Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ : ತ್ರಿವಿಧ ದಾಸೋಹದ ಬ್ರಹ್ಮ : ಸದ್ದುಗದ್ದಲವಿರದ ಸಾಧನೆ ಇಲ್ಲಿ  ಮೌನವಾಗಿ ಗದ್ದುಗೆಯೇರಿದೆ*
  • *ಬರಹ : ಡಾ|| ಕೆ. ಬಿ.ಸೂರ್ಯ ಕುಮಾರ್ …* *ಭಾರತೀಯ ಸೇನೆಯ ಧ್ರುವತಾರೆ ಜನರಲ್ ಕೆ. ಎಸ್.ತಿಮ್ಮಯ್ಯ*
  • *ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*
  • *ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*
  • *ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*
  • *ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*
  • *ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*
  • *ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*
  • *ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ : ತ್ರಿವಿಧ ದಾಸೋಹದ ಬ್ರಹ್ಮ : ಸದ್ದುಗದ್ದಲವಿರದ ಸಾಧನೆ ಇಲ್ಲಿ  ಮೌನವಾಗಿ ಗದ್ದುಗೆಯೇರಿದೆ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ : ತ್ರಿವಿಧ ದಾಸೋಹದ ಬ್ರಹ್ಮ : ಸದ್ದುಗದ್ದಲವಿರದ ಸಾಧನೆ ಇಲ್ಲಿ  ಮೌನವಾಗಿ ಗದ್ದುಗೆಯೇರಿದೆ*

ಮಾರ್ಚ್ 31, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

(*ಬರಹ : ಗೀತಾಂಜಲಿ ಎನ್.ಎಂ ಸೋಮವಾರಪೇಟೆ : ತ್ರಿವಿಧ ದಾಸೋಹದ ಬ್ರಹ್ಮ : ಸದ್ದುಗದ್ದಲವಿರದ ಸಾಧನೆ ಇಲ್ಲಿ  ಮೌನವಾಗಿ ಗದ್ದುಗೆಯೇರಿದೆ*)

ಸದ್ದುಗದ್ದಲವಿರದ ಸಾಧನೆ ಇಲ್ಲಿ ಮೌನವಾಗಿ ಗದ್ದುಗೆಯೇರಿದೆ. ಕಾಯಕವೇ ಕೈಲಾಸವೆನ್ನುವ ಮಾತು ಕಾರ್ಯವಾಗಿ ನಡೆ ನುಡಿಗಳಲಿ ಒಂದಾಗಿದೆ. ಕಾವಿಯ ಆದರ್ಶಕೆ ಪ್ರತಿರೂಪವಾಗಿ ತ್ರಿವಿಧ ದಾಸೋಹವು ಸರ್ವರಿಗೂ ಸಹಾಯ ಹಸ್ತ ಚಾಚಿದೆ. ಎಲ್ಲಾ ನನ್ನವರೆನ್ನುವ ಸಮಾನ ಭಾವ ಸಂಗಮಿಸಿ ಕರುಣೆಯೇ ಕಣ್ಣೆರೆದಿದೆ. ಅದಕ್ಕಿರಬೇಕು ನಭದ ಕಿರಣಗಳೂ ಇವರ ಸೇವೆಗೆ ನಮಿಸಿ ಶರಣಾಗಿದೆ!! ನಿಜವಾದ ಧರ್ಮವೆಂದರೆ ಕೇವಲ ಪೂಜೆ,  ಪುನಸ್ಕಾರಗಳು, ಗುಡಿ,ಗೋಪುರ, ಪದ್ದತಿ ಶಾಸ್ತ್ರಆಚರಣೆಗಳ ಆಚರಣಾತ್ಮಕ ಕ್ರಮಗಳಲ್ಲಿ ಸೀಮಿತವಾಗಿರುವುದಲ್ಲ, ಅದು ಮಾನವನೊಳಗಿನ ಕರುಣೆ, ದಯೆ ಮತ್ತು ಸೇವಾಭಾವದಲ್ಲಿ ವ್ಯಕ್ತವಾಗುತ್ತದೆ. ಇತರರ ನೋವನ್ನು ತನ್ನದಾಗಿ ಭಾವಿಸಿ, ಸಾಧ್ಯವಾದಷ್ಟು ಸಹಾಯ ಮಾಡುವ ಮನೋಭಾವವೇ ನಿಜವಾದ ಧರ್ಮದ ಸಾರವಾಗಿದೆ. ಅದಕ್ಕಾಗಿಯೇ ಬಸವಣ್ಣನವರು “ದಯಯೇ ಧರ್ಮದ ಮೂಲವಯ್ಯ” ಎಂದು ಹೇಳಿರುವುದು. ಹಸಿದವನಿಗೆ ಅನ್ನ ನೀಡುವುದು,ಅಜ್ಞಾನಿಯನ್ನು ಶಿಕ್ಷಣದ ಮೂಲಕ ಜ್ಞಾನಿಯಾಗಿ ಬೆಳಗಿಸುವುದು ನಿರಾಶ್ರಿತನಿಗೆ ಆಶ್ರಯ ಒದಗಿಸುವುದು ಇವುಗಳೆಲ್ಲವೂ ಧರ್ಮದ ಅತ್ಯುನ್ನತ ರೂಪಗಳು. ಸೇವೆಯ ಮೂಲಕ ಸಮಾಜದಲ್ಲಿ ಸಮಾನತೆ, ಸಹಾಯ, ಸಹಾನುಭೂತಿ ಮತ್ತು  ಮಾನವೀಯತೆಯನು ಬೆಳೆಸುವುದು, ಧರ್ಮದ ನಿಜವಾದ ಉದ್ದೇಶವನ್ನು ತೋರಿಸುತ್ತದೆ. ಈ ನಿಟ್ಟಿನಲ್ಲಿ ಧರ್ಮದ ಹೆಸರಿನಲ್ಲಿ, ಧರ್ಮದ ದಾರಿಯಲ್ಲಿ ನೆಡೆದು ನೆಡೆ ನುಡಿಗಳೊಂದಾಗಿ ಬಾಳಿ ಕಾಯಕ ದಾಸೋಹದ ಮೂಲಕ ಲಕ್ಷಾಂತರ ಬಡ ಬಗ್ಗರಿಗೆ ಬದುಕು ಕಟ್ಟಿಕೊಟ್ಟು ನೆಡೆದಾಡುವ ದೇವರೆಂದೇ ಪ್ರಖ್ಯಾತರಾದ ಕರ್ನಾಟಕ ರತ್ನ ಡಾ. ಶಿವಕುಮಾರ ಸ್ವಾಮೀಜಿಗಳು ಕರ್ನಾಟಕ ನೆಲ, ಜಲ, ನಾಡು, ನುಡಿ ಕಂಡ ಹೆಮ್ಮೆಯ ನಾಯಕ. ತಾಯಿ ಭುವನೇಶ್ವರಿ ತನ್ನ ಪವಿತ್ರ ನೆಲದಲ್ಲಿ ಸಮಾಜಕ್ಕೆ ಅನೇಕ ಮಹನೀಯರನ್ನು ಕೊಡುಗೆಯಾಗಿ ಕೊಟ್ಟಿದ್ದಾಳೆ. ಅವರಲ್ಲಿ ಅಗ್ರಸ್ಥಾನದಲ್ಲಿರುವವರು ಸಿದ್ದಗಂಗಾ ಮಠದ ಮಠಾಧೀಶರಾಗಿದ್ದ ಲಿಂಗೈಕ್ಯ ಪರಮ ಪೂಜ್ಯ ಡಾ. ಶಿವಕುಮಾರ ಸ್ವಾಮೀಜಿಗಳು. ಇಂದು ಅವರ ಜನ್ಮ ದಿನ! ಅವರ ಜನ್ಮ ದಿನವು ಕೇವಲ ಒಂದು ಸಾಮಾನ್ಯ ದಿನವಲ್ಲ ಬದಲಿಗೆ ಅದು ಮಾನವೀಯತೆ, ಸೇವಾಭಾವ ಮತ್ತು ತ್ಯಾಗದ ಪ್ರತೀಕವಾಗಿ ಆಚರಿಸಬೇಕಾದ ಮಹತ್ವದ ಆಚರಣೆಯಾಗಿದೆ. ಪರಮ ಪೂಜ್ಯ ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳು ತಮ್ಮ ಸಂಪೂರ್ಣ ಜೀವನವನ್ನು ಸಮಾಜ ಸೇವೆಗೆ ಅರ್ಪಿಸಿದ ಮಹನೀಯರು. “ಸೇವೆಯೇ ಧರ್ಮ” ಎಂಬ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಂಡು, ಲಕ್ಷಾಂತರ ಮಕ್ಕಳಿಗೆ ಶಿಕ್ಷಣದ ಮೂಲಕ ಬದುಕಿನ ದಾರಿ ತೋರಿದವರು. ಇದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿ ತುಮಕೂರಿನ ಸಿದ್ಧಗಂಗಾ ಮಠದ ಮೂಲಕ ಅವರು ನೀಡಿದ ಆಶ್ರಯದ ಜೊತೆ ಅನ್ನದಾನ ಮತ್ತು ವಿದ್ಯಾದಾನ ಕಾರ್ಯಗಳು ವಿಶ್ವದ ಮಟ್ಟದಲ್ಲಿ ಮಾದರಿಯಾಗಿವೆ.ಹಸಿವು ನೀಗಿಸುವುದು ದೇಹಕ್ಕೆ ಜೀವಕ್ಕೆ, ಶಕ್ತಿ ನೀಡಿದರೆ ವಿದ್ಯೆ ಕಲಿಸುವುದು ಜ್ಞಾನ ಹಾಗೂ ಬದುಕಿಗೆ ದಾರಿ ತೋರಿದರೆ ಆಶ್ರಯ ನೀಡುವುದು ಭವಿಷ್ಯಕ್ಕೆ ಭದ್ರತೆ ನೀಡುತ್ತದೆ” ಇದೇ ತ್ರಿವಿಧ ದಾಸೋಹದ ಸಾರಾಂಶ. ಈ ಮೂರು ಅಂಶಗಳೇ ಒಬ್ಬ ಮನುಷ್ಯನ ಜೀವನಕ್ಕೆ ಅತ್ಯವಶ್ಯಕವಾಗಿ ಬೇಕಾಗಿರುವುದು. ಇದನ್ನು ಅರಿತ ಶ್ರೀಗಳು ತ್ರಿವಿಧ ದಾಸೋಹದ ಮೂಲಕ ಬಡತನ, ಜಾತಿ, ಮತ, ಪಂಥ ಎಂಬ ಬೇಧಗಳನ್ನು ಮೀರಿ ಎಲ್ಲರನ್ನೂ ಸಮಾನವಾಗಿ ಕಾಣುತ್ತಾ ಊಟ,ವಸತಿ,ವಿದ್ಯೆಯ ಮುಖಾಂತರ ಲಕ್ಷಾಂತರ ಜನರ ಬದುಕಿಗೆ ಆಸರೆ ಆಗಿ ಬದುಕು ಕೊಟ್ಟ ದೈವಿಪುರುಷ.ಬಸವಣ್ಣನವರ ದ್ಯೇಯ ವಾಕ್ಯ “ಕಾಯಕವೇ ಕೈಲಾಸ” ಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿ ನಿಂತ ಇವರ “ತ್ರಿವಿಧ ದಾಸೋಹ”ವು ಕೇವಲ ಧಾರ್ಮಿಕ ಪರಿಕಲ್ಪನೆ ಆಗಿರದೆ ಅನ್ನದಾಸೋಹ, ವಿದ್ಯಾದಾಸೋಹ, ಆಶ್ರಯದಾಸೋಹ” ಎಂಬ ಮೂರು ಅದ್ಬುತ ಪರಿಕಲ್ಪನೆಯ ಮೂಲಕ ಸಮಗ್ರ ಮಾನವ ಅಭಿವೃದ್ಧಿಗೆ ರೂಪುಗೊಂಡ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಮಾದರಿ ಸ್ತಂಭಗಳಾಗಿವೆ. *ಅನ್ನದಾಸೋಹ*  ಪ್ರತಿದಿನ ಸರಿ ಸುಮಾರು 12 ಸಾವಿರಕ್ಕೂ ಹೆಚ್ಚು ಮಕ್ಕಳ ಜೊತೆಗೆ ನಿತ್ಯವೂ ಬರುವ ಸಾವಿರಾರು ಭಕ್ತರಿಗೆ ಉಚಿತವಾಗಿ ಊಟ ನೀಡುವ ವ್ಯವಸ್ಥೆ, ಸಹಾಯ ಮತ್ತು ಸಮಾನತೆಯ ತತ್ವವನ್ನು ಪ್ರತಿಪಾದಿಸುತ್ತದೆ. ಇಲ್ಲಿ ಜಾತಿ, ಮತ, ಆರ್ಥಿಕ ಸ್ಥಿತಿ ಎಂಬ ಯಾವುದೇ ಭೇದವಿಲ್ಲದೆ ಎಲ್ಲರಿಗೂ ಒಂದೇ ರೀತಿಯ ಊಟ ಉಪಚಾರ ನೀಡಲಾಗುತ್ತದೆ. ದಿನದ ಯಾವುದೇ ಸಮಯದಲ್ಲಿ ಯಾವುದೇ ಜಾತಿಯ ಎಷ್ಟೇ ಜನ ಹೋದರೂ ಊಟ ತಿಂಡಿಯ ವ್ಯೆವಸ್ಥೆ ಇರುತ್ತದೆ. ಇದು ಕೇವಲ ಹಸಿವು ನೀಗಿಸುವ ಕಾರ್ಯವಲ್ಲ ಬದಲಾಗಿ ‘ಮಾನವೀಯತೆ’ ಎಂಬ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿ ಕೊಂಡಿರುವ ಮಹಾ ಕಾರ್ಯವಾಗಿದೆ.*ವಿದ್ಯಾ ದಾಸೋಹ* ಸಿದ್ಧಗಂಗಾ ಮಠದಲ್ಲಿ ಸಾವಿರಾರು ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ಮೂಲಕ, ಅವರು ಜ್ಞಾನವನ್ನು ಸಮಾಜದ ಹಕ್ಕಿನಂತೆ ಪರಿಗಣಿಸಿ ಶಿಕ್ಷಣವನ್ನು ವಾಣಿಜ್ಯೀಕರಣದಿಂದ ದೂರವಿಟ್ಟು, ಅದನ್ನು ಸಾಮಾಜಿಕ ಸೇವೆಯಾಗಿ ಪರಿಗಣಿಸಿದ್ದು ನಿಜಕ್ಕೂ ಒಂದು ಅಸಾದ್ಯವಾದ ಅದ್ಭುತವೆಂದೇ ಹೇಳಬಹುದು ಕಾರಣ ಶಿಕ್ಷಣವನ್ನು ವ್ಯಾಪಾರೀಕರಣವಾಗಿ ಮಾಡಿಕೊಂಡಿರುವ ಇಂದಿನ ಸಮಾಜದಲ್ಲಿ 10 ರಿಂದ 12 ಸಾವಿರ ಮಕ್ಕಳಿಗೆ ಪ್ರತಿನಿತ್ಯ ಉಚಿತವಾಗಿ ಊಟ ವಸತಿ ಜೊತೆ ವಿದ್ಯೆ ಕೊಡುವುದು ಖಂಡಿತವಾಗಿ ಮಾತನಾಡಿದಷ್ಟು ಸುಲಭವಲ್ಲ. ವಿದ್ಯಾಭ್ಯಾಸದ ಜೊತೆ ಅಲ್ಲಿ ಕಲಿಸುವ ಸಂಸ್ಕಾರ ನಿಜಕ್ಕೂ ಒಂದು ಮೌಲ್ಯಯುತ ಚಿಂತನೆ. ಪ್ರತಿನಿತ್ಯ ಸಂಜೆ ಅಲ್ಲಿ ನೆಡೆಯುವ ಪ್ರಾರ್ಥನೆಯನ್ನು ನೋಡುವುದೇ ಒಂದು ಚಂದದ ಅನುಭವ 12 ಸಾವಿರ ಮಕ್ಕಳನ್ನು ಯಾವುದೇ ನೂಕು ನುಗ್ಗಲಿಲ್ಲದೆ ಸರತಿ ಸಾಲಿನಲ್ಲಿ ಕೂರಿಸಿ ಪ್ರಾರ್ಥನೆಗಳನ್ನು ಮಾಡಿಸುತ್ತಾರೆ ಆ ಒಕ್ಕೊರಲಿನ ದ್ವನಿಯನ್ನು ಕೇಳುವಾಗ ನಿಜವಾಗಿಯೂ ಹೆಮ್ಮೆಯ ಜೊತೆ ಮೈ ರೋಮಾಂಚನವಾಗುತ್ತದೆ. ಪ್ರಾರ್ಥನೆ ಮುಗಿದ ನಂತರ ಒಂದು ಮೌಲ್ಯಯುತ ವಿಚಾರವನ್ನು ಮಕ್ಕಳಿಗೆ ಭೋಧಿಸುತ್ತಾರೆ ಇದಲ್ಲವೇ ಸಂಸ್ಕಾರ ಎಂದರೆ. ಇಂದಿನ ಲಾಭ ಪ್ರಧಾನ ಯುಗದಲ್ಲಿ ಉಚಿತ ಶಿಕ್ಷಣ ನೀಡುವುದು ನಿಜಕ್ಕೂ ಒಂದು ಕ್ರಾಂತಿಕಾರಕ ಚಿಂತನೆ ಆಗಿದ್ದು, ಅದು ಕೇವಲ ವ್ಯಕ್ತಿಯ ಬದುಕನ್ನು ಮಾತ್ರವಲ್ಲ, ಸಮಗ್ರ ಸಮಾಜದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದೆ. *ಆಶ್ರಯ ದಾಸೋಹ* ನಿರ್ಗತಿಕರಿಗೆ, ಆಶ್ರಯ ಬೇಡಿ ಬಂದ ಪ್ರತಿಯೊಬ್ಬ ಬಡ ಮತ್ತು ಎಲ್ಲಾ ವರ್ಗಗಳ ಮಕ್ಕಳಿಗೆ ಉಚಿತ ವಸತಿ ವ್ಯವಸ್ಥೆಯನ್ನು ಒದಗಿಸುವ ಮೂಲಕ ಮಕ್ಕಳಿಗೆ ಮಾನಸಿಕ ನೈತಿಕ, ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಆಧಾರವಾಗಿದ್ದರೆ. ಇಲ್ಲಿ ನೀಡುವ ಆಶ್ರಯ ಶಾರೀರಿಕ ಆಶ್ರಯ ಮಾತ್ರವಲ್ಲ ಅದು ಮಾನವ ಜೀವನದ ಮೂಲಭೂತ ಭದ್ರತೆಯನ್ನು ಒದಗಿಸುವ ಮಹತ್ತರ ಸೇವೆಯಾಗಿದೆ. ಬಡತನ, ಅನಾಥತೆ ಅಥವಾ ಸಾಮಾಜಿಕ ಹಿನ್ನಡೆಯಿಂದ ಶಿಕ್ಷಣದಿಂದ ದೂರವಾಗುವ ಮಕ್ಕಳಿಗೆ ಸುರಕ್ಷಿತ ವಾಸಸ್ಥಳವನ್ನು ಒದಗಿಸುವ ಮೂಲಕ, ಅವರ ಬದುಕಿಗೆ ಹೊಸ ದಿಕ್ಕನ್ನು ಪಡೆಯುತ್ತದೆ. ಹಾಗಾಗಿ ಇದು ಕೇವಲ ಶಾರೀರಿಕ ಆಶ್ರಯವಲ್ಲ. ಸುರಕ್ಷಿತ ಪರಿಸರದಲ್ಲಿ ಬೆಳೆದ ಮಕ್ಕಳು ಆತ್ಮವಿಶ್ವಾಸದಿಂದ ಸಮಾಜದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಉತ್ತಮ ದಾರಿಯಲ್ಲಿ ನಡೆಯುವ ಸಾಮರ್ಥ್ಯವನ್ನು ಬೆಳೆಸುವ ಸನ್ಮಾರ್ಗವಾಗಿದೆ.  ಈ ಲೇಖನವು ತ್ರಿವಿಧ ದಾಸೋಹದ ತಾತ್ವಿಕ ಮತ್ತು ಪ್ರಾಯೋಗಿಕ ಆಯಾಮಗಳನ್ನು ವಿಶ್ಲೇಷಿಸುವ ಪ್ರಯತ್ನವಾಗಿದ್ದು, ಸೇವೆಯ ಮೂಲಕ ಸಮಾಜ ನಿರ್ಮಾಣ ಸಾಧ್ಯವೆಂಬ ಸತ್ಯವನ್ನು ಸ್ಪಷ್ಟಪಡಿಸುತ್ತದೆ ಎಂಬ ನಂಬಿಕೆ. ಸಾಧನೆಗೆ ಯಾವ ಕ್ಷೇತ್ರವಾದರೇನು ಒಳಿತನ್ನು ಮಾಡುವ ಮನಸ್ಸೇ ಮುಖ್ಯವೆಂದು ತೋರುತ್ತ ಸದ್ದು ಗದ್ದಲವಿಲ್ಲದೆ, ಯಾವ ಪ್ರಚಾರವನ್ನೂ ಬಯಸದೇ ಸಾಧನೆಯ ಶಿಖರವನ್ನು ಮೌನದಿಂದೇರಿದವರು ಡಾ. ಶಿವಕುಮಾರ ಸ್ವಾಮಿಗಳು. ಬದುಕಿನ ನಿಜವಾದ ಮಹತ್ವವು ನಾವು “ಪಡೆಯುವುದರಲ್ಲಿ ಅಲ್ಲ, ನಾವು ನೀಡುವುದರಲ್ಲಿ ಇದೆ” ಈ ಸಿದ್ಧಾಂತವೇ ತ್ರಿವಿಧ ದಾಸೋಹದ ಆತ್ಮ. ಹಾಗಾಗಿ ಅದನ್ನೇ ತಮ್ಮ ಜೀವನದ ದ್ಯೆಯವನ್ನಾಗಿಸಿಕೊಂಡು ನೊಸಲಿನ ವಿಭೂತಿಯೊಳಗೆ ಜ್ಞಾನದ ಮರ್ಮವನ್ನರಿತು ಕಾಯಕದೊಳಗೆ ತಮ್ಮನ್ನು ತೊಡಗಿಸಿಕೊಂಡು ಸಾಮಾನ್ಯ ಮಾನವನಾಗಿ ಹುಟ್ಟಿ ಇಂದು ದೇವರಾಗಿದ್ದಾರೆ. ಅವರು ಇಂದು ಬೌತಿಕವಾಗಿ ನಮ್ಮೊಂದಿಗೆ ಇಲ್ಲದೆ ಇರಬಹುದು ಆದರೆ ಅವರು ಒಂದು ಮೌಲ್ಯವಾಗಿ, ಒಂದು ಉತ್ತಮ ಮಾರ್ಗವಾಗಿ, ಅದರ್ಶದ ಪ್ರತೀಕವಾಗಿ ನಮ್ಮೊಳಗೆ ಸದಾ ಜೀವಂತವಾಗಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬರಹ : ಡಾ|| ಕೆ. ಬಿ.ಸೂರ್ಯ ಕುಮಾರ್ …* *ಭಾರತೀಯ ಸೇನೆಯ ಧ್ರುವತಾರೆ ಜನರಲ್ ಕೆ. ಎಸ್.ತಿಮ್ಮಯ್ಯ*

ಮಾರ್ಚ್ 31, 2026

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಬರಹ : ಡಾ|| ಕೆ. ಬಿ.ಸೂರ್ಯ ಕುಮಾರ್ …* *ಭಾರತೀಯ ಸೇನೆಯ ಧ್ರುವತಾರೆ ಜನರಲ್ ಕೆ. ಎಸ್.ತಿಮ್ಮಯ್ಯ*

ಮಾರ್ಚ್ 31, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

(*ಬರಹ : ಡಾ|| ಕೆ. ಬಿ.ಸೂರ್ಯ ಕುಮಾರ್ …* *ಭಾರತೀಯ ಸೇನೆಯ ಧ್ರುವತಾರೆ ಜನರಲ್ ಕೆ. ಎಸ್.ತಿಮ್ಮಯ್ಯ*) ಭಾರತೀಯ ಸೇನಾ ಇತಿಹಾಸದ…

*ಅಮ್ಮತ್ತಿ ಕೊಡವ ಸಮಾಜದಿಂದ ಶಾಸಕ ಎ.ಎಸ್.ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 30, 2026

*ಕೆದಮುಳ್ಳೂರು : ಏ.3 ಮತ್ತು 4 ರಂದು ಶ್ರೀ ಚಾಮುಂಡಿ ದೇವಿಯ ತೆರೆ ಮಹೋತ್ಸವ*

ಮಾರ್ಚ್ 30, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕೆದಮುಳ್ಳೂರು ಶ್ರೀ ಭಗವತಿ ದೇವರ ವಾರ್ಷಿಕೋತ್ಸವ*

ಮಾರ್ಚ್ 30, 2026

*ಕುಡಿಯುವ ನೀರಿನ ಅಭಾವ : ಪೊನ್ನಂಪೇಟೆಯಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು*

ಮಾರ್ಚ್ 30, 2026

*ಎಮ್ಮೆಮಾಡು ಪ್ರಕರಣ : ಸಾಮಾಜಿಕ ಜಾಲತಾಣದ ಮೇಲೆ ನಿಗಾ ವಹಿಸಿರುವ ಕೊಡಗು ಪೊಲೀಸ್*

ಮಾರ್ಚ್ 30, 2026

*ಸೋಮವಾರಪೇಟೆ : ಮಹಿಳಾ ಸಂಘಗಳು ಮಹಿಳೆಯರ ಅಭಿವೃದ್ಧಿಗೆ ಸಹಕಾರಿ : ಸಾಹಿತಿ ಶ.ಗ.ನಯನತಾರ*

ಮಾರ್ಚ್ 30, 2026

*ಕೊಡಗು : ದೈವಕ್ಕೆ ಅಪಮಾನ ಆರೋಪ : ಸೂಕ್ತ ಕ್ರಮಕ್ಕೆ ಒತ್ತಾಯ*

ಮಾರ್ಚ್ 30, 2026

*ಭಗವಾನ್ ಮಹಾವೀರರ ಜೀವನ ಮತ್ತು ಬೋಧನೆಗಳು ಸಾರ್ವಕಾಲಿಕ : ವಾಣಿ ಪುಷ್ಪರಾಜ್*

ಮಾರ್ಚ್ 30, 2026

*ಕೂಡಿಗೆ ಸೈನಿಕ ಶಾಲೆಗೆ ನಿರ್ದೇಶಕರ ಭೇಟಿ*

ಮಾರ್ಚ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.