ಮಡಿಕೇರಿ, NEWS DESK ಮಾ.31:-ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2026 ರ ಮೇ, 02 ರಿಂದ 2027 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು ಏಪ್ರಿಲ್, 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಮಡಿಕೇರಿ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಬೆಳಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ https://horticulturedir.karnataka.gov.in ಇಲ್ಲಿ ಅರ್ಜಿಯನ್ನು ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ (ಎಸ್ಎಸ್ಎಲ್ಸಿ ಅಂಕಪಟ್ಟಿ, ಛಾಪಾಕಾಗದ, ತಂದೆ/ತಾಯಿ/ ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್ಟಿಸಿ, ಜಾತಿ ಪ್ರಮಾಣ ಪತ್ರ, ಪೋಟೋ, ತಂದೆ/ತಾಯಿಯವರ ಒಪ್ಪಿಗೆ ಪತ್ರ ಇತ್ಯಾದಿ) ಅರ್ಹ ಅಭ್ಯರ್ಥಿಗಳು ನಿಗಧಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸಬೇಕು ಎಂದು ಮಡಿಕೇರಿ ರಾಜ್ಯವಲಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
- *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
- *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
- *ಎಸ್ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
- *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
- *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
- *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
- *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
- *ಹಿರಿಯ ಜೀವಿಗಳಿಗೆ ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
- *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*







