Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*
  • *ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*
  • *ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.23 NEWS DESK : ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಒದಗಿಸುವಂತಾಗಬೇಕು ಎಂದು ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಅಧ್ಯಕ್ಷರಾದ ಟಿ.ಕೆ.ಪಾಂಡರಂಗ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಗಾಂಧಿ ಭವನದಲ್ಲಿ ಸೋಮವಾರ ನಡೆದ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇಂದಿನ ಜಾಗತೀಕರಣ ಯುಗದಲ್ಲಿಯೂ ಸಹ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಕೈಮಗ್ಗ ಉತ್ಪನ್ನಗಳನ್ನು ಉಳಿಸಿ ಬೆಳೆಸಬೇಕು. ಆ ನಿಟ್ಟಿನಲ್ಲಿ ಸರ್ಕಾರ ಕೈಜೋಡಿಸಬೇಕು ಎಂದು ಅವರು ಕೋರಿದರು. ಸರ್ಕಾರಿ ಆಸ್ಪತ್ರೆಗಳು, ವಿದ್ಯಾರ್ಥಿ ನಿಲಯಗಳು ಸೇರಿದಂತೆ ಸರ್ಕಾರದ ಅಂಗ ಸಂಸ್ಥೆಗಳಿಗೆ ಬೆಡ್‍ಶೀಟ್, ಟವಲ್, ಮ್ಯಾಟ್ ಮತ್ತಿತರ ಕೈಮಗ್ಗ ಉತ್ಪನ್ನಗಳನ್ನು ಖರೀದಿಸಿದಲ್ಲಿ ಕೈಮಗ್ಗ ಉತ್ಪನ್ನಗಳಿಗೆ ಬೇಡಿಕೆ ಬರಲಿದೆ. ಇದರಿಂದ ಸ್ಥಳೀಯವಾಗಿ ಸ್ವ ಉದ್ಯೋಗ ದೊರೆಯಲಿದೆ ಎಂದು ಅವರು ಸಲಹೆ ಮಾಡಿದರು. ನೇಕಾರರ ಬದುಕು ಹಸನುಗೊಳಿಸುವಲ್ಲಿ ಮತ್ತಷ್ಟು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಪಾಂಡುರಂಗ ಅವರು ಸಲಹೆ ಮಾಡಿದರು. ಕೊಡಗು ಜಿಲ್ಲಾ ನೇಕಾರರ ಒಕ್ಕೂಟದ ಕಾರ್ಯದರ್ಶಿ ನಾಗರಾಜ ಶೆಟ್ಟಿ ಅವರು ಮಾತನಾಡಿ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ರಸ್ತೆ, ವೃತ್ತ, ಮತ್ತಿತರ ಕಡೆಗಳಲ್ಲಿ ದೇವರ ದಾಸಿಮಯ್ಯ ಅವರ ಹೆಸರು ಇಡುವಂತಾಗಬೇಕು. ಜೊತೆಗೆ ಪ್ರತಿಮೆ ನಿರ್ಮಾಣ ಮಾಡಬೇಕು ಎಂದು ಕೋರಿದರು. ದೇವರ ದಾಸಿಮಯ್ಯ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಅವರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೂ ತಿಳಿಸುವಂತಾಗಲು ಈ ಕಾರ್ಯಗಳು ಆಗಬೇಕು ಎಂದು ನಾಗರಾಜಶೆಟ್ಟಿ ಅವರು ಮನವಿ ಮಾಡಿದರು.
ಕನ್ನಡ ಸಾಹಿತ್ಯ ಪರಿಷತ್ತು ನಿಕಟ ಪೂರ್ವ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್ ಅವರು ಮಾತನಾಡಿ ದೇವರ ದಾಸಿಮಯ್ಯ ಅವರು 176 ಕ್ಕೂ ಹೆಚ್ಚು ವಚನಗಳನ್ನು ಬರೆದಿದ್ದಾರೆ ಎಂದು ತಿಳಿಸಿದರು. ರಾಷ್ಟ್ರಕವಿ ಗೋವಿಂದ ಪೈ ಅವರು ದೇವರ ದಾಸಿಮಯ್ಯ ಬಗ್ಗೆ ಸಂಶೋಧನಾ ಕೃತಿಗಳನ್ನು ಅಧ್ಯಯನ ಮಾಡಿ ವಿವರಿಸಿದ್ದಾರೆ ಎಂದು ಹೇಳಿದರು. ದೇವರ ದಾಸಿಮಯ್ಯ ಅವರು ವಚನಗಳ ಮೂಲಕ ಸಮಾಜವನ್ನು ತಿದ್ದಲು ಶ್ರಮಿಸಿದ್ದಾರೆ. ಪ್ರತಿಯೊಬ್ಬರೂ ದೇವರ ದಾಸಿಮಯ್ಯ ಅವರ ಚಿಂತನೆಗಳು, ಆದರ್ಶಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಸಲಹೆ ಮಾಡಿದರು. ದೇವರ ದಾಸಿಮಯ್ಯ ಅವರು ಶಿವ ಭಕ್ತರಾಗಿ, ಹರಿ ಭಕ್ತರಾಗಿ ಕೈಮಗ್ಗ ಕಾಯಕ ಮಾಡಿದ್ದಾರೆ. ಸಮಾಜದ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು. ‘ಶಿವ ಜಗತ್ತನ್ನೇ ವ್ಯಾಪಿಸಿಕೊಂಡಂತೆ, ಜಗತ್ತೇ ಶಿವನ ರೂಪ ಎಂಬ ನಿಲುವಿನೊಂದಿಗೆ, “ಇಳೆ ನಿಮ್ಮ ದಾನ, ಬೆಳೆ ನಿಮ್ಮ ದಾನ, ಸುಳಿದು ಸೂಸುವ ಗಾಳಿ ನಿಮ್ಮ ದಾನವಯ್ಯ. ಎಂದೆನ್ನುವ ದಾಸಿಮಯ್ಯನಲ್ಲಿ ಈ ಲೋಕವನ್ನು ನೋಡುವ ಕ್ರಮ ಹೊಸತನದಿಂದ ಕೂಡಿದೆ’ ಎಂದು ದೇವರ ದಾಸಿಮಯ್ಯ ಅವರ ವಚನಗಳನ್ನು ವಾಚಿಸಿದರು. ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಡಿ.ನಾಗೇಶ್ ಕುಮಾರ್ ಅವರು ಮಾತನಾಡಿ 10, 11 ನೇ ಶತಮಾನದಲ್ಲಿಯೇ ದೇವರ ದಾಸಿಮಯ್ಯ ಅವರು ಕೈಮಗ್ಗ ಚಟುವಟಿಕೆಯಲ್ಲಿ ಕಾಯಕ ಕಾಣುವ ಮೂಲಕ ಮಾನವನ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ್ದಾರೆ ಎಂದು ಅವರು ತಿಳಿಸಿದರು. ದೇವರ ದಾಸಿಮಯ್ಯ ಅವರು ನೇಕಾರಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಆ ನಿಟ್ಟಿನಲ್ಲಿ ನೇಕಾರ ವೃತ್ತಿಯನ್ನು ಗೌರವಿಸಬೇಕು ಎಂದು ಹೇಳಿದರು. ನೇಕಾರಿಕೆಯು ಅನಾದಿಕಾಲದಿಂದಲೂ ಬಂದಿದ್ದು, ಇತಿಹಾಸವನ್ನು ಮೆಲುಕು ಹಾಕಬೇಕು ಎಂದು ನಾಗೇಶ್ ಕುಮಾರ್ ಅವರು ತಿಳಿಸಿದರು. ನೇಕಾರಿಕೆ ಮಹಿಳಾ ಘಟಕದ ಅಧ್ಯಕ್ಷರಾದ ಸವಿತಾ ಅವರು ಮಾತನಾಡಿ ದೇವರ ದಾಸಿಮಯ್ಯ ಅವರು ಸಮಾಜಕ್ಕೆ ನೀಡಿರುವ ಕೊಡುಗೆಯನ್ನು ಮರೆಯಬಾರದು ಎಂದು ಅವರು ತಿಳಿಸಿದರು. ತಹಶೀಲ್ದಾರ್ ಕಚೇರಿಯ ಶಿರಸ್ತೆದಾರ್ ದೇವರಾಜು, ಪ್ರಮುಖರಾದ ಚೌಡೇಶ್ವರಿ ದೇವಾಲಯದ ಸಮಿತಿ ಅಧ್ಯಕ್ಷರಾದ ಗಜಾನನ, ಪದ್ಮ ಮೋಹನ್, ಭಾರತಿ ರಮೇಶ್, ಜಿಲ್ಲಾ ದೇವಾಂಗ ಸಂಘದ ಅಧ್ಯಕ್ಷರಾದ ಡಿ.ವಿ.ಜಗದೀಶ, ರಮೇಶ್, ಇತರರು ಇದ್ದರು. ಲೋಕೇಶ್ ಸಾಗರ್ ಮತ್ತು ಭಾರತಿ ರಮೇಶ್ ತಂಡದವರು ನಾಡಗೀತೆ ಹಾಗೂ ನೇಕಾರಿಕೆ ಗೀತೆ ಹಾಡಿ ಗಮನ ಸೆಳೆದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಭಾರೀ ವಾಹನಗಳ ಸಂಚಾರ, ಮರಳು–ಮರದ ದಿಮ್ಮಿಗಳ ಸಾಗಾಣಿಕೆ ನಿಷೇಧ : ಆ.31ರವರೆಗೆ ವಿಸ್ತರಣೆ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಪರಿಸರ ಸೂಕ್ಷ್ಮವಲಯದಿಂದ ಕೊಳಗದಾಳು ಗ್ರಾಮವನ್ನು ಕೈಬಿಡಲು ಒತ್ತಾಯ : ಗ್ರಾಮಸ್ಥರಿಂದ ಪ್ರತಿಭಟನೆ*

ಆಗಷ್ಟ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.25 : ಪಶ್ಚಿಮಘಟ್ಟ ಪರಿಸರ ಸೂಕ್ಷö್ಮವಲಯದ ಪಟ್ಟಿಯಿಂದ ಕೊಳಗದಾಳು ಗ್ರಾಮವನ್ನು ಕೈಬಿಡುವಂತೆ ಒತ್ತಾಯಿಸಿ ಕಸ್ತೂರಿ ರಂಗನ್…

*ವಿರಾಜಪೇಟೆ ಎಲ್ ಎಸ್ ಎ ಕೇರ್ ಸೌಹಾರ್ದ ಕಾರ್ಯಕ್ರಮ*

ಆಗಷ್ಟ್ 25, 2026

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.