
ಮಡಿಕೇರಿ ಏ.9 NEWS DESK : ಮಡಿಕೇರಿ ನಗರದ ಕನ್ನಂಡಬಾಣೆ ನಿವಾಸಿಗಳು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರನ್ನು ಭೇಟಿ ಮಾಡಿ ತಡೆಗೋಡೆ ನಿರ್ಮಿಸುವಂತೆ ಮನವಿ ಸಲ್ಲಿಸಿದರು. ಕನ್ನಂಡಬಾಣೆಗೆ ಸುಸಜ್ಜಿತವಾದ ಕಾಂಕ್ರೀಟ್ ರಸ್ತೆ ನಿರ್ಮಿಸಿದ ಹಿನ್ನಲೆಯಲ್ಲಿ ಧನ್ಯವಾದಗಳನ್ನು ಸಲ್ಲಿಸಿದ ನಿವಾಸಿಗಳು ರಸ್ತೆಯ ಅಂಚಿನಲ್ಲಿ(ಕನ್ನಂಡಬಾಣೆ ಕೃಷ್ಣ ಲೈನ್ ದಾರಿ) ಅಪಾಯಕಾರಿ ತಿರವು ಇದ್ದು ವಾಹನಗಳು ಗುಂಡಿಗೆ ಬೀಳುವ ಸಾಧ್ಯತೆ ಹೆಚ್ಚಿರುವುದರಿಂದ ತಡಗೋಡೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು. ಮನವಿಯನ್ನು ಆಲಿಸಿದ ಶಾಸಕರು ಈ ವರ್ಷದ ತಮ್ಮ ಶಾಸಕರ ನಿಧಿಯಿಂದ ತಡೆಗೋಡೆ ನಿರ್ಮಿಸಿಕೊಡುವ ಭರವಸೆ ನೀಡಿದರು. ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರೊಂದಿಗೆ ತೆರಳಿದ ನಿಯೋಗದಲ್ಲಿ ದೇವಯ್ಯ, ಪಿ.ಎಂ.ಜಗದೀಶ್,ಬಾಳಾಡಿ ಪ್ರತಾಪ್ ಕುಮಾರ್,ಪ್ರಸನ್ನ, ಭರತ್, ಯತೀನ್ ಮತ್ತಿತರರು ಉಪಸ್ಥಿತರಿದ್ದರು.









