ಮಡಿಕೇರಿ, NEWS DESK ಮಾ.31:-ರಾಷ್ಟ್ರೀಯ ಹೆದ್ದಾರಿ 275 ರಸ್ತೆ ನಿರ್ಮಾಣಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಿದು,್ದ ಈ ಸಂಬಂಧ ಕುಶಾಲನಗರ ಬಸವನಹಳ್ಳಿ ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿರುವ ಮರಗಳನ್ನು ತೆರವುಗೊಳಿಸಲು ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ-275 (ಮೈಸೂರು-ಮಡಿಕೇರಿ ವಿಭಾಗ) ಮೈಸೂರು ಇವರು ಕೋರಿದ್ದಾರೆ.
ಕುಶಾಲನಗರ ವಲಯ ವ್ಯಾಪ್ತಿಯ ಬಸವನಹಳ್ಳಿ ಗ್ರಾಮದ ಖಾಸಗಿ ಮತ್ತು ಸರ್ಕಾರಿ ಜಾಗದಲ್ಲಿ ಕಾಮಗಾರಿಗೆ ಅಡಚಣೆಯಾದ 199 ಬೀಟೆ ಮತ್ತು ಇತರೆ ಜಾತಿಯ ಮರಗಳನ್ನು ಕಡಿದು ಸರ್ಕಾರಿ ನಾಟಾ ಸಂಗ್ರಹಾಲಯಕ್ಕೆ ಸಾಗಿಸಲು ಹಾಗೂ ಮೆದು ಜಾತಿಯ ಮರಗಳನ್ನು ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲು ವಲಯ ಅರಣ್ಯಾಧಿಕಾರಿ, ಕುಶಾಲನಗರ ವಲಯ, ಕುಶಾಲನಗರ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಸೋಮವಾರಪೇಟೆ ಉಪ ವಿಭಾಗ, ಸೋಮವಾರಪೇಟೆ ಇವರು ವರದಿ ಸಲ್ಲಿಸಿದ್ದಾರೆ.
ಆದ್ದರಿಂದ, ಸಾರ್ವಜನಿಕರು ಈ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಏಪ್ರಿಲ್ 15 ರ ಒಳಗಾಗಿ ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಡಿಕೇರಿ ವಿಭಾಗ, ಮಡಿಕೇರಿ ಇವರಿಗೆ ಲಿಖಿತ ಮೂಲಕ ಆಕ್ಷೇಪಣೆ ಸಲ್ಲಿಸಬೇಕಾಗಿ ಈ ಮೂಲಕ ತಿಳಿಸಿದೆ. ನಿಗಧಿತ ಅವಧಿಯಲ್ಲಿ ಆಕ್ಷೇಪಣೆ ಬಾರದಿದ್ದಲ್ಲಿ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಭಿಷೇಕ್ ಅವರು ತಿಳಿಸಿದ್ದಾರೆ.
Breaking News
- *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
- *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
- *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
- *ಎಸ್ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
- *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
- *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
- *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
- *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
- *ಹಿರಿಯ ಜೀವಿಗಳಿಗೆ ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
- *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*







