
ಮಡಿಕೇರಿ ಏ.10 NEWS DESK : ಜಿಲ್ಲಾ ಕವಾಯತು ಮೈದಾನದಲ್ಲಿ ಜಿಲ್ಲಾ ಕವಾಯತು ನಡೆಸಲಾಯಿತು. ಕವಾಯತಿನ ನಂತರ ಜಿಲ್ಲಾ ಪೊಲೀಸ್ ಘಟಕದ ವಿವಿಧ ವಿಭಾಗಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಅವರು ಸಿಬ್ಬಂದಿಗಳನ್ನು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದರು. ನಂತರ ಸಿಬ್ಬಂದಿಗಳ ಕುಂದುಕೊರತೆಗಳ ಬಗ್ಗೆ ವಿಚಾರಿಸಲಾಯಿತು.









