
ಕಣಿವೆ ಏ.1 NEWS DESK : ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ಡಾ.ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಗುಡ್ಡೆಹೊಸೂರು ಹಾಗೂ ಬಳ್ಳೂರು ವೀರಶೈವ ಸಮಾಜದ ವತಿಯಿಂದ ಆಚರಿಸಲಾಯಿತು. ಶ್ರೀಗಳ ಭಾವಚಿತ್ರವನ್ನು ಪೂಜಿಸಿ, ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ನೆರೆದ ಭಕ್ತರಿಗೆ ಸಿಹಿ ವಿತರಿಸಲಾಯಿತು. ಈ ಸಂದರ್ಭ ಗುಡ್ಡೆಹೊಸೂರು ವೀರಶೈವ ಸಮಾಜದ ಅಧ್ಯಕ್ಷ ಮಲ್ಲಿಕಾರ್ಜುನ, ಕಾರ್ಯದರ್ಶಿ ದಾಕ್ಷಾಯಿಣಿ, ಸಿದ್ದಗಂಗಾ ಭಕ್ತ ಮಂಡಳಿ ಅಧ್ಯಕ್ಷ ಕೆ.ಎಸ್.ಮೂರ್ತಿ, ಪ್ರಮುಖರಾದ ಶುಭಶೇಖರ, ಉದ್ಯಮಿ ಮೌರ್ಯ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಾಗರ್, ಸಹಕಾರ ಸಂಘದ ಉಪಾಧ್ಯಕ್ಷ ಕಾಶಿ, ಹುಲುಸೆ ವೀರಶೈವ ಸಮಾಜದ ಅಧ್ಯಕ್ಷ ಶಿವನಂಜಪ್ಪ, ಕವಿತಾ, ವೈಶಾಲಿ, ಚಿದಾನಂದ, ಗಣೇಶ, ಚಿಮ್ಮಣ್ಣ, ಶಿಕ್ಷಕ ಪುಟ್ಟರಾಜು, ಸಂಪತ್, ಮೊದಲಾದವರು ಇದ್ದರು. ಕಾರ್ಯಕ್ರಮದ ಪ್ರಯುಕ್ತ ವೃತ್ತವನ್ನು ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು.









