
ಸುಂಟಿಕೊಪ್ಪ NEWS DESK ಮಾ.29 : ಕ್ರೈಸ್ತ ಬಾಂಧವರ ಪವಿತ್ರ ವಾರದ ಸಂಕೇತವಾಗಿ ಗರಿಗಳ ಭಾನುವಾರದ ಅಂಗವಾಗಿ ಸಂತ ಮೇರಿ ಶಾಲಾ ಆವರಣದಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ತೆಂಗಿನ ಗರಿಗಳನ್ನು ಭಕ್ತರಿಗೆ ವಿತರಿಸಲಾಯಿತು. ಸಂತ ಅಂತೋಣಿಯವರ ದೇವಾಲಯದಲ್ಲಿ ಶೃದ್ಧಾಭಕ್ತಿಯಿಂದ ಧಾರ್ಮಿಕ ಆಚರಣೆ ನಡೆಯಿತು.ಸಂತ ಅಂತೋಣಿ ಚರ್ಚ್ ನ ಧರ್ಮಗುರು ರೇ.ಫಾ.ವಿಜಯಕುಮಾರ್ ಅವರು ತೆಂಗಿನ ಗರಿಗಳನ್ನು ವಿತರಿಸಿದರು. ನಂತರ ಶಾಲಾ ಆವರಣದಿಂದ ಚರ್ಚ್ ವರೆಗೆ ಮೆರವಣಿಗೆಯಲ್ಲಿ ಆಗಮಿಸಿದ ಭಕ್ತರು ವಿಶೇಷ ಗಾಯನ ಬಲಿಪೂಜೆ ಹಾಗೂ ಪ್ರಭೋದನೆಯನ್ನು ಆರ್ಪಿಸಿದರು. ಇದರೊಂದಿಗೆ ಪವಿತ್ರ ವಾರಕ್ಕೆ ಮುನ್ನುಡಿ ಇಡಲಾಯಿತು. ಕ್ರೈಸ್ತ ಬಾಂಧವರು 40 ದಿನಗಳ ಉಪವಾಸ ಆಚರಿಸಲಿದ್ದಾರೆ.ಸಂತ ಕ್ಲಾರ ಕನ್ಯಾಸ್ತ್ರೀಯರು ಹಾಗೂ ನೂರಾರು ಸಂಖ್ಯೆಯ ಭಕ್ತರು ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.








