
ಮಡಿಕೇರಿ ಏ.11 NEWS DESK : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲಾ ಮಟ್ಟದ ಕಲಾ ವಿಭಾಗದಲ್ಲಿ ಕೂಡಿಗೆ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಂದಿತಾ ದ್ವಿತೀಯ ಮತ್ತು ಕಾಲೇಜಿಗೆ ಪ್ರಥಮ ಸ್ಥಾನವನ್ನು ಗಳಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದಿಂದ ಸನ್ಮಾನಿಸಲಾಯಿತು. ಬಣದ ಜಿಲ್ಲಾ ಅಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಮತ್ತು ತಂಡದವರು ಕೂಡಿಗೆ ಪದವಿಪೂರ್ವ ಕಾಲೇಜಿಗೆ ಭೇಟಿ ನೀಡಿ ವಿದ್ಯಾರ್ಥಿ ಮತ್ತು ಅವರ ಪೋಷಕರನ್ನು ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭ ಜಿಲ್ಲಾ ಸಂಚಾಲಕ ಎಂ.ಎಸ್.ಮಣಿಕಂಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ, ಜಿಲ್ಲಾ ಉಪಾಧ್ಯಕ್ಷೆ ನಿರ್ಮಲಾ ಸುರೇಶ್, ಕಾರ್ಯದರ್ಶಿ ಸರಳಾ ರಾಮಣ್ಣ, ಗೌರವಾಧ್ಯಕ್ಷರು ನಾಗರಾಜ ಹೆಚ್.ಕಾವಲ್ ಕೊಂಡ, ಕುಶಾಲನಗರ ತಾಲ್ಲೂಕಿನ ಅಧ್ಯಕ್ಷ ಪುಟ್ಟಸ್ವಾಮಿ, ಕಾರ್ಯದರ್ಶಿ ಅನಸೂಯಾ, ಮುಖಂಡರಾದ ಪುಟ್ಟಮ್ಮ, ಗಣೇಶ ಯೋಗ ಶಿಕ್ಷಕರು, ಕಾಲೇಜು ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್, ಸೇರಿದಂತೆ ಉಪನ್ಯಾಸಕ ವೃಂದ ಇದ್ದರು.









