Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸೋಮವಾರಪೇಟೆಯ ತಸ್ಮಿಯಾ ಕಾಲೇಜಿಗೆ ಪ್ರಥಮ* 
  • *ತೆರಿಗೆ ಸಂಗ್ರಹ ಕ್ಯಾಂಪ್ ಗೆ ಆಗ್ರಹ* 
  • *ಕೂಡಿಗೆ : ನಂದಿತಾಗೆ ಸನ್ಮಾನ*
  • *ಬೆಟ್ಟದಪುರದ ಅನಿಕೇತನ ಕಾಲೇಜಿಗೆ ಶೇ.92 ಫಲಿತಾಂಶ*
  • *ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿಗೆ ಶೇ.100 ಫಲಿತಾಂಶ*
  • *ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*
  • *ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*
  • *ಅಂತರ್ಜಲ ಪ್ರಾಧಿಕಾರದ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*
  • *ಲೋಕಸಭಾ ಕ್ಷೇತ್ರ ಹೆಚ್ಚಳ ಮಾಡದೇ ಮಹಿಳಾ ಮೀಸಲಾತಿ ನೀಡಬೇಕು : ಕೊಡಗಿನ ವಿಧಾನಸಭಾ ಕ್ಷೇತ್ರಗಳು 5ಕ್ಕೆ ಏರಿಕೆಯಾಗಬೇಕು*
  • *ಏ.16 ಮತ್ತು 17 ರಂದು ಕಾಂತೂರು ಶ್ರೀಪನ್ನಂಗಾಲ ತಾಯಿಯ ವಾರ್ಷಿಕೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*

ಏಪ್ರಿಲ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.11 NEWS DESK : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯ ಪ್ರಯುಕ್ತ ಕರ್ನಾಟಕ ಮಾಧ್ಯಮ ಅಕಾಡೆಮಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಸಾಮಾಜಿಕ ನ್ಯಾಯ ಪರಿಕಲ್ಪನೆಗೆ ಇಂದಿನ ಮಾಧ್ಯಮ ಸಂವೇದನಾಶೀಲತವಾಗಿದಿಯೇ” ಎಂಬ ವಿಷಯದ ಕುರಿತ ವಿಚಾರಸಂಕಿರಣವನ್ನು ಆಯೋಜಿಸಿತ್ತು. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ನೂತನ ಶೈಕ್ಷಣಿಕ ವಿಭಾಗದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಈ ವಿಚಾರಸಂಕಿರಣವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಪುರುಷೋತ್ತಮ ಬಿಳಿಮಲೆ ಉದ್ಘಾಟಿಸಿದರು. ಸಾಮಾಜಿಕ ಸಮಾನತೆಯ ಹರಿಕಾರ ಅಂಬೇಡ್ಕರ್ ಅವರ ಸಾರಥ್ಯದಲ್ಲಿ ರಚನೆಯಾದ ಭಾರತದ ಸಂವಿಧಾನ ಸಾಮಾಜಿಕ ನ್ಯಾಯದ ಪರಿಕಲ್ಪನೆಯ ಕೈದೀವಿಗೆಯಾಗಿದೆ ಎಂದು ಅವರು ಬಣ್ಣಿಸಿದರು. ಜಾತಿ, ಧರ್ಮ, ಲಿಂಗ ಮತ್ತು ಭಾಷೆಯ ಆಧಾರದ ತಾರತಮ್ಯ ಹಾಗೂ ಅಸ್ಪೃಶ್ಯತೆಯ ಆಚರಣೆ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಇಂದಿಗೂ ಜ್ವಲಂತ ಸಮಸ್ಯೆಗಳಾಗಿ ದೇಶವನ್ನು ಕಾಡುತ್ತಿರುವುದು ವಿಷಾದನೀಯ ಎಂದು ಅವರು ವಿಶ್ಲೇಷಿಸಿದರು. ಭಾರತದಲ್ಲಿ 19,658 ಭಾಷೆಗಳಿದ್ದು ಜನ ಸಂಸ್ಕೃತಿಯ ಪ್ರತೀಕವಾದ ಅನೇಕ ಸಣ್ಣ ಭಾಷೆಗಳು ನಿರ್ಲಕ್ಷ್ಯಕ್ಕೆ ಗುರಿಯಾಗಿದ್ದು ಬಹುಸಂಖ್ಯಾತರ ಭಾಷೆಗಳ ಪ್ರಾಬಲ್ಯದಿಂದ ದಮನಿಸಲ್ಪಡುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಬ್ರಿಟಿಷರ ಕಾಲದಲ್ಲಿ ಪ್ರಾದೇಶಿಕ ಭಾಷಾ ಪತ್ರಿಕೆಗಳ ಮೇಲೆ ಪ್ರಾರಂಭವಾದ ಪ್ರಹಾರ ಇಂದಿಗೂ ಮುಂದುವರಿದಿದ್ದು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮಾಧ್ಯಮ ದಿಟ್ಟತನದಿಂದ ಎತ್ತಿಹಿಡಿಯಬೇಕೆಂದು ಅವರು ಅಭಿಪ್ರಾಯಪಟ್ಟರು. ಪ್ರಧಾನ ಭಾಷಣ ಮಾಡಿದ ಹಿರಿಯ ಪತ್ರಕರ್ತ ಮತ್ತು ಚಿಂತಕರಾದ ಕೋಟಿಗಾನಹಳ್ಳಿ ರಾಮಯ್ಯನವರು ಮಾತನಾಡಿ ಪ್ರಬುದ್ಧ ಭಾರತ ನಿರ್ಮಾಣದ ಗುರಿ ಸಾಧನೆಗೆ ಯುವ ಪೀಳಿಗೆ ಅಂಬೇಡ್ಕರ್ ಕಟ್ಟಿಕೊಟ್ಟಿರುವ ಆದರ್ಶಗಳನ್ನು ಅನುಷ್ಠಾನಕ್ಕೆ ತರಬೇಕೆಂದು ಪ್ರೇರೇಪಿಸಿದರು. 1990ರ ದಶಕದಿಂದ ಆರಂಭವಾದ ಕಾರ್ಪೊರೇಟ್ ಬಂಡವಾಳಶಾಹಿಯ ತುಷ್ಠೀಕರಣ ಸೃಷ್ಟಿಸಿರುವ ಪಲ್ಲಟ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಪಹರಿಸುವ ಅಪಾಯಕಾರಿ ಹಂತ ತಲುಪಿದೆ ಎಂದು ಅವರು ಎಚ್ಚರಿಸಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ.ರಮೇಶ್.ಬಿ. ಸಮಕಾಲೀನ ಸಂದರ್ಭದ ಮಾಧ್ಯಮ ಜನದನಿಯಾಗಿ ಸಾಮಾಜಿಕ ನ್ಯಾಯದ ಆಶಯಗಳಿಗೆ ಹೆಚ್ಚಿನ ಸಂವೇದನೆ ತೋರಬೇಕಿದೆ ಎಂಬ ಅನಿಸಿಕೆ ವ್ಯಕ್ತಪಡಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಶಾ ಖಾನಂ ಪ್ರಾಸ್ತಾವಿಕ ಭಾಷಣ ಮಾಡಿದರು. ಮಾಧ್ಯಮ ಅಕಾಡೆಮಿ ಕಾರ್ಯದರ್ಶಿಗಳಾದ ಸಹನಾ.ಎಂ., ಮೈಸೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾದ ಮಮತಾ. ಎನ್. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಡಾ.ಎಸ್. ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಸಂವಹನ ವಿಭಾಗದ ಮುಖ್ಯಸ್ಥರಾದ ಡಾ.ತಾಂಡವಗೌಡ ಧನ್ಯವಾದ ಸಮರ್ಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸೋಮವಾರಪೇಟೆಯ ತಸ್ಮಿಯಾ ಕಾಲೇಜಿಗೆ ಪ್ರಥಮ* 

ಏಪ್ರಿಲ್ 11, 2026

*ತೆರಿಗೆ ಸಂಗ್ರಹ ಕ್ಯಾಂಪ್ ಗೆ ಆಗ್ರಹ* 

ಏಪ್ರಿಲ್ 11, 2026

*ಕೂಡಿಗೆ : ನಂದಿತಾಗೆ ಸನ್ಮಾನ*

ಏಪ್ರಿಲ್ 11, 2026

*ತೆರಿಗೆ ಸಂಗ್ರಹ ಕ್ಯಾಂಪ್ ಗೆ ಆಗ್ರಹ* 

ಏಪ್ರಿಲ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಏ.11 NEWS DESK :  2026-27 ರ ಆಸ್ತಿ ತೆರಿಗೆ ಮತ್ತು ಉದ್ದಿಮೆ ಪರವಾನಗಿ ತೆರಿಗೆ ಸಂಗ್ರಹ ಮಾಡಲು…

*ಕೂಡಿಗೆ : ನಂದಿತಾಗೆ ಸನ್ಮಾನ*

ಏಪ್ರಿಲ್ 11, 2026

*ಬೆಟ್ಟದಪುರದ ಅನಿಕೇತನ ಕಾಲೇಜಿಗೆ ಶೇ.92 ಫಲಿತಾಂಶ*

ಏಪ್ರಿಲ್ 11, 2026

*ಶಂಶುಲ್ ಉಲಮಾ ಎಜುಕೇಶನಲ್ ಅಕಾಡೆಮಿಗೆ ಶೇ.100 ಫಲಿತಾಂಶ*

ಏಪ್ರಿಲ್ 11, 2026

*ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾನಿಲಯ : ಸಾಮಾಜಿಕ ನ್ಯಾಯ-ಮಾಧ್ಯಮ ಸಂವೇದನೆ- ವಿಚಾರಸಂಕಿರಣ*

ಏಪ್ರಿಲ್ 11, 2026

*ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ*

ಏಪ್ರಿಲ್ 11, 2026

*ಅಂತರ್ಜಲ ಪ್ರಾಧಿಕಾರದ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*

ಏಪ್ರಿಲ್ 11, 2026

*ಲೋಕಸಭಾ ಕ್ಷೇತ್ರ ಹೆಚ್ಚಳ ಮಾಡದೇ ಮಹಿಳಾ ಮೀಸಲಾತಿ ನೀಡಬೇಕು : ಕೊಡಗಿನ ವಿಧಾನಸಭಾ ಕ್ಷೇತ್ರಗಳು 5ಕ್ಕೆ ಏರಿಕೆಯಾಗಬೇಕು*

ಏಪ್ರಿಲ್ 11, 2026

*ಏ.16 ಮತ್ತು 17 ರಂದು ಕಾಂತೂರು ಶ್ರೀಪನ್ನಂಗಾಲ ತಾಯಿಯ ವಾರ್ಷಿಕೋತ್ಸವ*

ಏಪ್ರಿಲ್ 11, 2026

*ಕುಶಾಲನಗರದ *ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್‌ ನಲ್ಲಿ “ಜಿ.ಎಲ್. ಶಾಪಿಂಗ್ ಹಬ್ಬ ವರುಷದ ಹರುಷ*

ಏಪ್ರಿಲ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.