
ವಿರಾಜಪೇಟೆ ಮಾ.30 NEWS DESK : ಕೆದಮುಳ್ಳೂರು ಶ್ರೀ ಭಗವತಿ ದೇವರ 15ನೇ ವರ್ಷದ ವಾರ್ಷಿಕ ಮಹೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು. ಉತ್ಸವದ ಪ್ರಯುಕ್ತ ಮುಂಜಾನೆಯಿಂದಲೇ ವಿಶೆಷ ಪೂಜಾ ಕೈಂಕರ್ಯಗಳು, ಗಣಪತಿ ಹೋಮ, ಭಗವತಿ ದೇವರಿಗೆ ಪೂಜೆ, ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ ಮತ್ತು ಪ್ರಸಾದ ವಿತರಣೆ ನಡೆಯಿತು. ಬಳಿಕ ಬೆಲಿಕಲ್ಲು ಪೂಜೆ ಹಾಗೂ ದೇವರ ನೃತ್ಯ ಬಲಿ ಪ್ರದಕ್ಷಿಣೆ ನಡೆಯಿತು. ಪೂಜಾ ಕೈಂಕರ್ಯಗಳನ್ನು ಬೈತೂರಿನ ತಂತ್ರಿಗಳಾದ ಶ್ರೀ ರಾಜನ್ ನಂಬೂದರಿಪಾಡ್ ಮತ್ತು ಭಗವತಿ ದೇವಾಲಯದ ಅರ್ಚಕರಾದ ರಾಧಾಕೃಷ್ಣ ಅವರು ನೆರವೇರಿಸಿದರು. ವಾರ್ಷಿಕೋತ್ಸವಕ್ಕೆ ಆಗಮಿಸಿದ ಸರ್ವ ಭಕ್ತಾಧಿಗಳಿಗೆ ದೇವಾಲಯದ ವತಿಯಿಂದ ಅನ್ನ ಸಂತರ್ಪಣೆಯನ್ನು ನಡೆಸಲಾಯಿತು.









