆ. ಬೆಂಗಳೂರಿನಿoದ ಶಿಕ್ಷಣ ಮಂಡಳಿ ಕರೆ ಮಾಡಿ ಲಾಗಿನ್ ಓಪನ್ ಮಾಡಲು ತಿಳಿಸಿದರೂ ದೂರವಾಣಿಯನ್ನು ಸ್ವೀಕರಿಸದೆ ಶಿಕ್ಷಣ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ. ಅನುಮತಿಗಾಗಿ ಶಿಕ್ಷಣ ಇಲಾಖೆ ವಿರುದ್ಧ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಮೊಕದ್ದಮೆ ಹೊಡಿದ್ದು ಪ್ರಕರಣ ನ್ಯಾಯಾಲಯದಲ್ಲಿ ಬಾಕಿ ಇರುತ್ತದೆ. ವಿದ್ಯಾಸಂಸ್ಥೆಯ ಒಟ್ಟು 17 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಕ್ರಮ ಕೈಗೊಳ್ಳುವಂತೆ ನ್ಯಾಯಾಲಯ ಸೂಚಿಸಿದರು ಶಿಕ್ಷಣ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿ ಇಬ್ಬರು ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರವನ್ನು ನಿರಾಕರಣೆ ಮಾಡಿದ್ದಾರೆ. ಶಿಕ್ಷಣ ಇಲಾಖೆಯ ಉಪ ನಿದೇರ್ಶಕರು ಉದ್ದೇಶಪೂರ್ವಕವಾಗಿ ತಮ್ಮ ಕಛೇರಿಯಿಂದ 10/03/2026 ಕ್ಕೆ ದಾಖಲಾತಿಗಾಗಿ ನಮ್ಮ ಸಂಸ್ಥೆಗೆ ನೋಟಿಸ್ ನೀಡಿ 18/03/2026ರಂದು ತಲುಪುವಂತೆ ನೋಡಿಕೊಂಡಿದ್ದಾರೆ ಎಂದು ತಳೂರು ಎ.ಕಿಶೋರ್ ಕುಮಾರ್ ಆರೋಪಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಪ್ರವೇಶ ಪತ್ರ ನಿರಾಕರಣೆ ಆಗಿರುವುದಕ್ಕೆ ಆಡಳಿತ ಮಂಡಳಿ ಜವಾಬ್ದಾರಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.









