Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*
  • *ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*
  • *ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*
  • *ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ*
  • *ವಿರಾಜಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4ರ ಪಂದ್ಯಗಳು*
  • *ಗೋಣಿಕೊಪ್ಪದಲ್ಲಿ ಸಂಭ್ರಮದ ಮೀನ್ಯಾರ್ ನಮ್ಮೆ : ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*
  • *ವಿರಾಜಪೇಟೆ : ದೇಶ ಸೇವೆಯಲ್ಲಿ ತೊಡಗಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ : ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*
  • *ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹುದಗೂರಿನಲ್ಲಿ ಅರಣ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೌಶಲ್ಯ ತರಬೇತಿ; ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ: ಟಿ.ಜಿ.ಪ್ರೇಮಕುಮಾರ್*:
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹುದಗೂರಿನಲ್ಲಿ ಅರಣ್ಯ ಇಲಾಖೆಯ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಕೌಶಲ್ಯ ತರಬೇತಿ; ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ: ಟಿ.ಜಿ.ಪ್ರೇಮಕುಮಾರ್*:

ಏಪ್ರಿಲ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, NEWS DESK ಏ.3: ರೈತರು ಕೃಷಿಯೊಂದಿಗೆ ಅರಣ್ಯ ಕೃಷಿಯನ್ನು ವೈಜ್ಞಾನಿಕವಾಗಿ ಮಾಡಿದರೆ ಕೃಷಿ ಕ್ಷೇತ್ರದಲ್ಲಿ ಆರ್ಥಿಕವಾಗಿ ಹೆಚ್ಚಿನ ಲಾಭ ಗಳಿಸುವ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬಹುದು ಎಂದು ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರೂ ಆದ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಪರಿಸರ ಕಾರ್ಯಕ್ರಮಗಳ ಸಂಘಟಕ ಪರಿಸರ ಪ್ರೇಮಿ ಟಿ.ಜಿ.ಪ್ರೇಮಕುಮಾರ್ ಹೇಳಿದರು. ಕೊಡಗು ಜಿಲ್ಲಾ ಪಂಚಾಯಿತಿ, ಸಾಮಾಜಿಕ ಅರಣ್ಯ ವಿಭಾಗ, ಮಡಿಕೇರಿ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಕೂಡಿಗೆ ಬಳಿಯ ಹುದುಗೂರು ಅರಣ್ಯ ಸಸ್ಯಕ್ಷೇತ್ರದಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರೈತರಿಗೆ ಏರ್ಪಡಿಸಿದ್ದ ಕೌಶಲ್ಯ ತರಬೇತಿ ಮತ್ತು ಅರಿವು ಹಾಗೂ ಪ್ರಚಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೃಷಿ ಅರಣ್ಯದಿಂದ ಕೃಷಿ ಭೂಮಿಯ ಅಂತರ್ಜಲ ವೃದ್ಧಿ ಸಾಧ್ಯ. ಇಂದಿನ ಹವಾಮಾನ ವೈಪರೀತ್ಯ, ಅತಿವೃಷ್ಠಿ ಹಾಗೂ ಅಕಾಲಿಕ ಮಳೆಯಿಂದ ಒಂದು ಬೆಳೆ ಕೈಕೊಟ್ಟರೂ, ಅರಣ್ಯ ಕೃಷಿಯಿಂದ ಬರುವ ಮರಗಳ ಆದಾಯವು ರೈತರಿಗೆ ಆರ್ಥಿಕ ನೆರವು ನೀಡುತ್ತದೆ.ಇದು ರೈತರ ಆದಾಯದ ವೈವಿಧ್ಯೀಕರಣಕ್ಕೆ ಹೆಚ್ಚಿನ ಲಾಭ ತರುತ್ತದೆ ಎಂದರು. ರೈತರು ಹೆಚ್ಚಿನ ಪ್ರಮಾಣದಲ್ಲಿ ಕೃಷಿ ಅರಣ್ಯ ಸಂರಕ್ಷಿಸಿ ಕೊಳ್ಳಬೇಕು.ಗ್ರಾಮೀಣ ಯುವಕರು ಮತ್ತು ರೈತರಿಗೆ ಲಭ್ಯವಿರುವ ತಮ್ಮ ಜಮೀನಿನಲ್ಲಿ ಅರಣ್ಯ ಕೃಷಿ ಮತ್ತು ಪಶುಸಂಗೋಪನೆ, ತೋಟಗಾರಿಕೆ ಸಂಬಂಧಿತ ವಲಯಗಳಲ್ಲಿ ತೊಡಗಿಸಿಕೊಂಡರೆ ಕೃಷಿಕ್ಷೇತ್ರದಲ್ಲಿ ಆರ್ಥಿಕ ಸಬಲೀಕರಣಗೊಳ್ಳಲು ಸಾಧ್ಯ ಎಂದರು. ರೈತರು ಹವಾಮಾನ-ಸೂಕ್ಷ್ಮ ಕೃಷಿ ಮತ್ತು ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯಂತಹ ನಾವೀನ್ಯತೆವುಳ್ಳ
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತೋಟಗಾರಿಕೆ, ಜೇನುಸಾಕಣೆ, ಹಣ್ಣು ಸಂರಕ್ಷಣೆ ಮತ್ತು ಅಣಬೆ ಉತ್ಪಾದನೆಯಲ್ಲಿ ತೊಡಗಿದರೆ ಹೆಚ್ಚಿನ ರೀತಿಯಲ್ಲಿ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಪ್ರೇಮಕುಮಾರ್ ತಿಳಿಸಿದರು.
ರೈತರು ಕೃಷಿಯಲ್ಲಿ ನಾಲ್ಕಾರು ಲಾಭದಾಯಕ ಮಿಶ್ರ ಬೆಳೆ ಬೆಳೆಯುವ ಮೂಲಕ ಹೆಚ್ಚಿನ ಲಾಭ ಗಳಿಸಬಹುದು. ಅರಣ್ಯ ಕೃಷಿ, ಮಿಶ್ರ ಬೇಸಾಯ ಪದ್ಧತಿ ಹಾಗೂ ಸಮಗ್ರ ಕೃಷಿಯಲ್ಲಿ ‌ಉತ್ತಮ ಲಾಭ ಗಳಿಸುತ್ತಿದೆ. ಇದರಲ್ಲೇ ಉತ್ತಮ‌ ಬದುಕು ರೂಪಿಸಿಕೊಳ್ಳಬಹುದು. ರೈತರಿಗೆ ಅರಣ್ಯ ಇಲಾಖೆಯ ವತಿಯಿಂದ ಸಿಗುವ ಪ್ರಯೋಜನಗಳ ಕುರಿತು ಮಾಹಿತಿ ನೀಡಿದ ಸಾಮಾಜಿಕ ಅರಣ್ಯ ವಲಯಾಧಿಕಾರಿ ಎಂ.ಗಣೇಶ್ , ರೈತರು ಅರಣ್ಯ ಕೃಷಿಗೆ ಹೆಚ್ಚಿನ ಒತ್ತು ನೀಡಿದರೆ ಸುಸ್ಥಿರ ಆದಾಯ ಗಳಿಸಲು ಸಾಧ್ಯ. ರೈತರು ಈ ಪದ್ಧತಿಯನ್ನು ಅಳವಡಿಸಿಕೊಂಡರೆ ಕೃಷಿಭೂಮಿಯ ಮಣ್ಣಿನ ಫಲವತ್ತತೆ , ಅಂತರ್ಜಲ ವೃದ್ಧಿ ಮತ್ತು ಪರಿಸರ ಸಮತೋಲನವನ್ನು ಕಾಪಾಡಲು ಸಾಧ್ಯ ಎಂದು ತಿಳಿಸಿದರು.

ರೈತರು ಸಾಂಪ್ರದಾಯಿಕ ಕೃಷಿಯೊಂದಿಗೆ ಲಭ್ಯ ಇರುವ ಮ್ಮ ಜಮೀನಿನಲ್ಲಿ ತೇಗ, ಶ್ರೀಗಂಧ, ಬಿದಿರು ಮತ್ತು ಹೆಬ್ಬೇವುಗಳಂತಹ ವಾಣಿಜ್ಯ ಮರಗಳನ್ನು ಬೆಳೆಸುವುದರಿಂದ, ರೈತರು ಅನಿಶ್ಚಿತ ಬೆಳೆ ನಷ್ಟದಿಂದ ಪಾರಾಗಿ ದೀರ್ಘಕಾಲೀನ ಆರ್ಥಿಕ ಭದ್ರತೆ ಹೊಂದಲು ಸಾಧ್ಯ ಎಂದರು.
ಕೂಡಿಗೆ ಗ್ರಾಮ ಪಂಚಾಯ್ತಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಸಿ.ಎಸ್. ಮಂಜುಳ ಮಾತನಾಡಿ, ರೈತರು ಅರಣ್ಯ, ಕೃಷಿ ಮತ್ತಿತರ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಕೃಷಿಕರಾಗಿ ಆರ್ಥಿಕವಾಗಿ ಸಬಲೀಕರಣ ಹೊಂದಬೇಕು ಎಂದರು.
ಹುದುಗೂರಿನ ಪ್ರಗತಿಪರ ರೈತ ಐಮುಡಿಯಂಡ ಗಣೇಶ್, ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಎಚ್.ಎಸ್.ರವಿ, ಡಿಆರ್ ಎಫ್ ಓ ಎನ್.ಬಿ.ಹರೀಶ್ ಕುಮಾರ್,ತಾಂತ್ರಿಕ ಸಲಹೆಗಾರರಾದ ಶೀತಲ್, ವನಪಾಲಕರಾದ ಸೋಮಶೇಖರ್, ಅನಿಲ್ ಸೇರಿದಂತೆ ಹುದಗೂರು ಮತ್ತು ಸುತ್ತಲಿನ ರೈತರು ಭಾಗವಹಿಸಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಏ.10 ರಂದು ಶಿವಕೇರಿ ಶ್ರಿ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ವಾರ್ಷಿಕೋತ್ಸವ*

ಏಪ್ರಿಲ್ 3, 2026

*ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*

ಏಪ್ರಿಲ್ 3, 2026

*ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*

ಏಪ್ರಿಲ್ 3, 2026

*ವಿರಾಜಪೇಟೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಣ್ಣು ಹಂಪಲು ವಿತರಣೆ*

ಏಪ್ರಿಲ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಏ.3 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ವಲಯದ ಬಿಟ್ಟಂಗಾಲ, ಕೆದಮುಳ್ಳುರು,…

*ಕಾನೂರು : ಏ.5 ಮತ್ತು 6 ರಂದು ಶ್ರೀ ಮುತ್ತಪ್ಪ ದೇವರ ಜಾತ್ರಾ ಮಹೋತ್ಸವ*

ಏಪ್ರಿಲ್ 3, 2026

*ಹುದಗೂರಿನಲ್ಲಿ ಕೌಶಲ್ಯ ತರಬೇತಿ : ಅರಣ್ಯ ಕೃಷಿಯಿಂದ ಆರ್ಥಿಕಾಭಿವೃದ್ಧಿ ಸಾಧ್ಯ : ಟಿ.ಜಿ.ಪ್ರೇಮಕುಮಾರ್*

ಏಪ್ರಿಲ್ 3, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ*

ಏಪ್ರಿಲ್ 3, 2026

*ವಿರಾಜಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಗುಡ್‍ಫ್ರೈಡೆ ಆಚರಣೆ : ಶಾಸಕ ಎ.ಎಸ್.ಪೊನ್ನಣ್ಣ ಭೇಟಿ*

ಏಪ್ರಿಲ್ 3, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.4ರ ಪಂದ್ಯಗಳು*

ಏಪ್ರಿಲ್ 3, 2026

*ಗೋಣಿಕೊಪ್ಪದಲ್ಲಿ ಸಂಭ್ರಮದ ಮೀನ್ಯಾರ್ ನಮ್ಮೆ : ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಪ್ರಮುಖ : ಶಾಸಕ ಎ.ಎಸ್.ಪೊನ್ನಣ್ಣ*

ಏಪ್ರಿಲ್ 3, 2026

*ವಿರಾಜಪೇಟೆ : ದೇಶ ಸೇವೆಯಲ್ಲಿ ತೊಡಗಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ : ಶ್ರೀ ಸ್ವತಂತ್ರ ಬಸವಲಿಂಗ ಶಿವಯೋಗಿ ಸ್ವಾಮೀಜಿ*

ಏಪ್ರಿಲ್ 3, 2026

*ಕಾವೇರಿ ಆರತಿ ಕ್ಷೇತ್ರದಲ್ಲಿ ನದಿ ಸ್ವಚ್ಛತಾ ಕಾರ್ಯಕ್ರಮ*

ಏಪ್ರಿಲ್ 3, 2026

*ಕನ್ನಡ ಸಿರಿ ಬಳಗದಿಂದ ‘ಮಹಿಳಾ ಸಿರಿ-ಕಲಾವೈಭವ’: ಪೌರಕಾರ್ಮಿಕ ಶಿವಮ್ಮ ಅವರಿಗೆ ಗೌರವಪೂರ್ವಕ ಸನ್ಮಾನ*

ಏಪ್ರಿಲ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.