Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*
  • *ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*
  • *ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*
  • *ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದಿಂದ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿ ಆಚರಣೆ*
  • *ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ : ಯಶಸ್ಸಿಗೆ ಕೈ ಜೋಡಿಸಲು ಮನವಿ*
  • *ದಾವಣಗೆರೆ ಉಪ ಚುನಾವಣೆ : ಚುನಾವಣಾ ಪ್ರಚಾರ ಕಚೇರಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ*
  • *ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧಕ ಅರೆಯಡ ಗಿರೀಶ್*
  • *ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ*
  • *ಏ.6 ಮತ್ತು 7 ರಂದು ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಆಟಗಾರರ ಆಯ್ಕೆ ಪ್ರಕ್ರಿಯೆ*
  • *ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿಶ್ವ ಗ್ರಾಹಕರ ದಿನಾಚರಣೆ : ಗ್ರಾಹಕರು ಯಾವುದೇ ವಸ್ತು-ಪದಾರ್ಥ ಕೊಳ್ಳುವಾಗ ಎಚ್ಚರ ವಹಿಸಿ : ನಿತಿನ್ ಚಕ್ಕಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿಶ್ವ ಗ್ರಾಹಕರ ದಿನಾಚರಣೆ : ಗ್ರಾಹಕರು ಯಾವುದೇ ವಸ್ತು-ಪದಾರ್ಥ ಕೊಳ್ಳುವಾಗ ಎಚ್ಚರ ವಹಿಸಿ : ನಿತಿನ್ ಚಕ್ಕಿ*

ಏಪ್ರಿಲ್ 1, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, NEWS DESK ಏ.1 : ‘ಗುಣಮಟ್ಟದ ಉತ್ಪನ್ನ ಹಾಗೂ ಸೇವೆ ಪ್ರತಿ ಗ್ರಾಹಕರ ಮೂಲಭೂತ ಹಕ್ಕು.. ಗ್ರಾಹಕನೇ ರಾಜ, ಆದರೆ ಹಕ್ಕುಗಳ ಬಗ್ಗೆ ತಿಳುವಳಿಕೆ ಇದ್ದಾಗ ಮಾತ್ರ… ಖರೀದಿಸುವ ಮೊದಲು ಯೋಚಿಸಿ, ಗುಣಮಟ್ಟವನ್ನು ಪರೀಕ್ಷಿಸಿ… ಗ್ರಾಹಕರ ಹಕ್ಕುಗಳ ಅರಿವೇ ಮೋಸದಿಂದ ರಕ್ಷಣೆ… ಈ ಸಂದೇಶವು ಬುಧವಾರ ನಡೆದ ವಿಶ್ವ ಗ್ರಾಹಕರ ದಿನಾಚರಣೆ ಸಂದರ್ಭದಲ್ಲಿ ಕೇಳಿ ಬಂದವು.
ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ಆಯೋಗ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ, ಕುಶಾಲನಗರ ಇವರ ಸಂಯುಕ್ತಾಶ್ರಯದಲ್ಲಿ ಸುರಕ್ಷಿತ ಉತ್ಪನ್ನಗಳು ಆತ್ಮವಿಶ್ವಾಸದ ಗ್ರಾಹಕರು ಎಂಬ ವಿಷಯದಡಿ ನಗರದ ಜೂನಿಯರ್ ಕಾಲೇಜು ಆವರಣದಲ್ಲಿರುವ ಸರ್ಕಾರಿ ಪದವಿ ಕಾಲೇಜಿನಲ್ಲಿ ಮೊಳಗಿತು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಅವರು ಮಾತನಾಡಿ ಸಮಾಜದಲ್ಲಿನ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ಗ್ರಾಹಕರಾಗಿದ್ದು, ಗ್ರಾಹಕರ ಸುರಕ್ಷತೆ, ಮಾಹಿತಿ ಮತ್ತು ನ್ಯಾಯಸಮ್ಮತ ಸೇವೆ ದೊರಕುವುದು ಅತ್ಯಂತ ಅವಶ್ಯಕವಾಗಿದೆ ಎಂದರು.
ಪ್ರತಿಯೊಬ್ಬರೂ ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು ಮತ್ತು ಪ್ರಾಮಾಣಿಕ ವ್ಯವಸ್ಥೆ ನಿರ್ಮಿಸಲು ಕೈಜೋಡಿಸುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಗ್ರಾಹಕರ ಹಕ್ಕುಗಳ ಮಹತ್ವ ಕುರಿತು ಜಾನ್ ಎಫ್ ಕೆನಡಿ ಅವರು ಗ್ರಾಹಕರ ಹಕ್ಕುಗಳ ಕುರಿತು ಪ್ರಸ್ತಾಪಿಸಿದ್ದಾರೆ. ಗ್ರಾಹಕರ ಹಕ್ಕುಗಳ ಮಹತ್ವ ಬಗ್ಗೆ ವಿವರಿಸಿದ್ದಾರೆ ಎಂದು ನಿತಿನ್ ಚಕ್ಕಿ ಅವರು ಹೇಳಿದರು. ಹಿರಿಯ ವಕೀಲರಾದ ಎಂ.ಎ.ನಿರAಜನ ಅವರು ಮಾತನಾಡಿ ಗ್ರಾಹಕರ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ತಿಳಿದುಕೊಳ್ಳುವುದರ ಜೊತೆಗೆ ಪ್ರಜ್ಞಾವಂತರಾಗಬೇಕು ಎಂದರು. ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯ ವಸ್ತು ಕೊಳ್ಳುವವರು ಗ್ರಾಹಕರಾಗಿದ್ದು, ಯಾವುದೇ ರೀತಿಯ ಸೇವೆಯನ್ನು ಪಡೆಯುವವರು ವಿವಿಧ ಸಂದರ್ಭದಲ್ಲಿ ಗ್ರಾಹಕರಾಗಿರುತ್ತಾರೆ. ಆದ್ದರಿಂದ ಯಾವುದೇ ಪದಾರ್ಥಗಳನ್ನು ಕೊಳ್ಳುವ ಸಂದರ್ಭದಲ್ಲಿ ಗುಣಮಟ್ಟ ಮತ್ತು ವಸ್ತುವಿನ ಅವಧಿಯನ್ನು ಗಮನಿಸಬೇಕು ಎಂದು ಅವರು ತಿಳಿಸಿದರು. ಗ್ರಾಹಕರು ಮೋಸ ಅಥವಾ ವಂಚನೆಗೆ ಒಳಗಾಗಬಾರದು. ಕಪ್ಪಗಿರುವವರು ಬೆಳ್ಳಗಾಗುವುದು, ದಪ್ಪ ಇರುವವರು ಸಣ್ಣ ಆಗುವುದು ಇಂತಹ ಜಾಹೀರಾತುಗಳಿಗೆ ಮರುಳಾಗಬಾರದು ಎಂದು ಎಚ್ಚರಿಸಿದರು. ಗ್ರಾಹಕರ ಹಕ್ಕುಗಳ ಬಗ್ಗೆ ಚ್ಯುತಿ ಬಂದಾಗ ಗ್ರಾಹಕರ ಆಯೋಗಕ್ಕೆ ಮನವಿ ಮಾಡುವಂತಾಗಬೇಕು. ಹಾಗೆಯೇ ತಮ್ಮ ಕರ್ತವ್ಯಗಳನ್ನು ಸಹ ಮರೆಯಬಾರದು ಎಂದು ಎಂ.ಎ.ನಿರAಜನ್ ಅವರು ಕಿವಿಮಾತು ಹೇಳಿದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯರಾದ ಗೌರಮ್ಮಣ್ಣಿ ಅವರು ಮಾತನಾಡಿ ಸುರಕ್ಷಿತ ಉತ್ಪನ್ನಗಳು ಆತ್ಮವಿಶ್ವಾಸದ ಗ್ರಾಹಕರು ಆಗಿದ್ದಾರೆ. ಆದ್ದರಿಂದ ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಜೊತೆಗೆ ಕರ್ತವ್ಯವನ್ನು ಪಾಲಿಸಬೇಕು ಎಂದು ಹೇಳಿದರು. ಗ್ರಾಹಕರು ಯಾವುದೇ ಒಂದು ವಸ್ತುವನ್ನು ಆಯ್ಕೆ ಮಾಡುವ ಅಧಿಕಾರ ಹೊಂದಿದ್ದಾರೆ. ಆ ಸಂದರ್ಭದಲ್ಲಿ ಸುರಕ್ಷತೆಯಿಂದ ಪದಾರ್ಥಗಳನ್ನು ಕೊಳ್ಳುವಂತಾಗಬೇಕು. ಗ್ರಾಹಕ ಎಂದರೆ ಅನಪೇಕ್ಷಿತ ವ್ಯಕ್ತಿಯಲ್ಲ, ಸಮಾಜದಲ್ಲಿನ ಗೌರವಾನ್ವಿತ ವ್ಯಕ್ತಿ ಎಂಬುದನ್ನು ಮರೆಯಬಾರದು ಎಂದು ಅವರು ಹೇಳಿದರು. ಪದಾರ್ಥಗಳನ್ನು ಕೊಳ್ಳುವಾಗ ತೂಕ ಮತ್ತು ಗುಣಮಟ್ಟ ಖಾತರಿಪಡಿಸಿಕೊಳ್ಳಬೇಕು. ಯಾವುದೇ ಒಂದು ವಸ್ತು ಕೊಳ್ಳುವಾಗ ರಶೀದಿ ಕಡ್ಡಾಯವಾಗಿ ಪಡೆಯಬೇಕು ಎಂದು ಸಲಹೆ ಮಾಡಿದರು. ಜಿಲ್ಲಾ ಗ್ರಾಹಕ ಆಯೋಗವು ಸಲ್ಲಿಕೆಯಾಗುವ ದೂರು ಸಂಬAಧ ಶೀಘ್ರ ವಿಚಾರಣೆ ನಡೆಸಿ ಪರಿಹಾರ ಒದಗಿಸಲಿದೆ ಎಂದು ಹೇಳಿದರು.
ಕುಶಾಲನಗರದ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಅಧ್ಯಕ್ಷರಾದ ಎ.ಎ.ಚಂಗಪ್ಪ ಅವರು ಮಾತನಾಡಿ ಗ್ರಾಹಕರ ಮಾಹಿತಿ ಕೇಂದ್ರದಿAದ ಜಿಲ್ಲೆಯಲ್ಲಿ ಹಲವು ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ 52 ಪ್ರೌಢ ಶಾಲೆಗಳಲ್ಲಿ ಗ್ರಾಹಕರ ಕ್ಲಬ್‌ಗಳನ್ನು ರಚಿಸಿ, ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಇಂದಿನ ವೇಗದ ಬದುಕಿನಲ್ಲಿ ಡಿಜಿಟಲ್ ಮಾರುಕಟ್ಟೆಗಳು ಸಹ ಪ್ರಬಲವಾಗಿದ್ದು, ಗ್ರಾಹಕರು ಈ ಬಗ್ಗೆ ಸಹ ಎಚ್ಚರವಹಿಸಬೇಕು ಎಂದು ಸಲಹೆ ಮಾಡಿದರು.
ಸುರಕ್ಷತೆ, ಮಾಹಿತಿ, ನಿವೇದನೆ, ಪರಿಹಾರ, ಗ್ರಾಹಕ ಶಿಕ್ಷಣ, ಅಗತ್ಯ ವಸ್ತುಗಳು, ಆರೋಗ್ಯ ಪೂರ್ಣ ಪರಿಸರ ಮತ್ತಿತರ ಹಕ್ಕುಗಳ ಬಗ್ಗೆ ಗ್ರಾಹಕರಲ್ಲಿ ಜಾಗೃತಿ ಇರಬೇಕು ಎಂದು ತಿಳಿಸಿದರು.
ಆಹಾರ ಇಲಾಖೆ ಉಪ ನಿರ್ದೇಶಕರಾದ ಎಂ.ಭೀಮರಾಯ ಅವರು ಮಾತನಾಡಿ ಗ್ರಾಹಕರ ಸಮಗ್ರ ಹಿತರಕ್ಷಣೆಯೇ ಅತೀ ಮುಖ್ಯವಾಗಿದ್ದು, ಗ್ರಾಹಕರು ವಂಚನೆಗೆ ಒಳಗಾಗುವುದನ್ನು ತಡೆಯಲು ಗ್ರಾಹಕರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಗ್ರಾಹಕರು ಆರ್ಥಿಕ ವ್ಯವಸ್ಥೆಯ ಬೆನ್ನೆಲುಬಾಗಿದ್ದು, ಗ್ರಾಹಕರ ಹಿತ ಕಾಯುವುದು ಆದ್ಯ ಕರ್ತವ್ಯವಾಗಿದೆ. ಗ್ರಾಹಕರು ಸಂತೃಪ್ತಿ ಹೊಂದಿದಾಗ ಮಾತ್ರ ವಸ್ತುವಿನ ಅಥವಾ ಸೇವೆಯು ಸಾರ್ಥಕತೆ ಪಡೆಯುತ್ತದೆ ಎಂದು ವಿವರಿಸಿದರು.


ಇಂದಿನ ದಿನಗಳಲ್ಲಿ ಗ್ರಾಹಕರು ಅನೇಕ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದಾರೆ. ಇದರಿಂದ ಗ್ರಾಹಕರಿಗೆ ಉಂಟಾಗುವ ಅನಾನುಕೂಲತೆಯನ್ನು ಸರಿಪಡಿಸಿ ಕಾನೂನಾತ್ಮಕ ಪರಿಹಾರಗಳನ್ನು ಸೂಚಿಸುವುದು ಆಹಾರ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಹೇಳಿದರು.
ಕಾನೂನು ಮಾಪನ ಶಾಸ್ತç ಇಲಾಖೆಯಿಂದ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೂ ಮೊದಲು ಗ್ರಾಹಕರ ದಿನಾಚರಣೆ ಪ್ರಯುಕ್ತ ಗಣ್ಯರು ಗಿಡ ನೆಟ್ಟರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ವೆಂಕಟೇಶ್ ಪ್ರಸನ್ನ, ಆಹಾರ ಇಲಾಖೆ ಸಹಾಯಕ ನಿರ್ದೇಶಕರಾದ ರಮಾ, ಪ್ರಾಧ್ಯಾಪಕರಾದ ನವೀನ್ ಕುಮಾರ್, ಆಹಾರ ನಿರೀಕ್ಷಕರಾದ ವೀಣಾ, ಯಶಸ್ವಿನಿ, ನಿಶಾ, ಸ್ವಾತಿ, ಸೀನಾ ಕುಮಾರಿ, ಕಿರಣ್, ನಾಗೇಂದ್ರ, ಪ್ರಮೋದ್ ಕುಮಾರ್, ಗಿರೀಶ್, ಕುಸುಮ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕ್ರಿಯೇಟಿವ್ ಕಾಲೇಜಿನಲ್ಲಿ ‘ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಮತ್ತು ಎರಡನೇ ಪೋಸ್ಟರ್ ಬಿಡುಗಡೆ*

ಏಪ್ರಿಲ್ 1, 2026

*ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*

ಏಪ್ರಿಲ್ 1, 2026

*ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*

ಏಪ್ರಿಲ್ 1, 2026

*ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕ ಡಾ.ಮಂತರ್ ಗೌಡ ಬಿರುಸಿನ ಪ್ರಚಾರ*

ಏಪ್ರಿಲ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.1 NEWS DESK : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ…

*ಕೆ.ಬಿ.ರೀಮಾಗೆ ಪಿಹೆಚ್‍ಡಿ ಪದವಿ ಪ್ರದಾನ*

ಏಪ್ರಿಲ್ 1, 2026

*ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದಿಂದ ಶ್ರೀ ಶಿವಕುಮಾರ ಸ್ವಾಮಿಗಳ ಜಯಂತಿ ಆಚರಣೆ*

ಏಪ್ರಿಲ್ 1, 2026

*ಬ್ಯಾರಿ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ : ಯಶಸ್ಸಿಗೆ ಕೈ ಜೋಡಿಸಲು ಮನವಿ*

ಏಪ್ರಿಲ್ 1, 2026

*ದಾವಣಗೆರೆ ಉಪ ಚುನಾವಣೆ : ಚುನಾವಣಾ ಪ್ರಚಾರ ಕಚೇರಿಗೆ ಶಾಸಕ ಡಾ.ಮಂತರ್ ಗೌಡ ಭೇಟಿ*

ಏಪ್ರಿಲ್ 1, 2026

*ದೈತ್ಯ ಬೆಟ್ಟ ತಡಿಯಂಡಮೋಳ್ ನ್ನು 100 ಬಾರಿ ಏರಿದ ಸಾಧಕ ಅರೆಯಡ ಗಿರೀಶ್*

ಏಪ್ರಿಲ್ 1, 2026

*ವಿರಾಜಪೇಟೆಯಲ್ಲಿ ಮದ್ಯ ಮಾರಾಟ ನಿಷೇಧ*

ಏಪ್ರಿಲ್ 1, 2026

*ಏ.6 ಮತ್ತು 7 ರಂದು ಕೊಡಗು ಕ್ರಿಕೆಟ್ ತಂಡಗಳ ರಚನೆಗೆ ಆಟಗಾರರ ಆಯ್ಕೆ ಪ್ರಕ್ರಿಯೆ*

ಏಪ್ರಿಲ್ 1, 2026

*ಶ್ರೀ ಓಂಕಾರೇಶ್ವರ ಸಮುಚ್ಛಯ ದೇವಾಲಯಗಳ ಅಭಿವೃದ್ಧಿಗೆ ರೂ.1 ಕೋಟಿ : ಶಾಸಕರ ಭರವಸೆ*

ಏಪ್ರಿಲ್ 1, 2026

*ವಿಶ್ವ ಗ್ರಾಹಕರ ದಿನಾಚರಣೆ : ಗ್ರಾಹಕರು ಯಾವುದೇ ವಸ್ತು-ಪದಾರ್ಥ ಕೊಳ್ಳುವಾಗ ಎಚ್ಚರ ವಹಿಸಿ : ನಿತಿನ್ ಚಕ್ಕಿ*

ಏಪ್ರಿಲ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.