ಕುಶಾಲನಗರ, NEWS DESK ಮಾ. 31: ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ,ಮತ್ತು ಅದಕ್ಕೆ ಸಂಬಂಧಿಸಿದಂತೆ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಗಾಗಿ ಈ ಸಾಲಿನ ಶಾಸಕ ಅನುದಾನದಲ್ಲಿ 10. ಲಕ್ಷ ರೂ ಗಳನ್ನು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ರವರು ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭ ವೇದಿಕೆಯಲ್ಲಿ ತಿಳಿಸಿದ್ದಾರೆ.
ಮುಂದುವರೆದು ಮಾತಾನಾಡುತ್ತಾ ಶಾಸಕರು ಮುಂದಿನ ದಿನಗಳಲ್ಲಿ ನೀರಾವರಿ ಇಲಾಖೆಯ ಮುಖೇನ ಈಗಾಗಲೇ ಕೈಗೊಳ್ಳಲಾಗಿರುವ ಕ್ರಿಯಾ ಯೋಜನೆ ಅನುಗುಣವಾಗಿ 5. ಕೋಟಿ ವೆಚ್ಚದ ಕಾಮಗಾರಿಯ ಮೂಲಕ ದೇವಾಲಯ ಮುಂಭಾಗದ ತಡೆಗೋಡೆ, ಸೇರಿದಂತೆ ಪ್ರಮುಖ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಕುಶಾಲನಗರ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತಾನಾಡಿ ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಜಾತ್ರೋತ್ಸವಗಳ ಆಚರಣೆಯ ಮೂಲಕ ಗ್ರಾಮಗಳ ನಡುವೆ ಸೌಹಾರ್ದ ಮನೋಭಾವ ಬೆಳಸಿಕೊಳ್ಳುವ ಮೂಲಕ ಒಗ್ಗೂಡಿ ಕಾರ್ಯನಿರ್ವಹಿಸುವ ಮುಖೇನ ಧಾರ್ಮಿಕ ಕಾರ್ಯ ಗಳ ನಿರ್ವಹಣೆ, ದೇವಾಲಯದ ಅಭಿವೃದ್ಧಿಗೆ ಪೂರಕವಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸಾಗರ್ ಮೇಲೋಡಿಸ್ ಆಕೆಸ್ಟ್ರಾ ಕಾರ್ಯಕ್ರಮವು ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಚೇತನ್ ರವರ ಪ್ರಾಯೋಜಕತ್ವದಲ್ಲಿ ನೆರವೇರಿತು.
ಈ ಸಂದರ್ಭದಲ್ಲಿ ಹೆಬ್ಬಾಲೆ ಗ್ರಾಮ ಪಂಚಾಯತಿ ಸದಸ್ಯರಾದ ವೆಂಕಟೇಶ್, ಶಿವನಂಜಪ್ಪ ಕಣಿವೆಯ ಧಾರ್ಮಿಕ ಹಿನ್ನೆಲೆ, ಮತ್ತು ಅಭಿವೃದ್ಧಿ ಪೂರಕವಾಗಿ ಮಾತಾನಾಡಿದರು.

ವೇದಿಕೆಯಲ್ಲಿ ಕಬಡ್ಡಿ ಪಂದ್ಯಾವಳಿಯ ಬಹುಮಾನ ವಿತರಣೆ, ಮತ್ತು ಕಣಿವೆಯ ವ್ಯಾಪ್ತಿಯ ಪ್ರಾಥಮಿಕ, ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸದಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಶಾಸಕ ಮಂತರ್ ಗೌಡ ವಿತರಣೆ ನೆರವೇರಿಸಿದರು.
ವೇದಿಕೆಯಲ್ಲಿ ಕೆ.ಪಿ.ಸಿ.ಸಿ. ಸದಸ್ಯರಾದ ಮಂಜುನಾಥ ಗುಂಡೂರಾವ್, ನಟೇಶ್ ಗೌಡ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಹೆಚ್.ಎಸ್ .ಅಶೋಕ್, ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಚೇತನ್, ಜಿಲ್ಲಾ ಯೂನಿಯನ್ ಸಹಕಾರ ಸಂಘದ ನಿರ್ದೇಶಕ ಎಸ್. ಆರ್. ಸುನಿಲ್ ರಾವ್, ಕುಶಾಲನಗರ ರೋಟರಿ ಕ್ಲಬ್ ಕಾರ್ಯದರ್ಶಿ ಮಂಜುನಾಥ, ಕೂಡಿಗೆ ಗ್ರಾಮ ಪಂಚಾಯತಿ ಸದಸ್ಯರಾದ ಅನಂತ, ವೆಂಕಟೇಶ್, ಶಿವನಂಜಪ್ಪ, ರಮೇಶ್, ಲತಾ, ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಉಪಾಧ್ಯಕ್ಷ ಮಂಜುನಾಥ ಸ್ವಾಮಿ, ಕಾರ್ಯದರ್ಶಿ ಮಾಧವ, ನಿರ್ದೇಶಕರಾದ ಆರ್.ಆರ್. ಮಧು, ಶಿರಗಜೆ ನವೀನ್, ಕೆ.ಎಂ. ರಾಕೇಶ್, ಸೇರಿದಂತೆ ಇನ್ನಿತರರು ಹಾಜರಿದ್ದರು.







